ETV Bharat / state

ಹೆಣ್ಣುಭ್ರೂಣ ಹತ್ಯೆ ಜಾಲ ಭೇದಿಸಿದ ಮಂಡ್ಯ ಪೊಲೀಸರು: 12 ಮಂದಿ ಆರೋಪಿಗಳು ಅರೆಸ್ಟ್ - Female Feticide

author img

By ETV Bharat Karnataka Team

Published : Sep 5, 2024, 8:22 PM IST

Updated : Sep 5, 2024, 8:29 PM IST

ಹೆಣ್ಣು ಭ್ರೂಣ ಹತ್ಯೆ ನಡೆಸುತ್ತಿದ್ದ ಕಿಂಗ್​ಪಿನ್ ಸೇರಿ 12 ಆರೋಪಿಗಳನ್ನ ಮಂಡ್ಯ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 23 ಲಕ್ಷ ರೂ ಮೌಲ್ಯದ ಎರಡು ಸ್ಕ್ಯಾನಿಂಗ್​​ ಮಶೀನ್​, ಮೂರು ಕಾರು ಸೇರಿ ಮೂರು ಮೊಬೈಲ್​ಗಳನ್ನ ವಶಕ್ಕೆ ಪಡೆದಿದ್ದಾರೆ.

Accused arrested
ಹೆಣ್ಣುಭ್ರೂಣ ಹತ್ಯೆ ಆರೋಪಿಗಳ ಬಂಧನ (ETV Bharat)
ಎಸ್ ​ಪಿ​ ಮಲ್ಲಿಕಾರ್ಜುನ ಬಾಲದಂಡಿ (ETV Bharat)

ಮಂಡ್ಯ : ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಹಣದಾಸೆಗೆ ಕರುಳ ಬಳ್ಳಿಗಳನ್ನ ಕೊಲ್ಲುವಂತಹ ಹೇಯ ಕೃತ್ಯವನ್ನ ಪಾಪಿಗಳು ಎಸಗುತ್ತಿದ್ದರು. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಏನೆಲ್ಲ ಕ್ರಮಗಳನ್ನ ತೆಗೆದುಕೊಂಡರೂ ಸಕ್ಕರೆ ನಗರಿಯಲ್ಲಿ ಇಂತಹ ಹೇಯಕೃತ್ಯ ನಿರಂತರವಾಗಿ ನಡೆಯುತ್ತಿತ್ತು. ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಪ್ರಕರಣದ ಕಿಂಗ್​ಪಿನ್ ಸೇರಿ 12 ಜನ ಆರೋಪಿಗಳನ್ನ ಮಂಡ್ಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ಎ. ಶೆಟ್ಟಿಹಳ್ಳಿ ಗ್ರಾಮದ ಅಭಿಷೇಕ್, ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ವೀರೇಶ್ ಸೇರಿ ಒಟ್ಟು 12 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 23 ಲಕ್ಷ ರೂ. ಮೌಲ್ಯದ ಎರಡು ಸ್ಕ್ಯಾನಿಂಗ್ ಮಷಿನ್, ಮೂರು ಕಾರು ಸೇರಿ ಮೂರು ಮೊಬೈಲ್​​ಗಳನ್ನ ವಶಕ್ಕೆ ಪಡೆದಿದ್ದಾರೆ.

ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ, ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆಮರೆಸಿಕೊಂಡಿದ್ದ.

ಕಿಂಗ್​ಪಿನ್​ ಅಭಿಷೇಕ್​ ಬಂಧನ : ಆ ನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲುಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಭೇದಿಸಿ, ಹಲವು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

CAR
ಆರೋಪಿಗಳಿಂದ ಕಾರು ವಶಕ್ಕೆ ಪಡೆದ ಪೊಲೀಸರು (ETV Bharat)

ಹಳೇ ಮೈಸೂರು ಭಾಗದ ಜಿಲ್ಲೆಗಳಾದ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಈ ಖತರ್ನಾಕ್​ಗಳು ನೆಟ್​ವರ್ಕ್ ಹೊಂದಿದ್ರು. ಇನ್ನು ಹಾಡ್ಯ ಆಲೆಮನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭಿಷೇಕ್ ಬಂಧನವಾಗಿರಲಿಲ್ಲ. ಈ ಪ್ರಕರಣವನ್ನೇ ಬಳಸಿಕೊಂಡು ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡು ಕಿಂಗ್ ಪಿನ್ ಅಭಿಷೇಕ್, ಮತ್ತೊಬ್ಬ ಆರೋಪಿ ವೀರೇಶ್​ನ ಸಹಾಯದಿಂದ ದಂಧೆ ಮುಂದುವರೆಸಿದ್ದ. ಐದು ಪ್ರಕರಣಗಳಲ್ಲಿ ಚಾಲಕಿ ಅಭಿಷೇಕ್ ಬಂಧನವಾಗಿರಲಿಲ್ಲ.

ಐದು ಸ್ಕ್ಯಾನಿಂಗ್ ಮಶೀನ್ ಖರೀದಿ : ಇಂತಹದ್ದೇ ಸ್ಥಳದಲ್ಲೇ ಸ್ಕ್ಯಾನಿಂಗ್ ಮಾಡಿದ್ರೆ ಸಿಕ್ಕಿಬೀಳುತ್ತೇವೆ ಎಂದು ಓಮಿನಿ ಕಾರಿನಲ್ಲೇ ಮಹಿಳೆಯರಿಗೆ ಸ್ಕ್ಯಾನಿಂಗ್ ಮಾಡುತ್ತಿದ್ದರು. ಪಾಪಿಗಳು ಒಂದು ಹೆಣ್ಣು ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಗೆ 25 ಸಾವಿರದಿಂದ 1 ಲಕ್ಷ ಪಡೆಯುತ್ತಿದ್ದರು. ಇನ್ನು ಕರುಳಬಳ್ಳಿಗಳನ್ನ ಕೊಂದು ಮೆಡಿಕಲ್ ವೇಸ್ಟ್ ಜೊತೆ ಎಸೆಯುತ್ತಿದ್ದರು. ಇವರ ದಂಧೆ ಯಾರಿಗೂ ತಿಳಿಯಬಾರದು, ಪೊಲೀಸರ ಕೈಗೆ ಸಿಗಬಾರದು ಎಂದು ಮೊಬೈಲ್ ಕಾಲ್ ಬದಲು ಇಂಟರ್​ನೆಟ್ ಕಾಲ್ ಮಾಡುತ್ತಿದ್ದರು. ಹೆಣ್ಣುಭ್ರೂಣ ಪತ್ತೆ ಮಾಡಲು ವೈದ್ಯರೊಬ್ಬರಿಂದ ಐದು ಸ್ಕ್ಯಾನಿಂಗ್ ಮಶೀನ್​ಗಳನ್ನ ಖರೀದಿಸಿದ್ದರು.

ಹೀಗಾಗಿ ಪೊಲೀಸರಿಗೂ ಕೂಡ ದೊಡ್ಡ ತಲೆ ನೋವಾಗಿತ್ತು. ಹೀಗಾಗಿ ಪ್ರಮುಖ ಕಿಂಗ್​ಪಿನ್ ಸೇರಿ ಹಲವರನ್ನ ಬಂಧಿಸಲು ಪ್ರತ್ಯೇಕ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಆರೋಗ್ಯ ಇಲಾಖೆಯ ಮಾಹಿತಿ ಆಧರಿಸಿ ಮಂಡ್ಯ ಪೊಲೀಸರು ಇದೀಗ 12 ಆರೋಪಿಗಳನ್ನ ಬಂಧಿಸಿದ್ದು, ಪ್ರಕರಣದಲ್ಲಿ ಹಲವು ವೈದ್ಯರ ಪಾತ್ರ ಕೂಡ ಇದ್ದು, ಅವರ ಬಂಧನಕ್ಕೂ ಜಾಲ ಬೀಸಿದ್ದಾರೆ.

ಈ ಬಗ್ಗೆ ಎಸ್​ಪಿ​ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, 'ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳಲ್ಲಿ 12 ಆರೋಪಿಗಳನ್ನ ದಸ್ತಗಿರಿ ಮಾಡಿ, ಉಳಿದ 7 ಜನ ಆರೋಪಿತರು ತಲೆಮರೆಸಿಕೊಂಡಿದ್ದರು. ಅದಾದ ನಂತರ ಮಂಡ್ಯದ ಮೇಲುಕೋಟೆಯಲ್ಲಿ ಒಂದು ಪ್ರಕರಣ, ಮೈಸೂರಿನ ಉದಯಗಿರಿಯಲ್ಲಿಯೂ ಇದೇ ರೀತಿ ಹೆಣ್ಣು ಭ್ರೂಣ ಪತ್ತೆ ಮತ್ತು ಗರ್ಭಪಾತ ಮಾಡುವ ಬಗ್ಗೆ ಪ್ರಕರಣಗಳು ದಾಖಲಾಗಿತ್ತು.

ಇದೇ ರೀತಿ ಬೈಯಪ್ಪನಹಳ್ಳಿಯಲ್ಲಿ ಪ್ರಕರಣ ದಾಖಲಾಗಿದ್ದವು. ಇದರಲ್ಲಿ ಕೆಲ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೇ ರೀತಿ ಪ್ರವೃತ್ತಿಯನ್ನು ತಮ್ಮ ಮುಂದಿನ ದಿನಗಳಲ್ಲಿಯೂ ಮುಂದುವರೆಸಿಕೊಂಡು ಬಂದಿದ್ದರು. ಲಿಂಗ ಪತ್ತೆಯಿಂದ ಹಿಡಿದು, ಗರ್ಭಪಾತ ಮಾಡಿಸುವವರೆಗೆ ಈ ಜಾಲ ವ್ಯಾಪಿಸುತ್ತಿತ್ತು. ಭ್ರೂಣವನ್ನು ಆಸ್ಪತ್ರೆಯ ತ್ಯಾಜ್ಯದೊಂದಿಗೆ ಬಿಸಾಕುತ್ತಿದ್ದರು. ಉಳಿದ ಆರೋಪಿಗಳನ್ನ ಬಂಧಿಸಿದ ನಂತರ ಮಾಹಿತಿ ನೀಡುತ್ತೇವೆ' ಎಂದಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ನಿಲ್ಲದ ಭ್ರೂಣ ಪತ್ತೆ, ಹತ್ಯೆ: ಹೆಲ್ತ್‌ ಕ್ವಾಟರ್ಸ್‌ನಲ್ಲೇ ದುಷ್ಕೃತ್ಯ ಬೆಳಕಿಗೆ! - Female Feticide Racket

ಎಸ್ ​ಪಿ​ ಮಲ್ಲಿಕಾರ್ಜುನ ಬಾಲದಂಡಿ (ETV Bharat)

ಮಂಡ್ಯ : ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದ ಹೆಣ್ಣು ಭ್ರೂಣ ಪತ್ತೆ ಹಾಗೂ ಹತ್ಯೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತೆ ಮಾಡಿತ್ತು. ಹಣದಾಸೆಗೆ ಕರುಳ ಬಳ್ಳಿಗಳನ್ನ ಕೊಲ್ಲುವಂತಹ ಹೇಯ ಕೃತ್ಯವನ್ನ ಪಾಪಿಗಳು ಎಸಗುತ್ತಿದ್ದರು. ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಏನೆಲ್ಲ ಕ್ರಮಗಳನ್ನ ತೆಗೆದುಕೊಂಡರೂ ಸಕ್ಕರೆ ನಗರಿಯಲ್ಲಿ ಇಂತಹ ಹೇಯಕೃತ್ಯ ನಿರಂತರವಾಗಿ ನಡೆಯುತ್ತಿತ್ತು. ಇಂತಹ ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುತ್ತಿದ್ದ ಪ್ರಕರಣದ ಕಿಂಗ್​ಪಿನ್ ಸೇರಿ 12 ಜನ ಆರೋಪಿಗಳನ್ನ ಮಂಡ್ಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ.

ಜಿಲ್ಲೆಯ ಪಾಂಡವಪುರ ತಾಲೂಕಿನ ಎ. ಶೆಟ್ಟಿಹಳ್ಳಿ ಗ್ರಾಮದ ಅಭಿಷೇಕ್, ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ವೀರೇಶ್ ಸೇರಿ ಒಟ್ಟು 12 ಜನ ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 23 ಲಕ್ಷ ರೂ. ಮೌಲ್ಯದ ಎರಡು ಸ್ಕ್ಯಾನಿಂಗ್ ಮಷಿನ್, ಮೂರು ಕಾರು ಸೇರಿ ಮೂರು ಮೊಬೈಲ್​​ಗಳನ್ನ ವಶಕ್ಕೆ ಪಡೆದಿದ್ದಾರೆ.

ಮೊದಲಿಗೆ ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಆಲೆಮನೆಯಲ್ಲಿ ನಡೆಯುತ್ತಿದ್ದ ಕರಾಳದಂಧೆಯನ್ನ ಬೆಂಗಳೂರಿನ ಬೈಯಪ್ಪನಹಳ್ಳಿ ಠಾಣೆ ಪೊಲೀಸರು ಭೇದಿಸಿ, ಹಲವು ಮಂದಿಯನ್ನ ಬಂಧಿಸಿದ್ದರು. ಆನಂತರ ಈ ಪ್ರಕರಣವನ್ನ ಸಿಐಡಿಗೂ ವಹಿಸಲಾಗಿತ್ತು. ಆದರೆ, ಈ ಪ್ರಕರಣದಲ್ಲಿ ಕಿಂಗ್ ಪಿನ್ ಆಗಿದ್ದ ಅಭಿಷೇಕ್ ಬಂಧನವಾಗದೇ ತಲೆಮರೆಸಿಕೊಂಡಿದ್ದ.

ಕಿಂಗ್​ಪಿನ್​ ಅಭಿಷೇಕ್​ ಬಂಧನ : ಆ ನಂತರ ಪಾಂಡವಪುರದ ಹೆಲ್ತ್ ಕ್ವಾಟ್ರಸ್, ಮೇಲುಕೋಟೆ, ನಾಗಮಂಗಲ ಸೇರಿದಂತೆ ಹಲವು ಕಡೆಗಳಲ್ಲಿ ನಡೆಯುತ್ತಿದ್ದ ಕರಾಳದಂಧೆ ಭೇದಿಸಿ, ಹಲವು ಆರೋಪಿಗಳನ್ನ ಬಂಧನ ಮಾಡಲಾಗಿತ್ತು. ಆದರೆ ಐದು ಪ್ರಕರಣಗಳಲ್ಲಿ ಸಿಐಡಿ ಪೊಲೀಸರು ಸೇರಿದಂತೆ ಮಂಡ್ಯ ಜಿಲ್ಲೆಯ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಕಿಂಗ್ ಪಿನ್ ಅಭಿಷೇಕ್ ಕರಾಳದಂಧೆಯನ್ನ ಮುಂದುವರೆಸಿಕೊಂಡು ಹೋಗಿದ್ದ. ಈತನ ಬಂಧನಕ್ಕಾಗಿಯೇ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಕೊನೆಗೂ ಐನಾತಿ ಅಭಿಷೇಕ್ ಬಂಧನವಾಗಿದೆ.

CAR
ಆರೋಪಿಗಳಿಂದ ಕಾರು ವಶಕ್ಕೆ ಪಡೆದ ಪೊಲೀಸರು (ETV Bharat)

ಹಳೇ ಮೈಸೂರು ಭಾಗದ ಜಿಲ್ಲೆಗಳಾದ ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು ಜಿಲ್ಲೆಗಳಲ್ಲಿ ಈ ಖತರ್ನಾಕ್​ಗಳು ನೆಟ್​ವರ್ಕ್ ಹೊಂದಿದ್ರು. ಇನ್ನು ಹಾಡ್ಯ ಆಲೆಮನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಅಭಿಷೇಕ್ ಬಂಧನವಾಗಿರಲಿಲ್ಲ. ಈ ಪ್ರಕರಣವನ್ನೇ ಬಳಸಿಕೊಂಡು ಡಿಮ್ಯಾಂಡ್ ಕ್ರಿಯೇಟ್ ಮಾಡಿಕೊಂಡು ಕಿಂಗ್ ಪಿನ್ ಅಭಿಷೇಕ್, ಮತ್ತೊಬ್ಬ ಆರೋಪಿ ವೀರೇಶ್​ನ ಸಹಾಯದಿಂದ ದಂಧೆ ಮುಂದುವರೆಸಿದ್ದ. ಐದು ಪ್ರಕರಣಗಳಲ್ಲಿ ಚಾಲಕಿ ಅಭಿಷೇಕ್ ಬಂಧನವಾಗಿರಲಿಲ್ಲ.

ಐದು ಸ್ಕ್ಯಾನಿಂಗ್ ಮಶೀನ್ ಖರೀದಿ : ಇಂತಹದ್ದೇ ಸ್ಥಳದಲ್ಲೇ ಸ್ಕ್ಯಾನಿಂಗ್ ಮಾಡಿದ್ರೆ ಸಿಕ್ಕಿಬೀಳುತ್ತೇವೆ ಎಂದು ಓಮಿನಿ ಕಾರಿನಲ್ಲೇ ಮಹಿಳೆಯರಿಗೆ ಸ್ಕ್ಯಾನಿಂಗ್ ಮಾಡುತ್ತಿದ್ದರು. ಪಾಪಿಗಳು ಒಂದು ಹೆಣ್ಣು ಭ್ರೂಣಲಿಂಗ ಪತ್ತೆ ಹಾಗೂ ಹತ್ಯೆಗೆ 25 ಸಾವಿರದಿಂದ 1 ಲಕ್ಷ ಪಡೆಯುತ್ತಿದ್ದರು. ಇನ್ನು ಕರುಳಬಳ್ಳಿಗಳನ್ನ ಕೊಂದು ಮೆಡಿಕಲ್ ವೇಸ್ಟ್ ಜೊತೆ ಎಸೆಯುತ್ತಿದ್ದರು. ಇವರ ದಂಧೆ ಯಾರಿಗೂ ತಿಳಿಯಬಾರದು, ಪೊಲೀಸರ ಕೈಗೆ ಸಿಗಬಾರದು ಎಂದು ಮೊಬೈಲ್ ಕಾಲ್ ಬದಲು ಇಂಟರ್​ನೆಟ್ ಕಾಲ್ ಮಾಡುತ್ತಿದ್ದರು. ಹೆಣ್ಣುಭ್ರೂಣ ಪತ್ತೆ ಮಾಡಲು ವೈದ್ಯರೊಬ್ಬರಿಂದ ಐದು ಸ್ಕ್ಯಾನಿಂಗ್ ಮಶೀನ್​ಗಳನ್ನ ಖರೀದಿಸಿದ್ದರು.

ಹೀಗಾಗಿ ಪೊಲೀಸರಿಗೂ ಕೂಡ ದೊಡ್ಡ ತಲೆ ನೋವಾಗಿತ್ತು. ಹೀಗಾಗಿ ಪ್ರಮುಖ ಕಿಂಗ್​ಪಿನ್ ಸೇರಿ ಹಲವರನ್ನ ಬಂಧಿಸಲು ಪ್ರತ್ಯೇಕ ಏಳು ತಂಡಗಳನ್ನ ರಚನೆ ಮಾಡಲಾಗಿತ್ತು. ಆರೋಗ್ಯ ಇಲಾಖೆಯ ಮಾಹಿತಿ ಆಧರಿಸಿ ಮಂಡ್ಯ ಪೊಲೀಸರು ಇದೀಗ 12 ಆರೋಪಿಗಳನ್ನ ಬಂಧಿಸಿದ್ದು, ಪ್ರಕರಣದಲ್ಲಿ ಹಲವು ವೈದ್ಯರ ಪಾತ್ರ ಕೂಡ ಇದ್ದು, ಅವರ ಬಂಧನಕ್ಕೂ ಜಾಲ ಬೀಸಿದ್ದಾರೆ.

ಈ ಬಗ್ಗೆ ಎಸ್​ಪಿ​ ಮಲ್ಲಿಕಾರ್ಜುನ ಬಾಲದಂಡಿ ಅವರು ಮಾತನಾಡಿ, 'ಹೆಣ್ಣು ಭ್ರೂಣ ಹತ್ಯೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 19 ಆರೋಪಿಗಳಲ್ಲಿ 12 ಆರೋಪಿಗಳನ್ನ ದಸ್ತಗಿರಿ ಮಾಡಿ, ಉಳಿದ 7 ಜನ ಆರೋಪಿತರು ತಲೆಮರೆಸಿಕೊಂಡಿದ್ದರು. ಅದಾದ ನಂತರ ಮಂಡ್ಯದ ಮೇಲುಕೋಟೆಯಲ್ಲಿ ಒಂದು ಪ್ರಕರಣ, ಮೈಸೂರಿನ ಉದಯಗಿರಿಯಲ್ಲಿಯೂ ಇದೇ ರೀತಿ ಹೆಣ್ಣು ಭ್ರೂಣ ಪತ್ತೆ ಮತ್ತು ಗರ್ಭಪಾತ ಮಾಡುವ ಬಗ್ಗೆ ಪ್ರಕರಣಗಳು ದಾಖಲಾಗಿತ್ತು.

ಇದೇ ರೀತಿ ಬೈಯಪ್ಪನಹಳ್ಳಿಯಲ್ಲಿ ಪ್ರಕರಣ ದಾಖಲಾಗಿದ್ದವು. ಇದರಲ್ಲಿ ಕೆಲ ಪ್ರಮುಖ ಆರೋಪಿಗಳು ತಲೆಮರೆಸಿಕೊಂಡಿದ್ದರು. ಇದೇ ರೀತಿ ಪ್ರವೃತ್ತಿಯನ್ನು ತಮ್ಮ ಮುಂದಿನ ದಿನಗಳಲ್ಲಿಯೂ ಮುಂದುವರೆಸಿಕೊಂಡು ಬಂದಿದ್ದರು. ಲಿಂಗ ಪತ್ತೆಯಿಂದ ಹಿಡಿದು, ಗರ್ಭಪಾತ ಮಾಡಿಸುವವರೆಗೆ ಈ ಜಾಲ ವ್ಯಾಪಿಸುತ್ತಿತ್ತು. ಭ್ರೂಣವನ್ನು ಆಸ್ಪತ್ರೆಯ ತ್ಯಾಜ್ಯದೊಂದಿಗೆ ಬಿಸಾಕುತ್ತಿದ್ದರು. ಉಳಿದ ಆರೋಪಿಗಳನ್ನ ಬಂಧಿಸಿದ ನಂತರ ಮಾಹಿತಿ ನೀಡುತ್ತೇವೆ' ಎಂದಿದ್ದಾರೆ.

ಇದನ್ನೂ ಓದಿ : ಮಂಡ್ಯದಲ್ಲಿ ನಿಲ್ಲದ ಭ್ರೂಣ ಪತ್ತೆ, ಹತ್ಯೆ: ಹೆಲ್ತ್‌ ಕ್ವಾಟರ್ಸ್‌ನಲ್ಲೇ ದುಷ್ಕೃತ್ಯ ಬೆಳಕಿಗೆ! - Female Feticide Racket

Last Updated : Sep 5, 2024, 8:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.