ETV Bharat / state

ಬೆಂಗಳೂಲ್ಲಿ ಲಾರಿ - ಆಟೋ ಡಿಕ್ಕಿ: ಆಟೋದಲ್ಲಿ ಪ್ರಯಾಣಿಸುತ್ತಿದ್ದ ಯುವತಿ ಸಾವು - Bengaluru Accident

author img

By ETV Bharat Karnataka Team

Published : 2 hours ago

Updated : 1 hours ago

ಬೆಂಗಳೂರಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಲಾರಿ, ಆಟೋ ಅಪಘಾತದಲ್ಲಿ ಓರ್ವ ಯುವತಿ ಸಾವನ್ನಪ್ಪಿದ್ದಾರೆ.

ಬೆಂಗಳೂಲ್ಲಿ ಲಾರಿ - ಆಟೋ ಡಿಕ್ಕಿ
ಬೆಂಗಳೂಲ್ಲಿ ಲಾರಿ - ಆಟೋ ಡಿಕ್ಕಿ (ETV Bharat)

ಬೆಂಗಳೂರು: ಲಾರಿ - ಆಟೋ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಆಟೋ ಚಾಲಕ ಗಾಯಗೊಂಡಿದ್ದಾರೆ. ಕಬ್ಬನ್ ಪಾರ್ಕ್ ಸಮೀಪದ ಕಾಫಿ ಬೋರ್ಡ್ ಸಿಗ್ನಲ್ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದೆ. ಮೆಜೆಸ್ಟಿಕ್​ನತ್ತ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೇರಳ ಮೂಲದ ಶಾಲಿನಿ (24) ಎಂಬ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಸುಕಿನ ಜಾವ 4 ಗಂಟೆ ಸುಮಾರಿಗೆ ಬೆನ್ಸನ್ ಟೌನ್‌ನ ಚಿನ್ನಪ್ಪ ಗಾರ್ಡನ್‌ನಿಂದ ಮೆಜೆಸ್ಟಿಕ್ ಕಡೆಗೆ ಆಟೋ ಸಾಗುತ್ತಿತ್ತು. ಈ ವೇಳೆ ಕಾಫಿ ಬೋರ್ಡ್ ಬಳಿ ಲಾರಿ ಚಾಲಕ ಸಿಗ್ನಲ್ ಜಂಪ್ ಮಾಡಿ ಮುಂದೆ ಬಂದ ಪರಿಣಾಮ ಆಟೋಗೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಆಟೋದಲ್ಲಿದ್ದ ಶಾಲಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಲಾರಿಯನ್ನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂಲ್ಲಿ ಲಾರಿ - ಆಟೋ ಡಿಕ್ಕಿ (ETV Bharat)

ಯುವತಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಡಿಕ್ಕಿಯಿಂದ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಯತ್ನಾಳ್​ ​ವಿರುದ್ಧದ ಕೇಸ್​ ರದ್ದು; ಬಿಎನ್‌ಎಸ್‌ಎಸ್ ಅಡಿಯಲ್ಲಿ ಹೈಕೋರ್ಟ್​ನಿಂದ ಮೊದಲ ತೀರ್ಪು - High Court

ಬೆಂಗಳೂರು: ಲಾರಿ - ಆಟೋ ಮಧ್ಯೆ ಡಿಕ್ಕಿ ಸಂಭವಿಸಿದ ಪರಿಣಾಮ ಪ್ರಯಾಣಿಕರೊಬ್ಬರು ಮೃತಪಟ್ಟಿದ್ದು, ಆಟೋ ಚಾಲಕ ಗಾಯಗೊಂಡಿದ್ದಾರೆ. ಕಬ್ಬನ್ ಪಾರ್ಕ್ ಸಮೀಪದ ಕಾಫಿ ಬೋರ್ಡ್ ಸಿಗ್ನಲ್ ಬಳಿ ಇಂದು ಬೆಳಗ್ಗೆ ಘಟನೆ ನಡೆದಿದೆ. ಮೆಜೆಸ್ಟಿಕ್​ನತ್ತ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಕೇರಳ ಮೂಲದ ಶಾಲಿನಿ (24) ಎಂಬ ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ನಸುಕಿನ ಜಾವ 4 ಗಂಟೆ ಸುಮಾರಿಗೆ ಬೆನ್ಸನ್ ಟೌನ್‌ನ ಚಿನ್ನಪ್ಪ ಗಾರ್ಡನ್‌ನಿಂದ ಮೆಜೆಸ್ಟಿಕ್ ಕಡೆಗೆ ಆಟೋ ಸಾಗುತ್ತಿತ್ತು. ಈ ವೇಳೆ ಕಾಫಿ ಬೋರ್ಡ್ ಬಳಿ ಲಾರಿ ಚಾಲಕ ಸಿಗ್ನಲ್ ಜಂಪ್ ಮಾಡಿ ಮುಂದೆ ಬಂದ ಪರಿಣಾಮ ಆಟೋಗೆ ಡಿಕ್ಕಿಯಾಗಿದೆ ಎಂದು ಹೇಳಲಾಗುತ್ತಿದೆ. ಪರಿಣಾಮ ಆಟೋದಲ್ಲಿದ್ದ ಶಾಲಿನಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅಪಘಾತದ ಬಳಿಕ ಲಾರಿಯನ್ನ ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಬೆಂಗಳೂಲ್ಲಿ ಲಾರಿ - ಆಟೋ ಡಿಕ್ಕಿ (ETV Bharat)

ಯುವತಿಯ ಮೃತದೇಹವನ್ನ ಮರಣೋತ್ತರ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ರವಾನಿಸಲಾಗಿದೆ. ಲಾರಿ ಡಿಕ್ಕಿಯಿಂದ ಆಟೋ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಇದನ್ನೂ ಓದಿ: ಯತ್ನಾಳ್​ ​ವಿರುದ್ಧದ ಕೇಸ್​ ರದ್ದು; ಬಿಎನ್‌ಎಸ್‌ಎಸ್ ಅಡಿಯಲ್ಲಿ ಹೈಕೋರ್ಟ್​ನಿಂದ ಮೊದಲ ತೀರ್ಪು - High Court

Last Updated : 1 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.