ETV Bharat / state

ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಗ್ಯಾರಂಟಿಗೆ ಬಳಕೆ ಕುರಿತ ಎಸ್ಸಿ ರಾಷ್ಟ್ರೀಯ ಆಯೋಗದ ಪತ್ರಕ್ಕೆ ರಾಜ್ಯ ಉತ್ತರಿಸಲಿ: ವಿಜಯೇಂದ್ರ - B Y Vijayendra

ದಲಿತರ ಅಭಿವೃದ್ಧಿಗೆ ಇಟ್ಟಿರುವ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡು ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ಸ್ಪಷ್ಟವಾಗಿ ಆರೋಪ ಮಾಡಿದ್ದೆವು. ಈಗ ಎಸ್​ಸಿ ರಾಷ್ಟ್ರೀಯ ಆಯೋಗದಿಂದ ರಾಜ್ಯಕ್ಕೆ ಪತ್ರ ಬಂದಿದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

author img

By ETV Bharat Karnataka Team

Published : Jul 11, 2024, 5:12 PM IST

BJP State President B Y Vijeyendra
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)

ಬೆಂಗಳೂರು: "ಎಸ್​ಸಿಪಿ ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವ ಕುರಿತು ವಾರದೊಳಗೆ ವರದಿ ಕೊಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಪತ್ರ ಬರೆದಿದೆ. ದೆಹಲಿಯಿಂದ ಬರೆದಿರುವ ಪತ್ರಕ್ಕೆ ಉತ್ತರ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ, ಸದನದ ಒಳಗಡೆಯೂ ನಾವು ಈ ವಿಚಾರದ ಕುರಿತು ಹೋರಾಟ ನಡೆಸುತ್ತೇವೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರು ಅಹಿಂದ ನಾಯಕರು, ದಲಿತರ ಉದ್ಧಾರಕರು ಅಂತ ತಮ್ಮ ಬೆನ್ನು ತಾವೇ ತಟ್ಟಿಕೊಳ್ತಾರೆ. ತಮ್ಮ ಬಗ್ಗೆ ತಾವೇ ಕೊಚ್ಚಿಕೊಳ್ತಾರೆ. ಅಧಿಕಾರಕ್ಕೆ ಬರುತ್ತಿದ್ದಂತೆ ಎಸ್​ಸಿಪಿ ಟಿಎಸ್​ಪಿಗೆ ಮೀಸಲಿಟ್ಟಿದ್ದ ಹಣದಲ್ಲಿ 12 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿಕೊಂಡರು. 6 ತಿಂಗಳ ನಂತರ ಮತ್ತೆ 12.5 ಸಾವಿರ ಕೋಟಿ ಸೇರಿ ಒಟ್ಟು 24.5 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದೀರಿ. ದಲಿತರ ಉದ್ಧಾರಕ್ಕೋಸ್ಕರ ಇಟ್ಟಿರುವ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ಸ್ಪಷ್ಟವಾಗಿ ಆರೋಪ ಮಾಡಿದ್ದೆವು. ಈಗ ಎಸ್​ಸಿ ರಾಷ್ಟ್ರೀಯ ಆಯೋಗದಿಂದ ರಾಜ್ಯಕ್ಕೆ ಈ ಸಂಬಂಧ ಪತ್ರ ಬಂದಿದೆ. ಇದಕ್ಕೆ ಸ್ಪಷ್ಟ ಉತ್ತರ ನೀಡಬೇಕು. ಇದು ರಾಜ್ಯ ಸರ್ಕಾರದ ಜವಾಬ್ದಾರಿ" ಎಂದರು.

"ನಮ್ಮ ಆರೋಪವನ್ನು ಅಲ್ಲಗಳೆಯುತ್ತಾ, ಈ ಹಣ ದಲಿತರ ಅಭಿವೃದ್ಧಿಗೆ ಬಳಕೆಯಾಗಿದೆ. ದುರ್ಬಳಕೆ ಆಗಿಲ್ಲ ಎನ್ನುತ್ತಿದ್ದಾರೆ. ಈ ರೀತಿ ಹೇಳಿಕೆ ಮೂಲಕ ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡಿದ್ದು ಅಕ್ಷಮ್ಯ ಅಪರಾಧ. ಈಗಾಗಲೇ ನಾವು ರಾಜ್ಯಾದ್ಯಂತ ಇದರ ವಿರುದ್ಧ ಹೋರಾಟ ಮಾಡಿದ್ದೇವೆ. ಸದನದ ಒಳಗಡೆಯೂ ಹೋರಾಟ ಮಾಡಲಿದ್ದೇವೆ" ಎಂದರು.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ 2 ಅಕೌಂಟ್ಂದ ಹಣ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಈ ಪ್ರಕರಣದಲ್ಲಿ ಈಗ ಬಹಿರಂಗವಾಗಿರುವುದಷ್ಟೇ ಅಲ್ಲ ಇನ್ನೂ ಅನೇಕರ ಹೆಸರು ಹೊರಗೆ ಬರಲಿವೆ" ಎಂದರು.

ಇದನ್ನೂ ಓದಿ: ಎಸ್​​ಸಿ - ಎಸ್​​ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿರಿಸಿದ ಹಣ ಇತರ ಉದ್ದೇಶಕ್ಕೆ ಬಳಸಲ್ಲ: ಸಿಎಂ

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (ETV Bharat)

ಬೆಂಗಳೂರು: "ಎಸ್​ಸಿಪಿ ಟಿಎಸ್​ಪಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಂಡಿರುವ ಕುರಿತು ವಾರದೊಳಗೆ ವರದಿ ಕೊಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ಪತ್ರ ಬರೆದಿದೆ. ದೆಹಲಿಯಿಂದ ಬರೆದಿರುವ ಪತ್ರಕ್ಕೆ ಉತ್ತರ ನೀಡುವುದು ರಾಜ್ಯ ಸರ್ಕಾರದ ಜವಾಬ್ದಾರಿ, ಸದನದ ಒಳಗಡೆಯೂ ನಾವು ಈ ವಿಚಾರದ ಕುರಿತು ಹೋರಾಟ ನಡೆಸುತ್ತೇವೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಿಳಿಸಿದ್ದಾರೆ.

ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಿದ್ದರಾಮಯ್ಯ ಅವರು ಅಹಿಂದ ನಾಯಕರು, ದಲಿತರ ಉದ್ಧಾರಕರು ಅಂತ ತಮ್ಮ ಬೆನ್ನು ತಾವೇ ತಟ್ಟಿಕೊಳ್ತಾರೆ. ತಮ್ಮ ಬಗ್ಗೆ ತಾವೇ ಕೊಚ್ಚಿಕೊಳ್ತಾರೆ. ಅಧಿಕಾರಕ್ಕೆ ಬರುತ್ತಿದ್ದಂತೆ ಎಸ್​ಸಿಪಿ ಟಿಎಸ್​ಪಿಗೆ ಮೀಸಲಿಟ್ಟಿದ್ದ ಹಣದಲ್ಲಿ 12 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ವರ್ಗಾವಣೆ ಮಾಡಿಕೊಂಡರು. 6 ತಿಂಗಳ ನಂತರ ಮತ್ತೆ 12.5 ಸಾವಿರ ಕೋಟಿ ಸೇರಿ ಒಟ್ಟು 24.5 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಿಕೊಂಡಿದ್ದೀರಿ. ದಲಿತರ ಉದ್ಧಾರಕ್ಕೋಸ್ಕರ ಇಟ್ಟಿರುವ ಹಣವನ್ನು ಗ್ಯಾರಂಟಿಗೆ ವರ್ಗಾವಣೆ ಮಾಡಿಕೊಂಡು ದಲಿತರಿಗೆ ಅನ್ಯಾಯ ಮಾಡಿದ್ದೀರಿ ಎಂದು ಸ್ಪಷ್ಟವಾಗಿ ಆರೋಪ ಮಾಡಿದ್ದೆವು. ಈಗ ಎಸ್​ಸಿ ರಾಷ್ಟ್ರೀಯ ಆಯೋಗದಿಂದ ರಾಜ್ಯಕ್ಕೆ ಈ ಸಂಬಂಧ ಪತ್ರ ಬಂದಿದೆ. ಇದಕ್ಕೆ ಸ್ಪಷ್ಟ ಉತ್ತರ ನೀಡಬೇಕು. ಇದು ರಾಜ್ಯ ಸರ್ಕಾರದ ಜವಾಬ್ದಾರಿ" ಎಂದರು.

"ನಮ್ಮ ಆರೋಪವನ್ನು ಅಲ್ಲಗಳೆಯುತ್ತಾ, ಈ ಹಣ ದಲಿತರ ಅಭಿವೃದ್ಧಿಗೆ ಬಳಕೆಯಾಗಿದೆ. ದುರ್ಬಳಕೆ ಆಗಿಲ್ಲ ಎನ್ನುತ್ತಿದ್ದಾರೆ. ಈ ರೀತಿ ಹೇಳಿಕೆ ಮೂಲಕ ಕಾಂಗ್ರೆಸ್ ದಲಿತರಿಗೆ ಅನ್ಯಾಯ ಮಾಡಿದ್ದು ಅಕ್ಷಮ್ಯ ಅಪರಾಧ. ಈಗಾಗಲೇ ನಾವು ರಾಜ್ಯಾದ್ಯಂತ ಇದರ ವಿರುದ್ಧ ಹೋರಾಟ ಮಾಡಿದ್ದೇವೆ. ಸದನದ ಒಳಗಡೆಯೂ ಹೋರಾಟ ಮಾಡಲಿದ್ದೇವೆ" ಎಂದರು.

ವಾಲ್ಮೀಕಿ ನಿಗಮ ಹಗರಣ ಪ್ರಕರಣದಲ್ಲಿ 2 ಅಕೌಂಟ್ಂದ ಹಣ ಹೋಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ವಿಜಯೇಂದ್ರ, ಈ ಪ್ರಕರಣದಲ್ಲಿ ಈಗ ಬಹಿರಂಗವಾಗಿರುವುದಷ್ಟೇ ಅಲ್ಲ ಇನ್ನೂ ಅನೇಕರ ಹೆಸರು ಹೊರಗೆ ಬರಲಿವೆ" ಎಂದರು.

ಇದನ್ನೂ ಓದಿ: ಎಸ್​​ಸಿ - ಎಸ್​​ಟಿ ಸಮುದಾಯದ ಕಲ್ಯಾಣಕ್ಕೆ ಮೀಸಲಿರಿಸಿದ ಹಣ ಇತರ ಉದ್ದೇಶಕ್ಕೆ ಬಳಸಲ್ಲ: ಸಿಎಂ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.