ETV Bharat / state

ಸಿದ್ಧಗಂಗಾ ಮಠದ ಶಿವಕುಮಾರ ಶ್ರೀಗಳಿಗೂ ಮರಣೋತ್ತರ ಭಾರತ ರತ್ನ ನೀಡಿ: ರಣದೀಪ್‌ ಸುರ್ಜೇವಾಲಾ

author img

By ETV Bharat Karnataka Team

Published : Feb 3, 2024, 8:31 PM IST

ಶ್ರೀ ಶಿವಕುಮಾರ ಸ್ವಾಮೀಜಿ ಅವರು ಲಕ್ಷಾಂತರ ಮಂದಿಗೆ ಅನ್ನ, ಶಿಕ್ಷಣ ನೀಡಿ ಆಸರೆಯಾಗಿ ನಿಂತ ಮಹಾತ್ಮರು ಎನಿಸಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿ. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀಗಳಿಗೆ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

Randeep Surjewala
ರಣದೀಪ್‌ ಸುರ್ಜೇವಾಲ

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ನಿಜಕ್ಕೂ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಈ ಹಿಂದೆಯೇ ಅವರಿಗೆ ಈ ಗೌರವ ನೀಡಬೇಕಿತ್ತು ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಶ್ರೀ ಶಿವಕುಮಾರ ಸ್ವಾಮೀಜಿ ಅವರು ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಎನಿಸಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿ ಆಗಿದ್ದವರು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಿಂಗೈಕ್ಯ ಶ್ರೀಗಳಿಗೆ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

ಶಿವಕುಮಾರ ಸ್ವಾಮೀಜಿ ಶತಮಾನ ಕಂಡ ಅಪರೂಪದ ಶರಣರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡಿದವರು. ಯಾವುದೇ ಜಾತಿ, ಧರ್ಮ ಭೇದ ಮಾಡಿದವರಲ್ಲ. ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರು ಗಳಿಸುವಂತೆ ಮಾಡಿದವರು ಅವರು ಎಂದು ವಿವರಣೆ ನೀಡಿದ್ದಾರೆ.

ದೇವರಿಗೆ ಸಿಗಲಿ ಗೌರವ: ಶತಾಯುಷಿ ಆಗಿದ್ದ ಅವರು ನಡೆದಾಡುವ ದೇವರು ಎಂದೇ ಕರೆಯಲ್ಪಡುತ್ತಿದ್ದರು. ಜನರು ಶಿವಕುಮಾರ ಸ್ವಾಮೀಜಿಯಲ್ಲಿ ದೇವರನ್ನು ಕಂಡಿದ್ದಾರೆ. ದೇವರು ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ ಈ ನಮ್ಮ ಸ್ವಾಮೀಜಿ ಎಲ್ಲವನ್ನೂ ಮಾಡಿ ತೋರಿಸಿದ್ದಾರೆ. ಆರಂಭದಲ್ಲಿ ಶ್ರೀಮಠದ ಆದಾಯ ಕಡಿಮೆ ಇದ್ದಾಗಲೂ ಕುಗ್ಗದ ಶ್ರೀಗಳು, ಭಕ್ತರ ಮನೆ ಮನೆಗೆ ತೆರಳಿ ದವಸ-ಧಾನ್ಯಗಳನ್ನು ಭಿಕ್ಷೆ ಎತ್ತಿ ಮಠವನ್ನು ನಿರ್ವಹಿಸಿದರು. ಮಠದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದರು. ಇಂಥವರು ಸಿಗುವುದೇ ಅಪರೂಪ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ.

ಇದು ಆರೂವರೆ ಕೋಟಿ ಕನ್ನಡಿಗರ ಭಾವನೆ: ನಿಜವಾಗಿಯೂ ಭಾರತದ ಅಮೂಲ್ಯ ರತ್ನ, ಕರ್ನಾಟಕದ ಈ ಮಹಾನ್‌ ಪುರುಷ, ಅವತಾರ ಪುರುಷರಾಗಿದ್ದ ಶಿವಕುಮಾರ್‌ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎನ್ನುವುದು ನನ್ನ ಭಾವನೆಯಾಗಿದೆ. ಇದು ಆರೂವರೆ ಕೋಟಿ ಕನ್ನಡಿಗರ ಅಭಿಮತವೂ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕು ಎಂದಿದ್ದೆ ಆದ್ರೆ ಕೊಡಲಿಲ್ಲ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಸಿದ್ಧಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರಿಗೂ ನಿಜಕ್ಕೂ ಮರಣೋತ್ತರ ಭಾರತ ರತ್ನ ಸಿಗಬೇಕು. ಈ ಗೌರವಕ್ಕೆ ಅವರಂತಹ ಅರ್ಹರು ಮತ್ತೊಬ್ಬರಿಲ್ಲ. ಈ ಹಿಂದೆಯೇ ಅವರಿಗೆ ಈ ಗೌರವ ನೀಡಬೇಕಿತ್ತು ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಹೇಳಿದ್ದಾರೆ.

ಈ ಕುರಿತು ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಶ್ರೀ ಶಿವಕುಮಾರ ಸ್ವಾಮೀಜಿ ಅವರು ಅನ್ನ, ಶಿಕ್ಷಣ ನೀಡಿ ಲಕ್ಷಾಂತರ ಮಂದಿಗೆ ಆಸರೆಯಾಗಿ ನಿಂತ ಮಹಾತ್ಮರು ಎನಿಸಿದ್ದಾರೆ. ಸಿದ್ಧಗಂಗಾ ಶ್ರೀಗಳು ಇಡೀ ದೇಶಕ್ಕೇ ಮಾದರಿ ಆಗಿದ್ದವರು. ಈ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಲಿಂಗೈಕ್ಯ ಶ್ರೀಗಳಿಗೆ ಆದ್ಯತೆ ನೀಡಬೇಕು ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸಿಂಗ್‌ ಸುರ್ಜೇವಾಲಾ ಒತ್ತಾಯಿಸಿದ್ದಾರೆ.

ಶಿವಕುಮಾರ ಸ್ವಾಮೀಜಿ ಶತಮಾನ ಕಂಡ ಅಪರೂಪದ ಶರಣರು: ಸಿದ್ಧಗಂಗಾ ಮಠದ ಶಿವಕುಮಾರ ಸ್ವಾಮೀಜಿಯವರು ಈ ಶತಮಾನ ಕಂಡ ಅಪರೂಪದ ಶರಣರಾಗಿದ್ದವರು. ಶ್ರೀಗಳು ಅನ್ನ, ಅಕ್ಷರ ಮತ್ತು ಜ್ಞಾನ ದಾಸೋಹ ಮೂಲಕ ತ್ರಿವಿಧ ದಾಸೋಹವನ್ನು ಯಾವುದೇ ಪ್ರತಿಫಲಾಪೇಕ್ಷೆ ಇಲ್ಲದೇ ಮಾಡಿದವರು. ಯಾವುದೇ ಜಾತಿ, ಧರ್ಮ ಭೇದ ಮಾಡಿದವರಲ್ಲ. ಎಲ್ಲರೂ ಒಂದೇ ಎಂಬ ರೀತಿಯಲ್ಲಿ ಸಹಾಯ ಬೇಡಿ ಬಂದ ಲಕ್ಷಾಂತರ ಮಕ್ಕಳಿಗೆ ಉಚಿತ ಶಿಕ್ಷಣ, ವಸತಿ, ಆಹಾರ ನೀಡಿ ಸಮಾಜದಲ್ಲಿ ಒಂದು ಉತ್ತಮ ಸ್ಥಾನವನ್ನು ಹಾಗೂ ಹೆಸರು ಗಳಿಸುವಂತೆ ಮಾಡಿದವರು ಅವರು ಎಂದು ವಿವರಣೆ ನೀಡಿದ್ದಾರೆ.

ದೇವರಿಗೆ ಸಿಗಲಿ ಗೌರವ: ಶತಾಯುಷಿ ಆಗಿದ್ದ ಅವರು ನಡೆದಾಡುವ ದೇವರು ಎಂದೇ ಕರೆಯಲ್ಪಡುತ್ತಿದ್ದರು. ಜನರು ಶಿವಕುಮಾರ ಸ್ವಾಮೀಜಿಯಲ್ಲಿ ದೇವರನ್ನು ಕಂಡಿದ್ದಾರೆ. ದೇವರು ಎಲ್ಲವನ್ನೂ ಮಾಡಲು ಸಾಧ್ಯವಿಲ್ಲ. ಆದರೆ ಈ ನಮ್ಮ ಸ್ವಾಮೀಜಿ ಎಲ್ಲವನ್ನೂ ಮಾಡಿ ತೋರಿಸಿದ್ದಾರೆ. ಆರಂಭದಲ್ಲಿ ಶ್ರೀಮಠದ ಆದಾಯ ಕಡಿಮೆ ಇದ್ದಾಗಲೂ ಕುಗ್ಗದ ಶ್ರೀಗಳು, ಭಕ್ತರ ಮನೆ ಮನೆಗೆ ತೆರಳಿ ದವಸ-ಧಾನ್ಯಗಳನ್ನು ಭಿಕ್ಷೆ ಎತ್ತಿ ಮಠವನ್ನು ನಿರ್ವಹಿಸಿದರು. ಮಠದ ಶಿಕ್ಷಣ ಸಂಸ್ಥೆಯನ್ನು ಕಟ್ಟಿ ಬೆಳೆಸಿದರು. ಇಂಥವರು ಸಿಗುವುದೇ ಅಪರೂಪ ಎಂದು ರಣದೀಪ್‌ ಸಿಂಗ್‌ ಸುರ್ಜೇವಾಲಾ ಅಭಿಪ್ರಾಯಪಟ್ಟಿದ್ದಾರೆ.

ಇದು ಆರೂವರೆ ಕೋಟಿ ಕನ್ನಡಿಗರ ಭಾವನೆ: ನಿಜವಾಗಿಯೂ ಭಾರತದ ಅಮೂಲ್ಯ ರತ್ನ, ಕರ್ನಾಟಕದ ಈ ಮಹಾನ್‌ ಪುರುಷ, ಅವತಾರ ಪುರುಷರಾಗಿದ್ದ ಶಿವಕುಮಾರ್‌ ಶ್ರೀಗಳಿಗೆ ಕೇಂದ್ರ ಸರ್ಕಾರವು ಮರಣೋತ್ತರ ಭಾರತ ರತ್ನ ಪ್ರಶಸ್ತಿಯನ್ನು ನೀಡಿ ಗೌರವಿಸುವುದು ಆದ್ಯ ಕರ್ತವ್ಯವಾಗಿದೆ ಎನ್ನುವುದು ನನ್ನ ಭಾವನೆಯಾಗಿದೆ. ಇದು ಆರೂವರೆ ಕೋಟಿ ಕನ್ನಡಿಗರ ಅಭಿಮತವೂ ಆಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಶಿವಕುಮಾರ್ ಸ್ವಾಮೀಜಿಗೆ ಭಾರತ ರತ್ನ ಕೊಡಬೇಕು ಎಂದಿದ್ದೆ ಆದ್ರೆ ಕೊಡಲಿಲ್ಲ: ಸಿಎಂ ಸಿದ್ದರಾಮಯ್ಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.