ETV Bharat / state

ರಾಜಕೀಯ ಬಿಟ್ಟು ಕೇಂದ್ರಕ್ಕೆ ನಿಯೋಗ ಕೊಂಡೊಯ್ಯಿರಿ; ಸಾಧ್ಯವಾಗದಿದ್ದರೆ ಅ -20ಕ್ಕೆ ಬೃಹತ್ ಧರಣಿಗೆ ಕರವೇ ಕರೆ - Delegation to Centre

author img

By ETV Bharat Karnataka Team

Published : Jul 30, 2024, 6:52 PM IST

ಅಂಕೋಲಾ, ಶಿರೂರು ಗುಡ್ಡ ಕುಸಿತದಂತಹ ಘಟನೆ ಮರುಕಳಿಸದಂತೆ ತಡೆಯಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜಕೀಯ ಬಿಟ್ಟು ಕೇಂದ್ರಕ್ಕೆ ನಿಯೋಗವನ್ನು ಕೊಂಡೊಯ್ಯಿರಿ, ಇಲ್ಲವಾದರೆ ಅಗಸ್ಟ್​ 20ಕ್ಕೆ ಬೃಹತ್ ಧರಣಿ ನಡೆಸಲಾಗುವುದು ಎಂದು ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಎಚ್ಚರಿಸಿದ್ದಾರೆ.

bhaskar-patagara
ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ (ETV Bharat)
ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ (ETV Bharat)

ಕಾರವಾರ (ಉತ್ತರ ಕನ್ನಡ) : ಅಂಕೋಲಾ, ಶಿರೂರು ಗುಡ್ಡ ಕುಸಿತದಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜಕೀಯ ಬಿಟ್ಟು ಎಲ್ಲ ಪಕ್ಷದವರನ್ನೊಳಗೊಂಡ ನಿಯೋಗವನ್ನು ಪ್ರಧಾನಿ ಹಾಗೂ ಕೇಂದ್ರ ಭೂ ಸಾರಿಗೆ ಸಚಿವರ ಬಳಿ ಕೊಂಡೊಯ್ದು ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಒತ್ತಾಯಿಸಿದರು.

ಅಂಕೋಲಾ, ಶಿರೂರು ಬಳಿ ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಗುತ್ತಿಗೆ ಕಂಪನಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ಹಿಂದೆಯೂ ಇಂತಹ ಹಲವು ದುರ್ಘಟನೆಗಳು ನಡೆದು ಸಾವು ನೋವುಗಳು ಸಂಭವಿಸಿದ್ದರೂ ಐಆರ್‌ಬಿ ಕಂಪನಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಹೇಳಿದರು.

ಐಆರ್‌ಬಿ ಕಂಪನಿ ಸಾವಿರಾರು ಕೋಟಿ ಮೊತ್ತದ ನಮ್ಮ ಕಲ್ಲು ಮಣ್ಣುಗಳನ್ನು ಬಳಸಿಕೊಂಡಿದೆ. ಅಲ್ಲದೇ ಹೆದ್ದಾರಿ ಅರೆಬರೆಯಾಗಿದ್ದರೂ ಕೂಡ ಟೋಲ್ ಸಂಗ್ರಹವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಇದೀಗ ಇಷ್ಟೊಂದು ದೊಡ್ಡ ದುರ್ಘಟನೆಯಾಗಿದ್ದರೂ ಮೃತರಿಗೆ ಒಂದು ರೂ. ಪರಿಹಾರ ನೀಡಿಲ್ಲ. ಆದರೆ, ಇದೆಲ್ಲವೂ ಐಆರ್‌ಬಿ ಕಂಪನಿ ಅವೈಜ್ಞಾನಿಕ ಕಾಮಗಾರಿಯಿಂದಲೇ ನಡೆದಿರುವುದರಿಂದ ಮೃತರಿಗೆ ಐಆರ್‌ಬಿ ಕಂಪನಿಯೇ ಪರಿಹಾರ ನೀಡಬೇಕು. ಹಾನಿಗೊಳಗಾದ ಮನೆಗಳನ್ನು ಕಂಪೆನಿಯೇ ಕಟ್ಟಿಸಿಕೊಡುವಂತೆ ಮಾಡಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹ ಹಲವೆಡೆ ಗುಡ್ಡಗಳು ಅವೈಜ್ಞಾನಿಕವಾಗಿವೆ. ಇದರಿಂದ ಮತ್ತಷ್ಟು ಕುಸಿಯುವ ಭೀತಿ ಇದ್ದು, ನಮ್ಮ ಜನಪ್ರತಿನಿಧಿಗಳು ರಾಜಕೀಯ ಬಿಟ್ಟು ಶಾಶ್ವತ ಪರಿಹಾರಕ್ಕಾಗಿ ಪ್ರಯತ್ನಿಸಬೇಕು. ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಎಲ್ಲ ರಾಜಕೀಯ ಪಕ್ಷದವರನ್ನೊಳಗೊಂಡ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಬಳಿ ಕೊಂಡೊಯ್ದು ಶಾಶ್ವತ ಪರಿಹಾರಕ್ಕಾಗಿ, ತಡೆಗೋಡೆ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಹಣವನ್ನು ಪಡೆಯಲು ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಬಗ್ಗೆ ಹೆಚ್ಚಿನ ಪ್ರಯತ್ನ ಹರಿಸಬೇಕು. ಈ ಬಗ್ಗೆ ಇನ್ನು 20 ದಿನಗಳ ಒಳಗಾಗಿ ಯಾವುದೇ ಪ್ರಯತ್ನಗಳು ನಡೆಯದೆ ಇದ್ದಲ್ಲಿ ಆ. 20 ರಂದು ಸಂಸದರ ಕಚೇರಿ ಎದುರು ಜಿಲ್ಲೆಯ ಸಮಸ್ತ ಹೋರಾಟಗಾರರನ್ನು ಒಗ್ಗೂಡಿಸಿಕೊಂಡು ಬೃಹತ್ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಕೊಚ್ಚಿ ಹೋಗುತ್ತಿದ್ದ 5 ಮಕ್ಕಳ ರಕ್ಷಣೆ ಮಾಡಿದ ತಂದೆ; ಶಿರೂರು ದುರ್ಘಟನೆಯ ಕರಾಳತೆ ಬಿಚ್ಚಿಟ್ಟ ವ್ಯಕ್ತಿ - Man saved 5 children

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ (ETV Bharat)

ಕಾರವಾರ (ಉತ್ತರ ಕನ್ನಡ) : ಅಂಕೋಲಾ, ಶಿರೂರು ಗುಡ್ಡ ಕುಸಿತದಂತಹ ಘಟನೆಗಳು ಮತ್ತೆ ಸಂಭವಿಸದಂತೆ ತಡೆಯಲು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ರಾಜಕೀಯ ಬಿಟ್ಟು ಎಲ್ಲ ಪಕ್ಷದವರನ್ನೊಳಗೊಂಡ ನಿಯೋಗವನ್ನು ಪ್ರಧಾನಿ ಹಾಗೂ ಕೇಂದ್ರ ಭೂ ಸಾರಿಗೆ ಸಚಿವರ ಬಳಿ ಕೊಂಡೊಯ್ದು ಶಾಶ್ವತ ಪರಿಹಾರಕ್ಕೆ ಪ್ರಯತ್ನಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಘಟಕದ ಅಧ್ಯಕ್ಷ ಭಾಸ್ಕರ್ ಪಟಗಾರ ಒತ್ತಾಯಿಸಿದರು.

ಅಂಕೋಲಾ, ಶಿರೂರು ಬಳಿ ದುರ್ಘಟನೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಇದಕ್ಕೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಸುತ್ತಿರುವ ಐಆರ್‌ಬಿ ಗುತ್ತಿಗೆ ಕಂಪನಿಯ ಅವೈಜ್ಞಾನಿಕ ಕಾಮಗಾರಿ ಹಾಗೂ ನಿರ್ಲಕ್ಷ್ಯವೇ ಕಾರಣ. ಈ ಹಿಂದೆಯೂ ಇಂತಹ ಹಲವು ದುರ್ಘಟನೆಗಳು ನಡೆದು ಸಾವು ನೋವುಗಳು ಸಂಭವಿಸಿದ್ದರೂ ಐಆರ್‌ಬಿ ಕಂಪನಿ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ಹೇಳಿದರು.

ಐಆರ್‌ಬಿ ಕಂಪನಿ ಸಾವಿರಾರು ಕೋಟಿ ಮೊತ್ತದ ನಮ್ಮ ಕಲ್ಲು ಮಣ್ಣುಗಳನ್ನು ಬಳಸಿಕೊಂಡಿದೆ. ಅಲ್ಲದೇ ಹೆದ್ದಾರಿ ಅರೆಬರೆಯಾಗಿದ್ದರೂ ಕೂಡ ಟೋಲ್ ಸಂಗ್ರಹವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಇದೀಗ ಇಷ್ಟೊಂದು ದೊಡ್ಡ ದುರ್ಘಟನೆಯಾಗಿದ್ದರೂ ಮೃತರಿಗೆ ಒಂದು ರೂ. ಪರಿಹಾರ ನೀಡಿಲ್ಲ. ಆದರೆ, ಇದೆಲ್ಲವೂ ಐಆರ್‌ಬಿ ಕಂಪನಿ ಅವೈಜ್ಞಾನಿಕ ಕಾಮಗಾರಿಯಿಂದಲೇ ನಡೆದಿರುವುದರಿಂದ ಮೃತರಿಗೆ ಐಆರ್‌ಬಿ ಕಂಪನಿಯೇ ಪರಿಹಾರ ನೀಡಬೇಕು. ಹಾನಿಗೊಳಗಾದ ಮನೆಗಳನ್ನು ಕಂಪೆನಿಯೇ ಕಟ್ಟಿಸಿಕೊಡುವಂತೆ ಮಾಡಬೇಕು ಎಂದರು.

ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂತಹ ಹಲವೆಡೆ ಗುಡ್ಡಗಳು ಅವೈಜ್ಞಾನಿಕವಾಗಿವೆ. ಇದರಿಂದ ಮತ್ತಷ್ಟು ಕುಸಿಯುವ ಭೀತಿ ಇದ್ದು, ನಮ್ಮ ಜನಪ್ರತಿನಿಧಿಗಳು ರಾಜಕೀಯ ಬಿಟ್ಟು ಶಾಶ್ವತ ಪರಿಹಾರಕ್ಕಾಗಿ ಪ್ರಯತ್ನಿಸಬೇಕು. ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಎಲ್ಲ ರಾಜಕೀಯ ಪಕ್ಷದವರನ್ನೊಳಗೊಂಡ ನಿಯೋಗವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಭೂ ಸಾರಿಗೆ ಸಚಿವ ನಿತೀನ್ ಗಡ್ಕರಿ ಬಳಿ ಕೊಂಡೊಯ್ದು ಶಾಶ್ವತ ಪರಿಹಾರಕ್ಕಾಗಿ, ತಡೆಗೋಡೆ ನಿರ್ಮಾಣಕ್ಕೆ ಅಗತ್ಯವಿರುವಷ್ಟು ಹಣವನ್ನು ಪಡೆಯಲು ಒತ್ತಡ ಹೇರಬೇಕು ಎಂದು ಒತ್ತಾಯಿಸಿದರು.

ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಈ ಬಗ್ಗೆ ಹೆಚ್ಚಿನ ಪ್ರಯತ್ನ ಹರಿಸಬೇಕು. ಈ ಬಗ್ಗೆ ಇನ್ನು 20 ದಿನಗಳ ಒಳಗಾಗಿ ಯಾವುದೇ ಪ್ರಯತ್ನಗಳು ನಡೆಯದೆ ಇದ್ದಲ್ಲಿ ಆ. 20 ರಂದು ಸಂಸದರ ಕಚೇರಿ ಎದುರು ಜಿಲ್ಲೆಯ ಸಮಸ್ತ ಹೋರಾಟಗಾರರನ್ನು ಒಗ್ಗೂಡಿಸಿಕೊಂಡು ಬೃಹತ್ ಧರಣಿ ನಡೆಸಲಾಗುವುದು ಎಂದು ಎಚ್ಚರಿಸಿದರು.

ಇದನ್ನೂ ಓದಿ : ಕೊಚ್ಚಿ ಹೋಗುತ್ತಿದ್ದ 5 ಮಕ್ಕಳ ರಕ್ಷಣೆ ಮಾಡಿದ ತಂದೆ; ಶಿರೂರು ದುರ್ಘಟನೆಯ ಕರಾಳತೆ ಬಿಚ್ಚಿಟ್ಟ ವ್ಯಕ್ತಿ - Man saved 5 children

ETV Bharat Logo

Copyright © 2024 Ushodaya Enterprises Pvt. Ltd., All Rights Reserved.