ETV Bharat / state

ಕೊಪ್ಪಳದ ಯುವತಿ ದೆಹಲಿ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿ

author img

By ETV Bharat Karnataka Team

Published : Jan 24, 2024, 4:17 PM IST

Updated : Jan 24, 2024, 5:40 PM IST

ಕೊಪ್ಪಳದ ಯುವತಿ ದೆಹಲಿಯ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಅತಿಥಿಯಾಗಿ ಆಯ್ಕೆಯಾಗಿದ್ದಾರೆ.

ದೆಹಲಿ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿ
ದೆಹಲಿ ಗಣರಾಜ್ಯೋತ್ಸವಕ್ಕೆ ವಿಶೇಷ ಅತಿಥಿ
ದೆಹಲಿಯ ಗಣರಾಜ್ಯೋತ್ಸವಕ್ಕೆ ಕೊಪ್ಪಳದ ಯುವತಿ ವಿಶೇಷ ಅತಿಥಿಯಾಗಿ ಆಯ್ಕೆ

ಕೊಪ್ಪಳ: ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತ ಅತಿಥಿಯಾಗಿ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ಯೋಗಪಟು ರೇಷ್ಮಾ ವಡ್ಡಟ್ಟಿ ಭಾಗವಹಿಸಲಿದ್ದಾರೆ.

ಆಯುಷ್ ಮಂತ್ರಾಲಯದಿಂದ ಆಹ್ವಾನ: ಗಣರಾಜ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಯೋಗ ಪ್ರದರ್ಶನ ನೀಡಲಿದ್ದಾರೆ. ರಾಜ್ಯದಿಂದ ಒಟ್ಟು 18 ಜನ ಯೋಗಪಟುಗಳಿಗೆ ರಾಜ್ಯ ಆಯುಷ್​ ಇಲಾಖೆ ಆಯುಕ್ತರು ನಾಮನಿರ್ದೇಶನ ಮಾಡಿದ್ದಾರೆ. ಈ ಪೈಕಿ ರೇಷ್ಮಾ ವಡ್ಡಟ್ಟಿ ಸೇರಿ ಕೊಪ್ಪಳ ಜಿಲ್ಲೆಯ ಇಬ್ಬರಿಗೆ ಆಹ್ವಾನ ನೀಡಲಾಗಿದೆ.

ಆಯುಷ್ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಯೋಗ ತರಬೇತುದಾರರಾಗಿ ಕೆಲಸ ಮಾಡುತ್ತಿರುವ ರೇಷ್ಮಾ ಸದ್ಯ ಕೊಪ್ಪಳ ತಾಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಆಸ್ಪತ್ರೆಯಲ್ಲಿ ಯೋಗ ಶಿಕ್ಷಕಿ ಹಾಗೂ ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕನ್ನಡ ವಿಶ್ವವಿದ್ಯಾಲಯದಲ್ಲಿ ಯೋಗದಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಯೋಗಾಭ್ಯಾಸದಲ್ಲಿ ತೊಡಗಿರುವ ಅವರು ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ರೇಷ್ಮಾ ವಡ್ಡಟ್ಟಿ, ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದೇನೆ. ಕೊಪ್ಪಳದಿಂದ ನಾನು ಆಯ್ಕೆಯಾಗಿದ್ದೇನೆ. 25ನೇ ತಾರೀಖಿನಂದು ದೆಹಲಿಗೆ ಬೆಂಗಳೂರು ಮೂಲಕ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದೇವೆ. ಆ ದಿನ ಸಂಜೆ ನಡೆಯುವಂತಹ ಔತಣ ಕೂಟದಲ್ಲೂ ಭಾಗಿಯಾಗಲಿದ್ದೇವೆ. ಒಟ್ಟಾರೆ ಕರ್ನಾಟಕದಿಂದ 18 ಜನ ಆಯ್ಕೆ ಆಗಿದ್ದೇವೆ ಎಂದು ಹೇಳಿದ್ದಾರೆ.

ಕೊಳ್ಳೆಗಾಲದ ಕವಿಗೂ ಆಹ್ವಾನ: ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಜೋಗುಳ ಪದ ರಚಿಸಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕವಿ ಮಂಜುನಾಥ್ ಅವರಿಗೂ ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸರ್ಕಾರ ಕಳೆದ ವಾರ ಆಹ್ವಾನ ನೀಡಿತ್ತು. ಜ.24ರಂದು ಪತ್ನಿ ಸಮೇತ ದೆಹಲಿಗೆ ಬರುವಂತೆ ವಿಮಾನ ಟಿಕೆಟ್ ಅನ್ನು ಕೇಂದ್ರ ಸರ್ಕಾರ ಈಗಾಗಲೇ ಬುಕ್ ಕೂಡ ಮಾಡಿದೆ.

ಪ್ರವೃತ್ತಿಯಲ್ಲಿ ಕವಿಯಾಗಿ ಗುರುತಿಸಿಕೊಂಡಿರುವ ಮಂಜುನಾಥ್ ಕೋವಿಡ್ ವೇಳೆ "ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ..' ಎಂಬ ಜೋಗುಳ ಪದ ರಚಿಸಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆನ್‌ಲೈನ್ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆಗಳನ್ನು ಆಯೋಜಿಸಿತ್ತು. ಇದನ್ನು ಮನಗಂಡ ಮಂಜುನಾಥ್ ತಮ್ಮ ಪುತ್ರನ ಒತ್ತಾಸೆಗೆ ಮಣಿದು ಜೋಗುಳ ಹಾಡು ರಚಿಸಿ ಕಳುಹಿಸಿದ್ದರು.

ಮಂಜುನಾಥ್ ಅವರ ಜೋಗುಳ ಹಾಡು ಮಾತ್ರ ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಯಾಗಿ ಪ್ರಧಾನಿ ಮೋದಿಯವರ ಮೆಚ್ಚುಗೆಗೂ ಪಾತ್ರವಾಗಿತ್ತು. 6 ಲಕ್ಷ ರೂ. ನಗದು ಬಹುಮಾನದ ಮನ್ನಣೆಯೂ ದೊರೆತಿತ್ತು. ಈ ಬಗ್ಗೆ ಪ್ರಧಾನಿ ಮೋದಿ ಅವರು ಮನ್​ಕಿ ಬಾತ್​ನನ್ನೂ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಗಣರಾಜ್ಯೋತ್ಸವ: ಜನವರಿ 26ರ ವರೆಗೆ ದೆಹಲಿಯಲ್ಲಿ ಆ ಎರಡೂವರೆ ಗಂಟೆ ವಿಮಾನ ಸಂಚಾರ ಸ್ಥಗಿತ

ದೆಹಲಿಯ ಗಣರಾಜ್ಯೋತ್ಸವಕ್ಕೆ ಕೊಪ್ಪಳದ ಯುವತಿ ವಿಶೇಷ ಅತಿಥಿಯಾಗಿ ಆಯ್ಕೆ

ಕೊಪ್ಪಳ: ದೆಹಲಿಯಲ್ಲಿ ಜ.26 ರಂದು ನಡೆಯಲಿರುವ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತ ಅತಿಥಿಯಾಗಿ ಕೊಪ್ಪಳ ತಾಲೂಕಿನ ಘಟ್ಟಿರಡ್ಡಿಹಾಳ ಗ್ರಾಮದ ಯೋಗಪಟು ರೇಷ್ಮಾ ವಡ್ಡಟ್ಟಿ ಭಾಗವಹಿಸಲಿದ್ದಾರೆ.

ಆಯುಷ್ ಮಂತ್ರಾಲಯದಿಂದ ಆಹ್ವಾನ: ಗಣರಾಜ್ಯೋತ್ಸವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮ್ಮುಖದಲ್ಲಿ ರಾಜ್ಯದ ಪರವಾಗಿ ಯೋಗ ಪ್ರದರ್ಶನ ನೀಡಲಿದ್ದಾರೆ. ರಾಜ್ಯದಿಂದ ಒಟ್ಟು 18 ಜನ ಯೋಗಪಟುಗಳಿಗೆ ರಾಜ್ಯ ಆಯುಷ್​ ಇಲಾಖೆ ಆಯುಕ್ತರು ನಾಮನಿರ್ದೇಶನ ಮಾಡಿದ್ದಾರೆ. ಈ ಪೈಕಿ ರೇಷ್ಮಾ ವಡ್ಡಟ್ಟಿ ಸೇರಿ ಕೊಪ್ಪಳ ಜಿಲ್ಲೆಯ ಇಬ್ಬರಿಗೆ ಆಹ್ವಾನ ನೀಡಲಾಗಿದೆ.

ಆಯುಷ್ ಇಲಾಖೆಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಯೋಗ ತರಬೇತುದಾರರಾಗಿ ಕೆಲಸ ಮಾಡುತ್ತಿರುವ ರೇಷ್ಮಾ ಸದ್ಯ ಕೊಪ್ಪಳ ತಾಲೂಕಿನ ಕಾಮನೂರಿನ ಆಯುರ್ವೇದ ಕ್ಷೇಮ ಕೇಂದ್ರದ ಆಸ್ಪತ್ರೆಯಲ್ಲಿ ಯೋಗ ಶಿಕ್ಷಕಿ ಹಾಗೂ ತರಬೇತುದಾರರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಕನ್ನಡ ವಿಶ್ವವಿದ್ಯಾಲಯದಲ್ಲಿ ಯೋಗದಲ್ಲಿ ಉನ್ನತ ವ್ಯಾಸಂಗ ಮಾಡಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಯೋಗಾಭ್ಯಾಸದಲ್ಲಿ ತೊಡಗಿರುವ ಅವರು ಅನೇಕ ಪ್ರಶಸ್ತಿಗಳನ್ನು ಹಾಗೂ ಪುರಸ್ಕಾರಗಳನ್ನು ಮುಡಿಗೇರಿಸಿಕೊಂಡಿದ್ದಾರೆ.

ಈ ಬಗ್ಗೆ ಮಾತನಾಡಿರುವ ರೇಷ್ಮಾ ವಡ್ಡಟ್ಟಿ, ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವದಲ್ಲಿ ವಿಶೇಷ ಅತಿಥಿಯಾಗಿ ಪಾಲ್ಗೊಳ್ಳುತ್ತಿದ್ದೇನೆ. ಕೊಪ್ಪಳದಿಂದ ನಾನು ಆಯ್ಕೆಯಾಗಿದ್ದೇನೆ. 25ನೇ ತಾರೀಖಿನಂದು ದೆಹಲಿಗೆ ಬೆಂಗಳೂರು ಮೂಲಕ ವಿಮಾನದಲ್ಲಿ ಪ್ರಯಾಣ ಬೆಳೆಸಲಿದ್ದೇವೆ. ಆ ದಿನ ಸಂಜೆ ನಡೆಯುವಂತಹ ಔತಣ ಕೂಟದಲ್ಲೂ ಭಾಗಿಯಾಗಲಿದ್ದೇವೆ. ಒಟ್ಟಾರೆ ಕರ್ನಾಟಕದಿಂದ 18 ಜನ ಆಯ್ಕೆ ಆಗಿದ್ದೇವೆ ಎಂದು ಹೇಳಿದ್ದಾರೆ.

ಕೊಳ್ಳೆಗಾಲದ ಕವಿಗೂ ಆಹ್ವಾನ: ಪ್ರಧಾನಿ ನರೇಂದ್ರ ಮೋದಿ ಮೆಚ್ಚಿದ ಜೋಗುಳ ಪದ ರಚಿಸಿದ್ದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಕವಿ ಮಂಜುನಾಥ್ ಅವರಿಗೂ ಜನವರಿ 26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುವಂತೆ ಕೇಂದ್ರ ಸರ್ಕಾರ ಕಳೆದ ವಾರ ಆಹ್ವಾನ ನೀಡಿತ್ತು. ಜ.24ರಂದು ಪತ್ನಿ ಸಮೇತ ದೆಹಲಿಗೆ ಬರುವಂತೆ ವಿಮಾನ ಟಿಕೆಟ್ ಅನ್ನು ಕೇಂದ್ರ ಸರ್ಕಾರ ಈಗಾಗಲೇ ಬುಕ್ ಕೂಡ ಮಾಡಿದೆ.

ಪ್ರವೃತ್ತಿಯಲ್ಲಿ ಕವಿಯಾಗಿ ಗುರುತಿಸಿಕೊಂಡಿರುವ ಮಂಜುನಾಥ್ ಕೋವಿಡ್ ವೇಳೆ "ಮಲಗು ಕಂದ ಮಲಗು ಕೂಸೆ, ಮಲಗು ನನ್ನ ಜಾಣ ಮರಿಯೇ..' ಎಂಬ ಜೋಗುಳ ಪದ ರಚಿಸಿದ್ದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ 75ನೇ ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಆನ್‌ಲೈನ್ ರಂಗೋಲಿ, ದೇಶಭಕ್ತಿ ಗೀತೆ, ಲಾಲಿಹಾಡು ಸ್ಪರ್ಧೆಗಳನ್ನು ಆಯೋಜಿಸಿತ್ತು. ಇದನ್ನು ಮನಗಂಡ ಮಂಜುನಾಥ್ ತಮ್ಮ ಪುತ್ರನ ಒತ್ತಾಸೆಗೆ ಮಣಿದು ಜೋಗುಳ ಹಾಡು ರಚಿಸಿ ಕಳುಹಿಸಿದ್ದರು.

ಮಂಜುನಾಥ್ ಅವರ ಜೋಗುಳ ಹಾಡು ಮಾತ್ರ ರಾಷ್ಟ್ರೀಯ ಮಟ್ಟದಲ್ಲಿ ಆಯ್ಕೆಯಾಗಿ ಪ್ರಧಾನಿ ಮೋದಿಯವರ ಮೆಚ್ಚುಗೆಗೂ ಪಾತ್ರವಾಗಿತ್ತು. 6 ಲಕ್ಷ ರೂ. ನಗದು ಬಹುಮಾನದ ಮನ್ನಣೆಯೂ ದೊರೆತಿತ್ತು. ಈ ಬಗ್ಗೆ ಪ್ರಧಾನಿ ಮೋದಿ ಅವರು ಮನ್​ಕಿ ಬಾತ್​ನನ್ನೂ ಉಲ್ಲೇಖಿಸಿದ್ದರು.

ಇದನ್ನೂ ಓದಿ: ಗಣರಾಜ್ಯೋತ್ಸವ: ಜನವರಿ 26ರ ವರೆಗೆ ದೆಹಲಿಯಲ್ಲಿ ಆ ಎರಡೂವರೆ ಗಂಟೆ ವಿಮಾನ ಸಂಚಾರ ಸ್ಥಗಿತ

Last Updated : Jan 24, 2024, 5:40 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.