ETV Bharat / state

ಮದುವೆ ಮುಗಿಸಿ ಬರುವಾಗ ಅಪಘಾತ: ಬಿಎಂಟಿಸಿ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವು - BMTC BUS ACCIDENT

ಕಾರಿನ ಬಾಗಿಲಿಗೆ ಡಿಕ್ಕಿ ಹೊಡೆದು ಸ್ಕೂಟರ್​ನಿಂದ ಕೆಳಗೆ ಬಿದ್ದ ಮಹಿಳೆ ಮೇಲೆ ಬಿಎಂಟಿಸಿ ಬಸ್ ಹರಿದ ಘಟನೆ ಪಂತರಪಾಳ್ಯದಲ್ಲಿ ನಡೆದಿದೆ.

BMTC Bus Accident, ಬಿಎಂಟಿಸಿ ಬಸ್ ಅಪಘಾತ
ಮೃತ ಸರೋಜ (ETV Bharat)
author img

By ETV Bharat Karnataka Team

Published : Feb 2, 2025, 11:56 AM IST

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ನಾಯಂಡಹಳ್ಳಿ ಬಳಿಯ ಪಂತರಪಾಳ್ಯದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜ (42) ಮೃತ ದುರ್ದೈವಿ.

ರಾತ್ರಿ 9.45ರ ಸುಮಾರಿಗೆ ಸಹೋದರನ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕೆಳಗೆ ಬಿದ್ದ ಸರೋಜಾ ಮೇಲೆ ಬಸ್ ಹರಿದಿದೆ.

ಜ್ಞಾನಭಾರತಿಯಲ್ಲಿ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಸರೋಜ ಹಾಗೂ ಅವರ ಸಹೋದರ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಪಂತರಪಾಳ್ಯದ ಪೂರ್ಣಿಮಾ ಟಿಂಬರ್ಸ್ ಮುಂಭಾಗದ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿದ್ದ ಚಾಲಕ ಅಜಾಗರೂಕತೆಯಿಂದ ಏಕಾಏಕಿ ಬಾಗಿಲು ತೆರೆದಿದ್ದಾನೆ. ಇದರಿಂದ, ಕಾರಿನ ಬಾಗಿಲಿಗೆ ಸ್ಕೂಟರ್ ಡಿಕ್ಕಿಯಾಗಿ ಸರೋಜ ಹಾಗೂ ಅವರ ಸಹೋದರ ರಸ್ತೆ ಮೇಲೆ ಬಿದ್ದಿದ್ದಾರೆ. ಅದೇ ಸಂದರ್ಭದಲ್ಲಿ ರಸ್ತೆಯ ಬಲಭಾಗದಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರಗಳು ಸರೋಜ ಅವರ ತಲೆ ಮೇಲೆ ಹರಿದಿದೆ. ಪರಿಣಾಮ ಸರೋಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಾಲಕ ಹಾಗೂ ಬಸ್ ಚಾಲಕನ ನಿರ್ಲಕ್ಷ್ಯತನದ ವಿರುದ್ಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ಎರಡು ಬಿಎಂಟಿಸಿ ಬಸ್‌ಗಳು ಪೈಪೋಟಿ‌ಯಲ್ಲಿ ಬಂದಿವೆ. ಅದೇ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಿಎಂಟಿಸಿ ಬಸ್ ಚಾಲಕರು ಸ್ಟೇರಿಂಗ್ ಹಿಡಿದರಷ್ಟೇ ಸಾಲದು, ಅದರೊಳಗೆ ಕೂತಿರುವವರು ಹಾಗೂ ಅಕ್ಕಪಕ್ಕ ಬರುವವರ ಜೀವ ಸಹ ಅವರ ಕೈಯಲ್ಲಿರುತ್ತದೆ ಎಂದು ಮರೆಯಬಾರದು" ಎಂದು ಮೃತ ಸರೋಜ ಅವರ ಸಂಬಂಧಿ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಸಾವನ್ನಪ್ಪಿದ ಮೂವರ ನೇತ್ರದಾನ; 6 ಜನರ ಬದುಕಿಗೆ ಬೆಳಕು, ಸಾರ್ಥಕತೆ ಮೆರೆದ ಕುಟುಂಬ

ಇದನ್ನೂ ಓದಿ: ರಾಜ್ಯ ಕಂಡ ಗಂಭೀರ ಅಪಘಾತ ಪ್ರಕರಣಗಳು: ಸಾವು - ನೋವುಗಳೆಷ್ಟು? ಇಲ್ಲಿದೆ ಅಂಕಿ ಅಂಶ..

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ)ಯ ಬಸ್ ಹರಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಶನಿವಾರ ರಾತ್ರಿ ಬೆಂಗಳೂರಿನ ನಾಯಂಡಹಳ್ಳಿ ಬಳಿಯ ಪಂತರಪಾಳ್ಯದಲ್ಲಿ ನಡೆದಿದೆ. ಕಾಮಾಕ್ಷಿಪಾಳ್ಯದ ನಿವಾಸಿ ಸರೋಜ (42) ಮೃತ ದುರ್ದೈವಿ.

ರಾತ್ರಿ 9.45ರ ಸುಮಾರಿಗೆ ಸಹೋದರನ ಸ್ಕೂಟರ್‌ನಲ್ಲಿ ಹೋಗುತ್ತಿದ್ದಾಗ ಕೆಳಗೆ ಬಿದ್ದ ಸರೋಜಾ ಮೇಲೆ ಬಸ್ ಹರಿದಿದೆ.

ಜ್ಞಾನಭಾರತಿಯಲ್ಲಿ ಸಂಬಂಧಿಕರೊಬ್ಬರ ಮದುವೆ ಮುಗಿಸಿಕೊಂಡು ಸರೋಜ ಹಾಗೂ ಅವರ ಸಹೋದರ ಸ್ಕೂಟರ್‌ನಲ್ಲಿ ತೆರಳುತ್ತಿದ್ದರು. ಪಂತರಪಾಳ್ಯದ ಪೂರ್ಣಿಮಾ ಟಿಂಬರ್ಸ್ ಮುಂಭಾಗದ ರಸ್ತೆಯಲ್ಲಿ ನಿಂತಿದ್ದ ಕಾರಿನಲ್ಲಿದ್ದ ಚಾಲಕ ಅಜಾಗರೂಕತೆಯಿಂದ ಏಕಾಏಕಿ ಬಾಗಿಲು ತೆರೆದಿದ್ದಾನೆ. ಇದರಿಂದ, ಕಾರಿನ ಬಾಗಿಲಿಗೆ ಸ್ಕೂಟರ್ ಡಿಕ್ಕಿಯಾಗಿ ಸರೋಜ ಹಾಗೂ ಅವರ ಸಹೋದರ ರಸ್ತೆ ಮೇಲೆ ಬಿದ್ದಿದ್ದಾರೆ. ಅದೇ ಸಂದರ್ಭದಲ್ಲಿ ರಸ್ತೆಯ ಬಲಭಾಗದಲ್ಲಿ ಬರುತ್ತಿದ್ದ ಬಿಎಂಟಿಸಿ ಬಸ್‌ನ ಹಿಂಬದಿ ಚಕ್ರಗಳು ಸರೋಜ ಅವರ ತಲೆ ಮೇಲೆ ಹರಿದಿದೆ. ಪರಿಣಾಮ ಸರೋಜ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಕಾರು ಚಾಲಕ ಹಾಗೂ ಬಸ್ ಚಾಲಕನ ನಿರ್ಲಕ್ಷ್ಯತನದ ವಿರುದ್ಧ ಬ್ಯಾಟರಾಯನಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

"ಎರಡು ಬಿಎಂಟಿಸಿ ಬಸ್‌ಗಳು ಪೈಪೋಟಿ‌ಯಲ್ಲಿ ಬಂದಿವೆ. ಅದೇ ಸಂದರ್ಭದಲ್ಲಿ ಈ ಅವಘಡ ಸಂಭವಿಸಿದೆ. ಬಿಎಂಟಿಸಿ ಬಸ್ ಚಾಲಕರು ಸ್ಟೇರಿಂಗ್ ಹಿಡಿದರಷ್ಟೇ ಸಾಲದು, ಅದರೊಳಗೆ ಕೂತಿರುವವರು ಹಾಗೂ ಅಕ್ಕಪಕ್ಕ ಬರುವವರ ಜೀವ ಸಹ ಅವರ ಕೈಯಲ್ಲಿರುತ್ತದೆ ಎಂದು ಮರೆಯಬಾರದು" ಎಂದು ಮೃತ ಸರೋಜ ಅವರ ಸಂಬಂಧಿ ಶ್ರೀನಿವಾಸ್ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಅಪಘಾತದಲ್ಲಿ ಸಾವನ್ನಪ್ಪಿದ ಮೂವರ ನೇತ್ರದಾನ; 6 ಜನರ ಬದುಕಿಗೆ ಬೆಳಕು, ಸಾರ್ಥಕತೆ ಮೆರೆದ ಕುಟುಂಬ

ಇದನ್ನೂ ಓದಿ: ರಾಜ್ಯ ಕಂಡ ಗಂಭೀರ ಅಪಘಾತ ಪ್ರಕರಣಗಳು: ಸಾವು - ನೋವುಗಳೆಷ್ಟು? ಇಲ್ಲಿದೆ ಅಂಕಿ ಅಂಶ..

ETV Bharat Logo

Copyright © 2025 Ushodaya Enterprises Pvt. Ltd., All Rights Reserved.