ETV Bharat / state

ಭಾರತ ಸರ್ಕಾರದ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಬಿಎಂಟಿಸಿ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ 'ಅವಾರ್ಡ್ ಆಫ್ ಎಕ್ಸೆಲೆನ್ಸ್ ಇನ್ ಅರ್ಬನ್ ಟ್ರಾನ್ಸ್​​ಪೋರ್ಟ್' ಪ್ರಶಸ್ತಿ ಪಡೆದಿದೆ.

ಭಾರತ ಸರ್ಕಾರ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಬಿಎಂಟಿಸಿ
ಭಾರತ ಸರ್ಕಾರ ಪ್ರತಿಷ್ಠಿತ ಪ್ರಶಸ್ತಿ ಮುಡಿಗೇರಿಸಿಕೊಂಡ ಬಿಎಂಟಿಸಿ (ETV Bharat)
author img

By ETV Bharat Karnataka Team

Published : 3 hours ago

ಗಾಂಧಿನಗರ/ಬೆಂಗಳೂರು: 'ಸಿಟಿ ವಿಥ್ ಬೆಸ್ಟ್ ರೆಕಾರ್ಡ್ ಆಫ್ ಪಬ್ಲಿಕ್ ಇನ್ವಾಲ್ವ್ಮೆಂಟ್ ಇನ್ ಟ್ರಾನ್ಸ್​​ಪೋರ್ಟ್' ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ 'ಅವಾರ್ಡ್ ಆಫ್ ಎಕ್ಸೆಲೆನ್ಸ್ ಇನ್ ಅರ್ಬನ್ ಟ್ರಾನ್ಸ್​​ಪೋರ್ಟ್' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಭಾನುವಾರ ಗುಜರಾತ್​ನ ಗಾಂಧಿನಗರದಲ್ಲಿ ಮಹಾತ್ಮ ಗಾಂಧಿ ಮಂದಿರ ಕನ್ವೆನ್ಷನ್ ಸೆಂಟರ್​ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್​ ಅವರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿದ ಕೇಂದ್ರ ಸಚಿವ ಮನೋಹರಲಾಲ್
ಪ್ರಶಸ್ತಿ ಸ್ವೀಕರಿಸಿದ ಕೇಂದ್ರ ಸಚಿವ ಮನೋಹರಲಾಲ್ (ETV Bharat)

ಭಾರತ ಸರ್ಕಾರದ ಈ ಪ್ರತಿಷ್ಠಿತ ಪ್ರಶಸ್ತಿಯು ನಾಗರಿಕರ ಸುರಕ್ಷತೆ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದಕ್ಕೆ ಮೀಸಲಿದ್ದು, ಅಕ್ಟೋಬರ್ ತಿಂಗಳಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದೇಶದ ಇತರೆ ನಗರ ಸಾರಿಗೆ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್​ಗಳೊಂದಿಗೆ ಸ್ಪರ್ಧಿಸಿ ಈ ಪುರಸ್ಕಾರವನ್ನು ಪಡೆದಿದೆ.

ಪ್ರಶಸ್ತಿ ಪತ್ರ
ಪ್ರಶಸ್ತಿ ಪತ್ರ (ETV Bharat)

ನಗರದೊಳಗೆ ಪ್ರಯಾಣಿಸಲು ನಾಗರಿಕರಿಗೆ ಸುರಕ್ಷಿತ, ಪರಿಸರ ಸ್ನೇಹಿ ಮಾರ್ಗವನ್ನು ಒದಗಿಸುವುದು ಸಂಸ್ಥೆಯ ಗುರಿಯಾಗಿದ್ದು ಹೆಚ್ಎಸ್ಆರ್ ಬಡಾವಣೆಯ ನಾಗರಿಕರಿಗೆ ವಿನೂತನ ಮಾದರಿಯ ಬಡಾವಣೆ ಒಳಗಿನ ಸೇವೆಯಿಂದ ಸಾರ್ವಜನಿಕ ಮನ್ನಣೆ ಪಡೆದಿದೆ. ರಾಷ್ಟ್ರದಾದ್ಯಂತ ಈ ಮಾದರಿಯ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಎಸ್.ಬಂಗಾರಪ್ಪ ಜನ್ಮದಿನ: ಮೂವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ಗಾಂಧಿನಗರ/ಬೆಂಗಳೂರು: 'ಸಿಟಿ ವಿಥ್ ಬೆಸ್ಟ್ ರೆಕಾರ್ಡ್ ಆಫ್ ಪಬ್ಲಿಕ್ ಇನ್ವಾಲ್ವ್ಮೆಂಟ್ ಇನ್ ಟ್ರಾನ್ಸ್​​ಪೋರ್ಟ್' ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ನೀಡುವ 'ಅವಾರ್ಡ್ ಆಫ್ ಎಕ್ಸೆಲೆನ್ಸ್ ಇನ್ ಅರ್ಬನ್ ಟ್ರಾನ್ಸ್​​ಪೋರ್ಟ್' ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.

ಭಾನುವಾರ ಗುಜರಾತ್​ನ ಗಾಂಧಿನಗರದಲ್ಲಿ ಮಹಾತ್ಮ ಗಾಂಧಿ ಮಂದಿರ ಕನ್ವೆನ್ಷನ್ ಸೆಂಟರ್​ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಮನೋಹರ್ ಲಾಲ್ ಖಟ್ಟರ್​ ಅವರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದರು.

ಪ್ರಶಸ್ತಿ ಸ್ವೀಕರಿಸಿದ ಕೇಂದ್ರ ಸಚಿವ ಮನೋಹರಲಾಲ್
ಪ್ರಶಸ್ತಿ ಸ್ವೀಕರಿಸಿದ ಕೇಂದ್ರ ಸಚಿವ ಮನೋಹರಲಾಲ್ (ETV Bharat)

ಭಾರತ ಸರ್ಕಾರದ ಈ ಪ್ರತಿಷ್ಠಿತ ಪ್ರಶಸ್ತಿಯು ನಾಗರಿಕರ ಸುರಕ್ಷತೆ ಮತ್ತು ಪರಿಸರ ಸ್ನೇಹಿ ಸಾರಿಗೆ ವ್ಯವಸ್ಥೆಯನ್ನು ಪ್ರೋತ್ಸಾಹಿಸುವುದಕ್ಕೆ ಮೀಸಲಿದ್ದು, ಅಕ್ಟೋಬರ್ ತಿಂಗಳಿನಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ದೇಶದ ಇತರೆ ನಗರ ಸಾರಿಗೆ ಸಂಸ್ಥೆಗಳು ಮತ್ತು ಮುನ್ಸಿಪಲ್ ಕಾರ್ಪೊರೇಷನ್​ಗಳೊಂದಿಗೆ ಸ್ಪರ್ಧಿಸಿ ಈ ಪುರಸ್ಕಾರವನ್ನು ಪಡೆದಿದೆ.

ಪ್ರಶಸ್ತಿ ಪತ್ರ
ಪ್ರಶಸ್ತಿ ಪತ್ರ (ETV Bharat)

ನಗರದೊಳಗೆ ಪ್ರಯಾಣಿಸಲು ನಾಗರಿಕರಿಗೆ ಸುರಕ್ಷಿತ, ಪರಿಸರ ಸ್ನೇಹಿ ಮಾರ್ಗವನ್ನು ಒದಗಿಸುವುದು ಸಂಸ್ಥೆಯ ಗುರಿಯಾಗಿದ್ದು ಹೆಚ್ಎಸ್ಆರ್ ಬಡಾವಣೆಯ ನಾಗರಿಕರಿಗೆ ವಿನೂತನ ಮಾದರಿಯ ಬಡಾವಣೆ ಒಳಗಿನ ಸೇವೆಯಿಂದ ಸಾರ್ವಜನಿಕ ಮನ್ನಣೆ ಪಡೆದಿದೆ. ರಾಷ್ಟ್ರದಾದ್ಯಂತ ಈ ಮಾದರಿಯ ಸೇವೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ ಎಂದು ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕ ರಾಮಚಂದ್ರನ್ ಹೇಳಿದ್ದಾರೆ.

ಇದನ್ನೂ ಓದಿ: ಮಾಜಿ ಸಿಎಂ ಎಸ್.ಬಂಗಾರಪ್ಪ ಜನ್ಮದಿನ: ಮೂವರು ಸಾಧಕರಿಗೆ ಪ್ರಶಸ್ತಿ ಪ್ರದಾನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.