ETV Bharat / state

ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸ ಕಳೆದುಕೊಂಡಂತೆ ಕಾಣುತ್ತಿದೆ : ಸಿಎಂಗೆ ಬಿ.ವೈ. ವಿಜಯೇಂದ್ರ ತಿರುಗೇಟು - BY VIJAYENDRA

ನಮ್ಮ ಶಾಸಕರಿಗೆ 50 ಕೋಟಿ ಆಫರ್ ಮಾಡಲಾಗಿದೆ ಎಂದು ಆರೋಪಿಸಿರುವ ಸಿಎಂ ಸಿದ್ದರಾಮಯ್ಯಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.

ಸಿಎಂ ಸಿದ್ದರಾಮಯ್ಯರಿಂದ ಕಪೋಲಕಲ್ಪಿತ ಆರೋಪವೆಂದ ಬಿ.ವೈ. ವಿಜಯೇಂದ್ರ
ಸಿಎಂ ಸಿದ್ದರಾಮಯ್ಯರಿಂದ ಕಪೋಲಕಲ್ಪಿತ ಆರೋಪವೆಂದ ಬಿ.ವೈ. ವಿಜಯೇಂದ್ರ (IANS)
author img

By ETV Bharat Karnataka Team

Published : Nov 14, 2024, 1:15 PM IST

ಬೆಂಗಳೂರು: "ಸಿಎಂ ಸಿದ್ದರಾಮಯ್ಯನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್​ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ" ಎಂದು ವಾಗ್ದಾಳಿ ನಡೆಸಿದ್ದಾರೆ.

"ಸುಳ್ಳು, ಭಂಡತನ, ಕಪೋಲಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣಿ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟು ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ" ಎಂದು ಟೀಕಿಸಿದ್ದಾರೆ.

"ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ. 50 ಕೋಟಿ ರೂ. ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ".

"ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ. ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ. ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ".

"ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ. ಈ ನಿಟ್ಟಿನಲ್ಲಿ ಇ. ಡಿ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ, ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ" ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯಿಂದ ಸತತ ಪ್ರಯತ್ನ: ಸಚಿವ ಜಿ.ಪರಮೇಶ್ವರ್

ಬೆಂಗಳೂರು: "ಸಿಎಂ ಸಿದ್ದರಾಮಯ್ಯನವರೇ, ಬಹುಶಃ ನಿಮ್ಮ ಶಾಸಕರ ಮೇಲೆ ನೀವು ವಿಶ್ವಾಸವನ್ನು ಕಳೆದುಕೊಂಡಂತೆ ಕಾಣುತ್ತಿದೆ. ಅದಕ್ಕಾಗಿಯೇ ₹50 ಕೋಟಿಗೆ ಅವರು ಮಾರಾಟವಾಗುತ್ತಿದ್ದಾರೆ ಎಂಬ ಕಪೋಲಕಲ್ಪಿತ ಆರೋಪ ಮಾಡುತ್ತಿದ್ದೀರಿ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, "ಇದು ನೀವು ಪ್ರಜಾಪ್ರಭುತ್ವ ವ್ಯವಸ್ಥೆಗೆ ಹಾಗೂ ಶಾಸಕರನ್ನು ಮಾರಾಟದ ವಸ್ತುಗಳಂತೆ ವ್ಯಾಖ್ಯಾನಿಸಿ ಅವರಿಗೆ ಮಾಡುತ್ತಿರುವ ಅವಮಾನವಾಗಿದೆ. ನಿಮ್ಮ ಈ ಹೇಳಿಕೆ ಕಾಂಗ್ರೆಸ್​ ಶಾಸಕರುಗಳನ್ನು ಅಂಕೆಯಲಿಟ್ಟುಕೊಳ್ಳಲು ಹಾಗೂ ನಿಮ್ಮನ್ನು ಸುತ್ತುವರೆದಿರುವ ಭ್ರಷ್ಟಾಚಾರದ ಹಗರಣಗಳನ್ನು ಮುಚ್ಚಿಕೊಳ್ಳಲು ಹೆಣೆದಿರುವ ಹತಾಶೆಯ ಸುಳ್ಳಿನ ಕಂತೆ ಎನ್ನುವುದು ಕನಿಷ್ಠ ರಾಜಕೀಯ ಜ್ಞಾನ ಇರುವವರಿಗೂ ಅರಿವಾಗುತ್ತದೆ" ಎಂದು ವಾಗ್ದಾಳಿ ನಡೆಸಿದ್ದಾರೆ.

"ಸುಳ್ಳು, ಭಂಡತನ, ಕಪೋಲಕಲ್ಪಿತ ಸುದ್ದಿಗಳನ್ನು ಹರಿಬಿಡುವುದು ನಿಮ್ಮ ಹಾಗೂ ನಿಮ್ಮ ಪಕ್ಷದ ನಿತ್ಯ ಮಂತ್ರವಾಗಿದೆ. ನೀವು ನಡೆಸಿರುವ ಸರಣಿ ಹಗರಣಗಳ ಹಿನ್ನೆಲೆಯ ಉರುಳು ಬಿಗಿಯಾಗುತ್ತಿರುವಷ್ಟು ನಿದ್ದೆಗೆಡುತ್ತಿರುವ ನಿಮ್ಮ ಮನಸ್ಸು ಅಸ್ಥಿರಗೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರಚಲಿತ ಬೆಳವಣಿಗೆಯನ್ನು ವಿಚಲಿತಗೊಳಿಸುವುದು ಹೇಗೆ ಎಂಬುದರತ್ತಲೇ ನೀವು ನಿಗಾ ಇಟ್ಟಿರುವಂತೆ ಕಾಣುತ್ತಿದೆ" ಎಂದು ಟೀಕಿಸಿದ್ದಾರೆ.

"ಮುಖ್ಯಮಂತ್ರಿಯಂತಹ ಜವಾಬ್ದಾರಿ ಸ್ಥಾನದಲ್ಲಿ ಕುಳಿತಿರುವ ನೀವು ಅದರ ಘನತೆಯನ್ನು ಕುಗ್ಗಿಸುವ ರೀತಿಯಲ್ಲಿ ನಡೆದುಕೊಳ್ಳುತ್ತಿದ್ದೀರಿ, ನಿಮ್ಮದೇ ಸರ್ಕಾರವಿದೆ, ನಿಮ್ಮದೇ ತನಿಖಾ ಸಂಸ್ಥೆಗಳಿವೆ. 50 ಕೋಟಿ ರೂ. ಆಮಿಷದ ಮೂಲ ಯಾವುದು ಎನ್ನುವುದನ್ನು ಜನರ ಮುಂದೆ ಬಹಿರಂಗಪಡಿಸುವುದು ನಿಮ್ಮ ನೈತಿಕ ಜವಾಬ್ದಾರಿಯಾಗಿರುತ್ತದೆ. ಇಲ್ಲದಿದ್ದರೆ ನಿಮ್ಮ ಹೇಳಿಕೆ ಬಾಲಿಶ ರಾಜಕೀಯ ಹೇಳಿಕೆಯಾಗುತ್ತದೆಯಷ್ಟೆ".

"ಒಂದು ಕಡೆ ನಿಮ್ಮ ಪುತ್ರ ನ್ಯಾಯಾಂಗ ವ್ಯವಸ್ಥೆಯನ್ನೇ ಅಪಮಾನಿಸುವ ಆರೋಪ ಮಾಡಿದರೆ, ಮತ್ತೊಂದೆಡೆ ನೀವು ಅಧಿಕಾರ ಕಳೆದುಕೊಳ್ಳುವ ಭಯದಲ್ಲಿ ಹತಾಶೆಯಿಂದ ವರ್ತಿಸುತ್ತಿದ್ದೀರಿ. ನಿಮ್ಮನ್ನು ಅಧಿಕಾರದಿಂದ ಕೆಳಗಿಳಿಸಿದರೆ ಜನ ಸುಮ್ಮನೆ ಬಿಡುವುದಿಲ್ಲ ಎಂದು ಅಬ್ಬರಿಸುತ್ತಿದ್ದೀರಿ. ಆದರೆ ವಾಸ್ತವ ಸಂಗತಿ ಏನೆಂದರೆ, ಕರ್ನಾಟಕದ ಜನತೆ ನಿಮ್ಮಂಥ ಭ್ರಷ್ಟ ಮುಖ್ಯಮಂತ್ರಿ ಇನ್ನೂ ಅಧಿಕಾರದಿಂದ ಕೆಳಗಿಳಿಯದೇ ಭಂಡತನ ಪ್ರದರ್ಶಿಸುತ್ತಿದ್ದಾರಲ್ಲ ಎಂದು ರಸ್ತೆಯಲ್ಲಿ ನಿಂತು ಮಾತನಾಡಿಕೊಳ್ಳುತ್ತಿದ್ದಾರೆ. ನಿಮ್ಮ ಗುಪ್ತಚರ ಇಲಾಖೆ ಈ ವಿಷಯವನ್ನು ನಿಮಗೆ ಮುಟ್ಟಿಸಿರಲೇಬೇಕು. ಆದ್ದರಿಂದಲೇ ನೀವು ಇಷ್ಟೊಂದು ವಿಚಲಿತರಾದಂತೆ ಕಪೋಲ ಕಲ್ಪಿತ ಕಥೆಗಳನ್ನು ಸೃಷ್ಟಿಸಿಕೊಂಡು ಬಡ ಬಡಿಸುತ್ತಿದ್ದೀರಿ".

"ನೀವು ಮುಖ್ಯಮಂತ್ರಿ ಸ್ಥಾನದಲ್ಲಿ ಕುಳಿತು 50 ಕೋಟಿ ಆಮಿಷದ ಗಂಭೀರ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಸರ್ಕಾರ ಬೀಳಿಸಲು ಸಾವಿರಾರು ಕೋಟಿ ಬಂಡವಾಳ ಹೂಡಲು ತಯಾರಾಗಿರುವವರು ಯಾರು? ಎಂಬುದು ಬಹಿರಂಗವಾಗಬೇಕಿದೆ. ಈ ನಿಟ್ಟಿನಲ್ಲಿ ಇ. ಡಿ. ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಕೂಡಲೇ ತನಿಖೆ ನಡೆಸುವುದು ತುರ್ತು ಅಗತ್ಯವಿದೆ, ರಾಜ್ಯದ ಜನತೆಗೆ ಸತ್ಯ ತಿಳಿಯಬೇಕಿದೆ" ಎಂದು ವಿಜಯೇಂದ್ರ ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಿಂದ ಕಾಂಗ್ರೆಸ್​ನ 50 ಶಾಸಕರಿಗೆ ತಲಾ 50 ಕೋಟಿ ರೂಪಾಯಿ ಆಫರ್: ಸಿಎಂ ಸಿದ್ದರಾಮಯ್ಯ

ಇದನ್ನೂ ಓದಿ: ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿಯಿಂದ ಸತತ ಪ್ರಯತ್ನ: ಸಚಿವ ಜಿ.ಪರಮೇಶ್ವರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.