ETV Bharat / sports

ಬಾರ್ಡರ್​ ಗವಾಸ್ಕರ್​ ಟ್ರೋಫಿಗೆ ಭಾರತ ತಂಡ ಪ್ರಕಟ: ಇಬ್ಬರು ಕನ್ನಡಿಗರಿಗೆ ತಂಡದಲ್ಲಿ ಚಾನ್ಸ್​!

ಬಾರ್ಡರ್​ ಗವಾಸ್ಕರ್​ ಟ್ರೋಫಿಗಾಗಿ ಬಿಸಿಸಿಐ ಭಾರತ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಅವಕಾಶ ನೀಡಲಾಗಿದೆ.

ಭಾರತ ಕ್ರಿಕೆಟ್​ ತಂಡ
ಭಾರತ ಕ್ರಿಕೆಟ್​ ತಂಡ (Associated Press)
author img

By ETV Bharat Sports Team

Published : 3 hours ago

Border Gavaskar Trophy India squad: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್​ ಗವಾಸ್ಕರ್​ ಟ್ರೋಫಿಗಾಗಿ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಚಾನ್ಸ್​ ನೀಡಲಾಗಿದೆ.

ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡ ಆಸ್ಟ್ರೇಲಿಯಾಗೆ ಪ್ರವಾಸ ಬೆಳಸಲಿದೆ. ನವೆಂಬರ್ 22 ರಿಂದ ಉಭಯ ತಂಡಗಳ ನಡುವೆ ಟೆಸ್ಟ್​ ಸರಣಿ ಪ್ರಾರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಆತಿಥೇಯ ತಂಡದ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಕರ್ನಾಟಕದ ಕೆ.ಎಲ್ ರಾಹುಲ್​ ಮತ್ತು​ ಪ್ರಸಿದ್ಧ ಕೃಷ್ಣರನ್ನು ಆಯ್ಕೆ ಮಾಡಲಾಗಿದೆ

ರಾಹುಲ್​ಗೆ ಮತ್ತೊಂದು ಚಾನ್ಸ್​: ಕರ್ನಾಟಕದ ಸ್ಟಾರ್​ ಬ್ಯಾಟರ್​ ಕೆ.ಎಲ್​ ರಾಹುಲ್​ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡುತ್ತಿಲ್ಲ. ಬಾಂಗ್ಲಾದೇಶದ ವಿರುದ್ಧ ಟೆಸ್ಟ್​ ಸರಣಿ ಮತ್ತು ಪ್ರಸ್ತುತ ನಡೆಯುತ್ತಿರುವ ನ್ಯೂಜಿಲೆಂಡ್​ ವಿರುದ್ಧದ ಬೆಂಗಳೂರು ಟೆಸ್ಟ್​ನಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿರಲಿಲ್ಲ. ಇದರಿಂದಾಗಿ ರಾಹುಲ್​ ಅವರನ್ನು ಎರಡನೇ ಟೆಸ್ಟ್​ನಿಂದ ಕೈ ಬಿಡಲಾಗಿದೆ. ಆದರೆ, ವಿದೇಶಿ ನೆಲದಲ್ಲಿ ರಾಹುಲ್​ ಉತ್ತಮ ದಾಖಲೆ ಹೊಂದಿರುವ ಕಾರಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್​ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ.

ಟ್ರಾವೆಲಿಂಗ್ ರಿಸರ್ವ್ - ಮುಖೇಶ್ ಕುಮಾರ್, ನವದೀಪ್ ಸೈನಿ, ಖಲೀಲ್ ಅಹ್ಮದ್

ಟಿ20ಗೆ ತಂಡ ಪ್ರಕಟ: ಏತನ್ಮಧ್ಯೆ ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ-20 ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನವೆಂಬರ್​ 8 ರಿಂದ ಆರಂಭವಾಗಲಿರುವ ಚುಟುಕು ಸರಣಿಗಾಗಿ ಭಾರತ ತಂಡ ದಕ್ಷಿಣ ಆಫ್ರಿಕಾಗೆ ಪ್ರವಾಸ ಬೆಳೆಸಲಿದೆ. ತಂಡವನ್ನು ಸೂರ್ಯಕುಮಾರ್​ ಯಾದವ್​ ಮುನ್ನಡೆಸಲಿದ್ದಾರೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್

  • ಟಿ20 ವೇಳಾಪಟ್ಟಿ
  • ಮೊದಲ ಪಂದ್ಯ - ನವೆಂಬರ್ 8 - ಡರ್ಬನ್
  • ಎರಡನೇ ಪಂದ್ಯ- ನವೆಂಬರ್ 10 - ಸೇಂಟ್ ಜಾರ್ಜಿಯಾ
  • ಮೂರನೇ ಟಿ20 - ನವೆಂಬರ್ 13 - ಸೆಂಚುರಿಯನ್
  • ನಾಲ್ಕನೇ ಟಿ20 - ನವೆಂಬರ್ 15 - ಜೋಹಾನ್ಸ್‌ಬರ್ಗ್

ಇದನ್ನೂ ಓದಿ: ಕೇವಲ 1ರನ್​ ಅಂತರದಲ್ಲಿ 8 ವಿಕೆಟ್​ ಕಳೆದುಕೊಂಡ ಆಸ್ಟ್ರೇಲಿಯಾ 53ಕ್ಕೆ ಆಲೌಟ್!

Border Gavaskar Trophy India squad: ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್​ ಗವಾಸ್ಕರ್​ ಟ್ರೋಫಿಗಾಗಿ ಭಾರತೀಯ ಕ್ರಿಕೆಟ್​ ನಿಯಂತ್ರಣ ಮಂಡಳಿ ಶುಕ್ರವಾರ ಭಾರತ ತಂಡವನ್ನು ಪ್ರಕಟಿಸಿದೆ. ತಂಡದಲ್ಲಿ ಇಬ್ಬರು ಕನ್ನಡಿಗರಿಗೆ ಚಾನ್ಸ್​ ನೀಡಲಾಗಿದೆ.

ಐದು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತ ತಂಡ ಆಸ್ಟ್ರೇಲಿಯಾಗೆ ಪ್ರವಾಸ ಬೆಳಸಲಿದೆ. ನವೆಂಬರ್ 22 ರಿಂದ ಉಭಯ ತಂಡಗಳ ನಡುವೆ ಟೆಸ್ಟ್​ ಸರಣಿ ಪ್ರಾರಂಭವಾಗಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ಆತಿಥೇಯ ತಂಡದ ವಿರುದ್ಧ 5 ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಕರ್ನಾಟಕದ ಕೆ.ಎಲ್ ರಾಹುಲ್​ ಮತ್ತು​ ಪ್ರಸಿದ್ಧ ಕೃಷ್ಣರನ್ನು ಆಯ್ಕೆ ಮಾಡಲಾಗಿದೆ

ರಾಹುಲ್​ಗೆ ಮತ್ತೊಂದು ಚಾನ್ಸ್​: ಕರ್ನಾಟಕದ ಸ್ಟಾರ್​ ಬ್ಯಾಟರ್​ ಕೆ.ಎಲ್​ ರಾಹುಲ್​ ಇತ್ತೀಚಿನ ದಿನಗಳಲ್ಲಿ ಹೇಳಿಕೊಳ್ಳುವ ಪ್ರದರ್ಶನ ನೀಡುತ್ತಿಲ್ಲ. ಬಾಂಗ್ಲಾದೇಶದ ವಿರುದ್ಧ ಟೆಸ್ಟ್​ ಸರಣಿ ಮತ್ತು ಪ್ರಸ್ತುತ ನಡೆಯುತ್ತಿರುವ ನ್ಯೂಜಿಲೆಂಡ್​ ವಿರುದ್ಧದ ಬೆಂಗಳೂರು ಟೆಸ್ಟ್​ನಲ್ಲೂ ಹೇಳಿಕೊಳ್ಳುವ ಪ್ರದರ್ಶನ ನೀಡಿರಲಿಲ್ಲ. ಇದರಿಂದಾಗಿ ರಾಹುಲ್​ ಅವರನ್ನು ಎರಡನೇ ಟೆಸ್ಟ್​ನಿಂದ ಕೈ ಬಿಡಲಾಗಿದೆ. ಆದರೆ, ವಿದೇಶಿ ನೆಲದಲ್ಲಿ ರಾಹುಲ್​ ಉತ್ತಮ ದಾಖಲೆ ಹೊಂದಿರುವ ಕಾರಣ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ರಿಷಭ್​ ಪಂತ್ (ವಿಕೆಟ್ ಕೀಪರ್), ಸರ್ಫರಾಜ್ ಖಾನ್, ಧ್ರುವ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಪ್ರಸಿದ್ಧ ಕೃಷ್ಣ, ಹರ್ಷಿತ್ ರಾಣಾ, ನಿತೀಶ್ ಕುಮಾರ್ ರೆಡ್ಡಿ.

ಟ್ರಾವೆಲಿಂಗ್ ರಿಸರ್ವ್ - ಮುಖೇಶ್ ಕುಮಾರ್, ನವದೀಪ್ ಸೈನಿ, ಖಲೀಲ್ ಅಹ್ಮದ್

ಟಿ20ಗೆ ತಂಡ ಪ್ರಕಟ: ಏತನ್ಮಧ್ಯೆ ದಕ್ಷಿಣ ಆಫ್ರಿಕಾ ವಿರುದ್ಧದ 4 ಪಂದ್ಯಗಳ ಟಿ-20 ಸರಣಿಗಾಗಿ ಭಾರತ ತಂಡವನ್ನು ಪ್ರಕಟಿಸಲಾಗಿದೆ. ನವೆಂಬರ್​ 8 ರಿಂದ ಆರಂಭವಾಗಲಿರುವ ಚುಟುಕು ಸರಣಿಗಾಗಿ ಭಾರತ ತಂಡ ದಕ್ಷಿಣ ಆಫ್ರಿಕಾಗೆ ಪ್ರವಾಸ ಬೆಳೆಸಲಿದೆ. ತಂಡವನ್ನು ಸೂರ್ಯಕುಮಾರ್​ ಯಾದವ್​ ಮುನ್ನಡೆಸಲಿದ್ದಾರೆ.

ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ತಿಲಕ್ ವರ್ಮಾ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರಮಣದೀಪ್ ಸಿಂಗ್, ವರುಣ್ ಚಕ್ರವರ್ತಿ, ರವಿ ಬಿಷ್ಣೋಯಿ, ಅರ್ಷದೀಪ್ ಸಿಂಗ್, ವಿಜಯಕುಮಾರ್ ವೈಶಾಕ್, ಅವೇಶ್ ಖಾನ್, ಯಶ್ ದಯಾಳ್

  • ಟಿ20 ವೇಳಾಪಟ್ಟಿ
  • ಮೊದಲ ಪಂದ್ಯ - ನವೆಂಬರ್ 8 - ಡರ್ಬನ್
  • ಎರಡನೇ ಪಂದ್ಯ- ನವೆಂಬರ್ 10 - ಸೇಂಟ್ ಜಾರ್ಜಿಯಾ
  • ಮೂರನೇ ಟಿ20 - ನವೆಂಬರ್ 13 - ಸೆಂಚುರಿಯನ್
  • ನಾಲ್ಕನೇ ಟಿ20 - ನವೆಂಬರ್ 15 - ಜೋಹಾನ್ಸ್‌ಬರ್ಗ್

ಇದನ್ನೂ ಓದಿ: ಕೇವಲ 1ರನ್​ ಅಂತರದಲ್ಲಿ 8 ವಿಕೆಟ್​ ಕಳೆದುಕೊಂಡ ಆಸ್ಟ್ರೇಲಿಯಾ 53ಕ್ಕೆ ಆಲೌಟ್!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.