ETV Bharat / state

15 ದಿನಗಳಲ್ಲಿ 61 ಗಾಂಜಾ ಪ್ರಕರಣ ದಾಖಲು, 15 ಕೆ.ಜಿ ಗಾಂಜಾ ವಶ: ಎಸ್​ಪಿ ಮಿಥುನ್ ಕುಮಾರ್ - 61 marijuana cases registered

author img

By ETV Bharat Karnataka Team

Published : Jun 23, 2024, 3:54 PM IST

Updated : Jun 23, 2024, 5:13 PM IST

ಜೂ.8 ರಿಂದ ಇಲ್ಲಿಯವರೆಗೆ 15 ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 61 ಎನ್​ಡಿಪಿಎಸ್ ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದೇವೆ. ಈವರೆಗೆ 15.363 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ತಿಳಿಸಿದರು.

ಎಸ್​ಪಿ ಮಿಥುನ್ ಕುಮಾರ್
ಎಸ್​ಪಿ ಮಿಥುನ್ ಕುಮಾರ್ (ETV Bharat)

ಎಸ್​ಪಿ ಮಿಥುನ್ ಕುಮಾರ್ (ETV Bharat)

ಶಿವಮೊಗ್ಗ: ಜೂ.8 ರಿಂದ ಇಲ್ಲಿಯವರೆಗೆ 15 ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 61 ಎನ್​ಡಿಪಿಎಸ್ ​(ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು. ಇಂದು ಡಿಎಆರ್ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 61 ಪ್ರಕರಣಗಳ ಪೈಕಿ 7 ಕಳ್ಳ ಸಾಗಣೆ, ಇನ್ನುಳಿದ 54 ಗಾಂಜಾ ಸೇವನೆ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

ಇದುವರೆಗೂ 15.363 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದೇವೆ. ತೀರ್ಥಹಳ್ಳಿಯಲ್ಲಿ ಗಾಂಜಾ ಬೆಳೆದ ಬಗ್ಗೆ ಒಂದು ಪ್ರಕರಣ ಇದೆ. ಇನ್ನುಳಿದ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ತೆಗೆದುಕೊಂಡು ಬಂದಿರುತ್ತಾರೆ. ಪ್ರಕರಣಗಳಲ್ಲಿ ಕೆಲ ಹೊಸ ಮತ್ತು ಹಳೆಯ ಆರೋಪಿಗಳು ಇದ್ದಾರೆ. ಅವರೆಲ್ಲರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದೇವೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಏರಿಯಾ ಡಾಮಿನೇಷನ್ ಮಾಡುತ್ತಿದ್ದೇವೆ. ಅಡ್ಡೆಗಳು, ಟೀ ಅಂಗಡಿ ಮತ್ತು ನಿರ್ಜನ ಪ್ರದೇಶಗಳಲ್ಲಿ ರಾತ್ರಿ 11ರ ಮೇಲೆ ಇರುವ ಯುವಕರ ವಿರುದ್ಧ ಪಿಟಿಕೇಸ್ ಹಾಕಿ, ಗಾಂಜಾ ಸೇವನೆಯ ಬಗ್ಗೆ ಪರೀಕ್ಷೆಗೆ ಒಳಪಡಿಸಿದ್ದೇವೆ ಎಂದು ತಿಳಿಸಿದರು.

ಸುಮಾರು 450 ಯುವಕರನ್ನು ಪರೀಕ್ಷೆಗೆ ಒಳಪಡಿಸಿದಾಗ 54 ಯುವಕರಲ್ಲಿ ಗಾಂಜಾ ಪಾಸಿಟಿವ್ ಬಂದಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತ ಗಾಂಜಾ ಸೇವನೆ, ಮಾರಾಟ ಮಾಡುತ್ತಿರುವುದು ಕಂಡುಬಂದರೆ ಪೊಲೀಸರಿಗೆ ಗಮನಕ್ಕೆ ತನ್ನಿ. ನಮ್ಮ ಇಲಾಖೆ ಗಾಂಜಾ ಮಾರಾಟದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.

ಇದನ್ನೂ ಓದಿ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ: ನಗದು ಸಹಿತ 15 ಮಂದಿ ವಶಕ್ಕೆ, ₹34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆ - Police Raids Gambling Den

ಎಸ್​ಪಿ ಮಿಥುನ್ ಕುಮಾರ್ (ETV Bharat)

ಶಿವಮೊಗ್ಗ: ಜೂ.8 ರಿಂದ ಇಲ್ಲಿಯವರೆಗೆ 15 ದಿನಗಳಲ್ಲಿ ಶಿವಮೊಗ್ಗ ಜಿಲ್ಲೆಯಾದ್ಯಂತ 61 ಎನ್​ಡಿಪಿಎಸ್ ​(ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ) ಪ್ರಕರಣಗಳನ್ನು ದಾಖಲು ಮಾಡಿಕೊಂಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ. ಮಿಥುನ್ ಕುಮಾರ್ ತಿಳಿಸಿದರು. ಇಂದು ಡಿಎಆರ್ ಸಭಾಂಗಣದಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಅವರು, 61 ಪ್ರಕರಣಗಳ ಪೈಕಿ 7 ಕಳ್ಳ ಸಾಗಣೆ, ಇನ್ನುಳಿದ 54 ಗಾಂಜಾ ಸೇವನೆ ಪ್ರಕರಣಗಳಿವೆ ಎಂದು ಮಾಹಿತಿ ನೀಡಿದರು.

ಇದುವರೆಗೂ 15.363 ಕೆ.ಜಿ ಗಾಂಜಾ ವಶಕ್ಕೆ ಪಡೆದುಕೊಂಡಿದ್ದೇವೆ. ತೀರ್ಥಹಳ್ಳಿಯಲ್ಲಿ ಗಾಂಜಾ ಬೆಳೆದ ಬಗ್ಗೆ ಒಂದು ಪ್ರಕರಣ ಇದೆ. ಇನ್ನುಳಿದ ಪ್ರಕರಣಗಳಲ್ಲಿ ಆರೋಪಿಗಳು ಗಾಂಜಾ ಮಾರಾಟ ಮಾಡಲು ತೆಗೆದುಕೊಂಡು ಬಂದಿರುತ್ತಾರೆ. ಪ್ರಕರಣಗಳಲ್ಲಿ ಕೆಲ ಹೊಸ ಮತ್ತು ಹಳೆಯ ಆರೋಪಿಗಳು ಇದ್ದಾರೆ. ಅವರೆಲ್ಲರನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದೇವೆ. ಶಿವಮೊಗ್ಗ ಮತ್ತು ಭದ್ರಾವತಿಯಲ್ಲಿ ಏರಿಯಾ ಡಾಮಿನೇಷನ್ ಮಾಡುತ್ತಿದ್ದೇವೆ. ಅಡ್ಡೆಗಳು, ಟೀ ಅಂಗಡಿ ಮತ್ತು ನಿರ್ಜನ ಪ್ರದೇಶಗಳಲ್ಲಿ ರಾತ್ರಿ 11ರ ಮೇಲೆ ಇರುವ ಯುವಕರ ವಿರುದ್ಧ ಪಿಟಿಕೇಸ್ ಹಾಕಿ, ಗಾಂಜಾ ಸೇವನೆಯ ಬಗ್ಗೆ ಪರೀಕ್ಷೆಗೆ ಒಳಪಡಿಸಿದ್ದೇವೆ ಎಂದು ತಿಳಿಸಿದರು.

ಸುಮಾರು 450 ಯುವಕರನ್ನು ಪರೀಕ್ಷೆಗೆ ಒಳಪಡಿಸಿದಾಗ 54 ಯುವಕರಲ್ಲಿ ಗಾಂಜಾ ಪಾಸಿಟಿವ್ ಬಂದಿದೆ. ಸಾರ್ವಜನಿಕರು ತಮ್ಮ ಸುತ್ತಮುತ್ತ ಗಾಂಜಾ ಸೇವನೆ, ಮಾರಾಟ ಮಾಡುತ್ತಿರುವುದು ಕಂಡುಬಂದರೆ ಪೊಲೀಸರಿಗೆ ಗಮನಕ್ಕೆ ತನ್ನಿ. ನಮ್ಮ ಇಲಾಖೆ ಗಾಂಜಾ ಮಾರಾಟದ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತಿದೆ ಎಂದರು.

ಇದನ್ನೂ ಓದಿ: ಜೂಜು ಅಡ್ಡೆ ಮೇಲೆ ಪೊಲೀಸ್ ದಾಳಿ: ನಗದು ಸಹಿತ 15 ಮಂದಿ ವಶಕ್ಕೆ, ₹34 ಲಕ್ಷ ‌ಮೌಲ್ಯದ ಗಾಂಜಾ‌‌ ಪತ್ತೆ - Police Raids Gambling Den

Last Updated : Jun 23, 2024, 5:13 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.