ETV Bharat / state

ತುಂಗಭದ್ರಾ ಬಾಧಿತ ರೈತರಿಗೆ ಸರ್ಕಾರ ಪ್ರತಿ ಹೆಕ್ಟೇರ್​ಗೆ ₹50 ಸಾವಿರ ಪರಿಹಾರ ನೀಡಬೇಕು: ವಿಜಯೇಂದ್ರ - Tungabhadra Dam

author img

By ETV Bharat Karnataka Team

Published : Aug 12, 2024, 6:55 PM IST

ತುಂಗಭದ್ರಾ ಜಲಾಶಯದ ಕ್ರಸ್ಟ್​ ಗೇಟ್​ ಕೊಚ್ಚಿ ಹೋಗಿ ನೀರು ವ್ಯರ್ಥವಾಗಿ ಹರಿಯುತ್ತಿದೆ. ಇದರಿಂದ ರೈತರು ತಮ್ಮ ಬೆಳೆ ಕಳೆದುಕೊಳ್ಳುವ ಆತಂಕದಲ್ಲಿದ್ದಾರೆ. ಬಾಧಿತ ರೈತರಿಗೆ ಹೆಕ್ಟೇರ್​ಗೆ 50 ಸಾವಿರ ರೂ.ಯಂತೆ ಪರಿಹಾರ ನೀಡಬೇಕು ಎಂದು ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ.

COMPENSATION  FARMERS  DAM WATER FLOW  KOPPAL
ಬಿ.ವೈ.ವಿಜಯೇಂದ್ರ (ETV Bharat)
ಬಿ.ವೈ.ವಿಜಯೇಂದ್ರ ಹೇಳಿಕೆ (ETV Bharat)

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ತುಂಡಾದ ಘಟನೆಯ ಜವಾಬ್ದಾರಿಯನ್ನು ಅವರಿರವ ಮೇಲೆ ಹಾಕದೇ ರಾಜ್ಯ ಸರಕಾರವೇ ಹೊರಬೇಕು. ಜಲಾಶಯದ ನೀರನ್ನೇ ನಂಬಿರುವ ರೈತರಿಗೆ ಪ್ರತೀ ಹೆಕ್ಟೇರ್​ಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ವಿಜಯನಗರದ ಟಿಬಿ ಡ್ಯಾಮ್​ಗೆ ಇಂದು ಭೇಟಿ ನೀಡಿ ಮಾತನಾಡಿದ ಅವರು, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜನರಿಗೆ ಈ ಜಲಾಶಯ ವರವಾಗಿದೆ. ರಾಜ್ಯ ಸೇರಿದಂತೆ ನೆರೆಯ ಆಂಧ್ರ ಮತ್ತು ತೆಲಂಗಾಣ ಜಿಲ್ಲೆಯ ರೈತರೂ ಕೂಡ ತುಂಗಭದ್ರಾ ಜಲಾಶಯವನ್ನೇ ನಂಬಿಕೊಂಡಿದ್ದಾರೆ ಎಂದರು.

ಕಳೆದೆರಡು ವರ್ಷಗಳಿಂದ ಮಳೆ ಸರಿಯಾಗಿ ಬಾರದೇ ರೈತರು ಸಂಕಷ್ಟಕ್ಕೊಳಗಾಗಿದ್ದರು. ಈ ವರ್ಷ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ಅವಧಿಗೂ ಮುನ್ನವೇ ಜಲಾಶಯ ಭರ್ತಿಯಾಗಿತ್ತು. ಈ ಭಾಗದ ರೈತರು ಎರಡು ಬೆಳೆ ಬೆಳೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರ ನಿರೀಕ್ಷೆ ಇಂದು ಹುಸಿಯಾಗಿದೆ. ಜಲಾಶಯದ 19ನೇ ಕ್ರಸ್ಟ್‌ ಗೇಟ್ ಕಳಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ನದಿಗೆ ವ್ಯರ್ಥವಾಗಿ ಹರಿಯುತ್ತಿದೆ. ಇದರಿಂದಾಗಿ ರೈತರು ಆತಂಕಗೊಂಡಿದ್ದಾರೆ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಈ ಘಟನೆಗೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಜಲಾಶಯ ನಿರ್ವಹಣೆ ಮಾಡುವಲ್ಲಿ ಬೇಜವಾಬ್ದಾರಿ ವಹಿಸಿದ್ದರಿಂದಲೇ ಘಟನೆ ಜರುಗಿದೆ. ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂನಿಂದ 3.5ಲಕ್ಷ ಕ್ಯೂಸೆಕ್‌ ನೀರು ಬಿಟ್ಟರೆ ಏನೆಲ್ಲ ಅಪಾಯ; ಹೊಸ ಗೇಟ್​​ ಅಳವಡಿಕೆ ಯಾವಾಗ? - TB Dam Current Development

ಬಿ.ವೈ.ವಿಜಯೇಂದ್ರ ಹೇಳಿಕೆ (ETV Bharat)

ಕೊಪ್ಪಳ: ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್‌ ಗೇಟ್ ತುಂಡಾದ ಘಟನೆಯ ಜವಾಬ್ದಾರಿಯನ್ನು ಅವರಿರವ ಮೇಲೆ ಹಾಕದೇ ರಾಜ್ಯ ಸರಕಾರವೇ ಹೊರಬೇಕು. ಜಲಾಶಯದ ನೀರನ್ನೇ ನಂಬಿರುವ ರೈತರಿಗೆ ಪ್ರತೀ ಹೆಕ್ಟೇರ್​ಗೆ 50 ಸಾವಿರ ರೂಪಾಯಿ ಪರಿಹಾರ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದರು.

ವಿಜಯನಗರದ ಟಿಬಿ ಡ್ಯಾಮ್​ಗೆ ಇಂದು ಭೇಟಿ ನೀಡಿ ಮಾತನಾಡಿದ ಅವರು, ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ ಜಿಲ್ಲೆಗಳ ಜನರಿಗೆ ಈ ಜಲಾಶಯ ವರವಾಗಿದೆ. ರಾಜ್ಯ ಸೇರಿದಂತೆ ನೆರೆಯ ಆಂಧ್ರ ಮತ್ತು ತೆಲಂಗಾಣ ಜಿಲ್ಲೆಯ ರೈತರೂ ಕೂಡ ತುಂಗಭದ್ರಾ ಜಲಾಶಯವನ್ನೇ ನಂಬಿಕೊಂಡಿದ್ದಾರೆ ಎಂದರು.

ಕಳೆದೆರಡು ವರ್ಷಗಳಿಂದ ಮಳೆ ಸರಿಯಾಗಿ ಬಾರದೇ ರೈತರು ಸಂಕಷ್ಟಕ್ಕೊಳಗಾಗಿದ್ದರು. ಈ ವರ್ಷ ಮುಂಗಾರು ಆರಂಭದಲ್ಲಿ ಉತ್ತಮ ಮಳೆಯಾಗಿದ್ದರಿಂದ ಅವಧಿಗೂ ಮುನ್ನವೇ ಜಲಾಶಯ ಭರ್ತಿಯಾಗಿತ್ತು. ಈ ಭಾಗದ ರೈತರು ಎರಡು ಬೆಳೆ ಬೆಳೆಯುವ ನಿರೀಕ್ಷೆಯಲ್ಲಿದ್ದರು. ಆದರೆ, ಅವರ ನಿರೀಕ್ಷೆ ಇಂದು ಹುಸಿಯಾಗಿದೆ. ಜಲಾಶಯದ 19ನೇ ಕ್ರಸ್ಟ್‌ ಗೇಟ್ ಕಳಚಿಕೊಂಡು ಹೋಗಿ ಅಪಾರ ಪ್ರಮಾಣದ ನೀರು ನದಿಗೆ ವ್ಯರ್ಥವಾಗಿ ಹರಿಯುತ್ತಿದೆ. ಇದರಿಂದಾಗಿ ರೈತರು ಆತಂಕಗೊಂಡಿದ್ದಾರೆ ಎಂದು ಹೇಳಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಈ ಘಟನೆಗೆ ಯಾರನ್ನು ಹೊಣೆಗಾರರನ್ನಾಗಿ ಮಾಡುವುದಿಲ್ಲ ಎಂದು ಹೇಳಿದ್ದಾರೆ. ಜಲಾಶಯ ನಿರ್ವಹಣೆ ಮಾಡುವಲ್ಲಿ ಬೇಜವಾಬ್ದಾರಿ ವಹಿಸಿದ್ದರಿಂದಲೇ ಘಟನೆ ಜರುಗಿದೆ. ಎಂದರು.

ಇದನ್ನೂ ಓದಿ: ತುಂಗಭದ್ರಾ ಡ್ಯಾಂನಿಂದ 3.5ಲಕ್ಷ ಕ್ಯೂಸೆಕ್‌ ನೀರು ಬಿಟ್ಟರೆ ಏನೆಲ್ಲ ಅಪಾಯ; ಹೊಸ ಗೇಟ್​​ ಅಳವಡಿಕೆ ಯಾವಾಗ? - TB Dam Current Development

ETV Bharat Logo

Copyright © 2024 Ushodaya Enterprises Pvt. Ltd., All Rights Reserved.