ETV Bharat / state

ರಸ್ತೆಬದಿ ಮೂತ್ರ ವಿಸರ್ಜನೆಗೆ ತೆರಳಿದಾಗ ಬಸ್ ಹರಿದು ಬಾಲಕ ಸಾವು​ - Bus Ran Over Boy

author img

By ETV Bharat Karnataka Team

Published : Sep 8, 2024, 3:53 PM IST

ಮೂತ್ರ ವಿಸರ್ಜನೆಗೆಂದು ಬಾಲಕರು ಶಾಲೆಯಿಂದ ರಸ್ತೆಬದಿಗೆ ಬಂದಿದ್ದಾರೆ. ಈ ವೇಳೆ ವೇಗವಾಗಿ ಬಂದ ಕೆಎಸ್​ಆರ್​ಟಿಸಿ ಬಸ್​ ಓರ್ವ ಬಾಲಕನ ಮೇಲೆ ಹರಿಯಿತು. ಪರಿಣಾಮ, ಗಂಭೀರವಾಗಿ ಗಾಯಗೊಂಡ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಉಳಿದ ಮಕ್ಕಳು ಕೂದಲೆಳೆ ಅಂತರದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕೋಡಿಯಲ್ಲಿ ನಡೆದ ಘಟನೆಯ ಸಂಪೂರ್ಣ ವಿವರ ಇಲ್ಲಿದೆ.

ಸಿಸಿಟಿವಿ ದೃಶ್ಯ
ಸಿಸಿಟಿವಿ ದೃಶ್ಯ (ETV Bharat)

ಚಿಕ್ಕೋಡಿ: ಸಹಪಾಠಿಗಳೊಂದಿಗೆ ಮೂತ್ರ ವಿಸರ್ಜನೆಗೆ ತೆರಳಿದ ಬಾಲಕನ ಮೇಲೆ ಕೆಎಸ್​ಆರ್​ಟಿಸಿ ಬಸ್​ ಹರಿದು ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟರೆ, ಎಂಟು ವಿದ್ಯಾರ್ಥಿಗಳು ಕೂದಲೆಳೆ ಅಂತರದಿಂದ ಅಪಘಾತದಿಂದ ಪಾರಾದ ಇಂದು ಘಟನೆ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆಯಿತು.

ವಿದ್ಯಾರ್ಥಿ ಸೃಜನ್​ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ ಎಂದು ಗುರುತಿಸಲಾಗಿದೆ. ಕಂಪ್ಯೂಟರ್​ ಕ್ಲಾಸ್​ಗೆಂದು ಬಂದಿದ್ದ ಬಾಲಕರು ಎಂದಿನಂತೆ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಅಥಣಿ ಮಾರ್ಗವಾಗಿ ಕಾರವಾರಕ್ಕೆ ಹೊರಟಿದ್ದ ಬಸ್​ ಅತಿ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಬಸ್​ ಚಾಲಕನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಬಂಟ್ವಾಳ ಬಳಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ

ಚಿಕ್ಕೋಡಿ: ಸಹಪಾಠಿಗಳೊಂದಿಗೆ ಮೂತ್ರ ವಿಸರ್ಜನೆಗೆ ತೆರಳಿದ ಬಾಲಕನ ಮೇಲೆ ಕೆಎಸ್​ಆರ್​ಟಿಸಿ ಬಸ್​ ಹರಿದು ಓರ್ವ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟರೆ, ಎಂಟು ವಿದ್ಯಾರ್ಥಿಗಳು ಕೂದಲೆಳೆ ಅಂತರದಿಂದ ಅಪಘಾತದಿಂದ ಪಾರಾದ ಇಂದು ಘಟನೆ ಅಥಣಿ ಪಟ್ಟಣದ ಗಲಗಲಿ ಆಸ್ಪತ್ರೆ ಬಳಿ ನಡೆಯಿತು.

ವಿದ್ಯಾರ್ಥಿ ಸೃಜನ್​ ಬಂಡರಗರ್ (10) ಸ್ಥಳದಲ್ಲೇ ಸಾವನ್ನಪ್ಪಿದ ಬಾಲಕ ಎಂದು ಗುರುತಿಸಲಾಗಿದೆ. ಕಂಪ್ಯೂಟರ್​ ಕ್ಲಾಸ್​ಗೆಂದು ಬಂದಿದ್ದ ಬಾಲಕರು ಎಂದಿನಂತೆ ರಸ್ತೆ ಬದಿಯಲ್ಲಿ ಮೂತ್ರ ವಿಸರ್ಜನೆಗೆ ತೆರಳಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ.

ಅಥಣಿ ಮಾರ್ಗವಾಗಿ ಕಾರವಾರಕ್ಕೆ ಹೊರಟಿದ್ದ ಬಸ್​ ಅತಿ ವೇಗವಾಗಿ ಚಲಿಸುತ್ತಿತ್ತು. ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು.

ಅಥಣಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆರೋಪಿ ಬಸ್​ ಚಾಲಕನನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆಯ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ: ಬಂಟ್ವಾಳ ಬಳಿ ಭೀಕರ ಕಾರು ಅಪಘಾತ: ನವವಿವಾಹಿತೆ ಸಾವು, ಪತಿ ಗಂಭೀರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.