ETV Bharat / state

ಪ್ರಾಷಿಕ್ಯೂಷನ್​ಗೆ ಅನುಮತಿ: ಪಾದಯಾತ್ರೆಯ ಫಲವೆಂದ ಬಿಜೆಪಿ ನಾಯಕರು, ಸಿಎಂ ರಾಜೀನಾಮೆಗೆ ಆಗ್ರಹ - prosecution against cm siddaramaiah

author img

By ETV Bharat Karnataka Team

Published : Aug 17, 2024, 3:04 PM IST

Updated : Aug 17, 2024, 8:34 PM IST

ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ ಅವರು ಅನುಮತಿ ನೀಡಿದ್ದಾರೆ.

BJP LEADERS
ಬಿಜೆಪಿ ನಾಯಕರು (ETV Bharat)

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದೀಗ ರಾಜಕೀಯ ವಲಯದಲ್ಲಿ ಇದರ ಪರ ಹಾಗೂ ವಿರೋಧ ನಾಯಕರ ಹೇಳಿಕೆಗಳು ಕೇಳಿಬರುತ್ತಿವೆ. ತಮ್ಮ ಪಾದಯಾತ್ರೆಯ ಪ್ರತಿಫಲ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿ.ವೈ. ವಿಜಯೇಂದ್ರ ಸೇರಿದಂತೆ ಮುಂತಾದ ಕೇಸರಿ ನಾಯಕರು ರಾಜ್ಯಪಾಲರ ನಿರ್ಧಾರದ ಪರ ಬ್ಯಾಟ್​ ಬೀಸಿದ್ದಾರೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ: ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದರು. ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ" ಎಂದು ಒತ್ತಾಯಿಸಿದ್ದಾರೆ.

ನಿವೇಶನ ಕಳೆದುಕೊಂಡವರಿಗೆ ತನಿಖೆಯಿಂದ ನ್ಯಾಯ: ಪ್ರತಿಪಕ್ಷ ನಾಯಕ ಆರ್​.ಅಶೋಕ್ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, "ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು. ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ" ಎಂದಿದ್ದಾರೆ.

ಸಿದ್ದರಾಮಯ್ಯ ಸ್ಥಿತಿ ನೋಡಿ ಬಹಳಷ್ಟು ಕಾಂಗ್ರೆಸ್ ನಾಯಕರೇ ಒಳಗೊಳಗೇ ಖುಷಿ ಪಟ್ಟಿದ್ದಾರೆ: ಹುಬ್ಬಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್​ ಶೆಟ್ಟರ್​, "ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ ಬರುತ್ತಿದೆ. ಇದೀಗ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳು ಸಹ ಕೇಸ್ ದಾಖಲಿಸಲು ಮುಂದಾಗಿದ್ದಾರೆ‌. ಇದಕ್ಕಾಗಿ ರಾಜ್ಯಪಾಲರು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮವಾಗಿ ಅನುಮತಿ ಕೊಟ್ಟಿದ್ದಾರೆ. ಇದು ಕಾನೂನು ಬದ್ದವಾದ ನಿರ್ಧಾರ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬಂದಿದ್ದನ್ನು ನೋಡಿ ಬಹಳಷ್ಟು ಜನ ಕಾಂಗ್ರೆಸ್ ನಾಯಕರೇ ಒಳಗೊಳಗೆ ಖುಷಿ ಪಡ್ತಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ" ಎಂದರು.

ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ: ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಚನ್ನಬಸಪ್ಪ, "ರಾಜ್ಯಪಾಲರ ಅನುಮತಿ, ಬಿಜೆಪಿ ಮಾಡಿದ ಪಾದಯಾತ್ರೆಗೆ ಸಿಕ್ಕ ಜಯ. ನಾವು ರಾಜಕಾರಣಕ್ಕೋಸ್ಕರ ಹೋರಾಟ ಮಾಡಿರಲಿಲ್ಲ. ಯಾವುದೇ ಚುನಾವಣೆ ಇಲ್ಲದ ಸಂದರ್ಭದಲ್ಲಿ ಹೋರಾಟ ಮಾಡಿದ್ದೆವು. ಕಾಂಗ್ರೆಸ್​ ದ್ವಂದ್ವ ನಿಲುವಿಗೆ ಇಂದಿರಾ ಗಾಂಧಿ ಅವರೇ ಉದಾಹರಣೆ. ಅವರು ಚುನಾವಣೆಗೆ ಸ್ಪರ್ಧಿಸಿದ್ದರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದರು. ಕಾಂಗ್ರೆಸ್ ಸಹ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್​ಗೆ ಹೋಗಲು ಚಿಂತನೆ ನಡೆಸುತ್ತಿದೆ" ಎಂದು ಹೇಳಿದರು.

ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ: ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ಅವರು, "ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು" ಎಂದು ಆಗ್ರಹಿಸಿದ್ದಾರೆ. "ನನ್ನ ಮೇಲೆ ಆಪಾದನೆ ಬಂದಾಗ ನನ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೆ. ಈಗ ಅವರ ಮೇಲೆಯೇ ಆರೋಪ ಬಂದಿದೆ. ಅವರು ಸಹ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡ್ತಾರೆ ಅಂತಾ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯ ಕಾನೂನು ಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕರೆ ಯಶಸ್ವಿಯಾಗಿ ಹೊರಗೆ ಬರಲಿ" ಎಂದರು.

ಸತ್ಯಕ್ಕೆ ದೊರೆತ ಜಯ: ಪ್ರಾಸಿಕ್ಯೂಷನ್​ಗೆ ಅನಮತಿ ನೀಡಿರುವುದು ಸತ್ಯಕ್ಕೆ ದೊರೆತ ಜಯ ಎಂದು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ, ದೂರುದಾರ ಶ್ರೀವತ್ಸ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸತ್ಯಾಸತ್ಯತೆ ಪರಿಶೀಲಿಸಿಯೇ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಸತ್ಯಕ್ಕೆ ಜಯ ದೊರಕಿದೆ. ಕಾಂಗ್ರೆಸ್‌ ಹೈಕಮಾಂಡ್‌ ಈಗಲಾದರೂ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪಡೆದು, ತನಿಖೆಗೆ ಸಹಕರಿಸಲು ಸೂಚಿಸುವಂತೆ ಅವರು ಒತ್ತಾಯಿಸಿದರು.

ಕಾನೂನಿಗೆ ತಲೆ ಬಾಗಿ: ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಮಾತನಾಡಿ, ಸಿದ್ದರಾಮಯ್ಯ ಯಾರಿಗೂ ಬಗ್ಗುವುದು, ಜಗ್ಗುವುದು ಬೇಡ. ಮೊದಲು ಕಾನೂನಿಗೆ ತಲೆಬಾಗಬೇಕು. ತಮ್ಮ ಗೌರವ ಉಳಿಯಬೇಕಾದರೆ ಬೆಟರ್‌ ಟು ರಿಸೈನ್‌ ಆ್ಯಂಡ್​ ಗೆಟ್‌ ಔಟ್‌ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು.

ಸಿಎಂ ಶುಡ್ ರಿಸೈನ್: ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ಆಗ್ರಹಿಸಿದರು. ಅಲ್ಲದೇ ಯಾವುದೇ ಕಾರಣಕ್ಕೂ ತಡ ಮಾಡದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರಲ್ಲಿ ಮನವಿ ಮಾಡುವುದಾಗಿಯೂ ಹೇಳಿದರು.

ಮಿಸ್ಟರ್ ಕ್ಲೀನ್ ಆಗಿ ಹೊರಬನ್ನಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಜಕ್ಕೂ ಮಿಸ್ಟರ್ ಕ್ಲೀನ್ ಆಗಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ಮಿಸ್ಟರ್ ಕ್ಲೀನ್ ಆಗಿ ಹೊರಬನ್ನಿ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸವಾಲು ಹಾಕಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ತಾವು ತನಿಖೆ ಎದುರಿಸಬೇಕು. ಇಳಿವಯಸ್ಸಿನಲ್ಲಿರುವ ಸಿದ್ದರಾಮಯ್ಯನವರು ತಾವು ಪ್ರಾಮಾಣಿಕ ಎಂದು ಸಾಬೀತುಪಡಿಸಲು ಅಧಿಕಾರದಿಂದ ಕೆಳಕ್ಕೆ ಇಳಿಯಲೇ ಬೇಕು. ಯಡಿಯೂರಪ್ಪ, ಜನಾರ್ದನ ರೆಡ್ಡಿಯವರು ಅಧಿಕಾರದಲ್ಲಿದ್ದರೆ ತನಿಖೆ ಮಾಡುವುದು ಹೇಗೆ ಎಂದು ನೀವೇ ಬುದ್ಧಿಮಾತು ಹೇಳಿದ್ದೀರಿ. ಹಾಗಿದ್ದರೆ ನೀವು ರಾಜೀನಾಮೆ ಕೊಡಬೇಕಲ್ಲವೇ ಎಂದು ಪ್ರಶ್ನಿಸಿದರು.

ರಮೇಶ ಜಾರಕಿಹೊಳಿ ಅಚ್ಚರಿ ಹೇಳಿಕೆ: ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದು ಒಳ್ಳೆಯದು. ಸಿದ್ದರಾಮಯ್ಯ ಒಳ್ಳೆಯ ರಾಜಕಾರಣಿ. ಅವರಿಗೆ ಕಪ್ಪು ಚುಕ್ಕೆ ಬಂದಿರಲಿಲ್ಲ. ಕಾನೂನು ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಿದ್ದರಾಮಯ್ಯ ಮರಳಿ ಸಿಎಂ ‌ಆಗಲಿ. ಸಿದ್ದರಾಮಯ್ಯ ‌ರಾಜೀನಾಮೆ ಬಳಿಕ ದೊಡ್ಡ ಅನಾಹುತ ಸನ್ನಿವೇಶ ನಿರ್ಮಾಣವಾಗಲಿದೆ. ಎಲ್ಲ ಪಕ್ಷಗಳು ಈ ಬಗ್ಗೆ ದೃಢ ನಿರ್ಧಾರ ಮಾಡಬೇಕಿದೆ. ಕಾಂಗ್ರೆಸ್‌ಗೆ 135 ಶಾಸಕರ ಬಲ ಇದೆ. ಸಿಎಂ ಯಾರನ್ನು ‌ಮಾಡಬೇಕೆಂಬುದು ಅವರಿಗೆ ಬಿಟ್ಟ ವಿಚಾರ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದರು.

ಸಿಎಂ ಕುಟುಂಬವೇ ಭಾಗಿ: ಮುಡಾ ಹಗರಣ ರಾಜ್ಯ ಕಂಡ ಅತ್ಯಂತ ದೊಡ್ಡ ಹಗರಣವಾಗಿದೆ. ಈ ಹಗರಣದಲ್ಲಿ ಸಿಎಂ ಕುಟುಂಬವೇ ಭಾಗಿಯಾಗಿದೆ. ಈ ಹಿನ್ನೆಲೆ ರಾಜ್ಯಪಾಲರು ದೂರು ಬಂದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದು ರಾಜ್ಯದ ಕಾನೂನಿಗೆ ದೊರೆತ ಜಯವಾಗಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಹುಬ್ಬಳ್ಳಿಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ಭ್ರಷ್ಟಾಚಾರ ಆಗಿದೆ. ಇದರಿಂದ ರಾಜ್ಯದ ಜನವೇ ಶಾಕ್ ಆಗಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು‌ ಎಂದು ಹೇಳಿದರು‌.

ಇದನ್ನೂ ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ - Prosecution Against CM Siddaramaiah

ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ್ದು, ಇದೀಗ ರಾಜಕೀಯ ವಲಯದಲ್ಲಿ ಇದರ ಪರ ಹಾಗೂ ವಿರೋಧ ನಾಯಕರ ಹೇಳಿಕೆಗಳು ಕೇಳಿಬರುತ್ತಿವೆ. ತಮ್ಮ ಪಾದಯಾತ್ರೆಯ ಪ್ರತಿಫಲ. ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ಎಂದು ಬಿಜೆಪಿ ನಾಯಕರು ಒತ್ತಾಯಿಸಿದ್ದಾರೆ. ಬಿ.ವೈ. ವಿಜಯೇಂದ್ರ ಸೇರಿದಂತೆ ಮುಂತಾದ ಕೇಸರಿ ನಾಯಕರು ರಾಜ್ಯಪಾಲರ ನಿರ್ಧಾರದ ಪರ ಬ್ಯಾಟ್​ ಬೀಸಿದ್ದಾರೆ.

ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ: ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್​ ಹಂಚಿಕೊಂಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, "ರಾಜ್ಯಪಾಲರು ತಮ್ಮ ಸಂವಿಧಾನ ದತ್ತ ಅಧಿಕಾರ ಚಲಾಯಿಸಿ ಮುಖ್ಯಮಂತ್ರಿಗಳ ಮುಡಾ ಹಗರಣದ ದೂರಿಗೆ ಕಾನೂನು ಕ್ರಮ ಕೈಗೊಳ್ಳಲು ಅನುಮತಿ ನೀಡಿದ್ದಾರೆ. ಸಾಕಷ್ಟು ದಾಖಲೆ, ಪುರಾವೆಗಳನ್ನು ಇಟ್ಟುಕೊಂಡು ಕಾಂಗ್ರೆಸ್ ಸರ್ಕಾರದ ಭ್ರಷ್ಟ ಹಗರಣಗಳ ವಿರುದ್ಧ ಹಾಗೂ ಮುಖ್ಯಮಂತ್ರಿಗಳ ಸ್ವಜನ ಪಕ್ಷಪಾತ ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾಗಿರುವುದರ ವಿರುದ್ಧ ಎಷ್ಟೇ ಹೋರಾಟ ನಡೆಸಿದರೂ ತಮ್ಮನ್ನು ಜಗ್ಗಿಸುವವರಿಲ್ಲ ಎಂದು ಭಂಡತನ ಪ್ರದರ್ಶಿಸುತ್ತಿದ್ದರು. ಸಿದ್ದರಾಮಯ್ಯನವರು ಪ್ರಕರಣದ ತನಿಖೆ ಪಾರದರ್ಶಕವಾಗಿ ನಡೆಯಲು ಅನುವಾಗುವಂತೆ ಈಗಲಾದರೂ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ಮುಖ್ಯಮಂತ್ರಿ ಸ್ಥಾನದ ಘನತೆ ಉಳಿಸಲಿ" ಎಂದು ಒತ್ತಾಯಿಸಿದ್ದಾರೆ.

ನಿವೇಶನ ಕಳೆದುಕೊಂಡವರಿಗೆ ತನಿಖೆಯಿಂದ ನ್ಯಾಯ: ಪ್ರತಿಪಕ್ಷ ನಾಯಕ ಆರ್​.ಅಶೋಕ್ ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದು, "ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿರುವುದು ಬಿಜೆಪಿ ಪಾದಯಾತ್ರೆಗೆ ಸಿಕ್ಕಿರುವ ಯಶಸ್ಸು. ಯಾವುದೇ ವ್ಯಕ್ತಿಯ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿಲ್ಲ. ಅಕ್ರಮ ಬಯಲಿಗೆ ಬಂದು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕೆಂಬುದು ನಮ್ಮ ಉದ್ದೇಶ. ಇದರ ಸತ್ಯ ಏನೆಂದು ಗೊತ್ತಾಗಲಿ. 86 ಸಾವಿರ ಜನರು ನಿವೇಶನಕ್ಕೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದಾರೆ. ಅವರಿಗೆ ಈ ತನಿಖೆಯಿಂದ ನ್ಯಾಯ ದೊರೆಯಲಿದೆ. ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಆಗಿನ ರಾಜ್ಯಪಾಲರು ಖಾಸಗಿ ದೂರಿಗಾಗಿ ತನಿಖೆಗೆ ಅನುಮತಿ ನೀಡಿದ್ದರು. ಆಗ ಕಾಂಗ್ರೆಸ್‌ ಕೈವಾಡವಿತ್ತು ಎಂದರೆ ಅದನ್ನು ಒಪ್ಪುತ್ತಾರಾ? ಈಗ ನೈತಿಕತೆಯ ಹೊಣೆ ಹೊತ್ತು ಸಿಎಂ ರಾಜೀನಾಮೆ ನೀಡಬೇಕು. ಆಗ ಯಡಿಯೂರಪ್ಪ ತೋರಿದ ನಡೆಯನ್ನು ಸಿದ್ದರಾಮಯ್ಯ ಈಗ ತೋರಲಿ" ಎಂದಿದ್ದಾರೆ.

ಸಿದ್ದರಾಮಯ್ಯ ಸ್ಥಿತಿ ನೋಡಿ ಬಹಳಷ್ಟು ಕಾಂಗ್ರೆಸ್ ನಾಯಕರೇ ಒಳಗೊಳಗೇ ಖುಷಿ ಪಟ್ಟಿದ್ದಾರೆ: ಹುಬ್ಬಳ್ಳಿ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಜಗದೀಶ್​ ಶೆಟ್ಟರ್​, "ಮುಡಾ ಹಗರಣ ಹಾಗೂ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಲೇ ಬರುತ್ತಿದೆ. ಇದೀಗ ರಾಜ್ಯಪಾಲರಿಗೆ ಖಾಸಗಿ ವ್ಯಕ್ತಿಗಳು ಸಹ ಕೇಸ್ ದಾಖಲಿಸಲು ಮುಂದಾಗಿದ್ದಾರೆ‌. ಇದಕ್ಕಾಗಿ ರಾಜ್ಯಪಾಲರು ಕಾನೂನು ತಜ್ಞರ ಜೊತೆಗೆ ಸಮಾಲೋಚನೆ ನಡೆಸಿ ಅಂತಿಮವಾಗಿ ಅನುಮತಿ ಕೊಟ್ಟಿದ್ದಾರೆ. ಇದು ಕಾನೂನು ಬದ್ದವಾದ ನಿರ್ಧಾರ. ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬಂದಿದ್ದನ್ನು ನೋಡಿ ಬಹಳಷ್ಟು ಜನ ಕಾಂಗ್ರೆಸ್ ನಾಯಕರೇ ಒಳಗೊಳಗೆ ಖುಷಿ ಪಡ್ತಿದ್ದಾರೆ. ಈ ಬಾರಿ ಸಿದ್ದರಾಮಯ್ಯ ಪಾರಾಗಲು ಸಾಧ್ಯವಿಲ್ಲ" ಎಂದರು.

ಬಿಜೆಪಿಯ ಪಾದಯಾತ್ರೆಗೆ ಸಿಕ್ಕ ಜಯ: ಶಿವಮೊಗ್ಗದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಶಾಸಕ ಚನ್ನಬಸಪ್ಪ, "ರಾಜ್ಯಪಾಲರ ಅನುಮತಿ, ಬಿಜೆಪಿ ಮಾಡಿದ ಪಾದಯಾತ್ರೆಗೆ ಸಿಕ್ಕ ಜಯ. ನಾವು ರಾಜಕಾರಣಕ್ಕೋಸ್ಕರ ಹೋರಾಟ ಮಾಡಿರಲಿಲ್ಲ. ಯಾವುದೇ ಚುನಾವಣೆ ಇಲ್ಲದ ಸಂದರ್ಭದಲ್ಲಿ ಹೋರಾಟ ಮಾಡಿದ್ದೆವು. ಕಾಂಗ್ರೆಸ್​ ದ್ವಂದ್ವ ನಿಲುವಿಗೆ ಇಂದಿರಾ ಗಾಂಧಿ ಅವರೇ ಉದಾಹರಣೆ. ಅವರು ಚುನಾವಣೆಗೆ ಸ್ಪರ್ಧಿಸಿದ್ದರ ವಿರುದ್ದ ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಹೈಕೋರ್ಟ್ ತೀರ್ಪಿನ ವಿರುದ್ಧ ಇಂದಿರಾಗಾಂಧಿ ತುರ್ತು ಪರಿಸ್ಥಿತಿ ಹೇರಿದ್ದರು. ಕಾಂಗ್ರೆಸ್ ಸಹ ಪ್ರಾಸಿಕ್ಯೂಷನ್ ವಿರುದ್ಧ ಹೈಕೋರ್ಟ್​ಗೆ ಹೋಗಲು ಚಿಂತನೆ ನಡೆಸುತ್ತಿದೆ" ಎಂದು ಹೇಳಿದರು.

ಕ್ಲೀನ್ ಚಿಟ್ ಸಿಕ್ಕಿ ಯಶಸ್ವಿಯಾಗಿ ಹೊರಗೆ ಬರಲಿ: ಶಿವಮೊಗ್ಗದಲ್ಲಿ ಮಾಜಿ ಡಿಸಿಎಂ ಕೆ.ಎಸ್​.ಈಶ್ವರಪ್ಪ ಅವರು, "ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಕಾರಣ ಸಿಎಂ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ನೀಡಬೇಕು" ಎಂದು ಆಗ್ರಹಿಸಿದ್ದಾರೆ. "ನನ್ನ ಮೇಲೆ ಆಪಾದನೆ ಬಂದಾಗ ನನ್ನ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದರು. ಆಗ ನಾನು ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಟ್ಟಿದ್ದೆ. ಈಗ ಅವರ ಮೇಲೆಯೇ ಆರೋಪ ಬಂದಿದೆ. ಅವರು ಸಹ ರಾಜೀನಾಮೆ ಕೊಟ್ಟು ತನಿಖೆಗೆ ಸಹಕಾರ ಕೊಡ್ತಾರೆ ಅಂತಾ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯ ಕಾನೂನು ಬದ್ಧವಾಗಿ ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕರೆ ಯಶಸ್ವಿಯಾಗಿ ಹೊರಗೆ ಬರಲಿ" ಎಂದರು.

ಸತ್ಯಕ್ಕೆ ದೊರೆತ ಜಯ: ಪ್ರಾಸಿಕ್ಯೂಷನ್​ಗೆ ಅನಮತಿ ನೀಡಿರುವುದು ಸತ್ಯಕ್ಕೆ ದೊರೆತ ಜಯ ಎಂದು ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ, ದೂರುದಾರ ಶ್ರೀವತ್ಸ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ಸತ್ಯಾಸತ್ಯತೆ ಪರಿಶೀಲಿಸಿಯೇ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಸತ್ಯಕ್ಕೆ ಜಯ ದೊರಕಿದೆ. ಕಾಂಗ್ರೆಸ್‌ ಹೈಕಮಾಂಡ್‌ ಈಗಲಾದರೂ ಸಿಎಂ ಸಿದ್ದರಾಮಯ್ಯನವರ ರಾಜೀನಾಮೆ ಪಡೆದು, ತನಿಖೆಗೆ ಸಹಕರಿಸಲು ಸೂಚಿಸುವಂತೆ ಅವರು ಒತ್ತಾಯಿಸಿದರು.

ಕಾನೂನಿಗೆ ತಲೆ ಬಾಗಿ: ವಿಧಾನ ಪರಿಷತ್‌ ಸದಸ್ಯ ಹೆಚ್.ವಿಶ್ವನಾಥ್‌ ಮಾತನಾಡಿ, ಸಿದ್ದರಾಮಯ್ಯ ಯಾರಿಗೂ ಬಗ್ಗುವುದು, ಜಗ್ಗುವುದು ಬೇಡ. ಮೊದಲು ಕಾನೂನಿಗೆ ತಲೆಬಾಗಬೇಕು. ತಮ್ಮ ಗೌರವ ಉಳಿಯಬೇಕಾದರೆ ಬೆಟರ್‌ ಟು ರಿಸೈನ್‌ ಆ್ಯಂಡ್​ ಗೆಟ್‌ ಔಟ್‌ ಎಂದು ಸಿದ್ದರಾಮಯ್ಯನವರಿಗೆ ಸಲಹೆ ನೀಡಿದರು.

ಸಿಎಂ ಶುಡ್ ರಿಸೈನ್: ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ವಿಧಾನಪರಿಷತ್ತಿನ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಟ್ಟ ರಾಜ್ಯಪಾಲರ ನಡೆಯನ್ನು ಈಗಾಗಲೇ ಸ್ವಾಗತಿಸಿದ್ದೇನೆ. ಸಿಎಂ ಶುಡ್ ರಿಸೈನ್ ಎಂದು ಆಗ್ರಹಿಸಿದರು. ಅಲ್ಲದೇ ಯಾವುದೇ ಕಾರಣಕ್ಕೂ ತಡ ಮಾಡದೆ ಮುಖ್ಯಮಂತ್ರಿಗಳು ರಾಜೀನಾಮೆ ಕೊಡಬೇಕೆಂದು ಅವರಲ್ಲಿ ಮನವಿ ಮಾಡುವುದಾಗಿಯೂ ಹೇಳಿದರು.

ಮಿಸ್ಟರ್ ಕ್ಲೀನ್ ಆಗಿ ಹೊರಬನ್ನಿ: ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿಜಕ್ಕೂ ಮಿಸ್ಟರ್ ಕ್ಲೀನ್ ಆಗಿದ್ದರೆ ತಮ್ಮ ಹುದ್ದೆಗೆ ರಾಜೀನಾಮೆ ಕೊಟ್ಟು ತನಿಖೆ ಎದುರಿಸಿ ಮಿಸ್ಟರ್ ಕ್ಲೀನ್ ಆಗಿ ಹೊರಬನ್ನಿ ಎಂದು ಶಾಸಕ ಮತ್ತು ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಸವಾಲು ಹಾಕಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದ್ದರೆ ತಾವು ತನಿಖೆ ಎದುರಿಸಬೇಕು. ಇಳಿವಯಸ್ಸಿನಲ್ಲಿರುವ ಸಿದ್ದರಾಮಯ್ಯನವರು ತಾವು ಪ್ರಾಮಾಣಿಕ ಎಂದು ಸಾಬೀತುಪಡಿಸಲು ಅಧಿಕಾರದಿಂದ ಕೆಳಕ್ಕೆ ಇಳಿಯಲೇ ಬೇಕು. ಯಡಿಯೂರಪ್ಪ, ಜನಾರ್ದನ ರೆಡ್ಡಿಯವರು ಅಧಿಕಾರದಲ್ಲಿದ್ದರೆ ತನಿಖೆ ಮಾಡುವುದು ಹೇಗೆ ಎಂದು ನೀವೇ ಬುದ್ಧಿಮಾತು ಹೇಳಿದ್ದೀರಿ. ಹಾಗಿದ್ದರೆ ನೀವು ರಾಜೀನಾಮೆ ಕೊಡಬೇಕಲ್ಲವೇ ಎಂದು ಪ್ರಶ್ನಿಸಿದರು.

ರಮೇಶ ಜಾರಕಿಹೊಳಿ ಅಚ್ಚರಿ ಹೇಳಿಕೆ: ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡುವುದು ಒಳ್ಳೆಯದು. ಸಿದ್ದರಾಮಯ್ಯ ಒಳ್ಳೆಯ ರಾಜಕಾರಣಿ. ಅವರಿಗೆ ಕಪ್ಪು ಚುಕ್ಕೆ ಬಂದಿರಲಿಲ್ಲ. ಕಾನೂನು ಹೋರಾಟ ಮಾಡಿ ಕ್ಲೀನ್ ಚಿಟ್ ಸಿಕ್ಕ ಬಳಿಕ ಸಿದ್ದರಾಮಯ್ಯ ಮರಳಿ ಸಿಎಂ ‌ಆಗಲಿ. ಸಿದ್ದರಾಮಯ್ಯ ‌ರಾಜೀನಾಮೆ ಬಳಿಕ ದೊಡ್ಡ ಅನಾಹುತ ಸನ್ನಿವೇಶ ನಿರ್ಮಾಣವಾಗಲಿದೆ. ಎಲ್ಲ ಪಕ್ಷಗಳು ಈ ಬಗ್ಗೆ ದೃಢ ನಿರ್ಧಾರ ಮಾಡಬೇಕಿದೆ. ಕಾಂಗ್ರೆಸ್‌ಗೆ 135 ಶಾಸಕರ ಬಲ ಇದೆ. ಸಿಎಂ ಯಾರನ್ನು ‌ಮಾಡಬೇಕೆಂಬುದು ಅವರಿಗೆ ಬಿಟ್ಟ ವಿಚಾರ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಚ್ಚರಿ ಹೇಳಿಕೆ ನೀಡಿದರು.

ಸಿಎಂ ಕುಟುಂಬವೇ ಭಾಗಿ: ಮುಡಾ ಹಗರಣ ರಾಜ್ಯ ಕಂಡ ಅತ್ಯಂತ ದೊಡ್ಡ ಹಗರಣವಾಗಿದೆ. ಈ ಹಗರಣದಲ್ಲಿ ಸಿಎಂ ಕುಟುಂಬವೇ ಭಾಗಿಯಾಗಿದೆ. ಈ ಹಿನ್ನೆಲೆ ರಾಜ್ಯಪಾಲರು ದೂರು ಬಂದ ಹಿನ್ನೆಲೆಯಲ್ಲಿ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟಿದ್ದಾರೆ. ಇದು ರಾಜ್ಯದ ಕಾನೂನಿಗೆ ದೊರೆತ ಜಯವಾಗಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದ್ದಾರೆ.

ಹುಬ್ಬಳ್ಳಿಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಹಗರಣದಲ್ಲಿ 4-5 ಸಾವಿರ ಕೋಟಿ ಭ್ರಷ್ಟಾಚಾರ ಆಗಿದೆ. ಇದರಿಂದ ರಾಜ್ಯದ ಜನವೇ ಶಾಕ್ ಆಗಿದ್ದಾರೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು‌ ಎಂದು ಹೇಳಿದರು‌.

ಇದನ್ನೂ ಓದಿ: ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ - Prosecution Against CM Siddaramaiah

Last Updated : Aug 17, 2024, 8:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.