ETV Bharat / state

ನಾಗಮಂಗಲ ಗಲಭೆ ಪ್ರಕರಣ: 55 ಆರೋಪಿಗಳು ಜೈಲಿನಿಂದ ಬಿಡುಗಡೆ - Nagamangala Riot Case

author img

By ETV Bharat Karnataka Team

Published : 3 hours ago

ನಾಗಮಂಗಲ ಗಲಭೆ ಕೇಸ್‌ನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ.

ಬಿಡುಗಡೆಯಾದ ಆರೋಪಿಗಳು
ಬಿಡುಗಡೆಯಾದ ಆರೋಪಿಗಳು (ETV Bharat)

ಮಂಡ್ಯ: ಕಳೆದ ಸೆ.11ರಂದು ನಾಗಮಂಗಲದಲ್ಲಿ ಗಣೇಶ ನಿಮಜ್ಜನೆ ಮೆರವಣಿಗೆ ವೇಳೆ ನಡೆದ ಕೋಮುಗಲಭೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ.

ಮಂಡ್ಯ 1ನೇ ಜಿಲ್ಲಾ ಮತ್ತು ಸೆಷನ್ಸ್​ ಕೋರ್ಟ್ ಆರೋಪಿಗಳಿಗೆ ಶುಕ್ರವಾರವೇ ಜಾಮೀನು ಮಂಜೂರು ಮಾಡಿತ್ತು. ಆದರೆ ಶನಿವಾರ ಮತ್ತು ಭಾನುವಾರ ಸರ್ಕಾರಿ ರಜೆ ಇದ್ದ ಕಾರಣ ಸೋಮವಾರ ತಡರಾತ್ರಿ ಜೈಲಿನಿಂದ ಹೊರಬಂದಿದ್ದಾರೆ. ಬಿಡುಗಡೆಯಾದ ಆರೋಪಿಗಳು ಪ್ರತಿ ಭಾನುವಾರ ‌ಪೊಲೀಸ್​ ಠಾಣೆಗೆ ಹೋಗಿ ಸಹಿ ಹಾಕುವಂತೆ ಷರತ್ತು ವಿಧಿಸಲಾಗಿದೆ.

ಬಿಡುಗಡೆಯಾದ ಹಿಂದೂ ಸಮುದಾಯದವರನ್ನು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೇಸರಿ ಶಾಲು, ಹಾರ‌ ಹಾಕಿ ಸ್ವಾಗತಿಸಿದರು.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದ ಅಪವಿತ್ರತೆ: ಸ್ವಾಮೀಜಿಗಳ, ಹಿಂದೂ ಮುಖಂಡರ ನೇತೃತ್ವದಲ್ಲಿ ಧರ್ಮಾಗ್ರಹ ಸಭೆ - Dharmagraha meeting

ಮಂಡ್ಯ: ಕಳೆದ ಸೆ.11ರಂದು ನಾಗಮಂಗಲದಲ್ಲಿ ಗಣೇಶ ನಿಮಜ್ಜನೆ ಮೆರವಣಿಗೆ ವೇಳೆ ನಡೆದ ಕೋಮುಗಲಭೆ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ 55 ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ.

ಮಂಡ್ಯ 1ನೇ ಜಿಲ್ಲಾ ಮತ್ತು ಸೆಷನ್ಸ್​ ಕೋರ್ಟ್ ಆರೋಪಿಗಳಿಗೆ ಶುಕ್ರವಾರವೇ ಜಾಮೀನು ಮಂಜೂರು ಮಾಡಿತ್ತು. ಆದರೆ ಶನಿವಾರ ಮತ್ತು ಭಾನುವಾರ ಸರ್ಕಾರಿ ರಜೆ ಇದ್ದ ಕಾರಣ ಸೋಮವಾರ ತಡರಾತ್ರಿ ಜೈಲಿನಿಂದ ಹೊರಬಂದಿದ್ದಾರೆ. ಬಿಡುಗಡೆಯಾದ ಆರೋಪಿಗಳು ಪ್ರತಿ ಭಾನುವಾರ ‌ಪೊಲೀಸ್​ ಠಾಣೆಗೆ ಹೋಗಿ ಸಹಿ ಹಾಕುವಂತೆ ಷರತ್ತು ವಿಧಿಸಲಾಗಿದೆ.

ಬಿಡುಗಡೆಯಾದ ಹಿಂದೂ ಸಮುದಾಯದವರನ್ನು ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಕೇಸರಿ ಶಾಲು, ಹಾರ‌ ಹಾಕಿ ಸ್ವಾಗತಿಸಿದರು.

ಇದನ್ನೂ ಓದಿ: ತಿರುಪತಿ ಲಡ್ಡು ಪ್ರಸಾದ ಅಪವಿತ್ರತೆ: ಸ್ವಾಮೀಜಿಗಳ, ಹಿಂದೂ ಮುಖಂಡರ ನೇತೃತ್ವದಲ್ಲಿ ಧರ್ಮಾಗ್ರಹ ಸಭೆ - Dharmagraha meeting

ETV Bharat Logo

Copyright © 2024 Ushodaya Enterprises Pvt. Ltd., All Rights Reserved.