ಮಂಡ್ಯ: ದುಷ್ಕರ್ಮಿಗಳು ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ನಲ್ಲಿ ದರೋಡೆಗೆ ಯತ್ನಿಸಿರುವ ಘಟನೆ ನಾಗಮಂಗಲ ತಾಲೂಕಿನ ದೇವಲಾಪುರ ಗ್ರಾಮದಲ್ಲಿ ನಡೆದಿದೆ.
ದುಷ್ಕರ್ಮಿಗಳು ತಡರಾತ್ರಿ ಬ್ಯಾಂಕ್ ಆಫ್ ಬರೋಡಾ ಬ್ಯಾಂಕ್ನ ಕಿಟಕಿ ಕತ್ತರಿಸಿ ಒಳಗೆ ನುಗ್ಗಿ ಲಾಕರ್ ಒಡೆಯಲು ಯತ್ನ ಮಾಡಿದ್ದಾರೆ. ಆದರೆ ಲಾಕರ್ ಒಡೆಯಲು ಸಾಧ್ಯವಾಗದೇ ದುಷ್ಕರ್ಮಿಗಳು ಬರಿಗೈಯಲ್ಲಿ ವಾಪಸಾಗಿದ್ದಾರೆ.
ಸ್ಥಳಕ್ಕೆ ನಾಗಮಂಗಲ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಸಂಬಂಧ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಹಾಡಹಗಲೇ ವೈದ್ಯನ ಮನೆಗೆ ನುಗ್ಗಿ ಕಳ್ಳತನ : ಸಿಸಿಟಿವಿ ಕ್ಯಾಮರಾದ ಡಿವಿಆರ್, ಬೆಲೆಬಾಳುವ ವಸ್ತುಗಳ ಸಹಿತ ಪರಾರಿ
ಇ.ಡಿ ಸೋಗಿನಲ್ಲಿ ಮನೆಗೆ ನುಗ್ಗಿ ದರೋಡೆ ಪ್ರಕರಣ, ನಾಲ್ವರ ಬಂಧನ (ದಕ್ಷಿಣ ಕನ್ನಡ) : ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಉದ್ಯಮಿಯೊಬ್ಬರ ಮನೆಗೆ ಇ.ಡಿ ಅಧಿಕಾರಿಗಳ ಸೋಗಿನಲ್ಲಿ ಬಂದು ಸುಮಾರು 30 ಲಕ್ಷ ರೂ. ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳದ ಕೊಡಂಗಲ್ಲೂರು ಪೊಲೀಸ್ ಠಾಣೆಯ ಎಎಸ್ಐ ಸೇರಿದಂತೆ ಇನ್ನೂ ನಾಲ್ಕು ಮಂದಿ ಆರೋಪಿಗಳನ್ನು ವಿಟ್ಲ ಪೊಲೀಸ್ ಠಾಣೆ ವಿಶೇಷ ತನಿಖಾ ತಂಡ ಬಂಧಿಸಿದೆ ಎಂದು ಎಸ್ಪಿ ಯತೀಶ್ ಎನ್. ತಿಳಿಸಿದ್ದರು.
ಕೊಡಂಗಲ್ಲೂರು ಪೊಲೀಸ್ ಠಾಣೆ ಎಎಸ್ಐ ಶಫೀರ್ ಬಾಬು (48), ಮನೆಯ ಮಾಹಿತಿ ನೀಡಿದ್ದ ಸ್ಥಳೀಯ ಆರೋಪಿ ಕೊಳ್ನಾಡು ನಿವಾಸಿ ಸಿರಾಜಿದ್ದೀನ್ (37), ಬಂಟ್ವಾಳ ನಿವಾಸಿ ಮೊಹಮ್ಮದ್ ಇಕ್ಬಾಲ್ (38) ಹಾಗೂ ಮಂಗಳೂರು ಪಡೀಲ್ ನಿವಾಸಿ ಮೊಹಮ್ಮದ್ ಅನ್ಸಾರ್ (27) ಬಂಧಿತ ನಾಲ್ವರು ಆರೋಪಿಗಳಾಗಿದ್ದಾರೆ.
ತನಿಖಾ ತಂಡವು ಈಗಾಗಲೇ ಕೇರಳದ ಕೊಲ್ಲಂ ನಿವಾಸಿಗಳಾದ ಅನಿಲ್ ಫರ್ನಾಂಡೀಸ್ (49), ಸಚ್ಚಿನ್ ಟಿ.ಎಸ್. (29), ಹಾಗೂ ಶಬಿನ್ ಎಸ್. (27) ಎಂಬವರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಿದೆ. ಪ್ರಕರಣ ಸಂಬಂಧ ಈವರೆಗೆ ಎಲ್ಲ 7 ಮಂದಿ ಆರೋಪಿಗಳನ್ನು ಬಂಧಿಸಿದಂತಾಗಿದೆ ಎಂದು ಎಸ್ಪಿ ಮಾಹಿತಿ ನೀಡಿದ್ದರು.