ETV Bharat / state

ತ್ಯಾಜ್ಯಗಳ ನಿಯಂತ್ರಣ, ನಿರ್ವಹಣೆಗೆ ಪ್ರತಿ ತಿಂಗಳು ಜಾಗೃತಿ ಮಾಸಾಚರಣೆ: ಸಚಿವ ಈಶ್ವರ್ ಖಂಡ್ರೆ - Eshwar Khandre

author img

By ETV Bharat Karnataka Team

Published : Jul 3, 2024, 5:33 PM IST

ಪರಿಸರ ಸಂರಕ್ಷಣೆಯಲ್ಲಿ ಎಲ್ಲರ ಪಾತ್ರ ಪ್ರಮುಖವಾಗಿದೆ. ತ್ಯಾಜ್ಯ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಿ, ಅವುಗಳ ವೈಜ್ಞಾನಿಕ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ಮತ್ತು ಇದರ ಬಗ್ಗೆ ಜಾಗೃತಿ ಮೂಡಿಸಲು ವರ್ಷದ 12 ತಿಂಗಳು ವಿವಿಧ ಮಾಸಾಚರಣೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವ ಈಶ್ವರ್ ಖಂಡ್ರೆ ಮಾಹಿತಿ ನೀಡಿದ್ದಾರೆ.

ವನಮಹೋತ್ಸವ ನಿಮಿತ್ತ ಸಿಎಂ ಸಿದ್ದರಾಮಯ್ಯ, ಸಚಿವ ಈಶ್ವರ್ ಖಂಡ್ರೆ ಸಸಿಗೆ ನೀರೆರೆದರು.
ವನಮಹೋತ್ಸವ ನಿಮಿತ್ತ ಸಿಎಂ ಸಿದ್ದರಾಮಯ್ಯ, ಸಚಿವ ಈಶ್ವರ್ ಖಂಡ್ರೆ ಸಸಿಗೆ ನೀರೆರೆದರು. (ETV Bharat)

ಬೆಂಗಳೂರು: ಪ್ಲಾಸ್ಟಿಕ್ ತ್ಯಾಜ್ಯ, ಇ -ತ್ಯಾಜ್ಯ, ಜೈವಿಕ ವೈದ್ಯಕೀಯ ತ್ಯಾಜ್ಯ, ಘನ ತ್ಯಾಜ್ಯ ನಿರ್ವಹಣೆ ಅತಿ ದೊಡ್ಡ ಸವಾಲಾಗಿದ್ದು, ಈ ಎಲ್ಲ ತ್ಯಾಜ್ಯಗಳ ನಿಯಂತ್ರಣ, ನಿರ್ವಹಣೆಗೆ ತಿಂಗಳಿಗೆ ಒಂದರಂತೆ 12 ಜಾಗೃತಿ ಮಾಸಾಚರಣೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವ ಪರಿಸರ ದಿನ ಮತ್ತು ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ವರ್ಷದ 12 ತಿಂಗಳಲ್ಲಿ ಆಯಾ ತಿಂಗಳ ಘೋಷಿತ ತ್ಯಾಜ್ಯಕ್ಕೆ ಹೆಚ್ಚಿನ ಒತ್ತು ನೀಡಿ, ಅವುಗಳ ವೈಜ್ಞಾನಿಕ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು ಮತ್ತು ತಪಾಸಣೆ ನಡೆಸಿ, ದಂಡವನ್ನೂ ವಿಧಿಸಲಾಗುವುದು ಎಂದು ಹೇಳಿದರು.

12ನೇ ಶತಮಾನದಲ್ಲಿಯೇ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು ಒಲೆ ಹೊತ್ತಿ ಉರಿದರೆ ನಿಲ್ಲಬಹುದಲ್ಲದೇ, ಧರೆ ಹೊತ್ತಿ ಉರಿದರೆ ನಿಲ್ಲಬಹುದೇ ಎಂದು ಎಚ್ಚರಿಕೆ ನೀಡಿದ್ದರು. ಇಂದು ಅಕ್ಷರಶಃ ಧರೆ ಹೊತ್ತಿ ಉರಿಯುತ್ತಿದೆ. ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ, ಇತ್ತೀಚೆಗೆ ಅತಿಯಾದ ಬಿಸಿಲ ತಾಪದಿಂದಾಗಿ ಭಾರತದಲ್ಲೂ ಸಾವಿರಾರು ಜನರು ಸೌರಾಘಾತಕ್ಕೆ ಈಡಾದರು, ನೂರಾರು ಜನರು ಮೃತಪಟ್ಟರು, ಹಜ್ ಯಾತ್ರೆಗೆ ಹೋದ ಸಾವಿರಕ್ಕೂ ಹೆಚ್ಚು ಜನರು ಉರಿಬಿಸಿಲ ತಾಪಕ್ಕೆ ಅಸುನೀಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಮರ ಬೆಳೆಸುವ ಮೂಲಕ ತಾಪಮಾನ ಏರಿಕೆಯನ್ನು ತಡೆಯಬೇಕು. ಈ ಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ಭೂ ಪುನಶ್ಚೇತನ, ಬರ ನಿರ್ವಹಣೆ ಮತ್ತು ಬರಡು ಭೂಮಿ ಚೇತರಿಕೆ ಎಂಬುದಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವನಾದ ಬಳಿಕ ರಾಜ್ಯದ ಹಸಿರು ವ್ಯಾಪ್ತಿ ಹೆಚ್ಚಿಸಲು 5 ಕೋಟಿ ಸಸಿ ನೆಡುವ ಘೋಷಣೆ ಮಾಡಿದ್ದೆ. ಇಲಾಖೆ ಸುಮಾರು 5 ಕೋಟಿ 43 ಲಕ್ಷ ಸಸಿ ನೆಟ್ಟು ಗುರಿ ಮೀರಿದ ಸಾಧನೆ ಮಾಡಿದೆ. ಆದರೆ ಹೀಗೆ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕುಳಿದಿದೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದು, ಆಡಿಟ್ ಕೂಡ ಮಾಡಿಸಲಾಗುತ್ತಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಈ ಭೂಮಿಯಲ್ಲಿ ನಮ್ಮಂತೆಯೇ ಸಕಲ ಜೀವ ರಾಶಿಗೂ ಬದುಕುವ ಹಕ್ಕಿದೆ. ಮನುಷ್ಯ ಅವಲಂಬಿಸಿರುವ ಗಾಳಿ, ನೀರು ಹಾಗೂ ಆಶ್ರಯ ನೀಡಿರುವ ಭೂಮಿ ಎಲ್ಲವೂ ಶುದ್ಧವಾಗಿ ಸಮತೋಲನದಿಂದ ಇದ್ದರೆ ಮಾತ್ರ ಬದಕು ಹಸನಾಗಲು ಸಾಧ್ಯ. ಪರಿಸರ ಸಂರಕ್ಷಣೆಯಲ್ಲಿ ಸರ್ಕಾರಿ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು, ಮಕ್ಕಳು, ಜನ ಸಾಮಾನ್ಯರು ಹಾಗೂ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಎಲ್ಲರ ಸಹಕಾರದಿಂದ ಮಾತ್ರ ನಾವು ಪ್ರಕೃತಿ ಪರಿಸರ ಉಳಿಸಲು ಸಾಧ್ಯ ಎಂದರು.

ಇದಕ್ಕೂ ಮುನ್ನ ಕಂಠೀರವ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಪ್ರಸಕ್ತ ಸಾಲಿನ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವ ರೆಹಮಾನ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಯಾವ ತಿಂಗಳು, ಯಾವ ಜಾಗೃತಿ?:

  1. ಜನವರಿ - ಜೈವಿಕ, ವೈದ್ಯಕೀಯ ತ್ಯಾಜ್ಯ ನಿಯಂತ್ರಣ ಮಾಸ
  2. ಫೆಬ್ರವರಿ- ಇ-ತ್ಯಾಜ್ಯ ನಿಯಂತ್ರಣ ಮಾಸ
  3. ಮಾರ್ಚ್ - ಶುದ್ಧ ಜಲ ಸುರಕ್ಷತೆ ಜಾಗೃತಿ ಮಾಸ
  4. ಏಪ್ರಿಲ್ - ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮಾಸ,
  5. ಮೇ - ಜೀವ-ವೈವಿಧ್ಯತೆ ಮತ್ತು ಪರಿಸರ ಜಾಗೃತಿ ಮಾಸ
  6. ಜೂನ್ - ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರಕೃತಿ ಪರಿಸರ ಸಂರಕ್ಷಣೆ ಮಾಸ
  7. ಜುಲೈ - ಘನ ತ್ಯಾಜ್ಯ ಮತ್ತು ಕಟ್ಟಡ ತ್ಯಾಜ್ಯ ನಿರ್ವಹಣೆ ಮಾಸ
  8. ಆಗಸ್ಟ್ - ವಾಯು ಮಾಲಿನ್ಯ ತಡೆ ಕುರಿತ ಜಾಗೃತಿ ಮತ್ತು ನಿಯಂತ್ರಣ ಮಾಸ
  9. ಸೆಪ್ಟೆಂಬರ್ - ಪರಿಸರ ಸ್ನೇಹಿ ಗಣಪತಿ ಪೂಜೆಗೆ ಉತ್ತೇಜನ ಮತ್ತು ಪಿಒಪಿ ಮೂರ್ತಿಗಳ ನಿಯಂತ್ರಣ ಮಾಸ
  10. ಅಕ್ಟೋಬರ್ - ಜಲ ಮಾಲಿನ್ಯ ತಡೆ ಮಾಸಾಚರಣೆ
  11. ನವೆಂಬರ್ - ಪರಿಸರ ಸ್ನೇಹಿ ದೀಪಾವಳಿ ಮತ್ತು ಭಾರಲೋಹ ಹಾಗೂ ಅಪಾಯಕಾರಿ ರಾಸಾಯನಿಕ ಪಟಾಕಿ ನಿಗ್ರಹ ಮಾಸ
  12. ಡಿಸೆಂಬರ್ - ಗೃಹ ಬಳಕೆಯ ಕಲುಷಿತ ನೀರು ನಿಯಂತ್ರಣ, ನಿರ್ವಹಣೆ ಮಾಸಾಚರಣೆ

ಇದನ್ನೂ ಓದಿ: ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಪ್ಲಾಸ್ಟಿಕ್ ತ್ಯಾಜ್ಯ, ಇ -ತ್ಯಾಜ್ಯ, ಜೈವಿಕ ವೈದ್ಯಕೀಯ ತ್ಯಾಜ್ಯ, ಘನ ತ್ಯಾಜ್ಯ ನಿರ್ವಹಣೆ ಅತಿ ದೊಡ್ಡ ಸವಾಲಾಗಿದ್ದು, ಈ ಎಲ್ಲ ತ್ಯಾಜ್ಯಗಳ ನಿಯಂತ್ರಣ, ನಿರ್ವಹಣೆಗೆ ತಿಂಗಳಿಗೆ ಒಂದರಂತೆ 12 ಜಾಗೃತಿ ಮಾಸಾಚರಣೆ ನಡೆಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ. ಖಂಡ್ರೆ ತಿಳಿಸಿದ್ದಾರೆ.

ನಗರದ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವ ಪರಿಸರ ದಿನ ಮತ್ತು ವನಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಸ್ತಾವಿಕವಾಗಿ ಮಾತನಾಡಿದ ಅವರು, ವರ್ಷದ 12 ತಿಂಗಳಲ್ಲಿ ಆಯಾ ತಿಂಗಳ ಘೋಷಿತ ತ್ಯಾಜ್ಯಕ್ಕೆ ಹೆಚ್ಚಿನ ಒತ್ತು ನೀಡಿ, ಅವುಗಳ ವೈಜ್ಞಾನಿಕ ನಿರ್ವಹಣೆ, ನಿಯಂತ್ರಣಕ್ಕೆ ಕ್ರಮ ವಹಿಸಲಾಗುವುದು ಮತ್ತು ತಪಾಸಣೆ ನಡೆಸಿ, ದಂಡವನ್ನೂ ವಿಧಿಸಲಾಗುವುದು ಎಂದು ಹೇಳಿದರು.

12ನೇ ಶತಮಾನದಲ್ಲಿಯೇ ಕರ್ನಾಟಕದ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವಣ್ಣನವರು ಒಲೆ ಹೊತ್ತಿ ಉರಿದರೆ ನಿಲ್ಲಬಹುದಲ್ಲದೇ, ಧರೆ ಹೊತ್ತಿ ಉರಿದರೆ ನಿಲ್ಲಬಹುದೇ ಎಂದು ಎಚ್ಚರಿಕೆ ನೀಡಿದ್ದರು. ಇಂದು ಅಕ್ಷರಶಃ ಧರೆ ಹೊತ್ತಿ ಉರಿಯುತ್ತಿದೆ. ಪ್ರಕೃತಿ ಪರಿಸರ ಉಳಿದರೆ ಮಾತ್ರ ನಾವು ಉಳಿಯಲು ಸಾಧ್ಯ, ಇತ್ತೀಚೆಗೆ ಅತಿಯಾದ ಬಿಸಿಲ ತಾಪದಿಂದಾಗಿ ಭಾರತದಲ್ಲೂ ಸಾವಿರಾರು ಜನರು ಸೌರಾಘಾತಕ್ಕೆ ಈಡಾದರು, ನೂರಾರು ಜನರು ಮೃತಪಟ್ಟರು, ಹಜ್ ಯಾತ್ರೆಗೆ ಹೋದ ಸಾವಿರಕ್ಕೂ ಹೆಚ್ಚು ಜನರು ಉರಿಬಿಸಿಲ ತಾಪಕ್ಕೆ ಅಸುನೀಗಿದ್ದಾರೆ. ಇದನ್ನು ಗಮನದಲ್ಲಿಟ್ಟುಕೊಂಡು ನಾವು ಮರ ಬೆಳೆಸುವ ಮೂಲಕ ತಾಪಮಾನ ಏರಿಕೆಯನ್ನು ತಡೆಯಬೇಕು. ಈ ಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ಭೂ ಪುನಶ್ಚೇತನ, ಬರ ನಿರ್ವಹಣೆ ಮತ್ತು ಬರಡು ಭೂಮಿ ಚೇತರಿಕೆ ಎಂಬುದಾಗಿದ್ದು, ಈ ಬಗ್ಗೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.

ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವನಾದ ಬಳಿಕ ರಾಜ್ಯದ ಹಸಿರು ವ್ಯಾಪ್ತಿ ಹೆಚ್ಚಿಸಲು 5 ಕೋಟಿ ಸಸಿ ನೆಡುವ ಘೋಷಣೆ ಮಾಡಿದ್ದೆ. ಇಲಾಖೆ ಸುಮಾರು 5 ಕೋಟಿ 43 ಲಕ್ಷ ಸಸಿ ನೆಟ್ಟು ಗುರಿ ಮೀರಿದ ಸಾಧನೆ ಮಾಡಿದೆ. ಆದರೆ ಹೀಗೆ ನೆಟ್ಟ ಸಸಿಗಳ ಪೈಕಿ ಎಷ್ಟು ಬದುಕುಳಿದಿದೆ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದ್ದು, ಆಡಿಟ್ ಕೂಡ ಮಾಡಿಸಲಾಗುತ್ತಿದೆ ಎಂದು ಸಚಿವ ಖಂಡ್ರೆ ತಿಳಿಸಿದರು.

ಈ ಭೂಮಿಯಲ್ಲಿ ನಮ್ಮಂತೆಯೇ ಸಕಲ ಜೀವ ರಾಶಿಗೂ ಬದುಕುವ ಹಕ್ಕಿದೆ. ಮನುಷ್ಯ ಅವಲಂಬಿಸಿರುವ ಗಾಳಿ, ನೀರು ಹಾಗೂ ಆಶ್ರಯ ನೀಡಿರುವ ಭೂಮಿ ಎಲ್ಲವೂ ಶುದ್ಧವಾಗಿ ಸಮತೋಲನದಿಂದ ಇದ್ದರೆ ಮಾತ್ರ ಬದಕು ಹಸನಾಗಲು ಸಾಧ್ಯ. ಪರಿಸರ ಸಂರಕ್ಷಣೆಯಲ್ಲಿ ಸರ್ಕಾರಿ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು, ಸಂಘ ಸಂಸ್ಥೆಗಳು, ಮಕ್ಕಳು, ಜನ ಸಾಮಾನ್ಯರು ಹಾಗೂ ಮಾಧ್ಯಮದ ಪಾತ್ರ ಮಹತ್ವದ್ದಾಗಿದ್ದು, ಎಲ್ಲರ ಸಹಕಾರದಿಂದ ಮಾತ್ರ ನಾವು ಪ್ರಕೃತಿ ಪರಿಸರ ಉಳಿಸಲು ಸಾಧ್ಯ ಎಂದರು.

ಇದಕ್ಕೂ ಮುನ್ನ ಕಂಠೀರವ ಒಳಾಂಗಣ ಕ್ರೀಡಾಂಗಣದ ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸಸಿಗಳನ್ನು ನೆಟ್ಟು ನೀರೆರೆಯುವ ಮೂಲಕ ಪ್ರಸಕ್ತ ಸಾಲಿನ ವನಮಹೋತ್ಸವಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಸಚಿವ ರೆಹಮಾನ್ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್ ಹಾಗೂ ಪರಿಸರ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

ಯಾವ ತಿಂಗಳು, ಯಾವ ಜಾಗೃತಿ?:

  1. ಜನವರಿ - ಜೈವಿಕ, ವೈದ್ಯಕೀಯ ತ್ಯಾಜ್ಯ ನಿಯಂತ್ರಣ ಮಾಸ
  2. ಫೆಬ್ರವರಿ- ಇ-ತ್ಯಾಜ್ಯ ನಿಯಂತ್ರಣ ಮಾಸ
  3. ಮಾರ್ಚ್ - ಶುದ್ಧ ಜಲ ಸುರಕ್ಷತೆ ಜಾಗೃತಿ ಮಾಸ
  4. ಏಪ್ರಿಲ್ - ಪ್ಲಾಸ್ಟಿಕ್ ತ್ಯಾಜ್ಯ ನಿಯಂತ್ರಣ ಮಾಸ,
  5. ಮೇ - ಜೀವ-ವೈವಿಧ್ಯತೆ ಮತ್ತು ಪರಿಸರ ಜಾಗೃತಿ ಮಾಸ
  6. ಜೂನ್ - ವಿಶ್ವ ಪರಿಸರ ದಿನಾಚರಣೆ ಮತ್ತು ಪ್ರಕೃತಿ ಪರಿಸರ ಸಂರಕ್ಷಣೆ ಮಾಸ
  7. ಜುಲೈ - ಘನ ತ್ಯಾಜ್ಯ ಮತ್ತು ಕಟ್ಟಡ ತ್ಯಾಜ್ಯ ನಿರ್ವಹಣೆ ಮಾಸ
  8. ಆಗಸ್ಟ್ - ವಾಯು ಮಾಲಿನ್ಯ ತಡೆ ಕುರಿತ ಜಾಗೃತಿ ಮತ್ತು ನಿಯಂತ್ರಣ ಮಾಸ
  9. ಸೆಪ್ಟೆಂಬರ್ - ಪರಿಸರ ಸ್ನೇಹಿ ಗಣಪತಿ ಪೂಜೆಗೆ ಉತ್ತೇಜನ ಮತ್ತು ಪಿಒಪಿ ಮೂರ್ತಿಗಳ ನಿಯಂತ್ರಣ ಮಾಸ
  10. ಅಕ್ಟೋಬರ್ - ಜಲ ಮಾಲಿನ್ಯ ತಡೆ ಮಾಸಾಚರಣೆ
  11. ನವೆಂಬರ್ - ಪರಿಸರ ಸ್ನೇಹಿ ದೀಪಾವಳಿ ಮತ್ತು ಭಾರಲೋಹ ಹಾಗೂ ಅಪಾಯಕಾರಿ ರಾಸಾಯನಿಕ ಪಟಾಕಿ ನಿಗ್ರಹ ಮಾಸ
  12. ಡಿಸೆಂಬರ್ - ಗೃಹ ಬಳಕೆಯ ಕಲುಷಿತ ನೀರು ನಿಯಂತ್ರಣ, ನಿರ್ವಹಣೆ ಮಾಸಾಚರಣೆ

ಇದನ್ನೂ ಓದಿ: ಪರಿಸರದ ಕುರಿತ ಸಂಶೋಧನೆಗಳು ಹಾಗೂ ಸಂಶೋಧನಾ ಕೇಂದ್ರಗಳ ಸ್ಥಾಪನೆ ಅಗತ್ಯ : ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.