ETV Bharat / sports

ಭಾರತ ಕ್ರಿಕೆಟ್ ತಂಡದ ಸಾಧನೆ ಹೊಗಳಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ - Politicians Congratulate Team India

author img

By ETV Bharat Karnataka Team

Published : Jun 30, 2024, 10:44 AM IST

ವಿಶ್ವ ಚಾಂಪಿಯನ್​ ಕಿರೀಟ ಮುಡಿಗೇರಿಸಿಕೊಂಡ ಭಾರತ ತಂಡಕ್ಕೆ ಸಿಎಂ, ಡಿಸಿಎಂ ಸೇರಿದಂತೆ ಹಲವು ಗಣ್ಯರು ಅಭಿನಂದಿಸಿದ್ದಾರೆ.

ಭಾರತ ಕ್ರಿಕೆಟ್ ತಂಡದ ಸಾಧನೆ ಹೊಗಳಿದ ಸಿಎಂ ಸಿದ್ದರಾಮಯ್ಯ
ಟಿ20 ವಿಶ್ವಕಪ್‌ ಫೈನಲ್ ಪಂದ್ಯ ವೀಕ್ಷಿಸುತ್ತಿರುವ ಸಿಎಂ ಸಿದ್ದರಾಮಯ್ಯ (ETV Bharat)

ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸೇರಿದಂತೆ ಹಲವು ರಾಜ್ಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್​​ ಪಂದ್ಯದಲ್ಲಿ 7 ರನ್​ಗಳ ಜಯ ಸಾಧಿಸಿದ ಭಾರತ, 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದಿತು.

ಐತಿಹಾಸಿಕ ಕ್ಷಣ- ಸಿದ್ದರಾಮಯ್ಯ: 'ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿ ಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ. ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ. ನಿರ್ಣಾಯಕ ಹಂತದಲ್ಲಿ ತಂಡ ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದೂ ಸೋಲದೆ ಕಾಣದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

'ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚುಗೆಗೆ ಅರ್ಹವಾಗಿದೆ' ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅದ್ಭುತ ಪ್ರದರ್ಶನ- ಡಿ.ಕೆ.ಶಿವಕುಮಾರ್​: ಟಿ-20 ವಿಶ್ವಕಪ್ 2024ರ ಫೈನಲ್ಸ್‌ನಲ್ಲಿ ಭಾರತ ತಂಡದ್ದು ಅದ್ಭುತ ಪ್ರದರ್ಶನ. ಪಂದ್ಯಾವಳಿಯುದ್ದಕ್ಕೂ ತಂಡ ತೋರಿದ ಸಮರ್ಪಣೆ ಮತ್ತು ಪರಿಶ್ರಮ ಸ್ಪಷ್ಟವಾಗಿತ್ತು. ಈ ಅದ್ಭುತ ಗೆಲುವನ್ನು ಸಾಧಿಸುವ ಮೂಲಕ ಇಡಿ ದೇಶವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಗುಣಗಾನ ಮಾಡಿದ್ದಾರೆ.

'ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ತಂಡ ಗೆದ್ದು ಬೀಗಿದೆ. ಹೆಮ್ಮೆಯ ಕ್ರಿಕೆಟ್​ ತಂಡಕ್ಕೆ ಶುಭವಾಗಲಿ' ಎಂದು ಹಾರೈಸಿದ್ದಾರೆ.

'ಅಭಿನಂದನೆಗಳು ಟೀಮ್ ಇಂಡಿಯಾ. ಟಿ-20ವಿಶ್ವಕಪ್​​ ಟ್ರೋಫಿ ಎತ್ತುವ ಮೂಲಕ ದೇಶವೇ ಹೆಮ್ಮೆಪಡುವಂತೆ ಮಾಡಿದ್ದೀರಿ. ನಿಮ್ಮ ಅಸಾಧಾರಣ ಕೌಶಲ್ಯ, ಟೀಮ್‌ ವರ್ಕ್ ಮತ್ತು ಸಮರ್ಪಣೆಗಳು ಫಲ ನೀಡಿವೆ' ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಎಕ್ಸ್​ ಖಾತೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಚಾಂಪಿಯನ್​ ಭಾರತಕ್ಕೆ ಅಭಿನಂದನೆಗಳ ಅಭ್ಯಂಜನ: ಯಾರು, ಏನಂದ್ರು? - T20 World Cup

ಎರಡನೇ ಬಾರಿಗೆ ಟಿ-20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್​ ಸೇರಿದಂತೆ ಹಲವು ರಾಜ್ಯ ನಾಯಕರು ಅಭಿನಂದನೆ ಸಲ್ಲಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಫೈನಲ್​​ ಪಂದ್ಯದಲ್ಲಿ 7 ರನ್​ಗಳ ಜಯ ಸಾಧಿಸಿದ ಭಾರತ, 11 ವರ್ಷಗಳ ಬಳಿಕ ಐಸಿಸಿ ಟ್ರೋಫಿ ಗೆದ್ದಿತು.

ಐತಿಹಾಸಿಕ ಕ್ಷಣ- ಸಿದ್ದರಾಮಯ್ಯ: 'ಕ್ರಿಕೆಟ್ ಪ್ರೇಮಿಯಾದ ನನಗೆ ನಮ್ಮವರ ಗೆಲುವು ಅತ್ಯಂತ ಖುಷಿ ಕೊಟ್ಟಿದೆ. ಕೋಟ್ಯಂತರ ಜನರ ಹರಕೆ, ಹಾರೈಕೆಗಳು ಕಡೆಗೂ ಫಲಕೊಟ್ಟಿದೆ. ವಿಶ್ವಕಪ್ ಮರಳಿ ಭಾರತದ ಮಡಿಲು ಸೇರಿದೆ. ನಿರ್ಣಾಯಕ ಹಂತದಲ್ಲಿ ತಂಡ ತೋರಿದ ಸಂಘಟಿತ ಪ್ರದರ್ಶನ ಪಂದ್ಯದ ದಿಕ್ಕನ್ನೇ ಬದಲಿಸಿತು. ಇಡೀ ಪಂದ್ಯಾವಳಿಯಲ್ಲಿ ಒಂದೂ ಸೋಲದೆ ಕಾಣದೆ ಅಜೇಯರಾಗುಳಿದು ವಿಶ್ವಕಪ್ ಟಿ20 ಜಯಿಸಿದ ಭಾರತ ತಂಡದ ಸಾಧನೆ ನಿಜಕ್ಕೂ ಶ್ಲಾಘನೀಯ' ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

'ಒಂದು ಹಂತದಲ್ಲಿ ಗೆಲುವಿನ ಸನಿಹಕ್ಕೆ ಬಂದು ಕಡೇ ಕ್ಷಣದಲ್ಲಿ ಪಂದ್ಯ ಸೋತ ದಕ್ಷಿಣ ಆಫ್ರಿಕಾ ತಂಡದ ಆಟವೂ ಮೆಚ್ಚುಗೆಗೆ ಅರ್ಹವಾಗಿದೆ' ಎಂದು ತಮ್ಮ ಎಕ್ಸ್​ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಅದ್ಭುತ ಪ್ರದರ್ಶನ- ಡಿ.ಕೆ.ಶಿವಕುಮಾರ್​: ಟಿ-20 ವಿಶ್ವಕಪ್ 2024ರ ಫೈನಲ್ಸ್‌ನಲ್ಲಿ ಭಾರತ ತಂಡದ್ದು ಅದ್ಭುತ ಪ್ರದರ್ಶನ. ಪಂದ್ಯಾವಳಿಯುದ್ದಕ್ಕೂ ತಂಡ ತೋರಿದ ಸಮರ್ಪಣೆ ಮತ್ತು ಪರಿಶ್ರಮ ಸ್ಪಷ್ಟವಾಗಿತ್ತು. ಈ ಅದ್ಭುತ ಗೆಲುವನ್ನು ಸಾಧಿಸುವ ಮೂಲಕ ಇಡಿ ದೇಶವೇ ಹೆಮ್ಮೆಪಡುವಂತೆ ಮಾಡಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಗುಣಗಾನ ಮಾಡಿದ್ದಾರೆ.

'ಅನೇಕ ರೋಚಕ ತಿರುವುಗಳ ಫೈನಲ್ ಪಂದ್ಯ ಭಾರತೀಯರೆಲ್ಲರನ್ನೂ ತುದಿಗಾಲ ಮೇಲೆ ನಿಲ್ಲಿಸಿತ್ತು. ಎಲ್ಲರ ಆಕಾಂಕ್ಷೆ, ನಿರೀಕ್ಷೆಯಂತೆ ತಂಡ ಗೆದ್ದು ಬೀಗಿದೆ. ಹೆಮ್ಮೆಯ ಕ್ರಿಕೆಟ್​ ತಂಡಕ್ಕೆ ಶುಭವಾಗಲಿ' ಎಂದು ಹಾರೈಸಿದ್ದಾರೆ.

'ಅಭಿನಂದನೆಗಳು ಟೀಮ್ ಇಂಡಿಯಾ. ಟಿ-20ವಿಶ್ವಕಪ್​​ ಟ್ರೋಫಿ ಎತ್ತುವ ಮೂಲಕ ದೇಶವೇ ಹೆಮ್ಮೆಪಡುವಂತೆ ಮಾಡಿದ್ದೀರಿ. ನಿಮ್ಮ ಅಸಾಧಾರಣ ಕೌಶಲ್ಯ, ಟೀಮ್‌ ವರ್ಕ್ ಮತ್ತು ಸಮರ್ಪಣೆಗಳು ಫಲ ನೀಡಿವೆ' ಎಂದು ಕೇಂದ್ರ ಸಚಿವ ಹೆಚ್​​.ಡಿ.ಕುಮಾರಸ್ವಾಮಿ ಎಕ್ಸ್​ ಖಾತೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ವಿಶ್ವ ಚಾಂಪಿಯನ್​ ಭಾರತಕ್ಕೆ ಅಭಿನಂದನೆಗಳ ಅಭ್ಯಂಜನ: ಯಾರು, ಏನಂದ್ರು? - T20 World Cup

ETV Bharat Logo

Copyright © 2024 Ushodaya Enterprises Pvt. Ltd., All Rights Reserved.