ETV Bharat / state

ಒಂದು ದೇಶ-ಒಂದು ಚುನಾವಣೆ, ನೀಟ್ ಪರೀಕ್ಷೆ ರದ್ದು ಸೇರಿ ನಾಲ್ಕು ನಿರ್ಣಯ ಅಂಗೀಕರಿಸಿದ ವಿಧಾನಸಭೆ - RESOLUTION AGAINST NEET

author img

By ETV Bharat Karnataka Team

Published : Jul 25, 2024, 2:05 PM IST

ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ಸೇರಿದಂತೆ ಒಟ್ಟು ನಾಲ್ಕು ಮಹತ್ವದ ನಿರ್ಣಯಗಳನ್ನು ವಿಧಾನಸಭೆಯಲ್ಲಿ ಗುರುವಾರ ಅಂಗೀಕರಿಸಲಾಯಿತು.

ASSEMBLY PASEES FOUR RESOLUTIONS
ವಿಧಾನಸಭೆ (ETV Bharat)

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಂತಹ ಪ್ರಮುಖವಾದ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು.

ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರ ಧರಣಿ ನಡುವೆಯೂ ರಾಜ್ಯ ಸರ್ಕಾರ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ ಹಾಗೂ ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳನ್ನು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು. ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರಕಟಿಸಿದರು.

ಒಂದು ದೇಶ-ಒಂದು ಚುನಾವಣೆ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ, ಸರ್ವಾನುಮತದ ಅಂಗೀಕಾರವನ್ನು ಆಕ್ಷೇಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​.ಕೆ. ಪಾಟೀಲ್, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು. ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಕಾನೂನು ಸಚಿವ ಹೆಚ್​.ಕೆ. ಪಾಟೀಲ್, ರಾಜ್ಯ ಮತ್ತು ದಕ್ಷಿಣ ಭಾರತದ ಜನರ ರಕ್ಷಣೆಗಾಗಿ ಪ್ರಜಾಪ್ರಭುತ್ವದಲ್ಲಿ ಸೂಕ್ತ ಸ್ಥಾನಮಾನ ನಿಗದಿಯಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕಾರ ಮಾಡಬೇಕಾಗಿದೆ. ಶಾಂತ ಚಿತ್ತರಾಗಿ ಚರ್ಚೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು. ಆದರೆ, ಪ್ರತಿಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.

ನಿರ್ಣಯ ಮಂಡನೆ ಆಗುತ್ತಿದ್ದಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ನಾವು ಈ ನಿರ್ಣಯದ ಪರವಾಗಿದ್ದೇವೆ. ಚರ್ಚೆಯಲ್ಲಿ ಭಾಗವಹಿಸುತ್ತೇವೆ ಎಂದು ಪ್ರತಿಪಾದಿಸಿದರು. ಹಾಗಿದ್ದ ಮೇಲೆ ಧರಣಿ ಕೈಬಿಟ್ಟು ಚರ್ಚೆಯಲ್ಲಿ ಭಾಗವಹಿಸಿ ಎಂದು ಸ್ಪೀಕರ್ ಸಲಹೆ ನೀಡಿದರು.

ಪ್ರತಿಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಧ್ಯಕ್ಷರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ಇದನ್ನೂ ಓದಿ: ಮುಡಾ ಸದ್ದು: ಉಭಯ ಸದನದಲ್ಲಿ ಬಿಜೆಪಿ ಜೆಡಿಎಸ್ ಧರಣಿ ಮುಂದುವರಿಕೆ - MUDA scam

ಬೆಂಗಳೂರು: ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯುವಂತಹ ಪ್ರಮುಖವಾದ ಮೂರು ನಿರ್ಣಯಗಳನ್ನು ವಿಧಾನಸಭೆಯಲ್ಲಿ ಇಂದು ಅಂಗೀಕರಿಸಲಾಯಿತು.

ಪ್ರತಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಸದಸ್ಯರ ಧರಣಿ ನಡುವೆಯೂ ರಾಜ್ಯ ಸರ್ಕಾರ, ಒಂದು ದೇಶ-ಒಂದು ಚುನಾವಣೆಯನ್ನು ವಿರೋಧಿಸುವ, ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಲು ಆಗ್ರಹಿಸುವ ಹಾಗೂ ಲೋಕಸಭೆ ಹಾಗೂ ವಿಧಾನಸಭೆಗಳ ಕ್ಷೇತ್ರ ವಿಂಗಡಣೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಮನವಿ ಮಾಡುವ ಮೂರು ಪ್ರಮುಖ ನಿರ್ಣಯಗಳನ್ನು ಹಾಗೂ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಅರಣ್ಯ ಸಂರಕ್ಷಣಾ ಕಾಯ್ದೆಯಿಂದ ವಿನಾಯಿತಿ ನೀಡಬೇಕು ಎಂದು ಒತ್ತಾಯಿಸುವ ನಾಲ್ಕನೇ ನಿರ್ಣಯವನ್ನು ಮಂಡಿಸಲಾಯಿತು. ಸರ್ವಾನುಮತದಿಂದ ಅಂಗೀಕಾರಗೊಂಡಿವೆ ಎಂದು ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಪ್ರಕಟಿಸಿದರು.

ಒಂದು ದೇಶ-ಒಂದು ಚುನಾವಣೆ ನಿರ್ಣಯಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ, ಸರ್ವಾನುಮತದ ಅಂಗೀಕಾರವನ್ನು ಆಕ್ಷೇಪಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್​.ಕೆ. ಪಾಟೀಲ್, 2026ರಲ್ಲಿನ ಅಥವಾ ಅದರ ನಂತರ ನಡೆಸುವ ಹೊಸ ಜನಗಣತಿಯ ಆಧಾರದ ಮೇಲೆ ಕ್ಷೇತ್ರ ಪುನರ್ವಿಂಗಡಣಾ ಪ್ರಕ್ರಿಯೆಯನ್ನು ನಡೆಸಬಾರದು. ಜನಸಂಖ್ಯೆಯನ್ನು ಆಧರಿಸಿ ಸ್ಥಾನಗಳ ಸಂಖ್ಯೆಯನ್ನು ಹೆಚ್ಚಿಸುವ ಸಂದರ್ಭದಲ್ಲಿ ಪ್ರತಿ ರಾಜ್ಯಕ್ಕೆ ಹಂಚಿಕೆ ಮಾಡಬೇಕಾದ ಲೋಕಸಭಾ ಸ್ಥಾನಗಳ ಸಂಖ್ಯೆಯನ್ನು ಮತ್ತು ಪ್ರತಿ ರಾಜ್ಯದ ವಿಧಾನಸಭೆಗೆ ನಿಗದಿಪಡಿಸಬೇಕಾದ ಸ್ಥಾನಗಳ ಒಟ್ಟು ಸಂಖ್ಯೆಯನ್ನು 1971ರ ಜನಗಣತಿಯನ್ನು ಆಧರಿಸಿ ನಿರ್ಧರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುವುದಾಗಿ ಹೇಳಿದರು.

ಇದಕ್ಕೂ ಮುನ್ನ ಮಾತನಾಡಿದ ಕಾನೂನು ಸಚಿವ ಹೆಚ್​.ಕೆ. ಪಾಟೀಲ್, ರಾಜ್ಯ ಮತ್ತು ದಕ್ಷಿಣ ಭಾರತದ ಜನರ ರಕ್ಷಣೆಗಾಗಿ ಪ್ರಜಾಪ್ರಭುತ್ವದಲ್ಲಿ ಸೂಕ್ತ ಸ್ಥಾನಮಾನ ನಿಗದಿಯಾಗಬೇಕು ಎಂದು ಒತ್ತಾಯಿಸುವ ನಿರ್ಣಯವನ್ನು ಅಂಗೀಕಾರ ಮಾಡಬೇಕಾಗಿದೆ. ಶಾಂತ ಚಿತ್ತರಾಗಿ ಚರ್ಚೆಯಲ್ಲಿ ಭಾಗವಹಿಸಿ ಎಂದು ಮನವಿ ಮಾಡಿದರು. ಆದರೆ, ಪ್ರತಿಪಕ್ಷದ ಸದಸ್ಯರು ಅದಕ್ಕೆ ಕಿವಿಗೊಡಲಿಲ್ಲ.

ನಿರ್ಣಯ ಮಂಡನೆ ಆಗುತ್ತಿದ್ದಂತೆ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಮಾತನಾಡಿ, ನಾವು ಈ ನಿರ್ಣಯದ ಪರವಾಗಿದ್ದೇವೆ. ಚರ್ಚೆಯಲ್ಲಿ ಭಾಗವಹಿಸುತ್ತೇವೆ ಎಂದು ಪ್ರತಿಪಾದಿಸಿದರು. ಹಾಗಿದ್ದ ಮೇಲೆ ಧರಣಿ ಕೈಬಿಟ್ಟು ಚರ್ಚೆಯಲ್ಲಿ ಭಾಗವಹಿಸಿ ಎಂದು ಸ್ಪೀಕರ್ ಸಲಹೆ ನೀಡಿದರು.

ಪ್ರತಿಪಕ್ಷಗಳ ಸದಸ್ಯರು ಧರಣಿ ಮುಂದುವರೆಸಿದ್ದರಿಂದ ಸಭಾಧ್ಯಕ್ಷರು ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ಇದನ್ನೂ ಓದಿ: ಮುಡಾ ಸದ್ದು: ಉಭಯ ಸದನದಲ್ಲಿ ಬಿಜೆಪಿ ಜೆಡಿಎಸ್ ಧರಣಿ ಮುಂದುವರಿಕೆ - MUDA scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.