ETV Bharat / state

ಫ್ಲೈಓವರ್ ಕಾಮಗಾರಿ ವೇಳೆ ಕಬ್ಬಿಣದ ಪೈಪ್ ಬಿದ್ದು ಎಎಸ್​ಐ ಸಾವು ಪ್ರಕರಣ: ಮತ್ತೋರ್ವನ ಬಂಧನ - ASI Death Case

author img

By ETV Bharat Karnataka Team

Published : 2 hours ago

ಕಬ್ಬಿಣದ ರಾಡ್​ ಬಿದ್ದು ಮೃತಪಟ್ಟ ಎಎಸ್​ಐ ನಾಭಿರಾಜ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ.

ASI DEATH CASE
ಬಂಧಿತ ಆರೋಪಿ ವಿಕಾಸ್ ಶರ್ಮಾ (ETV Bharat)

ಹುಬ್ಬಳ್ಳಿ: ನಗರದ ಹಳೇ ಕೋರ್ಟ್​​ ಸರ್ಕಲ್​ನಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ಕಾಮಗಾರಿ ವೇಳೆ ಕಬ್ಬಿಣದ ಪೈಪ್ ತಲೆ ಮೇಲೆ ಬಿದ್ದ ಪರಿಣಾಮ ಎಎಸ್​ಐ ನಾಭಿರಾಜ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು‌ ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ ಫ್ಲೈಓವರ್ ಪ್ರಾಜೆಕ್ಟ್​​ನ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳುತ್ತಿದ್ದ ಖಾಸಗಿ ಕಂಪನಿಯ ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಆಗಿದ್ದ ಹರಿಯಾಣ ರಾಜ್ಯದ ವಿಕಾಸ್ ಶರ್ಮಾ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹು-ಧಾ ಕಾನೂನು ವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಈಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ.

ನಾಭಿರಾಜ್ ಅವರು ಕರ್ತವ್ಯದಲ್ಲಿದ್ದಾಗ ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ, ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ, ನೌಕರರ ನಿರ್ಲಕ್ಷ ದಿಂದ ಕಬ್ಬಿಣ ಕಬ್ಬಿಣದ ರಾಡ್​ವೊಂದು​​ ಎಎಸ್​ಐ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆಗೆ ಬಲವಾದ ಏಟು ಬಿದ್ದ ಕಾರಣ ಕೋಮಾಗೆ ಜಾರಿದ್ದ ನಾಭಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಬಗ್ಗೆ ದೂರು ದಾಖಲಾಗಿ ತನಿಖೆಯಲ್ಲಿತ್ತು. ಪ್ರಕರಣ ಸಂಬಂಧ ಈಗಾಗಲೇ ಖಾಸಗಿ ಕಂಪನಿಯ ಮೂವರು ಇಂಜಿನಿಯರ್ ಸೇರಿ 11 ಜನ ನೌಕರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜಪಡಿಸಲಾಗಿದೆ.

ಇದನ್ನೂ ಓದಿ: ಫ್ಲೈಓವರ್‌ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ಸಾವು: ನೇತ್ರದಾನ, ಸಾವಿನಲ್ಲೂ ಸಾರ್ಥಕತೆ - ASI died

ಮೃತ ನಾಭಿರಾಜ್​ ನೇತ್ರಗಳನ್ನು ದಾನ ಮಾಡುವ ಮೂಲಕ ಎಎಸ್​ಐ ನಾಭಿರಾಜ್​ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ. ನಾಭಿರಾಜ್​ ಇತ್ತೀಚಿಗೆ ಒಂದು ದಿನವೂ ರಜೆ ಹಾಕದೆ ಕರ್ತವ್ಯ ನಿರ್ಹಿಸುತ್ತಿದ್ದರು. ಕಣ್ಣು ದಾನ ಮಾಡಬೇಕು ಎನ್ನುವುದು ಅವರ ಇಚ್ಛೆ ಆಗಿತ್ತು.

ಹುಬ್ಬಳ್ಳಿ: ನಗರದ ಹಳೇ ಕೋರ್ಟ್​​ ಸರ್ಕಲ್​ನಲ್ಲಿ ನಿರ್ಮಾಣ ಹಂತದಲ್ಲಿದ್ದ ಫ್ಲೈಓವರ್ ಕಾಮಗಾರಿ ವೇಳೆ ಕಬ್ಬಿಣದ ಪೈಪ್ ತಲೆ ಮೇಲೆ ಬಿದ್ದ ಪರಿಣಾಮ ಎಎಸ್​ಐ ನಾಭಿರಾಜ್ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು‌ ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ಹುಬ್ಬಳ್ಳಿ ಫ್ಲೈಓವರ್ ಪ್ರಾಜೆಕ್ಟ್​​ನ ಸಂಪೂರ್ಣ ಜವಾಬ್ದಾರಿ ನೋಡಿಕೊಳ್ಳುತ್ತಿದ್ದ ಖಾಸಗಿ ಕಂಪನಿಯ ಪ್ರಾಜೆಕ್ಟ್ ಕೋ-ಆರ್ಡಿನೇಟರ್ ಆಗಿದ್ದ ಹರಿಯಾಣ ರಾಜ್ಯದ ವಿಕಾಸ್ ಶರ್ಮಾ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಹು-ಧಾ ಕಾನೂನು ವ್ಯವಸ್ಥೆ ಡಿಸಿಪಿ ಮಹಾನಿಂಗ ನಂದಗಾವಿ ಈಟಿವಿ ಭಾರತಕ್ಕೆ ಸ್ಪಷ್ಟಪಡಿಸಿದ್ದಾರೆ.

ನಾಭಿರಾಜ್ ಅವರು ಕರ್ತವ್ಯದಲ್ಲಿದ್ದಾಗ ಬೈಕ್ ಮೇಲೆ ತೆರಳುತ್ತಿದ್ದರು. ಈ ವೇಳೆ, ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ, ನೌಕರರ ನಿರ್ಲಕ್ಷ ದಿಂದ ಕಬ್ಬಿಣ ಕಬ್ಬಿಣದ ರಾಡ್​ವೊಂದು​​ ಎಎಸ್​ಐ ತಲೆಯ ಮೇಲೆ ಬಿದ್ದಿತ್ತು. ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ನಂತರ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ತಲೆಗೆ ಬಲವಾದ ಏಟು ಬಿದ್ದ ಕಾರಣ ಕೋಮಾಗೆ ಜಾರಿದ್ದ ನಾಭಿರಾಜ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದರು. ಈ ಬಗ್ಗೆ ದೂರು ದಾಖಲಾಗಿ ತನಿಖೆಯಲ್ಲಿತ್ತು. ಪ್ರಕರಣ ಸಂಬಂಧ ಈಗಾಗಲೇ ಖಾಸಗಿ ಕಂಪನಿಯ ಮೂವರು ಇಂಜಿನಿಯರ್ ಸೇರಿ 11 ಜನ ನೌಕರರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜಪಡಿಸಲಾಗಿದೆ.

ಇದನ್ನೂ ಓದಿ: ಫ್ಲೈಓವರ್‌ ಕಾಮಗಾರಿಯ ರಾಡ್ ಬಿದ್ದು ಗಾಯಗೊಂಡಿದ್ದ ASI ಸಾವು: ನೇತ್ರದಾನ, ಸಾವಿನಲ್ಲೂ ಸಾರ್ಥಕತೆ - ASI died

ಮೃತ ನಾಭಿರಾಜ್​ ನೇತ್ರಗಳನ್ನು ದಾನ ಮಾಡುವ ಮೂಲಕ ಎಎಸ್​ಐ ನಾಭಿರಾಜ್​ ಕುಟುಂಬಸ್ಥರು ಸಾವಿನಲ್ಲೂ ಸಾರ್ಥಕತೆಯನ್ನು ಮೆರೆದಿದ್ದಾರೆ. ನಾಭಿರಾಜ್​ ಇತ್ತೀಚಿಗೆ ಒಂದು ದಿನವೂ ರಜೆ ಹಾಕದೆ ಕರ್ತವ್ಯ ನಿರ್ಹಿಸುತ್ತಿದ್ದರು. ಕಣ್ಣು ದಾನ ಮಾಡಬೇಕು ಎನ್ನುವುದು ಅವರ ಇಚ್ಛೆ ಆಗಿತ್ತು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.