ETV Bharat / state

ಬೆಂಗಳೂರು: ಎಚ್ಎಂಟಿ ವಶದಲ್ಲಿದ್ದ 5 ಎಕರೆ ಅರಣ್ಯ ಭೂಮಿ ಮರುವಶ

ಪೀಣ್ಯ-ಜಾಲಹಳ್ಳಿ ಸರ್ವೆ ನಂ.1ರಲ್ಲಿ ಎಚ್ಎಂಟಿ ವಶದಲ್ಲಿದ್ದ 5 ಎಕರೆ ಖಾಲಿ ಜಮೀನನ್ನು ಅರಣ್ಯ ಇಲಾಖೆ ಮರುವಶಕ್ಕೆ ಪಡೆದಿದೆ.

ಎಚ್ಎಂಟಿ ವಶದಲ್ಲಿದ್ದ 5 ಎಕರೆ ಅರಣ್ಯ ಭೂಮಿ ಮರುವಶ
ಎಚ್ಎಂಟಿ ವಶದಲ್ಲಿದ್ದ 5 ಎಕರೆ ಅರಣ್ಯ ಭೂಮಿ ಮರುವಶ (ETV Bharat)
author img

By ETV Bharat Karnataka Team

Published : 3 hours ago

Updated : 1 hours ago

ಬೆಂಗಳೂರು: ಎಚ್ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ.1ರಲ್ಲಿ ಇಂದು ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದಾರೆ. ಜೊತೆಗೆ, ಕರ್ನಾಟಕ ಅರಣ್ಯ ಇಲಾಖೆಯ ಫಲಕ ಹಾಕಿದ್ದಾರೆ.

ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್​ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು ಒಂದು ಕಾಲದಲ್ಲಿದ್ದ ಅರಣ್ಯ, ಯಾವಾಗಲೂ ಅರಣ್ಯವಾಗಿರುತ್ತದೆ (once a forest is always a forest) ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದಿದ್ದ ಈಶ್ವರ ಖಂಡ್ರೆ, ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್​ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವುದಾಗಿ ಹೇಳಿದ್ದರು.

ಹೀಗಾಗಿ ಇಂದು ಅರಣ್ಯ ಅಧಿಕಾರಿಗಳು ಐದು ಎಕರೆ ಖಾಲಿ ಜಮೀನನ್ನು ಎಚ್​ಎಂಟಿಯಿಂದ ವಶಕ್ಕೆ ಪಡೆದರು. ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು. ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್​ಬಾಗ್, ಕಬ್ಬನ್ ಪಾರ್ಕ್‌ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದರು. ಈ ನಿಟ್ಟಿನಲ್ಲಿ ಇಂದು ಅರಣ್ಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯ ಮಳೆಹಾನಿ ಪ್ರದೇಶಗಳಿಗೆ ಕೃಷ್ಣ ಬೈರೇಗೌಡ ಭೇಟಿ, ಪರಿಶೀಲನೆ

ಬೆಂಗಳೂರು: ಎಚ್ಎಂಟಿ ವಶದಲ್ಲಿದ್ದ ಪೀಣ್ಯ-ಜಾಲಹಳ್ಳಿ ಸರ್ವೆ ನಂ.1ರಲ್ಲಿ ಇಂದು ಅರಣ್ಯ ಇಲಾಖೆ ಬೆಂಗಳೂರು ನಗರ ವಲಯದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 5 ಎಕರೆ ಖಾಲಿ ಜಮೀನನ್ನು ಮರುವಶಕ್ಕೆ ಪಡೆದಿದ್ದಾರೆ. ಜೊತೆಗೆ, ಕರ್ನಾಟಕ ಅರಣ್ಯ ಇಲಾಖೆಯ ಫಲಕ ಹಾಕಿದ್ದಾರೆ.

ಪೀಣ್ಯ, ಜಾಲಹಳ್ಳಿ ಪ್ಲಾಂಟೇಷನ್​ನಲ್ಲಿರುವ 599 ಎಕರೆ ಜಮೀನು ಅರಣ್ಯವಾಗಿದೆ. ಅರಣ್ಯೇತರ ಉದ್ದೇಶಕ್ಕೆ ಭೂಪರಿವರ್ತನೆ ಆಗದ ಈ ಜಮೀನು ಒಂದು ಕಾಲದಲ್ಲಿದ್ದ ಅರಣ್ಯ, ಯಾವಾಗಲೂ ಅರಣ್ಯವಾಗಿರುತ್ತದೆ (once a forest is always a forest) ಎಂಬ ಸುಪ್ರೀಂ ಕೋರ್ಟ್ ಅಭಿಪ್ರಾಯದಂತೆ ಅರಣ್ಯವೇ ಆಗಿದೆ ಎಂದಿದ್ದ ಈಶ್ವರ ಖಂಡ್ರೆ, ಎಚ್ಎಂಟಿ ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್​ನ 599 ಎಕರೆ ಅರಣ್ಯದ ಪೈಕಿ ಅರಣ್ಯ ಸ್ವರೂಪದ ಮತ್ತು ಖಾಲಿ ಜಮೀನು ವಶಕ್ಕೆ ಪಡೆದು ಬೃಹತ್ ಉದ್ಯಾನ ನಿರ್ಮಿಸುವುದಾಗಿ ಹೇಳಿದ್ದರು.

ಹೀಗಾಗಿ ಇಂದು ಅರಣ್ಯ ಅಧಿಕಾರಿಗಳು ಐದು ಎಕರೆ ಖಾಲಿ ಜಮೀನನ್ನು ಎಚ್​ಎಂಟಿಯಿಂದ ವಶಕ್ಕೆ ಪಡೆದರು. ಜಮೀನು ಅರಣ್ಯ ಸ್ವರೂಪ ಕಳೆದುಕೊಂಡಿದೆ ಎಂದು ಡಿನೋಟಿಫಿಕೇಷನ್​ಗೆ ಅನುಮತಿ ಕೋರಿ ಅರಣ್ಯಾಧಿಕಾರಿಗಳು ನಿಯಮಬಾಹಿರವಾಗಿ ಸಲ್ಲಿಸಿದ್ದ ಇಂಟರ್ ಲೊಕೇಟರಿ ಅಪ್ಲಿಕೇಶನ್ (ಐ.ಎ.) ಹಿಂಪಡೆಯಲೂ ಸೂಚನೆ ನೀಡಿದ್ದರು. ಈ ಮಧ್ಯೆ ಎಚ್ಎಂಟಿ ತನ್ನ ವಶದಲ್ಲಿದ್ದ ಅರಣ್ಯ ಭೂಮಿಯ ಪೈಕಿ 165ಕ್ಕೂ ಹೆಚ್ಚು ಎಕರೆ ಜಮೀನನ್ನು ಕೇವಲ 300 ಕೋಟಿ ರೂಪಾಯಿಗಳಿಗೆ ಖಾಸಗಿ ಮತ್ತು ಸರ್ಕಾರದ ವಿವಿಧ ಸಂಸ್ಥೆಗಳಿಗೆ ಮಾರಾಟ ಮಾಡಿತ್ತು.

ಈ ಭೂಮಿಯನ್ನು ವಶಕ್ಕೆ ಪಡೆದು ಲಾಲ್​ಬಾಗ್, ಕಬ್ಬನ್ ಪಾರ್ಕ್‌ನಂತಹ ಬೃಹತ್ ಉದ್ಯಾನ ಇಲ್ಲದ ಉತ್ತರ ಬೆಂಗಳೂರಿನಲ್ಲಿ ವೃಕ್ಷೋದ್ಯಾನ ನಿರ್ಮಿಸಿ ಆ ಭಾಗದ ಬೆಂಗಳೂರಿಗರಿಗೆ ಅತ್ಯುತ್ತಮ ಶ್ವಾಸತಾಣ ಮಾಡುವುದಾಗಿ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದರು. ಈ ನಿಟ್ಟಿನಲ್ಲಿ ಇಂದು ಅರಣ್ಯ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ.

ಇದನ್ನೂ ಓದಿ: ದಾವಣಗೆರೆಯ ಮಳೆಹಾನಿ ಪ್ರದೇಶಗಳಿಗೆ ಕೃಷ್ಣ ಬೈರೇಗೌಡ ಭೇಟಿ, ಪರಿಶೀಲನೆ

Last Updated : 1 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.