ETV Bharat / state

ಆನೇಕಲ್​: ವಕೀಲನಿಗೆ ಚೂರಿ ಇರಿದು ಪೊಲೀಸರಿಗೆ ಶರಣಾದ ವ್ಯಕ್ತಿ - Anekal Stabbed Case

ಆನೇಕಲ್​ನಲ್ಲಿ ವಕೀಲರೊಬ್ಬರಿಗೆ ಚೂರಿಯಿಂದ ಇರಿದ ಘಟನೆ ನಡೆದಿದೆ.

ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
author img

By ETV Bharat Karnataka Team

Published : Mar 13, 2024, 5:05 PM IST

ಆನೇಕಲ್​: ವ್ಯಕ್ತಿಯೊಬ್ಬ ವಕೀಲನಿಗೆ ಚೂರಿಯಿಂದ ಇರಿದು ಪೊಲೀಸರಿಗೆ ಶರಣಾದ ಘಟನೆ ಆನೇಕಲ್ ಪೊಲೀಸ್​ ಠಾಣೆ ಬಳಿ ಬುಧವಾರ ನಡೆದಿದೆ. ಆನೇಕಲ್ ನಿವಾಸಿ ಮಂಜುನಾಥ್ ಚೂರಿ ಇರಿತಕ್ಕೊಳಗಾದ ವಕೀಲನಾಗಿದ್ದು, ಕಮ್ಮಸಂದ್ರ ಅಗ್ರಹಾರದ ರಮೇಶ್ ಆರೋಪಿಯಾಗಿದ್ದಾನೆ.

ಇರಿತದ ನಂತರ ಆನೇಕಲ್ ಠಾಣೆಗೆ ನೇರವಾಗಿ ಬಂದು ಶರಣಾದ ಆರೋಪಿ ರಮೇಶನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಭೀರ ಗಾಯಗೊಂಡ ವಕೀಲ ಮಂಜುನಾಥ ಅವರನ್ನು ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇದೀಗ ನಾರಾಯಣ ಹೆಲ್ತ್ ಸಿಟಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.

ಇಂದು ಕಂಬದ ಗಣೇಶ ವೃತ್ತದಲ್ಲಿ ಹೂ ಕೊಳ್ಳುವ ಸಂದರ್ಭದಲ್ಲಿ ಆರೋಪಿ ರಮೇಶ ಹಿಂಬದಿಯಿಂದ ಬಂದು ಇದ್ದಕ್ಕಿದ್ದಂತೆ ವಕೀಲನಿಗೆ ಚೂರಿಯಿಂದ ಇರಿದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಇನ್ಸ್​ಪೆಕ್ಟರ್​ ತಿಪ್ಪೇಸ್ವಾಮಿ ತನಿಖೆ ಮುಂದುವರೆಸಿದ್ದಾರೆ.

ಆನೇಕಲ್​: ವ್ಯಕ್ತಿಯೊಬ್ಬ ವಕೀಲನಿಗೆ ಚೂರಿಯಿಂದ ಇರಿದು ಪೊಲೀಸರಿಗೆ ಶರಣಾದ ಘಟನೆ ಆನೇಕಲ್ ಪೊಲೀಸ್​ ಠಾಣೆ ಬಳಿ ಬುಧವಾರ ನಡೆದಿದೆ. ಆನೇಕಲ್ ನಿವಾಸಿ ಮಂಜುನಾಥ್ ಚೂರಿ ಇರಿತಕ್ಕೊಳಗಾದ ವಕೀಲನಾಗಿದ್ದು, ಕಮ್ಮಸಂದ್ರ ಅಗ್ರಹಾರದ ರಮೇಶ್ ಆರೋಪಿಯಾಗಿದ್ದಾನೆ.

ಇರಿತದ ನಂತರ ಆನೇಕಲ್ ಠಾಣೆಗೆ ನೇರವಾಗಿ ಬಂದು ಶರಣಾದ ಆರೋಪಿ ರಮೇಶನನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಗಂಭೀರ ಗಾಯಗೊಂಡ ವಕೀಲ ಮಂಜುನಾಥ ಅವರನ್ನು ಆನೇಕಲ್ ಸಾರ್ವಜನಿಕ ಆಸ್ಪತ್ರೆಗೆ ಪ್ರಾಥಮಿಕ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಇದೀಗ ನಾರಾಯಣ ಹೆಲ್ತ್ ಸಿಟಿಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿದೆ.

ಇಂದು ಕಂಬದ ಗಣೇಶ ವೃತ್ತದಲ್ಲಿ ಹೂ ಕೊಳ್ಳುವ ಸಂದರ್ಭದಲ್ಲಿ ಆರೋಪಿ ರಮೇಶ ಹಿಂಬದಿಯಿಂದ ಬಂದು ಇದ್ದಕ್ಕಿದ್ದಂತೆ ವಕೀಲನಿಗೆ ಚೂರಿಯಿಂದ ಇರಿದಿದ್ದಾನೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಆನೇಕಲ್ ಇನ್ಸ್​ಪೆಕ್ಟರ್​ ತಿಪ್ಪೇಸ್ವಾಮಿ ತನಿಖೆ ಮುಂದುವರೆಸಿದ್ದಾರೆ.

ಶಿವಮೊಗ್ಗ: ರಸ್ತೆಯಲ್ಲಿ ಹೋಗುತ್ತಿದ್ದ ಮಹಿಳೆಗೆ ಅಪರಿಚಿತರಿಂದ ಚಾಕು ಇರಿತ

ಹಾವೇರಿ: ಅಳಿಯನಿಗೆ ಮದ್ಯ ಕುಡಿಸಿ ಚಾಕುವಿನಿಂದ ಇರಿದು ಕೊಂದ ಮಾವ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.