ETV Bharat / state

ಷೇರು ಮಾರುಕಟ್ಟೆಯಲ್ಲಿ ನಷ್ಟ; ಕುಮಾರಧಾರ ನದಿಗೆ ಹಾರಿದ, ಕೊನೆಗೆ! - Suicide Attempt

ಆತ್ಮಹತ್ಯೆಗೆಂದು ನದಿಗೆ ಹಾರಿ ಪೊದೆಯೊಂದರಲ್ಲಿ ಸಿಲುಕಿದ್ದ ವ್ಯಕ್ತಿಯನ್ನು ರಕ್ಷಿಸಿರುವ ಘಟನೆ ಕಡಬದಲ್ಲಿ ನಡೆದಿದೆ.

author img

By ETV Bharat Karnataka Team

Published : Jul 8, 2024, 1:09 PM IST

ಆತ್ಮಹತ್ಯೆಗೆಂದು ನದಿಗೆ ಹಾರಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ
ಆತ್ಮಹತ್ಯೆ ಮಾಡಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ (ETV Bharat)
ಕುಮಾರಧಾರ ನದಿಗೆ ಹಾರಿದ ವ್ಯಕ್ತಿ ರಕ್ಷಣೆ (ETV Bharat)

ಕಡಬ(ದಕ್ಷಿಣ ಕನ್ನಡ): ಕುಮಾರಧಾರ ನದಿಗೆ ಆತ್ಮಹತ್ಯೆಗೆಂದು ಹಾರಿದ ವ್ಯಕ್ತಿಯನ್ನು ಪೊಲೀಸರು, ಅಗ್ನಿಶಾಮಕ ದಳ ಹಾಗು ಶೌರ್ಯ ತಂಡದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಮಡಕಸಿರ ನಿವಾಸಿ ಪ್ರಸ್ತುತ ಬೆಂಗಳೂರು ಮಾರತಹಳ್ಳಿಯಲ್ಲಿ ವಾಸವಿರುವ ರವಿ ಕುಮಾರ್ (40) ಕೈ ಕೊಯ್ದುಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದಾನೆ. ನದಿಯ ಮಧ್ಯ ಭಾಗದ ಪೊದೆಯೊಂದರಲ್ಲಿ ಸಿಲುಕಿಕೊಂಡಿದ್ದ ಈತ ತನ್ನನ್ನು ರಕ್ಷಣೆ ಮಾಡುವಂತೆ ಅಂಗಲಾಚಿದ್ದಾನೆ. ಕಿರುಚಾಟ ಕೇಳಿಸಿಕೊಂಡ ಸ್ಧಳೀಯರು ಕಡಬ ಠಾಣಾಧಿಕಾರಿ ಅಭಿನಂದನ್​ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ನದಿಗೆ ಹಾರಲು ಕಾರಣ?: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಷ್ಟ ಉಂಟಾಗಿತ್ತು. ಹೀಗಾಗಿ ಸುಮಾರು ಎರಡು ಲಕ್ಷ ರೂ ಸಾಲ ಮಾಡಿದ್ದೆ. ಮನನೊಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದೆ. ಸೋಮವಾರ ಮುಂಜಾನೆ 5ರ ಸುಮಾರಿಗೆ ಬ್ಯಾಗನ್ನು ಬಸ್ ನಿಲ್ದಾಣದಲ್ಲೇ ಇರಿಸಿ ಕೈಯನ್ನು ಆಯುಧದಿಂದ ಗಾಯಗೊಳಿಸಿ ನದಿಗೆ ಹಾರಿದೆ ಎಂದು ವಿಚಾರಣೆ ವೇಳೆ ರವಿ ಕುಮಾರ್ ಪೊಲೀಸರಿಗೆ​ ತಿಳಿಸಿದ್ದಾನೆ.

ಆದರೆ ರವಿಕುಮಾರ್, ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಬಳಿಕ ಅದೃಷ್ಟವಶಾತ್ ಪೊದೆಯೊಂದು ಸಿಕ್ಕಿದ ಕಾರಣ ಅದರಲ್ಲಿ ಸಿಲುಕಿಕೊಂಡಿದ್ದಾನೆ. ರಕ್ಷಣೆಗಾಗಿ ಜೋರಾಗಿ ಕೂಗಾಡಿದ್ದಾನೆ. ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ರವಾನಿಸಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ , ಪೊಲೀಸರು, ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರ್ಯಾಚರಣೆ ಮಾಡಿದ್ದಾರೆ.

ಈತನಲ್ಲಿದ್ದ ಮೊಬೈಲ್ ಫೋನ್ ನದಿಯಲ್ಲಿ ನಾಪತ್ತೆಯಾಗಿದೆ. ಪ್ಯಾಂಟ್ ಕಿಸೆಯಲ್ಲಿ ಹತ್ತು ಸಾವಿರ ರೂ. ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೈಗೆ ಗಂಭೀರ ಸ್ವರೂಪದ ಗಾಯವಾದ ಕಾರಣ ಕಡಬ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಕಡಬ ಸರಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಪ್ರಭಾಕರ ಖಜೂರೆ, ಕಂದಾಯ ನಿರೀಕ್ಷಕ ಪ್ರಥ್ವಿರಾಜ್, ಸೇರಿದಂತೆ ಅಧಿಕಾರಿಗಳು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮನೆಮಂದಿ ಇದ್ದಾಗಲೇ ಕಿಟಕಿ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು - House Theft

ಕುಮಾರಧಾರ ನದಿಗೆ ಹಾರಿದ ವ್ಯಕ್ತಿ ರಕ್ಷಣೆ (ETV Bharat)

ಕಡಬ(ದಕ್ಷಿಣ ಕನ್ನಡ): ಕುಮಾರಧಾರ ನದಿಗೆ ಆತ್ಮಹತ್ಯೆಗೆಂದು ಹಾರಿದ ವ್ಯಕ್ತಿಯನ್ನು ಪೊಲೀಸರು, ಅಗ್ನಿಶಾಮಕ ದಳ ಹಾಗು ಶೌರ್ಯ ತಂಡದ ಸದಸ್ಯರು ರಕ್ಷಿಸಿರುವ ಘಟನೆ ಇಂದು ಬೆಳಗ್ಗೆ ಕೋಡಿಂಬಾಳ ಗ್ರಾಮದ ಪುಳಿಕ್ಕುಕ್ಕು ಎಂಬಲ್ಲಿ ನಡೆದಿದೆ.

ಆಂಧ್ರ ಪ್ರದೇಶದ ಮಡಕಸಿರ ನಿವಾಸಿ ಪ್ರಸ್ತುತ ಬೆಂಗಳೂರು ಮಾರತಹಳ್ಳಿಯಲ್ಲಿ ವಾಸವಿರುವ ರವಿ ಕುಮಾರ್ (40) ಕೈ ಕೊಯ್ದುಕೊಂಡು ನದಿಗೆ ಹಾರಿ ಆತ್ಮಹತ್ಯೆ ಮಾಡಲು ಯತ್ನಿಸಿದ್ದಾನೆ. ನದಿಯ ಮಧ್ಯ ಭಾಗದ ಪೊದೆಯೊಂದರಲ್ಲಿ ಸಿಲುಕಿಕೊಂಡಿದ್ದ ಈತ ತನ್ನನ್ನು ರಕ್ಷಣೆ ಮಾಡುವಂತೆ ಅಂಗಲಾಚಿದ್ದಾನೆ. ಕಿರುಚಾಟ ಕೇಳಿಸಿಕೊಂಡ ಸ್ಧಳೀಯರು ಕಡಬ ಠಾಣಾಧಿಕಾರಿ ಅಭಿನಂದನ್​ ಅವರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಪೊಲೀಸರು, ಅಗ್ನಿ ಶಾಮಕ ದಳ ಮತ್ತು ಸ್ಥಳೀಯ ಶೌರ್ಯ ತಂಡ ಕಾರ್ಯಾಚರಣೆ ನಡೆಸಿ ರಕ್ಷಣೆ ಮಾಡಿದ್ದಾರೆ.

ನದಿಗೆ ಹಾರಲು ಕಾರಣ?: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿ ನಷ್ಟ ಉಂಟಾಗಿತ್ತು. ಹೀಗಾಗಿ ಸುಮಾರು ಎರಡು ಲಕ್ಷ ರೂ ಸಾಲ ಮಾಡಿದ್ದೆ. ಮನನೊಂದು ಬೆಂಗಳೂರಿನಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸಿ ದೇವರ ದರ್ಶನ ಮುಗಿಸಿ ಕಡಬ-ಪಂಜ ರಸ್ತೆಯ ಪುಳಿಕುಕ್ಕು ಎಂಬಲ್ಲಿಗೆ ಬಂದೆ. ಸೋಮವಾರ ಮುಂಜಾನೆ 5ರ ಸುಮಾರಿಗೆ ಬ್ಯಾಗನ್ನು ಬಸ್ ನಿಲ್ದಾಣದಲ್ಲೇ ಇರಿಸಿ ಕೈಯನ್ನು ಆಯುಧದಿಂದ ಗಾಯಗೊಳಿಸಿ ನದಿಗೆ ಹಾರಿದೆ ಎಂದು ವಿಚಾರಣೆ ವೇಳೆ ರವಿ ಕುಮಾರ್ ಪೊಲೀಸರಿಗೆ​ ತಿಳಿಸಿದ್ದಾನೆ.

ಆದರೆ ರವಿಕುಮಾರ್, ತುಂಬಿ ಹರಿಯುತ್ತಿದ್ದ ನದಿಗೆ ಹಾರಿದ ಬಳಿಕ ಅದೃಷ್ಟವಶಾತ್ ಪೊದೆಯೊಂದು ಸಿಕ್ಕಿದ ಕಾರಣ ಅದರಲ್ಲಿ ಸಿಲುಕಿಕೊಂಡಿದ್ದಾನೆ. ರಕ್ಷಣೆಗಾಗಿ ಜೋರಾಗಿ ಕೂಗಾಡಿದ್ದಾನೆ. ಗಮನಿಸಿದ ಸ್ಥಳೀಯರು ಇಲಾಖೆಗೆ ಮಾಹಿತಿ ರವಾನಿಸಿದ್ದರು. ಕೂಡಲೇ ಘಟನಾ ಸ್ಥಳಕ್ಕೆ ಬಂದ ಅಗ್ನಿಶಾಮಕ ದಳ , ಪೊಲೀಸರು, ವಿಪತ್ತು ನಿರ್ವಹಣಾ ತಂಡದ ಸದಸ್ಯರು ಕಾರ್ಯಾಚರಣೆ ಮಾಡಿದ್ದಾರೆ.

ಈತನಲ್ಲಿದ್ದ ಮೊಬೈಲ್ ಫೋನ್ ನದಿಯಲ್ಲಿ ನಾಪತ್ತೆಯಾಗಿದೆ. ಪ್ಯಾಂಟ್ ಕಿಸೆಯಲ್ಲಿ ಹತ್ತು ಸಾವಿರ ರೂ. ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಕೈಗೆ ಗಂಭೀರ ಸ್ವರೂಪದ ಗಾಯವಾದ ಕಾರಣ ಕಡಬ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

ಕಡಬ ಸರಕಾರಿ ಆಸ್ಪತ್ರೆಗೆ ತಹಶೀಲ್ದಾರ್ ಪ್ರಭಾಕರ ಖಜೂರೆ, ಕಂದಾಯ ನಿರೀಕ್ಷಕ ಪ್ರಥ್ವಿರಾಜ್, ಸೇರಿದಂತೆ ಅಧಿಕಾರಿಗಳು ಆಗಮಿಸಿ ಮಾಹಿತಿ ಪಡೆದುಕೊಂಡಿದ್ದಾರೆ.

ಇದನ್ನೂ ಓದಿ: ಮಂಗಳೂರು: ಮನೆಮಂದಿ ಇದ್ದಾಗಲೇ ಕಿಟಕಿ ಸರಳು ತುಂಡರಿಸಿ ಒಳನುಗ್ಗಿದ ಕಳ್ಳರು - House Theft

ETV Bharat Logo

Copyright © 2024 Ushodaya Enterprises Pvt. Ltd., All Rights Reserved.