ETV Bharat / state

ಇನ್ನೈದು ದಿನ ಕರಾವಳಿ ಕರ್ನಾಟಕದಲ್ಲಿ ಮುಂದುವರೆಯಲಿರುವ ನೈಋತ್ಯ ಮುಂಗಾರು; ಹವಾಮಾನ ಇಲಾಖೆಯಿಂದ ಅಲರ್ಟ್ ಘೋಷಣೆ - Meteorological Department

author img

By ETV Bharat Karnataka Team

Published : Jul 10, 2024, 5:06 PM IST

ಕರಾವಳಿ ಕರ್ನಾಟಕದಲ್ಲಿ ಮಳೆ ಮುಂದುವರೆಯುವುದರಿಂದ ಹವಾಮಾನ ಇಲಾಖೆ ಅಲರ್ಟ್​ ಘೋಷಿಸಿದೆ.

C. S Patil
ಸಿ. ಎಸ್ ಪಾಟೀಲ್ (ETV Bharat)
ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ (ETV Bharat)

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಮುಂದುವರೆದಿರುವ ಮುಂಗಾರು ಮಳೆ ಇನ್ನೂ ಐದು ದಿನ ಬಿಟ್ಟೂ ಬಿಡದೇ ಸುರಿಯುವ ಸಾಧ್ಯತೆ ಇದೆ. ಈ ಹಿನ್ನಲೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಇಂದೂ ಸೇರಿದಂತೆ ಐದು ದಿನ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಕೊಡಲಾಗಿದೆ. ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಮತ್ತು ಜುಲೈ 12 ರಿಂದ 14 ರವರೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.

ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ನಾಳೆಯಿಂದ ನಾಲ್ಕು ದಿನ ಯೆಲ್ಲೋ, ಕಲ್ಬುರ್ಗಿ ಜಿಲ್ಲೆಗೆ ಜುಲೈ 12 ಮತ್ತು 14 ಕ್ಕೆ, ಧಾರವಾಡ ಜಿಲ್ಲೆಗೆ ನಾಳೆ ಮತ್ತು ಬೀದರ್ ಜಿಲ್ಲೆಗೆ 12 ರಂದು, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಜುಲೈ 14 ಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 12 ರಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 10 ರಿಂದ 14 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ನಿರಂತರ ಗಾಳಿ ಕೂಡ ಬೀಸಲಿದ್ದು, ಪ್ರತಿ ಘಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ವೇಗವಾಗಿ ಗಾಳಿ ಬೀಸಲಿದ್ದು, ಹಗುರ ಮಳೆಯಾಗಲಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

''ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್-ಶೋರ್ ಟ್ರಫ್ ಉತ್ತರ ಮಹಾರಾಷ್ಟ್ರ - ಉತ್ತರ ಕೇರಳ ಕರಾವಳಿಯ ಉದ್ದಕ್ಕೂ ಸಾಗುತ್ತಿದೆ. ಮಾರುತಗಳ ವಲಯವು ಸರಿಸುಮಾರು 20 ಡಿಗ್ರಿ ಉತ್ತರಕ್ಕೆ ಇದೆ. 3.1 ಮತ್ತು 5.8 ಕಿಮೀ ಎತ್ತರದಲ್ಲಿ ಸರಾಸರಿ ಸಮುದ್ರ ಮಟ್ಟವು ಎತ್ತರದೊಂದಿಗೆ ದಕ್ಷಿಣಕ್ಕೆ ವಾಲುತ್ತಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಒಂದು ವಾರದಲ್ಲಿ ದಾಖಲೆಯ 96 ಇಂಚು ಮಳೆ: ಮಂಗಗಳಿಗೂ ಸಂಕಷ್ಟ - Chikkamagaluru Rain

ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ (ETV Bharat)

ಬೆಂಗಳೂರು : ಕರಾವಳಿ ಕರ್ನಾಟಕದಲ್ಲಿ ಮುಂದುವರೆದಿರುವ ಮುಂಗಾರು ಮಳೆ ಇನ್ನೂ ಐದು ದಿನ ಬಿಟ್ಟೂ ಬಿಡದೇ ಸುರಿಯುವ ಸಾಧ್ಯತೆ ಇದೆ. ಈ ಹಿನ್ನಲೆ ಹವಾಮಾನ ಇಲಾಖೆ ಅಲರ್ಟ್ ಘೋಷಿಸಿದೆ. ಇಂದೂ ಸೇರಿದಂತೆ ಐದು ದಿನ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಮತ್ತು ಆರೆಂಜ್ ಅಲರ್ಟ್ ಕೊಡಲಾಗಿದೆ. ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್ ಮತ್ತು ಜುಲೈ 12 ರಿಂದ 14 ರವರೆಗೆ ಆರೆಂಜ್ ಅಲರ್ಟ್ ಕೊಡಲಾಗಿದೆ.

ಉಳಿದಂತೆ ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗೆ ನಾಳೆಯಿಂದ ನಾಲ್ಕು ದಿನ ಯೆಲ್ಲೋ, ಕಲ್ಬುರ್ಗಿ ಜಿಲ್ಲೆಗೆ ಜುಲೈ 12 ಮತ್ತು 14 ಕ್ಕೆ, ಧಾರವಾಡ ಜಿಲ್ಲೆಗೆ ನಾಳೆ ಮತ್ತು ಬೀದರ್ ಜಿಲ್ಲೆಗೆ 12 ರಂದು, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗೆ ಜುಲೈ 14 ಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇನ್ನು ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಿಗೆ ಜುಲೈ 12 ರಿಂದ ಮೂರು ದಿನಗಳ ಕಾಲ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಜುಲೈ 10 ರಿಂದ 14 ರವರೆಗೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕರ್ನಾಟಕ ಭಾಗದ ಬೀದರ್, ಕಲಬುರ್ಗಿ, ಬೆಳಗಾವಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಭಾರಿ ಮಳೆಯಾಗಲಿದೆ. ನಿರಂತರ ಗಾಳಿ ಕೂಡ ಬೀಸಲಿದ್ದು, ಪ್ರತಿ ಘಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬಾಗಲಕೋಟೆ, ಯಾದಗಿರಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ವೇಗವಾಗಿ ಗಾಳಿ ಬೀಸಲಿದ್ದು, ಹಗುರ ಮಳೆಯಾಗಲಿದೆ. ದಕ್ಷಿಣ ಒಳ ಕರ್ನಾಟಕದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದಿದೆ.

ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಸ್ಥಳಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 30 ಡಿಗ್ರಿ ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

''ಸರಾಸರಿ ಸಮುದ್ರ ಮಟ್ಟದಲ್ಲಿ ಆಫ್-ಶೋರ್ ಟ್ರಫ್ ಉತ್ತರ ಮಹಾರಾಷ್ಟ್ರ - ಉತ್ತರ ಕೇರಳ ಕರಾವಳಿಯ ಉದ್ದಕ್ಕೂ ಸಾಗುತ್ತಿದೆ. ಮಾರುತಗಳ ವಲಯವು ಸರಿಸುಮಾರು 20 ಡಿಗ್ರಿ ಉತ್ತರಕ್ಕೆ ಇದೆ. 3.1 ಮತ್ತು 5.8 ಕಿಮೀ ಎತ್ತರದಲ್ಲಿ ಸರಾಸರಿ ಸಮುದ್ರ ಮಟ್ಟವು ಎತ್ತರದೊಂದಿಗೆ ದಕ್ಷಿಣಕ್ಕೆ ವಾಲುತ್ತಿದೆ'' ಎಂದು ಬೆಂಗಳೂರು ಹವಾಮಾನ ಕೇಂದ್ರದ ನಿರ್ದೇಶಕ ಸಿ. ಎಸ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ : ಚಿಕ್ಕಮಗಳೂರಿನಲ್ಲಿ ಒಂದು ವಾರದಲ್ಲಿ ದಾಖಲೆಯ 96 ಇಂಚು ಮಳೆ: ಮಂಗಗಳಿಗೂ ಸಂಕಷ್ಟ - Chikkamagaluru Rain

ETV Bharat Logo

Copyright © 2024 Ushodaya Enterprises Pvt. Ltd., All Rights Reserved.