ETV Bharat / sports

ಟಿ20 ವಿಶ್ವಕಪ್​ನೊಂದಿಗೆ ಸ್ವದೇಶಕ್ಕೆ ಬಂದಿಳಿದ ಟೀಂ ಇಂಡಿಯಾ - TEAM INDIA ARRIVAL

author img

By PTI

Published : Jul 4, 2024, 7:22 AM IST

Updated : Jul 4, 2024, 12:46 PM IST

ಟಿ20 ವಿಶ್ವಕಪ್​ ಟೂರ್ನಿಗಾಗಿ ಬಾರ್ಬಡೋಸ್​ಗೆ ತೆರಳಿದ್ದ ಟೀಂ ಇಂಡಿಯಾ ಇಂದು ಸ್ವದೇಶಕ್ಕೆ ಕಪ್​ನೊಂದಿಗೆ ​ಮರಳಿದೆ. ಚಾಂಪಿಯನ್ಸ್​​ಗೆ ದೆಹಲಿ ಏರ್​ಪೋರ್ಟ್​ನಲ್ಲಿ ಅದ್ಧೂರಿ ಸ್ವಾಗತ ಕೋರಲಾಯಿತು.

ಭಾರತಕ್ಕೆ ಆಗಮಿಸಿದ ಟೀಂ ಇಂಡಿಯಾ
ಭಾರತಕ್ಕೆ ಆಗಮಿಸಿದ ಟೀಂ ಇಂಡಿಯಾ (ANI)

ನವದೆಹಲಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದಿರುವ ಟೀಂ ಇಂಡಿಯಾ ಇಂದು ಕಪ್​ನೊಂದಿಗೆ ತಾಯ್ನಾಡಿಗೆ ವಾಪಸಾಗಿದೆ. ಫೈನಲ್​ ಪಂದ್ಯದ ಬಳಿಕ ಬೀಕರ ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲೇ ಉಳಿದುಕೊಂಡಿದ್ದ ಭಾರತೀಯ ಕ್ರಿಕೆಟ್​ ತಂಡದ ಸದಸ್ಯರು, ಕೋಚ್ ಮತ್ತು ಸಿಬ್ಬಂದಿಗಳು​ ಬಿಸಿಸಿಐ ವಿಶೇಷ ವಿಮಾನದ ಮೂಲಕ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ್ದಾರೆ.

ವಿಶ್ವ ಚಾಂಪಿಯನ್ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದೀಗ ಭಾರತದ ಆಟಗಾರರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ ತಲುಪಿದ್ದಾರೆ. ಇಂದು ಎಲ್ಲಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇದಾದ ಬಳಿಕ ಮುಂಬೈಗೆ ತೆರಳಲಿದ್ದಾರೆ.

ಸಂಜೆ ರೋಡ್​ ಶೋ: ಸಂಜೆ 5.30ಕ್ಕೆ ಮುಂಬೈನ ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದ ವರೆಗೆ ತೆರೆದ ವಾಹನದಲ್ಲಿ ವಿಶ್ವಕಪ್​ ರೋಡ್​ ಶೋ ನಡೆಯಲಿದೆ. ಇದರಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ ಆಟಗಾರರು ಭಾಗಿಯಾಗಲಿದ್ದಾರೆ. ಬಳಿಕ ಅಲ್ಲಿಂದ ತಮ್ಮ ನಿವಾಸಕ್ಕೆ ಆಟಗಾರರು ಹಿಂತಿರುಗಲಿದ್ದಾರೆ.

ಮೋದಿ ಜೊತೆ ಔತಣಕೂಟ: ಇಂದು ಬೆ. 11 ಗಂಟೆ ಪ್ರಧಾನಿ ಮೋದಿ ಅವರ ನಿವಾಸಕ್ಕೆ ತೆರಳಲಿರುವ ಟೀಂ ಇಂಡಿಯಾದ ಆಟಗಾರರ ಅಲ್ಲಿ ಔಟಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ಅಮೆರಿಕ ಮತ್ತು ವೆಸ್ಟ್​ಇಂಡೀಸ್​ ಜಂಟಿಯಾಗಿ ಆಯೋಜಿಸಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಶರ್ಮಾ ನೇತೃತ್ವದ ತಂಡ ಸೋಲಿಲ್ಲದೇ ಫೈನಲ್​ ಪ್ರವೇಶಿಸಿತ್ತು. ಫೈನಲ್​ನಲ್ಲೂ​ ಭರ್ಜರಿ ಪ್ರದರ್ಶನ ತೋರಿದ್ದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಕಪ್​ ಗೆದ್ದುಕೊಂಡಿದೆ.

ಇದನ್ನೂ ಓದಿ: ಟಿ20 ರ‍್ಯಾಂಕಿಂಗ್ ಪ್ರಕಟ: ನಂ.1 ಸ್ಥಾನಕ್ಕೇರಿದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ - HARDIK PANDYA NO 1 ALL ROUNDER

ನವದೆಹಲಿ: 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದಿರುವ ಟೀಂ ಇಂಡಿಯಾ ಇಂದು ಕಪ್​ನೊಂದಿಗೆ ತಾಯ್ನಾಡಿಗೆ ವಾಪಸಾಗಿದೆ. ಫೈನಲ್​ ಪಂದ್ಯದ ಬಳಿಕ ಬೀಕರ ಚಂಡಮಾರುತದಿಂದಾಗಿ ಬಾರ್ಬಡೋಸ್​ನಲ್ಲೇ ಉಳಿದುಕೊಂಡಿದ್ದ ಭಾರತೀಯ ಕ್ರಿಕೆಟ್​ ತಂಡದ ಸದಸ್ಯರು, ಕೋಚ್ ಮತ್ತು ಸಿಬ್ಬಂದಿಗಳು​ ಬಿಸಿಸಿಐ ವಿಶೇಷ ವಿಮಾನದ ಮೂಲಕ ದೆಹಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳಗ್ಗೆ ಆಗಮಿಸಿದ್ದಾರೆ.

ವಿಶ್ವ ಚಾಂಪಿಯನ್ ಆಟಗಾರರಿಗೆ ವಿಮಾನ ನಿಲ್ದಾಣದಲ್ಲಿ ಅಭಿಮಾನಿಗಳಿಂದ ಅದ್ಧೂರಿ ಸ್ವಾಗತ ಸಿಕ್ಕಿದೆ. ಇದೀಗ ಭಾರತದ ಆಟಗಾರರು ದೆಹಲಿಯ ಐಟಿಸಿ ಮೌರ್ಯ ಹೋಟೆಲ್ ತಲುಪಿದ್ದಾರೆ. ಇಂದು ಎಲ್ಲಾ ಆಟಗಾರರು ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿದ್ದಾರೆ. ಇದಾದ ಬಳಿಕ ಮುಂಬೈಗೆ ತೆರಳಲಿದ್ದಾರೆ.

ಸಂಜೆ ರೋಡ್​ ಶೋ: ಸಂಜೆ 5.30ಕ್ಕೆ ಮುಂಬೈನ ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದ ವರೆಗೆ ತೆರೆದ ವಾಹನದಲ್ಲಿ ವಿಶ್ವಕಪ್​ ರೋಡ್​ ಶೋ ನಡೆಯಲಿದೆ. ಇದರಲ್ಲಿ ನಾಯಕ ರೋಹಿತ್ ಶರ್ಮಾ ಸೇರಿದಂತೆ ಎಲ್ಲಾ ಆಟಗಾರರು ಭಾಗಿಯಾಗಲಿದ್ದಾರೆ. ಬಳಿಕ ಅಲ್ಲಿಂದ ತಮ್ಮ ನಿವಾಸಕ್ಕೆ ಆಟಗಾರರು ಹಿಂತಿರುಗಲಿದ್ದಾರೆ.

ಮೋದಿ ಜೊತೆ ಔತಣಕೂಟ: ಇಂದು ಬೆ. 11 ಗಂಟೆ ಪ್ರಧಾನಿ ಮೋದಿ ಅವರ ನಿವಾಸಕ್ಕೆ ತೆರಳಲಿರುವ ಟೀಂ ಇಂಡಿಯಾದ ಆಟಗಾರರ ಅಲ್ಲಿ ಔಟಣಕೂಟದಲ್ಲಿ ಭಾಗಿಯಾಗಲಿದ್ದಾರೆ.

ಅಮೆರಿಕ ಮತ್ತು ವೆಸ್ಟ್​ಇಂಡೀಸ್​ ಜಂಟಿಯಾಗಿ ಆಯೋಜಿಸಿದ್ದ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಶರ್ಮಾ ನೇತೃತ್ವದ ತಂಡ ಸೋಲಿಲ್ಲದೇ ಫೈನಲ್​ ಪ್ರವೇಶಿಸಿತ್ತು. ಫೈನಲ್​ನಲ್ಲೂ​ ಭರ್ಜರಿ ಪ್ರದರ್ಶನ ತೋರಿದ್ದ ಭಾರತ ತಂಡ ದಕ್ಷಿಣ ಆಫ್ರಿಕಾವನ್ನು ಮಣಿಸಿ ಕಪ್​ ಗೆದ್ದುಕೊಂಡಿದೆ.

ಇದನ್ನೂ ಓದಿ: ಟಿ20 ರ‍್ಯಾಂಕಿಂಗ್ ಪ್ರಕಟ: ನಂ.1 ಸ್ಥಾನಕ್ಕೇರಿದ ಆಲ್​ರೌಂಡರ್ ಹಾರ್ದಿಕ್ ಪಾಂಡ್ಯ - HARDIK PANDYA NO 1 ALL ROUNDER

Last Updated : Jul 4, 2024, 12:46 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.