ETV Bharat / state

ನಟ ದರ್ಶನ್​, ಪವಿತ್ರ ಗೌಡ ಸೇರಿ 13 ಜನ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ​ - Actor darshan arrest

author img

By ETV Bharat Karnataka Team

Published : Jun 11, 2024, 5:44 PM IST

Updated : Jun 11, 2024, 6:02 PM IST

ರೇಣುಕಾಸ್ವಾಮಿ ಹತ್ಯೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನ ಆರೋಪಿಗಳನ್ನು ಪೊಲೀಸ್​ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಮಾಡಿದೆ.

ನಟ ದರ್ಶನ್​ ಬಂಧನ
ನಟ ದರ್ಶನ್​ ಬಂಧನ (ETV Bharat)
ನಟ ದರ್ಶನ್​ ಬಂಧನ (ETV Bharat)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 13 ಜನ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಗರದ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದ ಎಂಬ ಕಾರಣಕ್ಕಾಗಿ ಎಚ್ಚರಿಕೆ ನೀಡುವ ಉದ್ದೇಶದಿಂದ ಕರೆಸಿಕೊಂಡು ರೇಣುಕಾಸ್ವಾಮಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ, ದರ್ಶನ್, ಪವನ್, ವಿನಯ್, ಪ್ರದೋಶ್, ನಂದೀಶ್, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ ಹಾಗೂ ರಾಘವೇಂದ್ರ ಎಂಬ ಆರೋಪಿಗಳನ್ನು ಇಂದು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದರು.

ಬಂಧನದ ಬಳಿಕ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಲಯದಲ್ಲಿ ಮೊದಲು, ''ಪೊಲೀಸರು ಎಷ್ಟು ಗಂಟೆಗೆ ಬಂಧಿಸಿದರು? ಎಂಬ ನ್ಯಾಯಾಧೀಶರ ಪ್ರಶ್ನೆಗೆ, ''ಮಧ್ಯಾಹ್ನ 3 ಗಂಟೆಗೆ ಬಂಧಿಸಿದ್ದಾರೆ ಎಂದು ದರ್ಶನ್ ಹಾಗೂ ಪವಿತ್ರಾ ಗೌಡ ಉತ್ತರಿಸಿದರು. ನಂತರ ವಾದ ಆರಂಭಿಸಿದ ಸರ್ಕಾರದ ಪರ ವಕೀಲರು ಪ್ರಕರಣದಲ್ಲಿ ಕೂಡಿ ಹಾಕಿ ಹತ್ಯೆಗೈಯಲಾಗಿದ್ದು, ಕೃತ್ಯ ನಡೆದ ಸ್ಥಳ ಮಹಜರು ಮಾಡಬೇಕಿದೆ. ಆರೋಪಿಗಳ ಮೊಬೈಲ್ ಫೋನ್‌ಗಳು, ಕೃತ್ಯಕ್ಕೆ ಬಳಸಿದ ಆಯುಧ ಜಪ್ತಿ ಮಾಡಬೇಕಿದೆ. ಹೆಚ್ಚಿನ ವಿಚಾರಣೆಯ ಅಗತ್ಯತೆ ಇರುವುದರಿಂದ 14 ದಿನಗಳ ಕಾಲ ಆರೋಪಿತರನ್ನು ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಿದರು.

ಪ್ರತಿಯಾಗಿ ವಾದ ಮಂಡಿಸಿದ ದರ್ಶನ್ ಪರ ವಕೀಲ ಮೌನೇಶ್, ಈ ಪ್ರಕರಣದಲ್ಲಿ ಇತರೆ ಆರೋಪಿಗಳಿಗೂ ದರ್ಶನ್ ಅವರಿಗೂ ಯಾವುದೇ ಸಂಬಂಧವಿಲ್ಲ. ದರ್ಶನ್ ಅವರು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ ಹಾಗೂ ಎಲ್ಲಿಯೂ ತಲೆಮರೆಸಿಕೊಂಡಿರಲಿಲ್ಲ. ಅವರು ಮೈಸೂರಿನಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಹತ್ಯೆಯಾದ ವ್ಯಕ್ತಿಯ ಶವ ಈಗಾಗಲೇ ದೊರೆತಿದೆ, ಇಂದು ಪೊಲೀಸರಿಂದ ದರ್ಶನ್ ಅವರ ವಿಚಾರಣೆ ನಡೆಸಲಾಗಿದೆ. ಪುನಃ ಪೊಲೀಸ್ ಕಸ್ಟಡಿಗೆ ನೀಡುವ ಅಗತ್ಯವಿಲ್ಲ. ಆದ್ದರಿಂದ ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಸಲ್ಲಿಸಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ಬಂಧಿತ ಎಲ್ಲಾ ಆರೋಪಿಗಳನ್ನು ಆರು ದಿನಗಳ (ಜೂನ್ 17)ರ ವರೆಗೆ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರ ವಶಕ್ಕೊಪ್ಪಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಹಲ್ಲೆ, ಕೊಲೆ ಆರೋಪ ಪ್ರಕರಣ; ಹತ್ಯೆಗೀಡಾದ ರೇಣುಕಾಸ್ವಾಮಿ ಯಾರು? - Renukaswamy Murder case

ಹತ್ಯೆ ಪ್ರಕರಣ: ದರ್ಶನ್ ಪಾತ್ರದ ಕುರಿತು ತನಿಖೆಯ ನಂತರ ಸ್ಪಷ್ಟತೆ ಸಿಗಲಿದೆ-ಗೃಹ ಸಚಿವ ಜಿ.ಪರಮೇಶ್ವರ್​ - Home Minister G Parameshwar

ನಟ ದರ್ಶನ್​ ಬಂಧನ (ETV Bharat)

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್, ನಟಿ ಪವಿತ್ರಾ ಗೌಡ ಸೇರಿದಂತೆ 13 ಜನ ಆರೋಪಿಗಳನ್ನು ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನಗರದ 24ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಅಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದ ಎಂಬ ಕಾರಣಕ್ಕಾಗಿ ಎಚ್ಚರಿಕೆ ನೀಡುವ ಉದ್ದೇಶದಿಂದ ಕರೆಸಿಕೊಂಡು ರೇಣುಕಾಸ್ವಾಮಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಪವಿತ್ರಾ ಗೌಡ, ದರ್ಶನ್, ಪವನ್, ವಿನಯ್, ಪ್ರದೋಶ್, ನಂದೀಶ್, ದೀಪಕ್, ಲಕ್ಷ್ಮಣ್, ನಾಗರಾಜು, ಕಾರ್ತಿಕ್, ನಿಖಿಲ್, ಕೇಶವಮೂರ್ತಿ ಹಾಗೂ ರಾಘವೇಂದ್ರ ಎಂಬ ಆರೋಪಿಗಳನ್ನು ಇಂದು ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಬಂಧಿಸಿದ್ದರು.

ಬಂಧನದ ಬಳಿಕ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರು ಆರೋಪಿಗಳನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ನಂತರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ನ್ಯಾಯಾಲಯದಲ್ಲಿ ಮೊದಲು, ''ಪೊಲೀಸರು ಎಷ್ಟು ಗಂಟೆಗೆ ಬಂಧಿಸಿದರು? ಎಂಬ ನ್ಯಾಯಾಧೀಶರ ಪ್ರಶ್ನೆಗೆ, ''ಮಧ್ಯಾಹ್ನ 3 ಗಂಟೆಗೆ ಬಂಧಿಸಿದ್ದಾರೆ ಎಂದು ದರ್ಶನ್ ಹಾಗೂ ಪವಿತ್ರಾ ಗೌಡ ಉತ್ತರಿಸಿದರು. ನಂತರ ವಾದ ಆರಂಭಿಸಿದ ಸರ್ಕಾರದ ಪರ ವಕೀಲರು ಪ್ರಕರಣದಲ್ಲಿ ಕೂಡಿ ಹಾಕಿ ಹತ್ಯೆಗೈಯಲಾಗಿದ್ದು, ಕೃತ್ಯ ನಡೆದ ಸ್ಥಳ ಮಹಜರು ಮಾಡಬೇಕಿದೆ. ಆರೋಪಿಗಳ ಮೊಬೈಲ್ ಫೋನ್‌ಗಳು, ಕೃತ್ಯಕ್ಕೆ ಬಳಸಿದ ಆಯುಧ ಜಪ್ತಿ ಮಾಡಬೇಕಿದೆ. ಹೆಚ್ಚಿನ ವಿಚಾರಣೆಯ ಅಗತ್ಯತೆ ಇರುವುದರಿಂದ 14 ದಿನಗಳ ಕಾಲ ಆರೋಪಿತರನ್ನು ಪೊಲೀಸ್ ವಶಕ್ಕೆ ನೀಡುವಂತೆ ಮನವಿ ಸಲ್ಲಿಸಿದರು.

ಪ್ರತಿಯಾಗಿ ವಾದ ಮಂಡಿಸಿದ ದರ್ಶನ್ ಪರ ವಕೀಲ ಮೌನೇಶ್, ಈ ಪ್ರಕರಣದಲ್ಲಿ ಇತರೆ ಆರೋಪಿಗಳಿಗೂ ದರ್ಶನ್ ಅವರಿಗೂ ಯಾವುದೇ ಸಂಬಂಧವಿಲ್ಲ. ದರ್ಶನ್ ಅವರು ಈ ಕೃತ್ಯದಲ್ಲಿ ಭಾಗಿಯಾಗಿಲ್ಲ ಹಾಗೂ ಎಲ್ಲಿಯೂ ತಲೆಮರೆಸಿಕೊಂಡಿರಲಿಲ್ಲ. ಅವರು ಮೈಸೂರಿನಲ್ಲಿ ಸಿನಿಮಾ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು. ಹತ್ಯೆಯಾದ ವ್ಯಕ್ತಿಯ ಶವ ಈಗಾಗಲೇ ದೊರೆತಿದೆ, ಇಂದು ಪೊಲೀಸರಿಂದ ದರ್ಶನ್ ಅವರ ವಿಚಾರಣೆ ನಡೆಸಲಾಗಿದೆ. ಪುನಃ ಪೊಲೀಸ್ ಕಸ್ಟಡಿಗೆ ನೀಡುವ ಅಗತ್ಯವಿಲ್ಲ. ಆದ್ದರಿಂದ ನ್ಯಾಯಾಂಗ ಬಂಧನಕ್ಕೆ ನೀಡಬೇಕು ಎಂದು ಮನವಿ ಸಲ್ಲಿಸಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶರು ಅಂತಿಮವಾಗಿ ಬಂಧಿತ ಎಲ್ಲಾ ಆರೋಪಿಗಳನ್ನು ಆರು ದಿನಗಳ (ಜೂನ್ 17)ರ ವರೆಗೆ ಕಾಮಾಕ್ಷಿಪಾಳ್ಯ ಠಾಣಾ ಪೊಲೀಸರ ವಶಕ್ಕೊಪ್ಪಿಸಿ ಆದೇಶಿಸಿದ್ದಾರೆ.

ಇದನ್ನೂ ಓದಿ: ಹಲ್ಲೆ, ಕೊಲೆ ಆರೋಪ ಪ್ರಕರಣ; ಹತ್ಯೆಗೀಡಾದ ರೇಣುಕಾಸ್ವಾಮಿ ಯಾರು? - Renukaswamy Murder case

ಹತ್ಯೆ ಪ್ರಕರಣ: ದರ್ಶನ್ ಪಾತ್ರದ ಕುರಿತು ತನಿಖೆಯ ನಂತರ ಸ್ಪಷ್ಟತೆ ಸಿಗಲಿದೆ-ಗೃಹ ಸಚಿವ ಜಿ.ಪರಮೇಶ್ವರ್​ - Home Minister G Parameshwar

Last Updated : Jun 11, 2024, 6:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.