ETV Bharat / state

ಜೆಡಿಎಸ್​ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ, ಹೆಚ್​ಡಿಕೆ ಟಿಕೆಟ್ ತ್ಯಾಗ ಮಾಡುವಂತೆ ಮನವಿ ಮಾಡ್ತೇವಿ: ಯತ್ನಾಳ್​ ​

ಹೆಚ್​​ಡಿಕೆ ಅವರ ಸಹಾಯ ನಮಗೆ ಬೇಕು. ನಮ್ಮ ಶಕ್ತಿ ಕುಮಾರಸ್ವಾಮಿ ಅವರಿಗೆ ಬೇಕು. ಉಪಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದು ಮನವಿ ಮಾಡುತ್ತೇವೆ ಎಂದು ಶಾಸಕ ಬಸನಗೌಡ ಯತ್ನಾಳ್​ ಹೇಳಿದ್ದಾರೆ.

author img

By ETV Bharat Karnataka Team

Published : 2 hours ago

ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ (ETV Bharat)

ಹುಬ್ಬಳ್ಳಿ: "ಜೆಡಿಎಸ್​ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಹೆಚ್.ಡಿ. ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು" ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, "ಸಿ.ಪಿ. ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್​ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಹಾಯ ನಮಗೆ ಬೇಕು. ನಮ್ಮ ಶಕ್ತಿ ಕುಮಾರಸ್ವಾಮಿ ಅವರಿಗೆ ಬೇಕು. ಕುಮಾರಸ್ವಾಮಿ ಬಂದಿರುವುದರಿಂದ ನಮಗೆ ಲೋಕಸಭೆಯಲ್ಲಿ ಅನುಕೂಲ ಆಗಿದೆ. ಜೆಡಿಎಸ್​ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಎರಡು ಕಡೆಯವರಿಗೂ ಲಾಭ ಆಗಿದೆ. ಉಪಚುನಾವಣೆಯಲ್ಲಿ ಟಿಕೆಟ್​ನ್ನು ನಮ್ಮ ಪಕ್ಷದ ಕಾರ್ಯಕರ್ತರಿಗೆ ಕೊಡಬೇಕು ಅನ್ನೋದು ಮುಖ್ಯ. ಹೆಚ್​.ಡಿ. ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದು ಮನವಿ ಮಾಡುತ್ತೇವೆ" ಎಂದರು.

ಶಾಸಕ ಬಸನಗೌಡ ಯತ್ನಾಳ್​ (ETV Bharat)

ಶಿಗ್ಗಾಂವಿ ಟಿಕೆಟ್​ ಬಸವರಾಜ್​ ಬೊಮ್ಮಾಯಿ ಮಗನಿಗೆ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, "ಬಸವರಾಜ ಬೊಮ್ಮಾಯಿ ಅವರನ್ನು ಯಾಕೆ ಎಳೆಯುತ್ತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್​ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನು ಯಾಕೆ ಬಲಿ ಪಶು ಮಾಡುತ್ತೀರಿ? ಎಲ್ಲರಿಗೂ ಕೊಟ್ಟ ಮೇಲೆ ಅವರು ತಮ್ಮ ಮಗನಿಗೆ ಕೇಳಿದ್ದಾರೆ. ನಮ್ಮ ಪಕ್ಷದ ಹಿರಿಯರು ನಿರ್ಣಯ ಮಾಡುತ್ತಾರೆ" ಎಂದು ತಿಳಿಸಿದರು.

"ಒಂದು ಕಪ್ಪು ಚುಕ್ಕೆ ಇಲ್ಲ ಎಂದಿದ್ದ ಸಿದ್ದರಾಮಯ್ಯ ಅವರು ಈಗ ಮುಡಾ ಹಗರಣ ಯಾಕೆ ಮಾಡಿದ್ರು? ಆವಾಗಲೇ ಕೊಟ್ಟಿದ್ದರೆ ಮುಗಿದು ಬಿಡುತ್ತಿತ್ತು. ನೈತಿಕ ಹೊಣೆ ಹೊತ್ತು, ರಾಜೀನಾಮೆ ಕೊಟ್ಟು ಮುಕ್ತ ಆಗಬೇಕು" ಎಂದು ಆಗ್ರಹಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣ: "ಕೆಜೆ ಹಳ್ಳಿ, ಡಿಜೆ ಹಳ್ಳಿ ನಂತರ ಹುಬ್ಬಳ್ಳಿ ಗಲಭೆ ಬಹಳ ಗಂಭೀರವಾದದ್ದು. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಪ್ರಕರಣವನ್ನು ಹಿಂಪಡೆಯಬಾರದು. ಹಾಗೇನಾದರೂ ಮಾಡಿದರೆ ನಾವು ಹೈಕೋರ್ಟ್ ಮೆಟ್ಟಿಲು ಹತ್ತುತ್ತೇವೆ" ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಎನ್​ಡಿಎಯಿಂದ ಕಾರ್ಯಕರ್ತನಿಗೆ ಅವಕಾಶ ಕೊಟ್ಟರೆ ಕ್ಷೇತ್ರದ ಜನತೆಗಾಗಿ ನಮ್ಮ ಸಹಕಾರ: ನಿಖಿಲ್​ ಕುಮಾರಸ್ವಾಮಿ

ಹುಬ್ಬಳ್ಳಿ: "ಜೆಡಿಎಸ್​ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಹೆಚ್.ಡಿ. ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು" ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, "ಸಿ.ಪಿ. ಯೋಗೇಶ್ವರ್​ಗೆ ಚನ್ನಪಟ್ಟಣ ಟಿಕೆಟ್​ ವಿಚಾರವಾಗಿ ಹೆಚ್.ಡಿ. ಕುಮಾರಸ್ವಾಮಿ ಅವರ ಸಹಾಯ ನಮಗೆ ಬೇಕು. ನಮ್ಮ ಶಕ್ತಿ ಕುಮಾರಸ್ವಾಮಿ ಅವರಿಗೆ ಬೇಕು. ಕುಮಾರಸ್ವಾಮಿ ಬಂದಿರುವುದರಿಂದ ನಮಗೆ ಲೋಕಸಭೆಯಲ್ಲಿ ಅನುಕೂಲ ಆಗಿದೆ. ಜೆಡಿಎಸ್​ಗೆ ನಾವು ಪುನರ್ಜನ್ಮ ಕೊಟ್ಟಿದ್ದೇವೆ. ಎರಡು ಕಡೆಯವರಿಗೂ ಲಾಭ ಆಗಿದೆ. ಉಪಚುನಾವಣೆಯಲ್ಲಿ ಟಿಕೆಟ್​ನ್ನು ನಮ್ಮ ಪಕ್ಷದ ಕಾರ್ಯಕರ್ತರಿಗೆ ಕೊಡಬೇಕು ಅನ್ನೋದು ಮುಖ್ಯ. ಹೆಚ್​.ಡಿ. ಕುಮಾರಸ್ವಾಮಿ ಅವರು ಟಿಕೆಟ್ ತ್ಯಾಗ ಮಾಡಬೇಕು ಎಂದು ಮನವಿ ಮಾಡುತ್ತೇವೆ" ಎಂದರು.

ಶಾಸಕ ಬಸನಗೌಡ ಯತ್ನಾಳ್​ (ETV Bharat)

ಶಿಗ್ಗಾಂವಿ ಟಿಕೆಟ್​ ಬಸವರಾಜ್​ ಬೊಮ್ಮಾಯಿ ಮಗನಿಗೆ ನೀಡುವ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಅವರು, "ಬಸವರಾಜ ಬೊಮ್ಮಾಯಿ ಅವರನ್ನು ಯಾಕೆ ಎಳೆಯುತ್ತೀರಿ, ಅವರದ್ದೇನು ತಪ್ಪಿಲ್ಲ. ಕರ್ನಾಟಕದಲ್ಲಿ ನಂಬರ್​ 1 ಇದ್ದವರಿಂದ ಇದು ಪಾಲನೆ ಆಗಬೇಕು. ಬೊಮ್ಮಾಯಿ ಅವರನ್ನು ಯಾಕೆ ಬಲಿ ಪಶು ಮಾಡುತ್ತೀರಿ? ಎಲ್ಲರಿಗೂ ಕೊಟ್ಟ ಮೇಲೆ ಅವರು ತಮ್ಮ ಮಗನಿಗೆ ಕೇಳಿದ್ದಾರೆ. ನಮ್ಮ ಪಕ್ಷದ ಹಿರಿಯರು ನಿರ್ಣಯ ಮಾಡುತ್ತಾರೆ" ಎಂದು ತಿಳಿಸಿದರು.

"ಒಂದು ಕಪ್ಪು ಚುಕ್ಕೆ ಇಲ್ಲ ಎಂದಿದ್ದ ಸಿದ್ದರಾಮಯ್ಯ ಅವರು ಈಗ ಮುಡಾ ಹಗರಣ ಯಾಕೆ ಮಾಡಿದ್ರು? ಆವಾಗಲೇ ಕೊಟ್ಟಿದ್ದರೆ ಮುಗಿದು ಬಿಡುತ್ತಿತ್ತು. ನೈತಿಕ ಹೊಣೆ ಹೊತ್ತು, ರಾಜೀನಾಮೆ ಕೊಟ್ಟು ಮುಕ್ತ ಆಗಬೇಕು" ಎಂದು ಆಗ್ರಹಿಸಿದರು.

ಹುಬ್ಬಳ್ಳಿ ಗಲಭೆ ಪ್ರಕರಣ: "ಕೆಜೆ ಹಳ್ಳಿ, ಡಿಜೆ ಹಳ್ಳಿ ನಂತರ ಹುಬ್ಬಳ್ಳಿ ಗಲಭೆ ಬಹಳ ಗಂಭೀರವಾದದ್ದು. ಸರ್ಕಾರಕ್ಕೆ ಮಾನ ಮರ್ಯಾದೆ ಇದ್ದರೆ ಪ್ರಕರಣವನ್ನು ಹಿಂಪಡೆಯಬಾರದು. ಹಾಗೇನಾದರೂ ಮಾಡಿದರೆ ನಾವು ಹೈಕೋರ್ಟ್ ಮೆಟ್ಟಿಲು ಹತ್ತುತ್ತೇವೆ" ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಎನ್​ಡಿಎಯಿಂದ ಕಾರ್ಯಕರ್ತನಿಗೆ ಅವಕಾಶ ಕೊಟ್ಟರೆ ಕ್ಷೇತ್ರದ ಜನತೆಗಾಗಿ ನಮ್ಮ ಸಹಕಾರ: ನಿಖಿಲ್​ ಕುಮಾರಸ್ವಾಮಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.