ETV Bharat / state

ರಾಜ್ಯದಲ್ಲಿ ಪಕ್ಷ ಸಂಘಟನೆ, ಕಾಂಗ್ರೆಸ್ ಸರ್ಕಾರದ ಹಗರಣಗಳ ಬಗ್ಗೆ ಕೇಂದ್ರದ ವರಿಷ್ಠರಿಗೆ ಬಿ ವೈ ವಿಜಯೇಂದ್ರ ಮಾಹಿತಿ - B Y VIJAYENDRA MEETS AMIT SHAH

author img

By ETV Bharat Karnataka Team

Published : Jul 31, 2024, 6:02 PM IST

ಕಾಂಗ್ರೆಸ್​ ಸರ್ಕಾರದ ಹಗರಣಗಳ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಾಹಿತಿ ನೀಡಿದ್ದಾರೆ.

Amit-shah and b-y-vijayendra
ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ ವಿಜಯೇಂದ್ರ (ETV Bharat)

ನವದೆಹಲಿ/ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು, ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ನೀಡಿದ್ದಾರೆ.

ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು, ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು. ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರು ಪಾದಯಾತ್ರೆಯ ಬಗ್ಗೆ ವರಿಷ್ಠರಿಗೆ ಸಮಗ್ರ ವಿವರ ನೀಡಲು ಬಿ. ವೈ ವಿಜಯೇಂದ್ರ ಅವರು ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದು, ಇಂದು ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆ ಕುರಿತು ಹಾಗೂ ಜೆಡಿಎಸ್ ಬೆಂಬಲದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.

ಮುಡಾದಲ್ಲಿ ನಡೆದಿರುವ ಹಗರಣದ ವಿರುದ್ಧ ಆ. 3 ರಿಂದ ಬಿಜೆಪಿ ನಡೆಸಲಿರುವ ಮೈಸೂರು ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂಬ ವಿಚಾರದ ಬಗ್ಗೆಯೂ ವರಿಷ್ಠರ ಜೊತೆ ವಿಜಯೇಂದ್ರ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ : ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ - ನಷ್ಟದ ಲೆಕ್ಕಾಚಾರವೇನು? - BJP JDS padayatra

ನವದೆಹಲಿ/ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ನವದೆಹಲಿಯಲ್ಲಿ ಭೇಟಿ ಮಾಡಿದ ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ವೈ ವಿಜಯೇಂದ್ರ ಅವರು, ಪಕ್ಷದ ಸಂಘಟನಾತ್ಮಕ ಬೆಳವಣಿಗೆಗಳು ಹಾಗೂ ಕಾಂಗ್ರೆಸ್ ಸರ್ಕಾರದ ಹಗರಣಗಳ ಕುರಿತ ಮಾಹಿತಿ ನೀಡಿದ್ದಾರೆ.

ಸಂಘಟನೆಯ ಕುರಿತು ನಿರಂತರ ಮಾರ್ಗದರ್ಶನ ನೀಡುತ್ತಾ ಬಂದಿರುವ ಅವರು, ಕರ್ನಾಟಕದ ಪ್ರಸ್ತುತ ಬೆಳವಣಿಗೆಯಲ್ಲಿ ಪಕ್ಷ ನಿರ್ವಹಿಸುತ್ತಿರುವ ರೀತಿ-ನೀತಿಗಳ ಕುರಿತು ಮೆಚ್ಚುಗೆ ಸೂಚಿಸಿದರು. ಪಕ್ಷ ಬಲವೃದ್ಧಿಗೆ ಪ್ರೇರಣೆ ತುಂಬುವ ಚೈತನ್ಯಶೀಲ ವ್ಯಕ್ತಿತ್ವದ ಅಮಿತ್ ಶಾ ಅವರ ಇಂದಿನ ಭೇಟಿ ನನ್ನಲ್ಲಿ ಅದಮ್ಯ ಉತ್ಸಾಹ ತುಂಬಿದೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬಿ ವೈ ವಿಜಯೇಂದ್ರ ತಿಳಿಸಿದ್ದಾರೆ.

ಮೈಸೂರು ಪಾದಯಾತ್ರೆಯ ಬಗ್ಗೆ ವರಿಷ್ಠರಿಗೆ ಸಮಗ್ರ ವಿವರ ನೀಡಲು ಬಿ. ವೈ ವಿಜಯೇಂದ್ರ ಅವರು ನಿನ್ನೆ ರಾತ್ರಿಯೇ ದೆಹಲಿಗೆ ತೆರಳಿದ್ದು, ಇಂದು ಅವರು ಗೃಹ ಸಚಿವ ಅಮಿತ್ ಶಾ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ ನಡ್ಡಾ ಅವರನ್ನು ಭೇಟಿ ಮಾಡಿ ಪಾದಯಾತ್ರೆ ಕುರಿತು ಹಾಗೂ ಜೆಡಿಎಸ್ ಬೆಂಬಲದ ಬಗ್ಗೆಯೂ ಚರ್ಚೆ ನಡೆಸಿದ್ದಾರೆ ಎಂಬುದು ತಿಳಿದುಬಂದಿದೆ.

ಮುಡಾದಲ್ಲಿ ನಡೆದಿರುವ ಹಗರಣದ ವಿರುದ್ಧ ಆ. 3 ರಿಂದ ಬಿಜೆಪಿ ನಡೆಸಲಿರುವ ಮೈಸೂರು ಪಾದಯಾತ್ರೆಗೆ ಜೆಡಿಎಸ್ ಬೆಂಬಲ ನೀಡುವುದಿಲ್ಲ ಎಂಬ ವಿಚಾರದ ಬಗ್ಗೆಯೂ ವರಿಷ್ಠರ ಜೊತೆ ವಿಜಯೇಂದ್ರ ಚರ್ಚೆ ನಡೆಸಿದ್ದಾರೆ.

ಇದನ್ನೂ ಓದಿ : ಮತ್ತೆ ಪಾದಯಾತ್ರೆ ರಾಜಕೀಯದ ಸದ್ದು: ಪ್ರಮುಖ ಪಾದಯಾತ್ರೆಗಳ ಹಿಂದಿರುವ ರಾಜಕೀಯ ಲಾಭ - ನಷ್ಟದ ಲೆಕ್ಕಾಚಾರವೇನು? - BJP JDS padayatra

ETV Bharat Logo

Copyright © 2024 Ushodaya Enterprises Pvt. Ltd., All Rights Reserved.