ETV Bharat / state

ಬೆಂಗಳೂರು: ಕಬ್ಬಿಣ‌ ಕದಿಯಲು ಹೋಗಿ ಸಿಕ್ಕಿಬಿದ್ದ ಇಬ್ಬರಿಗೆ ಥಳಿತ, ಓರ್ವ ಸಾವು - Iron Thief Beaten to Death

author img

By ETV Bharat Karnataka Team

Published : Jun 13, 2024, 5:59 PM IST

ನಿರ್ಮಾಣ ಹಂತದ ಕಟ್ಟಡದಲ್ಲಿ ಸಂಗ್ರಹಿಸಿಟ್ಟಿದ್ದ ಕಬ್ಬಿಣ ಕಳ್ಳತನಕ್ಕೆ ಯತ್ನಿಸಿದ್ದ ಇಬ್ಬರನ್ನು ಹಿಡಿದು ಕೆಲಸಗಾರರು ಮನಸೋಇಚ್ಛೆ ಥಳಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

iron stolen accused
ಕಬ್ಬಿಣ ಕಳ್ಳತನದ ಆರೋಪಿಗಳು (ETV Bharat)

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಕೆಲಸಗಾರರೇ ಹಿಡಿದು ಥಳಿಸಿದ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ‌. ಈ ಪೈಕಿ ಓರ್ವ ಸಾವನ್ನಪ್ಪಿದರೆ‌, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಅಂಜನಾಪುರದ ಸಲ್ಮಾನ್ ಸಾವನ್ನಪ್ಪಿರುವ ವ್ಯಕ್ತಿ. ಸಲೀಂ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತದೇವವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೋಣನಕುಂಟೆಯ ಆರ್​ಬಿಐ ಲೇಔಟ್‌ನಲ್ಲಿ ಕಟ್ಟಡ ಕಾಮಗಾರಿ‌ ನಡೆಯುತ್ತಿತ್ತು. ನಸುಕಿನ ಜಾವದಲ್ಲಿ ಸ್ನೇಹಿತರಾದ ಸಲ್ಮಾನ್ ಹಾಗೂ ಸಲೀಂ ಸ್ಥಳಕ್ಕೆ ಬಂದು ಕಬ್ಬಿಣ ಕಳ್ಳತನ ಮಾಡುವಾಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಯುವಕನ ಕೂಡಿ ಹಾಕಿ ಮನಬಂದಂತೆ ಹಲ್ಲೆ, ನಾಲ್ವರ ಬಂಧನ - Assault Case

ಬೆಂಗಳೂರು: ನಿರ್ಮಾಣ ಹಂತದ ಕಟ್ಟಡದಲ್ಲಿ ಕಬ್ಬಿಣ ಕಳ್ಳತನಕ್ಕೆ ಯತ್ನಿಸಿದ ಇಬ್ಬರನ್ನು ಕೆಲಸಗಾರರೇ ಹಿಡಿದು ಥಳಿಸಿದ ಘಟನೆ ಕೋಣನಕುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ‌. ಈ ಪೈಕಿ ಓರ್ವ ಸಾವನ್ನಪ್ಪಿದರೆ‌, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ.

ಅಂಜನಾಪುರದ ಸಲ್ಮಾನ್ ಸಾವನ್ನಪ್ಪಿರುವ ವ್ಯಕ್ತಿ. ಸಲೀಂ ಗಾಯಗೊಂಡು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಮೃತದೇವವನ್ನು ಮರಣೋತ್ತರ ಪರೀಕ್ಷೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಕೋಣನಕುಂಟೆಯ ಆರ್​ಬಿಐ ಲೇಔಟ್‌ನಲ್ಲಿ ಕಟ್ಟಡ ಕಾಮಗಾರಿ‌ ನಡೆಯುತ್ತಿತ್ತು. ನಸುಕಿನ ಜಾವದಲ್ಲಿ ಸ್ನೇಹಿತರಾದ ಸಲ್ಮಾನ್ ಹಾಗೂ ಸಲೀಂ ಸ್ಥಳಕ್ಕೆ ಬಂದು ಕಬ್ಬಿಣ ಕಳ್ಳತನ ಮಾಡುವಾಗ ಭದ್ರತಾ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾರೆ.

ಇದನ್ನೂ ಓದಿ: ದಾವಣಗೆರೆ: ಯುವಕನ ಕೂಡಿ ಹಾಕಿ ಮನಬಂದಂತೆ ಹಲ್ಲೆ, ನಾಲ್ವರ ಬಂಧನ - Assault Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.