ದೊಡ್ಡಬಳ್ಳಾಪುರ: ಚಿನ್ನ ಕಳವು ಮಾಡಿದವರಿಂದ ಚಿನ್ನದ ಸರ ಪಡೆದಿದ್ದ ಆರೋಪ ಪ್ರಕರಣದಲ್ಲಿ ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬೊಮ್ಮನಹಳ್ಳಿ ಬಾಬು ಅವರನ್ನು ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎರಡು ತಿಂಗಳ ಹಿಂದೆ ಚಿನ್ನ ಕಳ್ಳತನ ಪ್ರಕರಣ ನಡೆದಿತ್ತು. ಇದರ ತನಿಖೆ ನಡೆಸಿದ ಪೊಲೀಸರಿಗೆ ಅಟ್ಟಿಕಾ ಬಾಬು ಕಳ್ಳರಿಂದ ಚಿನ್ನದ ಸರ ಪಡೆದಿದ್ದರು ಎಂಬ ಮಾಹಿತಿ ತಿಳಿದಿತ್ತು. ತುಮಕೂರಿನಲ್ಲಿ ಕಳೆದ ಎರಡು ದಿನಗಳ ಹಿಂದಷ್ಟೇ ತುರುವೇಕೆರೆ ಪೊಲೀಸರು ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಬಂಧಿಸಿದ್ದರು. ಆರೋಪಿ ಜಾಮೀನು ಪಡೆದು ಜೈಲಿನಿಂದ ಹೊರಬರುತ್ತಿದ್ದಂತೆ ದೊಡ್ಡಬಳ್ಳಾಪುರ ಪೊಲೀಸರು ಆರೋಪಿ ಅಟ್ಟಿಕಾ ಬಾಬು ಅವರನ್ನು ಬಂಧಿಸಿ ಕರೆತಂದಿದ್ದಾರೆ.