ETV Bharat / state

ಮುಡಾ ಪ್ರಕರಣದಲ್ಲಿ ಪಕ್ಷಾತೀತವಾಗಿ ಎಲ್ಲರ ಹೆಸರು ಕೇಳಿ ಬರುತ್ತಿದೆ: ತನ್ವೀರ್ ಸೇಠ್ - Muda Scam

author img

By ETV Bharat Karnataka Team

Published : Jul 13, 2024, 5:27 PM IST

ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಹಲವರ ಹೆಸರು ಕೇಳಿಬರುತ್ತಿದೆ. ಯಾರು ಇದ್ದಾರೆ, ಯಾರು ಇಲ್ಲ ಎಂಬ ಬಗ್ಗೆ ನಾನು ಹೇಳಲು ಆಗುವುದಿಲ್ಲ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.

ತನ್ವೀರ್ ಸೇಠ್
ತನ್ವೀರ್ ಸೇಠ್ (ETV Bharat)

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಪಕ್ಷಾತೀತವಾಗಿ ಎಲ್ಲರ ಹೆಸರು ಕೇಳಿ ಬರುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಹೊಸ ಬಾಂಬ್​ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದೇನೆ. ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಹೇಳಲು ಆಗಲ್ಲ. ನಿರಂತರ 15 ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದರು ಮಾಡಿದ್ದರೆ ಕ್ರಮ ವಹಿಸಲಾಗುತ್ತದೆ ಎಂದರು.

ಪ್ರಾಧಿಕಾರ ಮಾಡಿದ ತೀರ್ಮಾನ ಕಾನೂನು ಬದ್ಧ ಆಗಿಲ್ಲ ಅಂದಾಗ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆಯಬೇಕು. ಮುಡಾ ಸಂಬಂಧ ಹಿಂದಿನ ಸರ್ಕಾರದಿಂದ ಈವರೆಗೆ ಸುಮಾರು 12 ಪತ್ರಗಳನ್ನು ಬರೆದಿದ್ದಾರೆ. ನಾನೂ ಅನೇಕ ಪತ್ರಗಳನ್ನು ಬರೆದಿದ್ದೇನೆ. ಮಂಡಳಿ ಸಭೆ ನಡೆಸದೇ ಇರುವುದು, ಅಭಿವೃದ್ಧಿ ಕೆಲಸ ವಿಳಂಬ ಬಗ್ಗೆ ನಾನು ಪತ್ರಗಳನ್ನು ಬರೆದಿದ್ದೇನೆ. ಮುಡಾ ಸಂಬಂಧ ತನಿಖಾ ಹಂತದಲ್ಲಿರುವಾಗ ನಾನು ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನು ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎಸ್.ಟಿ.ಸೋಮಶೇಖರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿದೆ. ಯಾರು ಇದ್ದಾರೆ, ಯಾರು ಇಲ್ಲ ಎಂಬ ಬಗ್ಗೆ ನಾನು ಹೇಳಲು ಆಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ‌ಕೂಡಲೇ ರಾಜೀನಾಮೆ ‌ನೀಡಬೇಕು, ಬಿಜೆಪಿಗರ ವಿರುದ್ಧವೂ ಕ್ರಮ ಕೈಗೊಳ್ಳಿ: ಕೇಂದ್ರ ಸಚಿವ ಜೋಶಿ - Muda Scam

ಬೆಂಗಳೂರು: ಮುಡಾ ಅಕ್ರಮ ನಿವೇಶನ ಹಂಚಿಕೆ ಸಂಬಂಧ ಪಕ್ಷಾತೀತವಾಗಿ ಎಲ್ಲರ ಹೆಸರು ಕೇಳಿ ಬರುತ್ತಿದೆ ಎಂದು ಶಾಸಕ ತನ್ವೀರ್ ಸೇಠ್ ಹೊಸ ಬಾಂಬ್​ ಸಿಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಡಾ ಅಕ್ರಮ ವಿಚಾರವಾಗಿ ತನಿಖೆ ನಡೆಯುತ್ತಿದೆ. ನಾನು ಪ್ರಾಧಿಕಾರದ ಸದಸ್ಯನಾಗಿದ್ದೇನೆ. ತನಿಖೆ ನಡೆಯುತ್ತಿರುವಾಗ ಆರೋಪದ ಬಗ್ಗೆ ನಾನು ಈಗ ಹೇಳಲು ಆಗಲ್ಲ. ನಿರಂತರ 15 ವರ್ಷದಿಂದ ಪ್ರಾಧಿಕಾರದ ಸದಸ್ಯನಾಗಿದ್ದೇನೆ. ಮುಡಾದಲ್ಲಿ ಅಧಿಕಾರಿಗಳು ಅಧಿಕಾರ ಮೀರಿ ಏನಾದರು ಮಾಡಿದ್ದರೆ ಕ್ರಮ ವಹಿಸಲಾಗುತ್ತದೆ ಎಂದರು.

ಪ್ರಾಧಿಕಾರ ಮಾಡಿದ ತೀರ್ಮಾನ ಕಾನೂನು ಬದ್ಧ ಆಗಿಲ್ಲ ಅಂದಾಗ ಆಯುಕ್ತರು ಸರ್ಕಾರಕ್ಕೆ ಪತ್ರ ಬರೆಯಬೇಕು. ಮುಡಾ ಸಂಬಂಧ ಹಿಂದಿನ ಸರ್ಕಾರದಿಂದ ಈವರೆಗೆ ಸುಮಾರು 12 ಪತ್ರಗಳನ್ನು ಬರೆದಿದ್ದಾರೆ. ನಾನೂ ಅನೇಕ ಪತ್ರಗಳನ್ನು ಬರೆದಿದ್ದೇನೆ. ಮಂಡಳಿ ಸಭೆ ನಡೆಸದೇ ಇರುವುದು, ಅಭಿವೃದ್ಧಿ ಕೆಲಸ ವಿಳಂಬ ಬಗ್ಗೆ ನಾನು ಪತ್ರಗಳನ್ನು ಬರೆದಿದ್ದೇನೆ. ಮುಡಾ ಸಂಬಂಧ ತನಿಖಾ ಹಂತದಲ್ಲಿರುವಾಗ ನಾನು ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.

ಪ್ರಾಧಿಕಾರದ ಸದಸ್ಯರಾಗಲು ಪರಿಷತ್, ವಿಧಾನಸಭೆ ಸದಸ್ಯತ್ವ ಇರಬೇಕು. ಇದನ್ನು ಸರ್ಕಾರ ಸರಿಪಡಿಸುವ ಕೆಲಸ ಮಾಡಬೇಕು. ಬಿಜೆಪಿ, ಜೆಡಿಎಸ್, ಕಾಂಗ್ರೆಸ್ ಮುಖಂಡರ ಹೆಸರು ಕೇಳಿ ಬರುತ್ತಿದೆ. ಮುಡಾ ನಿವೇಶನ ಹಂಚಿಕೆ ವಿಚಾರವಾಗಿ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಎಸ್.ಟಿ.ಸೋಮಶೇಖರ್ ಹೆಸರು ಕೇಳಿ ಬರುತ್ತಿದೆ. ಎಲ್ಲರ ಹೆಸರು ಕೇಳಿ ಬರುತ್ತಿದೆ. ಯಾರು ಇದ್ದಾರೆ, ಯಾರು ಇಲ್ಲ ಎಂಬ ಬಗ್ಗೆ ನಾನು ಹೇಳಲು ಆಗುವುದಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿದ್ದರಾಮಯ್ಯ ‌ಕೂಡಲೇ ರಾಜೀನಾಮೆ ‌ನೀಡಬೇಕು, ಬಿಜೆಪಿಗರ ವಿರುದ್ಧವೂ ಕ್ರಮ ಕೈಗೊಳ್ಳಿ: ಕೇಂದ್ರ ಸಚಿವ ಜೋಶಿ - Muda Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.