ETV Bharat / state

ಬೆಳಗಾವಿಯಲ್ಲಿ ಬಿಜೆಪಿ ಬಂಡಾಯ ನಾಯಕರ ಸಭೆ : ಸಭೆ ಬಗ್ಗೆ ಮಾಜಿ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದೇನು? - BJP rebel leaders meeting

author img

By ETV Bharat Karnataka Team

Published : Aug 11, 2024, 6:03 PM IST

ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಬಿಜೆಪಿಯ 10ಕ್ಕೂ ಹೆಚ್ಚು ನಾಯಕರು ಸಭೆ ನಡೆಸಿದರು. ಇದರಲ್ಲಿ ತಮ್ಮ ಮುಂದಿನ ಹೋರಾಟದ ಬಗ್ಗೆ ತಯಾರಿ ಕುರಿತು ಚರ್ಚಿಸಿದ್ದಾರೆ.

BJP leaders
ಬಿಜೆಪಿ ನಾಯಕರು (ETV Bharat)
ಮಾಜಿ ಸಚಿವ ಅರವಿಂದ ಲಿಂಬಾವಳಿ (ETV Bharat)

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ರೆಬಲ್ಸ್ ನಾಯಕರು ತೊಡೆ ತಟ್ಟಿದ್ದು, ಮುಂದಿನ ಹೋರಾಟದ ರೂಪುರೇಷೆ ತಯಾರಿ ಕುರಿತು ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಬಂಡಾಯ ನಾಯಕರ ಈ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಮೈಸೂರು ಪಾದಯಾತ್ರೆ ಮುಗಿದ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಮೈಸೂರು ಪಾದಯಾತ್ರೆಯಿಂದ ದೂರ ಉಳಿದಿದ್ದ‌ ಬಿಜೆಪಿ ನಾಯಕರು ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ. ಪಿ ಹರೀಶ, ಮಾಜಿ ಸಂಸದರಾದ ಜಿ. ಎಂ ಸಿದ್ದೇಶ್ವರ್, ಪ್ರತಾಪ್ ಸಿಂಹ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಅರಸಿಕೇರಿ‌ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಎನ್. ಆರ್ ಸಂತೋಷ್ ಸೇರಿ ಹಲವು‌ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೊದಲಿಂದಲೂ ವಿಜಯೇಂದ್ರ ನಾಯಕತ್ವ ಒಪ್ಪದ ಈ ನಾಯಕರು ಹೈಕಮಾಂಡ್​ಗೆ ವಿಜಯೇಂದ್ರ ವಿರುದ್ಧ ದೂರು ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆ ಉದ್ದೇಶದಿಂದಲೇ ಮೈಸೂರು ಪಾದಯಾತ್ರೆಯಲ್ಲಿ ಇವರೆಲ್ಲ ಭಾಗಿಯಾಗಿರಲಿಲ್ಲ. ಇನ್ನು ಗಣೇಶ ಚತುರ್ಥಿ ಬಳಿಕ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ಆರಂಭಿಸುವುದು‌ ಬಹುತೇಕ ಅಂತಿಮವಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಯಡಿಯೂರಪ್ಪ‌ ವಿರೋಧಿ ಬಣದ ಮತ್ತಷ್ಟು ನಾಯಕರನ್ನು ಸೇರಿಸಿ ಸಭೆ ಮಾಡುವ ಬಗ್ಗೆಯೂ ಪ್ಲಾನ್ ರೂಪಿಸಿದ್ದಾರೆ.

ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ‌ ಅರವಿಂದ ಲಿಂಬಾವಳಿ ಮಾಧ್ಯಮಗಳ ಜೊತೆಗೆ ಮಾತನಾಡಿ, 'ಇದು ಅತೃಪ್ತರ ಅಥವಾ ಭಿನ್ನಮತಿಯರ ಸಭೆ ಅಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೀನಾಯವಾಗಿ ಸೋತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಆಗದಿದ್ದರೂ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗಿದೆ. ಹಾಗಾಗಿ, ಬಿಜೆಪಿ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಪಕ್ಷದಲ್ಲಿನ ದೋಷಗಳನ್ನು ಸರಿಪಡಿಸಿಕೊಂಡು ಪಕ್ಷ ಬಲಪಡಿಸಲು ಸಭೆಯಲ್ಲಿ ಚರ್ಚಿಸಲಾಗಿದೆ' ಎಂದರು.

ಮುಖ್ಯವಾಗಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಮತ್ತು ಎಸ್​ಸಿಪಿ, ಟಿಎಸ್​ಪಿ ಮೀಸಲಿಟ್ಟಿರುವ ಹಣವನ್ನು ತಮ್ಮ ಗ್ಯಾರಂಟಿಗಳಿಗೆ ಬಳಸಿರುವ ಬಗ್ಗೆಯೂ ಸುದೀರ್ಘ ಹೋರಾಟ ಕೈಗೆತ್ತಿಕೊಳ್ಳಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಎಲ್ಲ ಸಂಗತಿಗಳನ್ನು ಹೈಕಮಾಂಡ್ ಮತ್ತು ರಾಷ್ಟ್ರೀಯ ನಾಯಕತ್ವಕ್ಕೆ ತಿಳಿಸುತ್ತೇವೆ ಎಂದು ಹೇಳಿದರು.

ಮುಡಾ ಹಗರಣದ ಪಾದಯಾತ್ರೆ ರೀತಿಯಲ್ಲಿ ಇನ್ನು ಹೆಚ್ಚು ಪ್ರಭಾವಿಯಾಗಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಅಂತಿಮ ಸಲಹೆಗಳು ಸಂಜೆ ವೇಳೆಗೆ ಸಿದ್ಧವಾಗಬಹುದು ಎಂದು ತಿಳಿಸಿದರು.

ಸ್ಥಳೀಯ ನಾಯಕರಿಗೆ ಸಭೆಗೆ ಆಹ್ವಾನ ಇಲ್ಲದಿರುವ ಮತ್ತು ಹೈಕಮಾಂಡ್ ಗಮನಕ್ಕೆ ತಂದು ಸಭೆ ಮಾಡುತ್ತಿದ್ದೀರಾ? ಎಂಬ ಪ್ರಶ್ನೆಗೆ, ನಾನು ಪಕ್ಷದ ಹಿರಿಯ ನಾಯಕ, ಹಾಗಾಗಿ ಪಕ್ಷದ ಪದ್ದತಿ ಗೊತ್ತಿದೆ. ಆ ಪದ್ಧತಿ ಅನುಸಾರ ಸಭೆ ಮಾಡುತ್ತಿದ್ದೇವೆ. ಸಭೆಯಲ್ಲಿ 12 ಜನ ಸೇರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮುಡಾ ಪಾದಯಾತ್ರೆ ಗೈರಾದವರಿಂದ ಸಭೆ ವಿಚಾರಕ್ಕೆ, ನಾವು ಈ ಪಾದಯಾತ್ರೆ ಮಾಡಬೇಕಲ್ಲ. ಸ್ವಲ್ಪ ಶಕ್ತಿ ತುಂಬಿಕೊಳ್ಳಬೇಕಲ್ಲ. ಹಾಗಾಗಿ, ಮೈಸೂರು ಪಾದಯಾತ್ರೆಗೆ ಹೋಗಿರಲಿಲ್ಲ ಎಂದು ಅರವಿಂದ ಲಿಂಬಾವಳಿ ಸಮರ್ಥಿಸಿಕೊಂಡರು.

ವಾಲ್ಮೀಕಿ ನಿಗಮದ ಹಗರಣ ರಾಜ್ಯ ಬಿಜೆಪಿ ನಾಯಕರು ಗಂಭೀರವಾಗಿ ತೆಗೆದುಕೊಳ್ಳದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ, ಅವರು ಗಂಭೀರವಾಗಿ ತೆಗೆದುಕೊಳ್ಳಲಿ ಅಂತಾನೆ ಈಗ ಚರ್ಚಿಸುತ್ತಿರುವುದು. ಮೈಸೂರು ಪಾದಯಾತ್ರೆ ಬಗ್ಗೆ ನಮ್ಮ ರಾಜ್ಯಾಧ್ಯಕ್ಷರು ಚರ್ಚೆ ಮಾಡಿಯೋ..? ಮಾಡದೆಯೋ..? ಘೋಷಣೆ ಮಾಡಿದ್ದರು. ಆದರೆ, ಈಗ ಸರಿಯಾಗಿ ಚರ್ಚೆ ಮಾಡಿ, ವ್ಯವಸ್ಥಿತವಾಗಿ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಸಲಹೆಗಳನ್ನು ಪಡೆದುಕೊಂಡು, ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಸೇರಿದ ನಾಯಕರು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದೀರಾ? ಎಂಬ ಮಾಧ್ಯಮಗಳ ಪ್ರಶ್ನೆಗೆ, ಅದು ನಿಮ್ಮ ಸುದ್ದಿ ಎಂದು ಹೇಳಿ ಅರವಿಂದ ಲಿಂಬಾವಳಿ ಅಲ್ಲಿಂದ ತೆರಳಿದರು.

ಇದನ್ನೂ ಓದಿ : ಬಿಜೆಪಿ ರೆಬೆಲ್ ಶಾಸಕರಿಂದ ಡಿ.ಕೆ.ಸುರೇಶ್ ಭೇಟಿ: ಜನರಿಗೆ ತಪ್ಪಿನ ಅರಿವಾಗಲಿದೆ ಎಂದ ಎಸ್‌.ಟಿ.ಸೋಮಶೇಖರ್ - BJP Rebels Meet D K Suresh

ಮಾಜಿ ಸಚಿವ ಅರವಿಂದ ಲಿಂಬಾವಳಿ (ETV Bharat)

ಬೆಳಗಾವಿ : ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ರೆಬಲ್ಸ್ ನಾಯಕರು ತೊಡೆ ತಟ್ಟಿದ್ದು, ಮುಂದಿನ ಹೋರಾಟದ ರೂಪುರೇಷೆ ತಯಾರಿ ಕುರಿತು ಇಂದು ಬೆಳಗಾವಿಯಲ್ಲಿ ಮಹತ್ವದ ಸಭೆ ನಡೆಸಿದ್ದಾರೆ. ಬಂಡಾಯ ನಾಯಕರ ಈ ಸಭೆ ತೀವ್ರ ಕುತೂಹಲ ಮೂಡಿಸಿದೆ.

ಮೈಸೂರು ಪಾದಯಾತ್ರೆ ಮುಗಿದ ಬೆನ್ನಲ್ಲೇ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟವಾಗಿದ್ದು, ಮೈಸೂರು ಪಾದಯಾತ್ರೆಯಿಂದ ದೂರ ಉಳಿದಿದ್ದ‌ ಬಿಜೆಪಿ ನಾಯಕರು ಬೆಳಗಾವಿ ಹೊರವಲಯದ ಖಾಸಗಿ ರೆಸಾರ್ಟ್​ನಲ್ಲಿ ಸಭೆ ನಡೆಸಿದರು.

ಸಭೆಯಲ್ಲಿ ಪ್ರಮುಖವಾಗಿ ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿ. ಪಿ ಹರೀಶ, ಮಾಜಿ ಸಂಸದರಾದ ಜಿ. ಎಂ ಸಿದ್ದೇಶ್ವರ್, ಪ್ರತಾಪ್ ಸಿಂಹ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವ ಅರವಿಂದ ಲಿಂಬಾವಳಿ, ಅರಸಿಕೇರಿ‌ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಪರಾಜಿತ ಅಭ್ಯರ್ಥಿ ಎನ್. ಆರ್ ಸಂತೋಷ್ ಸೇರಿ ಹಲವು‌ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಮೊದಲಿಂದಲೂ ವಿಜಯೇಂದ್ರ ನಾಯಕತ್ವ ಒಪ್ಪದ ಈ ನಾಯಕರು ಹೈಕಮಾಂಡ್​ಗೆ ವಿಜಯೇಂದ್ರ ವಿರುದ್ಧ ದೂರು ನೀಡುವ ಬಗ್ಗೆಯೂ ಚಿಂತನೆ ನಡೆಸಿದ್ದಾರೆ ಎನ್ನಲಾಗುತ್ತಿದೆ. ಆ ಉದ್ದೇಶದಿಂದಲೇ ಮೈಸೂರು ಪಾದಯಾತ್ರೆಯಲ್ಲಿ ಇವರೆಲ್ಲ ಭಾಗಿಯಾಗಿರಲಿಲ್ಲ. ಇನ್ನು ಗಣೇಶ ಚತುರ್ಥಿ ಬಳಿಕ ವಾಲ್ಮೀಕಿ ನಿಗಮದ ಹಗರಣ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ಆರಂಭಿಸುವುದು‌ ಬಹುತೇಕ ಅಂತಿಮವಾಗಿದೆ. ಅಲ್ಲದೇ ಮುಂದಿನ ದಿನಗಳಲ್ಲಿ ಬೆಂಗಳೂರಿನಲ್ಲಿ ಯಡಿಯೂರಪ್ಪ‌ ವಿರೋಧಿ ಬಣದ ಮತ್ತಷ್ಟು ನಾಯಕರನ್ನು ಸೇರಿಸಿ ಸಭೆ ಮಾಡುವ ಬಗ್ಗೆಯೂ ಪ್ಲಾನ್ ರೂಪಿಸಿದ್ದಾರೆ.

ಸಭೆಯಲ್ಲಿ ಭಾಗಿಯಾಗಿದ್ದ ಮಾಜಿ ಸಚಿವ‌ ಅರವಿಂದ ಲಿಂಬಾವಳಿ ಮಾಧ್ಯಮಗಳ ಜೊತೆಗೆ ಮಾತನಾಡಿ, 'ಇದು ಅತೃಪ್ತರ ಅಥವಾ ಭಿನ್ನಮತಿಯರ ಸಭೆ ಅಲ್ಲ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಾವು ಹೀನಾಯವಾಗಿ ಸೋತಿದ್ದೇವೆ. ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿಸಿದಷ್ಟು ಆಗದಿದ್ದರೂ ಸ್ವಲ್ಪ ಮಟ್ಟಿಗೆ ಸುಧಾರಣೆ ಆಗಿದೆ. ಹಾಗಾಗಿ, ಬಿಜೆಪಿ ಪಕ್ಷದ ಬಲವರ್ಧನೆ ದೃಷ್ಟಿಯಿಂದ ಪಕ್ಷದಲ್ಲಿನ ದೋಷಗಳನ್ನು ಸರಿಪಡಿಸಿಕೊಂಡು ಪಕ್ಷ ಬಲಪಡಿಸಲು ಸಭೆಯಲ್ಲಿ ಚರ್ಚಿಸಲಾಗಿದೆ' ಎಂದರು.

ಮುಖ್ಯವಾಗಿ ವಾಲ್ಮೀಕಿ ನಿಗಮದ ಹಣ ದುರುಪಯೋಗ ಮತ್ತು ಎಸ್​ಸಿಪಿ, ಟಿಎಸ್​ಪಿ ಮೀಸಲಿಟ್ಟಿರುವ ಹಣವನ್ನು ತಮ್ಮ ಗ್ಯಾರಂಟಿಗಳಿಗೆ ಬಳಸಿರುವ ಬಗ್ಗೆಯೂ ಸುದೀರ್ಘ ಹೋರಾಟ ಕೈಗೆತ್ತಿಕೊಳ್ಳಲು ಇಂದಿನ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಎಲ್ಲ ಸಂಗತಿಗಳನ್ನು ಹೈಕಮಾಂಡ್ ಮತ್ತು ರಾಷ್ಟ್ರೀಯ ನಾಯಕತ್ವಕ್ಕೆ ತಿಳಿಸುತ್ತೇವೆ ಎಂದು ಹೇಳಿದರು.

ಮುಡಾ ಹಗರಣದ ಪಾದಯಾತ್ರೆ ರೀತಿಯಲ್ಲಿ ಇನ್ನು ಹೆಚ್ಚು ಪ್ರಭಾವಿಯಾಗಿ ಕೂಡಲಸಂಗಮದಿಂದ ಬಳ್ಳಾರಿವರೆಗೂ ಪಾದಯಾತ್ರೆ ನಡೆಸುವ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಅಂತಿಮ ಸಲಹೆಗಳು ಸಂಜೆ ವೇಳೆಗೆ ಸಿದ್ಧವಾಗಬಹುದು ಎಂದು ತಿಳಿಸಿದರು.

ಸ್ಥಳೀಯ ನಾಯಕರಿಗೆ ಸಭೆಗೆ ಆಹ್ವಾನ ಇಲ್ಲದಿರುವ ಮತ್ತು ಹೈಕಮಾಂಡ್ ಗಮನಕ್ಕೆ ತಂದು ಸಭೆ ಮಾಡುತ್ತಿದ್ದೀರಾ? ಎಂಬ ಪ್ರಶ್ನೆಗೆ, ನಾನು ಪಕ್ಷದ ಹಿರಿಯ ನಾಯಕ, ಹಾಗಾಗಿ ಪಕ್ಷದ ಪದ್ದತಿ ಗೊತ್ತಿದೆ. ಆ ಪದ್ಧತಿ ಅನುಸಾರ ಸಭೆ ಮಾಡುತ್ತಿದ್ದೇವೆ. ಸಭೆಯಲ್ಲಿ 12 ಜನ ಸೇರಿದ್ದೇವೆ ಎಂದು ಸ್ಪಷ್ಟಪಡಿಸಿದರು.

ಮುಡಾ ಪಾದಯಾತ್ರೆ ಗೈರಾದವರಿಂದ ಸಭೆ ವಿಚಾರಕ್ಕೆ, ನಾವು ಈ ಪಾದಯಾತ್ರೆ ಮಾಡಬೇಕಲ್ಲ. ಸ್ವಲ್ಪ ಶಕ್ತಿ ತುಂಬಿಕೊಳ್ಳಬೇಕಲ್ಲ. ಹಾಗಾಗಿ, ಮೈಸೂರು ಪಾದಯಾತ್ರೆಗೆ ಹೋಗಿರಲಿಲ್ಲ ಎಂದು ಅರವಿಂದ ಲಿಂಬಾವಳಿ ಸಮರ್ಥಿಸಿಕೊಂಡರು.

ವಾಲ್ಮೀಕಿ ನಿಗಮದ ಹಗರಣ ರಾಜ್ಯ ಬಿಜೆಪಿ ನಾಯಕರು ಗಂಭೀರವಾಗಿ ತೆಗೆದುಕೊಳ್ಳದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅರವಿಂದ ಲಿಂಬಾವಳಿ, ಅವರು ಗಂಭೀರವಾಗಿ ತೆಗೆದುಕೊಳ್ಳಲಿ ಅಂತಾನೆ ಈಗ ಚರ್ಚಿಸುತ್ತಿರುವುದು. ಮೈಸೂರು ಪಾದಯಾತ್ರೆ ಬಗ್ಗೆ ನಮ್ಮ ರಾಜ್ಯಾಧ್ಯಕ್ಷರು ಚರ್ಚೆ ಮಾಡಿಯೋ..? ಮಾಡದೆಯೋ..? ಘೋಷಣೆ ಮಾಡಿದ್ದರು. ಆದರೆ, ಈಗ ಸರಿಯಾಗಿ ಚರ್ಚೆ ಮಾಡಿ, ವ್ಯವಸ್ಥಿತವಾಗಿ ಪಾದಯಾತ್ರೆ ಕೈಗೊಳ್ಳುವ ಬಗ್ಗೆ ಸಲಹೆಗಳನ್ನು ಪಡೆದುಕೊಂಡು, ಹೈಕಮಾಂಡ್ ಮತ್ತು ರಾಜ್ಯ ನಾಯಕರಿಗೆ ತಿಳಿಸುತ್ತೇವೆ ಎಂದು ಹೇಳಿದರು.

ಸಭೆಯಲ್ಲಿ ಸೇರಿದ ನಾಯಕರು ರಾಜ್ಯ ಬಿಜೆಪಿ ನಾಯಕರ ವಿರುದ್ಧ ಅಸಮಾಧಾನಗೊಂಡಿದ್ದೀರಾ? ಎಂಬ ಮಾಧ್ಯಮಗಳ ಪ್ರಶ್ನೆಗೆ, ಅದು ನಿಮ್ಮ ಸುದ್ದಿ ಎಂದು ಹೇಳಿ ಅರವಿಂದ ಲಿಂಬಾವಳಿ ಅಲ್ಲಿಂದ ತೆರಳಿದರು.

ಇದನ್ನೂ ಓದಿ : ಬಿಜೆಪಿ ರೆಬೆಲ್ ಶಾಸಕರಿಂದ ಡಿ.ಕೆ.ಸುರೇಶ್ ಭೇಟಿ: ಜನರಿಗೆ ತಪ್ಪಿನ ಅರಿವಾಗಲಿದೆ ಎಂದ ಎಸ್‌.ಟಿ.ಸೋಮಶೇಖರ್ - BJP Rebels Meet D K Suresh

ETV Bharat Logo

Copyright © 2024 Ushodaya Enterprises Pvt. Ltd., All Rights Reserved.