ETV Bharat / state

ಬೆಂಗಳೂರು: ಐಪಿಎಲ್ ಪಂದ್ಯದ ವೇಳೆ ಮಹಿಳಾ ಪೊಲೀಸ್ ಸಿಬ್ಬಂದಿಯ ಮೊಬೈಲ್ ಕದ್ದಿದ್ದ ಆರೋಪಿ ಅಂದರ್​ - Mobile thief arrested

author img

By ETV Bharat Karnataka Team

Published : May 28, 2024, 12:52 PM IST

ವಿವಿಧೆಡೆ ಮೊಬೈಲ್ ಫೋನ್‌ಗಳನ್ನ ಕಳ್ಳತನ ಮಾಡುತ್ತಿದ್ದ ಆರೋಪಿಯೊಬ್ಬನನ್ನು ಸಿದ್ದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ.

MOBILE THIEF ARRESTED
ಮೊಬೈಲ್ ಕದ್ದಿದ್ದ ಆರೋಪಿ (ETV Bharat)

ಬೆಂಗಳೂರು: ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಬರುವವರ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿದ್ದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಮೂಲದ ಪಂಕಜ್ ಸಿಂಗ್ ಬಂಧಿತ ಆರೋಪಿಯಾಗಿದ್ದು, ಆತನಿಂದ 19.50 ಲಕ್ಷ ಮೌಲ್ಯದ 32 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್ ಮೂಲದವರಾದ ಆರೋಪಿಗಳು, ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಸ್ಟೇಡಿಯಂ ಬಳಿ ಜನಸಂದಣಿ ಇರುವಾಗ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದರು. ಮೇ 18ರಂದು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯ ವೀಕ್ಷಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಸಿದ್ದಾಪುರದಿಂದ ತಮ್ಮ ಕುಟುಂಬ ಸದಸ್ಯರೊಂದಿಗೆ ಬಂದಿದ್ದರು. ಈ ವೇಳೆ ಬಿಎಂಟಿಸಿ ಬಸ್‌ನಲ್ಲಿ ಜನಸಂದಣಿಯ ನಡುವೆ ಅವರ ಮೊಬೈಲ್ ಫೋನ್‌ ಅನ್ನು ಆರೋಪಿಗಳು ಎಗರಿಸಿದ್ದರು. ಬಸ್ ಇಳಿದ ಬಳಿಕ ಪರಿಶೀಲಿಸಿದಾಗ ಫೋನ್ ಇಲ್ಲದಿರುವುದನ್ನು ಗಮನಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ ಕೊನೆಗೆ ಸಿದ್ಧಾಪುರ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ಫೋನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ತನ್ನ ಮೂವರು ಸಹವರ್ತಿಗಳೊಂದಿಗೆ ಸೇರಿ ನಗರದ ವಿವಿಧೆಡೆ ಮೊಬೈಲ್ ಫೋನ್‌ಗಳನ್ನ ಕಳ್ಳತನ ಮಾಡುತ್ತಿದ್ದುದು ತಿಳಿದು ಬಂದಿದೆ. ಸದ್ಯ ಉಳಿದ ಮೂವರು ಆರೋಪಿತರು ಪರಾರಿಯಾಗಿದ್ದು, ಬಂಧಿತನ ವಿಚಾರಣೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿದೆ ಫೋನ್ ಕಳ್ಳತನ: ಸುಲಭವಾಗಿ ಹಣ ಗಳಿಸುವ ಆಸೆಗೆ ಈ ದಂಧೆಗಿಳಿಯುತ್ತಿದ್ದಾರೆ ಅಪ್ರಾಪ್ತರು! - Cell Phone Theft Crisis

ಬೆಂಗಳೂರು: ಐಪಿಎಲ್ ಪಂದ್ಯಗಳನ್ನು ವೀಕ್ಷಿಸಲು ಬರುವವರ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯೋರ್ವನನ್ನು ಸಿದ್ದಾಪುರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಜಾರ್ಖಂಡ್ ಮೂಲದ ಪಂಕಜ್ ಸಿಂಗ್ ಬಂಧಿತ ಆರೋಪಿಯಾಗಿದ್ದು, ಆತನಿಂದ 19.50 ಲಕ್ಷ ಮೌಲ್ಯದ 32 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪ್ರಕರಣದಲ್ಲಿ ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಪತ್ತೆಕಾರ್ಯ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಾರ್ಖಂಡ್ ಮೂಲದವರಾದ ಆರೋಪಿಗಳು, ಐಪಿಎಲ್ ಪಂದ್ಯಗಳ ಸಂದರ್ಭದಲ್ಲಿ ಸ್ಟೇಡಿಯಂ ಬಳಿ ಜನಸಂದಣಿ ಇರುವಾಗ ಮೊಬೈಲ್ ಫೋನ್‌ಗಳನ್ನು ಕಳ್ಳತನ ಮಾಡುತ್ತಿದ್ದರು. ಮೇ 18ರಂದು ಎಂ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದಿದ್ದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯ ವೀಕ್ಷಿಸಲು ಮಹಿಳಾ ಪೊಲೀಸ್ ಸಿಬ್ಬಂದಿಯೊಬ್ಬರು ಸಿದ್ದಾಪುರದಿಂದ ತಮ್ಮ ಕುಟುಂಬ ಸದಸ್ಯರೊಂದಿಗೆ ಬಂದಿದ್ದರು. ಈ ವೇಳೆ ಬಿಎಂಟಿಸಿ ಬಸ್‌ನಲ್ಲಿ ಜನಸಂದಣಿಯ ನಡುವೆ ಅವರ ಮೊಬೈಲ್ ಫೋನ್‌ ಅನ್ನು ಆರೋಪಿಗಳು ಎಗರಿಸಿದ್ದರು. ಬಸ್ ಇಳಿದ ಬಳಿಕ ಪರಿಶೀಲಿಸಿದಾಗ ಫೋನ್ ಇಲ್ಲದಿರುವುದನ್ನು ಗಮನಿಸಿದ ಮಹಿಳಾ ಪೊಲೀಸ್ ಸಿಬ್ಬಂದಿ ಕೊನೆಗೆ ಸಿದ್ಧಾಪುರ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಮೊಬೈಲ್ ಫೋನ್ ಮಾರಾಟ ಮಾಡಲು ಯತ್ನಿಸುತ್ತಿದ್ದ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಯು ತನ್ನ ಮೂವರು ಸಹವರ್ತಿಗಳೊಂದಿಗೆ ಸೇರಿ ನಗರದ ವಿವಿಧೆಡೆ ಮೊಬೈಲ್ ಫೋನ್‌ಗಳನ್ನ ಕಳ್ಳತನ ಮಾಡುತ್ತಿದ್ದುದು ತಿಳಿದು ಬಂದಿದೆ. ಸದ್ಯ ಉಳಿದ ಮೂವರು ಆರೋಪಿತರು ಪರಾರಿಯಾಗಿದ್ದು, ಬಂಧಿತನ ವಿಚಾರಣೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಹೆಚ್ಚುತ್ತಿದೆ ಫೋನ್ ಕಳ್ಳತನ: ಸುಲಭವಾಗಿ ಹಣ ಗಳಿಸುವ ಆಸೆಗೆ ಈ ದಂಧೆಗಿಳಿಯುತ್ತಿದ್ದಾರೆ ಅಪ್ರಾಪ್ತರು! - Cell Phone Theft Crisis

ETV Bharat Logo

Copyright © 2024 Ushodaya Enterprises Pvt. Ltd., All Rights Reserved.