ETV Bharat / sports

ಸಾರ್ವಕಾಲಿಕ 11 ಸದಸ್ಯರ ಭಾರತ ತಂಡ ಆಯ್ಕೆ ಮಾಡಿದ ದಿನೇಶ್​ ಕಾರ್ತಿಕ್​: ಧೋನಿಗಿಲ್ಲ ಸ್ಥಾನ! - Dinesh Karthik

author img

By ETV Bharat Sports Team

Published : Aug 16, 2024, 9:55 PM IST

ಟೀಂ ಇಂಡಿಯಾದ ಮಾಜಿ ಆಟಗಾರ ದಿನೇಶ್​ ಕಾರ್ತಿಕ್​ ಅವರು ಸಾರ್ವಕಾಲಿಕ 11 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ.

ದಿನೇಶ್​ ಕಾರ್ತಿಕ್​ ಮತ್ತು ಎಂಎಸ್​ ಧೋನಿ
ದಿನೇಶ್​ ಕಾರ್ತಿಕ್​ ಮತ್ತು ಎಂ.ಎಸ್.ಧೋನಿ (AFP)

ನವದೆಹಲಿ: ಟೀಂ ಇಂಡಿಯಾದ ಮಾಜಿ ಬಲಗೈ ಬ್ಯಾಟರ್​ ಕಮ್​ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರು ಹನ್ನೊಂದು ಸದಸ್ಯರ ಸಾರ್ವಕಾಲಿಕ ಭಾರತ ಕ್ರಿಕೆಟ್ ತಂಡ ಆಯ್ಕೆ ಮಾಡಿದ್ದಾರೆ. ಆದರೆ ಈ ತಂಡದಿಂದ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಅವರನ್ನು ಕೈಬಿಟ್ಟಿದ್ದಾರೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ದಿನೇಶ್ ಕಾರ್ತಿಕ್​ ಕ್ರಿಕ್‌ಬಜ್‌ನಲ್ಲಿ ಎಲ್ಲಾ ಸ್ವರೂಪಗಳಲ್ಲಿ 11 ಆಟಗಾರರೊಂದಿಗೆ ತಮ್ಮ ತಂಡವನ್ನು ಘೋಷಿಸಿದರು.

ಡಿಕೆ ಪ್ರಕಟಿಸಿರುವ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಥಾನ ಪಡೆದಿಲ್ಲ. ತಂಡದ ಪ್ರಸ್ತುತ ಹಿರಿಯರ ತಂಡದಿಂದ 5 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಇದೇ ವೇಳೆ 12ನೇ ಆಟಗಾರನಾಗಿ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್​ಗೂ ಸ್ಥಾನ ನೀಡಿದ್ದಾರೆ. ಆದಾಗ್ಯೂ, ಪ್ಲೇಯಿಂಗ್-11 ರಲ್ಲಿ ಅವರು ನಾಯಕ ಮತ್ತು ವಿಕೆಟ್ ಕೀಪರ್ ಅನ್ನು ಉಲ್ಲೇಖಿಸಿಲ್ಲ.

ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಅವರನ್ನು ಡಿಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಯ್ಕೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಅವರನ್ನು ಸೇರಿಸಲಾಗಿದೆ. ಆಲ್ ರೌಂಡರ್​ಗಳಾಗಿ ಯುವರಾಜ್ ಸಿಂಗ್ ಮತ್ತು ರವೀಂದ್ರ ಜಡೇಜಾಗೆ ಸ್ಥಾನ ನೀಡಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ಅನಿಲ್ ಕುಂಬ್ಳೆ ಸ್ಪಿನ್ನರ್‌ ವಿಭಾಗದಲ್ಲಿದ್ದು, ಜಸ್ಪ್ರೀತ್ ಬುಮ್ರಾ ಮತ್ತು ಜಹೀರ್ ಖಾನ್ ವೇಗದ ಬೌಲರ್‌ಗಳಾಗಿದ್ದಾರೆ. ಇದಲ್ಲದೇ 12ನೇ ಸ್ಥಾನಲ್ಲಿ ಹರ್ಭಜನ್ ಸಿಂಗ್​ ಅವರನ್ನು ಆಯ್ಕೆ ಮಾಡಿದ್ದಾರೆ.

ಡಿಕೆ ಸಾರ್ವಕಾಲಿಕ ಅತ್ಯುತ್ತಮ ಆಟಗಾರರು: ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅನಿಲ್ ಕುಂಬ್ಳೆ, ಜಸ್ಪ್ರೀತ್ ಬುಮ್ರಾ, ಜಹೀರ್ ಖಾನ್.

ಇದನ್ನೂ ಓದಿ: ಕ್ರಿಕೆಟ್​ನಲ್ಲಿ ಹೇಗೆಲ್ಲಾ ​OUT ಮಾಡಬಹುದು ಗೊತ್ತೇ?: ನೀವು ತಿಳಿದಿರೋದು 5 ಮಾತ್ರ! - Types Of Dismissals In Cricket

ನವದೆಹಲಿ: ಟೀಂ ಇಂಡಿಯಾದ ಮಾಜಿ ಬಲಗೈ ಬ್ಯಾಟರ್​ ಕಮ್​ ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಅವರು ಹನ್ನೊಂದು ಸದಸ್ಯರ ಸಾರ್ವಕಾಲಿಕ ಭಾರತ ಕ್ರಿಕೆಟ್ ತಂಡ ಆಯ್ಕೆ ಮಾಡಿದ್ದಾರೆ. ಆದರೆ ಈ ತಂಡದಿಂದ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಅವರನ್ನು ಕೈಬಿಟ್ಟಿದ್ದಾರೆ. 78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ, ದಿನೇಶ್ ಕಾರ್ತಿಕ್​ ಕ್ರಿಕ್‌ಬಜ್‌ನಲ್ಲಿ ಎಲ್ಲಾ ಸ್ವರೂಪಗಳಲ್ಲಿ 11 ಆಟಗಾರರೊಂದಿಗೆ ತಮ್ಮ ತಂಡವನ್ನು ಘೋಷಿಸಿದರು.

ಡಿಕೆ ಪ್ರಕಟಿಸಿರುವ ತಂಡದಲ್ಲಿ ಮಹೇಂದ್ರ ಸಿಂಗ್ ಧೋನಿ ಹಾಗೂ ಹಾಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಸ್ಥಾನ ಪಡೆದಿಲ್ಲ. ತಂಡದ ಪ್ರಸ್ತುತ ಹಿರಿಯರ ತಂಡದಿಂದ 5 ಆಟಗಾರರನ್ನು ಆಯ್ಕೆ ಮಾಡಿದ್ದಾರೆ. ಇದೇ ವೇಳೆ 12ನೇ ಆಟಗಾರನಾಗಿ ಅನುಭವಿ ಸ್ಪಿನ್ನರ್ ಹರ್ಭಜನ್ ಸಿಂಗ್​ಗೂ ಸ್ಥಾನ ನೀಡಿದ್ದಾರೆ. ಆದಾಗ್ಯೂ, ಪ್ಲೇಯಿಂಗ್-11 ರಲ್ಲಿ ಅವರು ನಾಯಕ ಮತ್ತು ವಿಕೆಟ್ ಕೀಪರ್ ಅನ್ನು ಉಲ್ಲೇಖಿಸಿಲ್ಲ.

ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್ ಅವರನ್ನು ಡಿಕೆ ಆರಂಭಿಕ ಬ್ಯಾಟ್ಸ್‌ಮನ್‌ಗಳಾಗಿ ಆಯ್ಕೆ ಮಾಡಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಅವರನ್ನು ಸೇರಿಸಲಾಗಿದೆ. ಆಲ್ ರೌಂಡರ್​ಗಳಾಗಿ ಯುವರಾಜ್ ಸಿಂಗ್ ಮತ್ತು ರವೀಂದ್ರ ಜಡೇಜಾಗೆ ಸ್ಥಾನ ನೀಡಿದ್ದಾರೆ. ರವಿಚಂದ್ರನ್ ಅಶ್ವಿನ್ ಮತ್ತು ಅನಿಲ್ ಕುಂಬ್ಳೆ ಸ್ಪಿನ್ನರ್‌ ವಿಭಾಗದಲ್ಲಿದ್ದು, ಜಸ್ಪ್ರೀತ್ ಬುಮ್ರಾ ಮತ್ತು ಜಹೀರ್ ಖಾನ್ ವೇಗದ ಬೌಲರ್‌ಗಳಾಗಿದ್ದಾರೆ. ಇದಲ್ಲದೇ 12ನೇ ಸ್ಥಾನಲ್ಲಿ ಹರ್ಭಜನ್ ಸಿಂಗ್​ ಅವರನ್ನು ಆಯ್ಕೆ ಮಾಡಿದ್ದಾರೆ.

ಡಿಕೆ ಸಾರ್ವಕಾಲಿಕ ಅತ್ಯುತ್ತಮ ಆಟಗಾರರು: ವೀರೇಂದ್ರ ಸೆಹ್ವಾಗ್, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್, ಸಚಿನ್ ತೆಂಡೂಲ್ಕರ್, ವಿರಾಟ್ ಕೊಹ್ಲಿ, ಯುವರಾಜ್ ಸಿಂಗ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಅನಿಲ್ ಕುಂಬ್ಳೆ, ಜಸ್ಪ್ರೀತ್ ಬುಮ್ರಾ, ಜಹೀರ್ ಖಾನ್.

ಇದನ್ನೂ ಓದಿ: ಕ್ರಿಕೆಟ್​ನಲ್ಲಿ ಹೇಗೆಲ್ಲಾ ​OUT ಮಾಡಬಹುದು ಗೊತ್ತೇ?: ನೀವು ತಿಳಿದಿರೋದು 5 ಮಾತ್ರ! - Types Of Dismissals In Cricket

ETV Bharat Logo

Copyright © 2024 Ushodaya Enterprises Pvt. Ltd., All Rights Reserved.