ETV Bharat / state

27ಕ್ಕೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ.. ಲೋಕಸಭೆ ಚುನಾವಣೆ ಸಿದ್ಧತೆ ಕುರಿತು ಚರ್ಚೆ: ಪ್ರೀತಂ ಗೌಡ

author img

By ETV Bharat Karnataka Team

Published : Jan 25, 2024, 10:45 PM IST

ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆ ಜನವರಿ 27ರಂದು ಬೆಂಗಳೂರಿನ ಗಾಯತ್ರಿ ವಿಹಾರದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದ್ದಾರೆ.

BJP leader Pritam Gowda spoke at the press conference.
ಬಿಜೆಪಿ ಮುಖಂಡ ಪ್ರೀತಂ ಗೌಡ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಬೆಂಗಳೂರು: ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಜನವರಿ 27ರಂದು ನಗರದ ಮೈದಾನದಲ್ಲಿರುವ ಗಾಯತ್ರಿ ವಿಹಾರದಲ್ಲಿ ನಡೆಯಲಿದ್ದು, ಲೋಕಸಭಾ ಚುನಾವಣಾ ಸಿದ್ದತೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಲಿದೆ. ಶಾಸಕರು, ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಅಪೇಕ್ಷಿತರು ಈ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.

ಆ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಘಟಕವು 10 ದಿನಗಳಿಂದ ಪೂರ್ವಭಾವಿ ಸಭೆ ನಡೆಸುತ್ತಿದೆ. ಬೆಂಗಳೂರಿನ 3 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶಾಸಕ ಕೆ.ಸಿ. ರಾಮಮೂರ್ತಿ, ಮಾಜಿ ಉಪಮೇಯರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಶಾಸಕರ ಮಾರ್ಗದರ್ಶನದಲ್ಲಿ ಯಶಸ್ಸಿಗೆ ಪೂರ್ವತಯಾರಿ ನಡೆದಿದೆ ಎಂದು ತಿಳಿಸಿದರು.

25ಕ್ಕೂ ಹೆಚ್ಚು ವೃತ್ತಗಳಲ್ಲಿ ಪ್ರಮುಖರಿಗೆ ಸ್ವಾಗತ ಕೋರುತ್ತಿದ್ದಾರೆ. ಅಪೇಕ್ಷಿತರಿಗೆ ವ್ಯವಸ್ಥಿತವಾಗಿ ವಾಹನ ವ್ಯವಸ್ಥೆ, ಕೊಠಡಿ ವ್ಯವಸ್ಥೆ ಸೇರಿ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ರಾಜ್ಯ ಸರಕಾರದ ಧೋರಣೆ, ಹಿಂದೂ ವಿರೋಧಿ ನೀತಿ, ಅಭಿವೃದ್ಧಿ ಕುಂಠಿತವಾದುದನ್ನು ಚರ್ಚೆ ಮಾಡಲಾಗುವುದು. ಅನೇಕ ವಿಷಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಇದೇ ವೇಳೆ ಅವರು ಸ್ಪಷ್ಟ ಪಡಿಸಿದರು.

ಕೇಂದ್ರದ ಜನಪರ ಯೋಜನೆಗಳ ಚರ್ಚೆ ನಡೆಯಲಿದೆ. ಪ್ರಭು ಶ್ರೀರಾಮಚಂದ್ರನ ಕುರಿತ ಪ್ರದರ್ಶಿನಿ ವ್ಯವಸ್ಥೆಯನ್ನು ಮಾಡಲಾಗಿದೆ. ಡಿಜಿಟಲ್ ಎಂಟ್ರಿ ಮೂಲಕ ನೋಂದಣಿ ನಡೆಯಲಿದೆ. ಅಪೇಕ್ಷಿತರಿಗೆ ಹೊಸ ಅನುಭವ ಆಗುವ ಮಾದರಿಯಲ್ಲಿ ಅಚ್ಚುಕಟ್ಟಾಗಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡ ಸಂಘಟನಾತ್ಮಕ ಸಭೆ ಇದಾಗಲಿದೆ ಎಂದು ಪ್ರೀತಂಗೌಡ ಮಾಹಿತಿ ನೀಡಿದರು.

ಗ್ರಾಪಂ ಮಟ್ಟದಿಂದ ಆರಂಭಿಸಿ ವಿಧಾನಸೌಧದಲ್ಲಿ ಆಡಳಿತ ನಡೆಸಿರುವ ಅನೇಕ ಹಿರಿಯರಿಗೆ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿ ಆಗಬೇಕೆಂಬ ಆಶಯವಿದೆ. ಅಂಥವರು ಸಹಸ್ರಾರು ಸಂಖ್ಯೆಯಲ್ಲಿ ಇದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿಗೆ ಬರುವವರಿಗೆ ಪಕ್ಷ ಮುಕ್ತ ಆಹ್ವಾನ ನೀಡಿದೆ. ಅನೇಕರು ಈಗಾಗಲೇ ಪಕ್ಷ ಸೇರಿದ್ದಾರೆ. ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿ ಖಂಡಿಸಿ ಸ್ಥಳೀಯವಾಗಿ, ಗ್ರಾಮ, ನಗರ ಮಟ್ಟಗಳಲ್ಲಿ ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಕೆ.ಸಿ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಇದನ್ನೂಓದಿ:ಬಿಹಾರ ಸಿಎಂ ನಿತೀಶ್​ಕುಮಾರ್​ ಮತ್ತೆ ಎನ್​ಡಿಎ ಸೇರುವ ವದಂತಿ: ವಿಪಕ್ಷಗಳ I.N.D.I.A ಕೂಟದಲ್ಲಿ ತಳಮಳ

ಬೆಂಗಳೂರು: ಬಿ.ವೈ.ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿಯ ಪ್ರಥಮ ರಾಜ್ಯ ಕಾರ್ಯಕಾರಿಣಿ ಸಭೆಯು ಜನವರಿ 27ರಂದು ನಗರದ ಮೈದಾನದಲ್ಲಿರುವ ಗಾಯತ್ರಿ ವಿಹಾರದಲ್ಲಿ ನಡೆಯಲಿದ್ದು, ಲೋಕಸಭಾ ಚುನಾವಣಾ ಸಿದ್ದತೆ ಕುರಿತು ಮಹತ್ವದ ಸಮಾಲೋಚನೆ ನಡೆಸಲಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ತಿಳಿಸಿದರು.

ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕಾರಿಣಿ ಸಭೆಯಲ್ಲಿ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ಪಕ್ಷದ ಚಟುವಟಿಕೆ ಜೊತೆಗೆ ನಮ್ಮ ಮುಂದಿನ ಕಾರ್ಯಯೋಜನೆ ಕುರಿತು ಚರ್ಚೆ ನಡೆಯಲಿದೆ. ಶಾಸಕರು, ಸಂಸದರು, ಮಾಜಿ ಶಾಸಕರು, ಪರಾಜಿತ ಅಭ್ಯರ್ಥಿಗಳು ಸೇರಿದಂತೆ 900ಕ್ಕೂ ಹೆಚ್ಚು ಅಪೇಕ್ಷಿತರು ಈ ಕಾರ್ಯಕಾರಿಣಿ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಹೇಳಿದರು.

ಆ ನಿಟ್ಟಿನಲ್ಲಿ ಬಿಜೆಪಿ ರಾಜ್ಯ ಘಟಕವು 10 ದಿನಗಳಿಂದ ಪೂರ್ವಭಾವಿ ಸಭೆ ನಡೆಸುತ್ತಿದೆ. ಬೆಂಗಳೂರಿನ 3 ಸಂಘಟನಾತ್ಮಕ ಜಿಲ್ಲೆಗಳ ಅಧ್ಯಕ್ಷ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಶಾಸಕ ಕೆ.ಸಿ. ರಾಮಮೂರ್ತಿ, ಮಾಜಿ ಉಪಮೇಯರ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಪದಾಧಿಕಾರಿಗಳು, ಶಾಸಕರ ಮಾರ್ಗದರ್ಶನದಲ್ಲಿ ಯಶಸ್ಸಿಗೆ ಪೂರ್ವತಯಾರಿ ನಡೆದಿದೆ ಎಂದು ತಿಳಿಸಿದರು.

25ಕ್ಕೂ ಹೆಚ್ಚು ವೃತ್ತಗಳಲ್ಲಿ ಪ್ರಮುಖರಿಗೆ ಸ್ವಾಗತ ಕೋರುತ್ತಿದ್ದಾರೆ. ಅಪೇಕ್ಷಿತರಿಗೆ ವ್ಯವಸ್ಥಿತವಾಗಿ ವಾಹನ ವ್ಯವಸ್ಥೆ, ಕೊಠಡಿ ವ್ಯವಸ್ಥೆ ಸೇರಿ ಎಲ್ಲ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದಾರೆ. ರಾಜ್ಯ ಸರಕಾರದ ಧೋರಣೆ, ಹಿಂದೂ ವಿರೋಧಿ ನೀತಿ, ಅಭಿವೃದ್ಧಿ ಕುಂಠಿತವಾದುದನ್ನು ಚರ್ಚೆ ಮಾಡಲಾಗುವುದು. ಅನೇಕ ವಿಷಯಗಳನ್ನು ಚರ್ಚಿಸಿ ನಿರ್ಣಯ ಕೈಗೊಳ್ಳುವುದಾಗಿ ಇದೇ ವೇಳೆ ಅವರು ಸ್ಪಷ್ಟ ಪಡಿಸಿದರು.

ಕೇಂದ್ರದ ಜನಪರ ಯೋಜನೆಗಳ ಚರ್ಚೆ ನಡೆಯಲಿದೆ. ಪ್ರಭು ಶ್ರೀರಾಮಚಂದ್ರನ ಕುರಿತ ಪ್ರದರ್ಶಿನಿ ವ್ಯವಸ್ಥೆಯನ್ನು ಮಾಡಲಾಗಿದೆ. ಡಿಜಿಟಲ್ ಎಂಟ್ರಿ ಮೂಲಕ ನೋಂದಣಿ ನಡೆಯಲಿದೆ. ಅಪೇಕ್ಷಿತರಿಗೆ ಹೊಸ ಅನುಭವ ಆಗುವ ಮಾದರಿಯಲ್ಲಿ ಅಚ್ಚುಕಟ್ಟಾಗಿ ಈ ಕಾರ್ಯಕಾರಿಣಿ ನಡೆಯಲಿದೆ. ಮುಂದಿನ ಲೋಕಸಭಾ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡ ಸಂಘಟನಾತ್ಮಕ ಸಭೆ ಇದಾಗಲಿದೆ ಎಂದು ಪ್ರೀತಂಗೌಡ ಮಾಹಿತಿ ನೀಡಿದರು.

ಗ್ರಾಪಂ ಮಟ್ಟದಿಂದ ಆರಂಭಿಸಿ ವಿಧಾನಸೌಧದಲ್ಲಿ ಆಡಳಿತ ನಡೆಸಿರುವ ಅನೇಕ ಹಿರಿಯರಿಗೆ ನರೇಂದ್ರ ಮೋದಿಯವರು 3ನೇ ಬಾರಿ ಪ್ರಧಾನಿ ಆಗಬೇಕೆಂಬ ಆಶಯವಿದೆ. ಅಂಥವರು ಸಹಸ್ರಾರು ಸಂಖ್ಯೆಯಲ್ಲಿ ಇದ್ದಾರೆ. ಆ ನಿಟ್ಟಿನಲ್ಲಿ ಬಿಜೆಪಿಗೆ ಬರುವವರಿಗೆ ಪಕ್ಷ ಮುಕ್ತ ಆಹ್ವಾನ ನೀಡಿದೆ. ಅನೇಕರು ಈಗಾಗಲೇ ಪಕ್ಷ ಸೇರಿದ್ದಾರೆ. ಕಾಂಗ್ರೆಸ್‍ನ ಹಿಂದೂ ವಿರೋಧಿ ನೀತಿ ಖಂಡಿಸಿ ಸ್ಥಳೀಯವಾಗಿ, ಗ್ರಾಮ, ನಗರ ಮಟ್ಟಗಳಲ್ಲಿ ಬಿಜೆಪಿ ಕಡೆ ಮುಖ ಮಾಡಿದ್ದಾರೆ ಎಂದು ತಿಳಿಸಿದರು.

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಕೆ.ಸಿ. ರಾಮಮೂರ್ತಿ, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್. ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ ಅವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.

ಇದನ್ನೂಓದಿ:ಬಿಹಾರ ಸಿಎಂ ನಿತೀಶ್​ಕುಮಾರ್​ ಮತ್ತೆ ಎನ್​ಡಿಎ ಸೇರುವ ವದಂತಿ: ವಿಪಕ್ಷಗಳ I.N.D.I.A ಕೂಟದಲ್ಲಿ ತಳಮಳ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.