ETV Bharat / state

ಬೆಂಗಳೂರಿನ ಅಗತ್ಯಗಳಿಗೆ ಮತ್ತೊಂದು ವಿಮಾನ ನಿಲ್ದಾಣ: ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವ ಎಂ.ಬಿ. ಪಾಟೀಲ್ - Another airport for Bangaluru needs

author img

By ETV Bharat Karnataka Team

Published : Jun 21, 2024, 10:20 AM IST

ಅಧಿಕಾರಿಗಳೊಂದಿಗೆ ನಡೆಸಿದ ಸಭೆಯಲ್ಲಿ ಸಚಿವ ಎಂ.ಬಿ. ಪಾಟೀಲ್ ಅವರು ಬೆಂಗಳೂರಿನ ಅಗತ್ಯಗಳಿಗೆ ಬೇಕಿರುವ ಮತ್ತೊಂದು ವಿಮಾನ ನಿಲ್ದಾಣದ ಬಗ್ಗೆ ಚರ್ಚೆ ನಡೆಸಿದರು.

Bengaluru  Another airport for Bangaluru needs  MB Patil
ಬೆಂಗಳೂರಿನ ಅಗತ್ಯಗಳಿಗೆ ಮತ್ತೊಂದು ವಿಮಾನ ನಿಲ್ದಾಣ: ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದ ಸಚಿವ ಎಂ.ಬಿ. ಪಾಟೀಲ್ (ETV Bharat)

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ. ಪಾಟೀಲ್ ಅವರು ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಪ್ರಾಥಮಿಕ ಹಂತ ಕುರಿತು ಚರ್ಚಿಸಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ. ಸತೀಶ್, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಟ್ಟಣೆ: ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ''ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ವಿಮಾನ ನಿಲ್ದಾಣವಾಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ಮಿಲಿಯನ್ ಪ್ರಯಾಣಿಕರ ಮತ್ತು 4 ಲಕ್ಷ ಟನ್​ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033) 150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಇನ್ನು ಒಂಬತ್ತು ವರ್ಷಗಳಲ್ಲಿ ಮುಗಿಯಲಿದೆ. ಆದ್ದರಿಂದ ಈಗಿನಿಂದಲೇ ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಡಿ ಇಡಬೇಕಾಗಿದೆ'' ಎಂದು ವಿವರಿಸಿದ್ದಾರೆ.

''ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ'' ಎಂದು ಹೇಳಿದ್ದಾರೆ.

''ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ'' ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ - Prenatal Sex Determination Racket

ಬೆಂಗಳೂರು: ವೇಗವಾಗಿ ಬೆಳೆಯುತ್ತಿರುವ ಮತ್ತು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿರುವ ಬೆಂಗಳೂರು ಮಹಾನಗರದ ಮುಂಬರುವ ಅಗತ್ಯಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ವಿಮಾನ ನಿಲ್ದಾಣ ನಿರ್ಮಿಸುವ ಸಂಬಂಧ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ‌.ಬಿ. ಪಾಟೀಲ್ ಅವರು ಅಧಿಕಾರಿಗಳೊಂದಿಗೆ ಗುರುವಾರ ಇಲ್ಲಿ ಪ್ರಾಥಮಿಕ ಹಂತ ಕುರಿತು ಚರ್ಚಿಸಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆದ ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್. ಮಂಜುಳಾ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ಸಿ. ಸತೀಶ್, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ. ಪ್ರಕಾಶ್ ಮತ್ತಿತರರು ಭಾಗವಹಿಸಿದ್ದರು. ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಸಾಧ್ಯಾಸಾಧ್ಯತೆ ವರದಿ ಸಲ್ಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ದಟ್ಟಣೆ: ಈ ಬಗ್ಗೆ ಮಾಹಿತಿ ನೀಡಿರುವ ಸಚಿವರು, ''ದೆಹಲಿ ಮತ್ತು ಮುಂಬೈ ನಂತರ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಮೂರನೇ ಅತಿ ದಟ್ಟಣೆಯ ವಿಮಾನ ನಿಲ್ದಾಣವಾಗಿದೆ. ಕಳೆದ ಸಾಲಿನಲ್ಲಿ ಇಲ್ಲಿ 37.5 ಮಿಲಿಯನ್ ಪ್ರಯಾಣಿಕರ ಮತ್ತು 4 ಲಕ್ಷ ಟನ್​ಗೂ ಹೆಚ್ಚಿನ ಸರಕು ಸಾಗಣೆ ನಿರ್ವಹಣೆ ಆಗಿದೆ. ಈ ಒತ್ತಡವನ್ನು ಗಮನದಲ್ಲಿಟ್ಟುಕೊಂಡು ಭವಿಷ್ಯದಲ್ಲಿ ಎರಡನೇ ವಿಮಾನ ನಿಲ್ದಾಣದ ಅಗತ್ಯ ಇದೆ ಎಂದಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸುವಾಗ ಬಿಐಎಎಲ್ ಸಂಸ್ಥೆ, ಸರ್ಕಾರದ ಜೊತೆ ಒಪ್ಪಂದ ಮಾಡಿಕೊಂಡು 25 ವರ್ಷಗಳವರೆಗೆ (ಅಂದರೆ 2033) 150 ಕಿ.ಮೀ. ವ್ಯಾಪ್ತಿಯಲ್ಲಿ ಇನ್ನೊಂದು ವಿಮಾನ ನಿಲ್ದಾಣವನ್ನು ಅಭಿವೃದ್ಧಿಪಡಿಸುವುದಿಲ್ಲ ಎಂದು ಹೇಳಿತ್ತು. ಈ ಷರತ್ತು ಇನ್ನು ಒಂಬತ್ತು ವರ್ಷಗಳಲ್ಲಿ ಮುಗಿಯಲಿದೆ. ಆದ್ದರಿಂದ ಈಗಿನಿಂದಲೇ ನಾವು ಎರಡನೇ ವಿಮಾನ ನಿಲ್ದಾಣದ ಬಗ್ಗೆ ಮುಂದಡಿ ಇಡಬೇಕಾಗಿದೆ'' ಎಂದು ವಿವರಿಸಿದ್ದಾರೆ.

''ಬೆಂಗಳೂರಿನ ಜನಸಂಖ್ಯೆ ಈಗಾಗಲೇ ಒಂದು ಕೋಟಿ ದಾಟಿದೆ. ಇಲ್ಲಿ ಜಾಗತಿಕ ಮಟ್ಟದ ಕಂಪನಿಗಳಿವೆ. ಸುತ್ತಮುತ್ತಲಿನ ಜಿಲ್ಲೆಗಳ ಜೊತೆಗೆ ಆಂಧ್ರಪ್ರದೇಶದ ಕೆಲವು ಜಿಲ್ಲೆಗಳ ಜನರೂ ಈಗಿರುವ ವಿಮಾನ ನಿಲ್ದಾಣದ ಮೇಲೆ ಅವಲಂಬಿತರಾಗಿದ್ದಾರೆ. 2033ರ ಹೊತ್ತಿಗೆ ಈಗಿನ ವಿಮಾನ ನಿಲ್ದಾಣವು ಪ್ರಯಾಣಿಕರ ನಿರ್ವಹಣೆಯ ತುತ್ತತುದಿ ಮುಟ್ಟಲಿದೆ. ಸರಕು ಸಾಗಣೆ ಪ್ರಮಾಣ ಕೂಡ 2040ರ ಹೊತ್ತಿಗೆ ಈ ಮಟ್ಟ ಮುಟ್ಟಲಿದೆ'' ಎಂದು ಹೇಳಿದ್ದಾರೆ.

''ಭೂ ಸ್ವಾಧೀನ, ಪರಿಹಾರ ಹಂಚಿಕೆ ಇತ್ಯಾದಿಗಳಿಗೆ ದೀರ್ಘ ಸಮಯ ಹಿಡಿಯುತ್ತದೆ. ಆದ್ದರಿಂದ ನಾವು ಈಗಿನಿಂದಲೇ ಕಾರ್ಯಪ್ರವೃತ್ತರಾಗುತ್ತಿದ್ದೇವೆ. ಎರಡನೆಯ ವಿಮಾನ ನಿಲ್ದಾಣ ಅಭಿವೃದ್ಧಿ ಪಡಿಸುವುದರಿಂದ ರಾಜಧಾನಿಯ ಆಚೆಗೂ ಕೈಗಾರಿಕಾ ಬೆಳವಣಿಗೆ ಸಾಧ್ಯವಾಗಲಿದೆ'' ಎಂದು ಸಚಿವರು ತಿಳಿಸಿದ್ದಾರೆ.

ಇದನ್ನೂ ಓದಿ: ಭ್ರೂಣ ಲಿಂಗ ಪತ್ತೆ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಲಕ್ಷ ಬಹುಮಾನ - Prenatal Sex Determination Racket

ETV Bharat Logo

Copyright © 2024 Ushodaya Enterprises Pvt. Ltd., All Rights Reserved.