ETV Bharat / state

ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಮತದಾನಕ್ಕಾಗಿ 19 ಮಂದಿ ಗಡಿಪಾರು - 19 people exiled

ಗಡಿಪಾರು ಮಾಡಿರುವ ವ್ಯಕ್ತಿಗಳ ಮೇಲೆ ಇಲಾಖೆ ಸಿಬ್ಬಂದಿ ಕಣ್ಣು ಇಡಲಿದ್ದು, ಅವರು ಮತ್ತೆ ತಮ್ಮ ಸ್ಥಳದಲ್ಲಿ ಕಾಣಿಸಿಕೊಂಡಲ್ಲಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಡಿಎಸ್​ಪಿ ತಿಳಿಸಿದ್ದಾರೆ.

author img

By ETV Bharat Karnataka Team

Published : Apr 6, 2024, 12:42 PM IST

District Superintendent of Police Ashok
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್
ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಮತದಾನದ ಹಿನ್ನೆಲೆ 19 ಮಂದಿ ಗಡಿಪಾರು

ತುಮಕೂರು: "ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೇ ಪೂರಕವಾಗಿ ಜಿಲ್ಲೆಯಲ್ಲಿ 19 ಮಂದಿಯನ್ನು ಗಡಿಪಾರು ಮಾಡುವ ಆದೇಶ ಹೊರಡಿಸಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.

"ಇದುವರೆಗೂ 50 ಮಂದಿಯನ್ನು ಗಡಿಪಾರು ಮಾಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಎಲ್ಲ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಅವರು ಇರುವಂತಹ ಪ್ರದೇಶಗಳಲ್ಲಿ ಶಾಂತಿಯುತ ಮತದಾನಕ್ಕೆ ಅಡ್ಡಿ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿದರು.

"ಗಡಿಪಾರು ಮಾಡಲಾಗಿರುವಂತಹ ವ್ಯಕ್ತಿಗಳ ಕುರಿತು ನಿರಂತರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುತ್ತಾರೆ. ಅಕಸ್ಮಾತ್ ಅವರು ವಾಪಸ್ ಆ ಸ್ಥಳಗಳಿಗೆ ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾ ಕಾಯ್ದೆ, 13 ಮಂದಿ ಗಡಿಪಾರು - Rowdies Booked Under Goonda Act

ತುಮಕೂರು: ಜಿಲ್ಲೆಯಲ್ಲಿ ಶಾಂತಿಯುತ ಮತದಾನದ ಹಿನ್ನೆಲೆ 19 ಮಂದಿ ಗಡಿಪಾರು

ತುಮಕೂರು: "ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಕ್ತ ಹಾಗೂ ಶಾಂತಿಯುತ ಮತದಾನಕ್ಕೇ ಪೂರಕವಾಗಿ ಜಿಲ್ಲೆಯಲ್ಲಿ 19 ಮಂದಿಯನ್ನು ಗಡಿಪಾರು ಮಾಡುವ ಆದೇಶ ಹೊರಡಿಸಲಾಗಿದೆ" ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ತಿಳಿಸಿದ್ದಾರೆ.

"ಇದುವರೆಗೂ 50 ಮಂದಿಯನ್ನು ಗಡಿಪಾರು ಮಾಡಬೇಕು ಎಂದು ಜಿಲ್ಲಾ ಪೊಲೀಸ್ ಇಲಾಖೆಯಿಂದ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಈ ಎಲ್ಲ ವ್ಯಕ್ತಿಗಳ ಮೇಲೆ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದೆ. ಅವರು ಇರುವಂತಹ ಪ್ರದೇಶಗಳಲ್ಲಿ ಶಾಂತಿಯುತ ಮತದಾನಕ್ಕೆ ಅಡ್ಡಿ ಉಂಟಾಗಬಹುದು ಎಂಬ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ" ಎಂದು ಹೇಳಿದರು.

"ಗಡಿಪಾರು ಮಾಡಲಾಗಿರುವಂತಹ ವ್ಯಕ್ತಿಗಳ ಕುರಿತು ನಿರಂತರವಾಗಿ ಪೊಲೀಸ್ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುತ್ತಾರೆ. ಅಕಸ್ಮಾತ್ ಅವರು ವಾಪಸ್ ಆ ಸ್ಥಳಗಳಿಗೆ ಬಂದರೆ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲು ಈಗಾಗಲೇ ಸೂಚನೆ ನೀಡಲಾಗಿದೆ. ಲೋಕಸಭಾ ಚುನಾವಣೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಿರಲಿ ಎಂಬ ಕಾರಣದಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ" ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮತ್ತೆ ನಾಲ್ವರು ರೌಡಿಗಳ ಮೇಲೆ ಗೂಂಡಾ ಕಾಯ್ದೆ, 13 ಮಂದಿ ಗಡಿಪಾರು - Rowdies Booked Under Goonda Act

ETV Bharat Logo

Copyright © 2024 Ushodaya Enterprises Pvt. Ltd., All Rights Reserved.