ETV Bharat / state

ನ್ಯಾ. ಕೆಂಪಣ್ಣ ಆಯೋಗದ ವರದಿ ಬಹಿರಂಗಕ್ಕೆ ಸರ್ಕಾರಕ್ಕೆ ನಿರ್ದೇಶನ ನೀಡಿ : ರಾಜ್ಯಪಾಲರಿಗೆ ಪತ್ರ ಬರೆದ ಸಿ ಟಿ ರವಿ - C T Ravi wrote letter to governer

author img

By ETV Bharat Karnataka Team

Published : 2 hours ago

ನ್ಯಾಯಮೂರ್ತಿ ಕೆಂಪಣ್ಣ ಅವರ ನ್ಯಾಯಾಂಗ ತನಿಖಾ ಆಯೋಗದ ವರದಿಯನ್ನು ಬಹಿರಂಗಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಎಂಎಲ್​ಸಿ ಸಿ. ಟಿ ರವಿ ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.

Governor Thawar Chand Gehlot and CT Ravi
ರಾಜ್ಯಪಾಲ ಥಾವರ್ ಚಂದ್​ ಗೆಹ್ಲೋಟ್ ಹಾಗೂ ಸಿ ಟಿ ರವಿ (ETV Bharat)

ಬೆಂಗಳೂರು : ಭ್ರಷ್ಟಾಚಾರ ಆರೋಪಗಳು ಮತ್ತು ಅಕ್ರಮ ಡಿನೋಟಿಫಿಕೇಶನ್ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಅವರ ನ್ಯಾಯಾಂಗ ತನಿಖಾ ಆಯೋಗದ ವರದಿಯನ್ನು ಬಹಿರಂಗಪಡಿಸಲು, ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಮರ್ಪಿತ ನಾಗರಿಕ ಮತ್ತು ಸಾರ್ವಜನಿಕ ಪ್ರತಿನಿಧಿಯಾಗಿ, ಸಮಾಜಕ್ಕೆ ಕೊಡುಗೆ ನೀಡುವುದು ನನ್ನ ಜವಾಬ್ದಾರಿ ಎಂದು ನಾನು ನಂಬುತ್ತೇನೆ. ಹಿಂದಿನ ಕಾಂಗ್ರೆಸ್ ಆಡಳಿತ ನಡೆಸಿದ್ದ 852 ಎಕರೆ "ರೀ-ಡು" ಅಥವಾ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದ ಅರ್ಕಾವತಿ ಬಡಾವಣೆ ವಿವಾದದ ಬಗ್ಗೆ ನಿಮ್ಮ ಗಮನ ಸೆಳೆಯಲು ನಾನು ಬಯಸುತ್ತೇನೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. 2014ರಲ್ಲಿ ಹಾಗೂ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ "ನ್ಯಾಯಮೂರ್ತಿ ಕೆಂಪಣ್ಣ" ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದರು.

ನ್ಯಾಯಮೂರ್ತಿ ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ನ್ಯಾಯಾಂಗ ತನಿಖಾ ವರದಿಗಳನ್ನು ಸಾರ್ವಜನಿಕ ದಾಖಲೆಗಳೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಬಾಧ್ಯತೆಯಾಗಿದೆ. ವಿಷಾದನೀಯವೆಂದರೆ, ಮುಖ್ಯಮಂತ್ರಿಗಳ ಕಾರ್ಯಾಲಯವು ಈ ವರದಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯವಾಗುವಂತೆ ಮಾಡಿಲ್ಲ ಎಂದು ಪತ್ರದಲ್ಲಿ ಸಿ. ಟಿ ರವಿ ಆರೋಪಿಸಿದ್ದಾರೆ‌.

ಕರ್ನಾಟಕದ ಜನತೆಯ ಪ್ರತಿನಿಧಿಯಾಗಿ ಈ ವರದಿಯ ಬಿಡುಗಡೆಯನ್ನು ಎದುರು ನೋಡುತ್ತಿದ್ದೇನೆ. ಆದಾಗ್ಯೂ, ನಡೆಯುತ್ತಿರುವ ಗೌಪ್ಯತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳಿವೆ. ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಹಾಗಾಗಿ, ನ್ಯಾಯಮೂರ್ತಿ ಕೆಂಪಣ್ಣ ಅವರ ವರದಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲು ಕರ್ನಾಟಕದ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಬೇಕೆಂದು ನಾನು ಗೌರವದಿಂದ ವಿನಂತಿಸುತ್ತೇನೆ ಎಂದು ಸುದೀರ್ಘ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಿಎಂಗೂ ಪತ್ರ : ಭ್ರಷ್ಟಾಚಾರ ಆರೋಪ ಮತ್ತು ಅಕ್ರಮ ಡಿನೋಟಿಫಿಕೇಶನ್ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಅವರ ನ್ಯಾಯಾಂಗ ತನಿಖಾ ವರದಿಯನ್ನು ಪ್ರಕಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಿ. ಟಿ ರವಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗಳೇ, ನೀವು 2014ರಲ್ಲಿ ಅಧಿಕಾರದಲ್ಲಿದ್ದಿರಿ ಮತ್ತು 1952ರ ತನಿಖಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗಕ್ಕೆ ನೇಮಿಸುವ ಜವಾಬ್ದಾರಿಯನ್ನು ಹೊಂದಿದ್ದೀರಿ. ನ್ಯಾಯಮೂರ್ತಿ ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೂ ವರದಿ ಇನ್ನೂ ಬಿಡುಗಡೆಯಾಗಿಲ್ಲ.

ನೀವು ನಿಮ್ಮ ಮಾತಿನ ಮೇಲೆ ನಿಲ್ಲುವ ಮನುಷ್ಯ ಎಂದು ಪ್ರತಿಪಾದಿಸುವಂತೆ, ನ್ಯಾಯ ಮತ್ತು ಸಮಗ್ರತೆಯನ್ನು ಪ್ರದರ್ಶಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ದಯವಿಟ್ಟು ನಿಮ್ಮ ಭರವಸೆಯನ್ನು ಉಳಿಸಿಕೊಳ್ಳಿ ಮತ್ತು ನ್ಯಾಯಮೂರ್ತಿ ಕೆಂಪಣ್ಣ ಅವರ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿ. ಆ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ನಿಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಕೆಂಪಣ್ಣ ವರದಿ ಬಹಿರಂಗಕ್ಕೆ ಸಿ.ಟಿ.ರವಿ ಒತ್ತಾಯ - c t ravi

ಬೆಂಗಳೂರು : ಭ್ರಷ್ಟಾಚಾರ ಆರೋಪಗಳು ಮತ್ತು ಅಕ್ರಮ ಡಿನೋಟಿಫಿಕೇಶನ್ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಅವರ ನ್ಯಾಯಾಂಗ ತನಿಖಾ ಆಯೋಗದ ವರದಿಯನ್ನು ಬಹಿರಂಗಪಡಿಸಲು, ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ವಿಧಾನ ಪರಿಷತ್ ಸದಸ್ಯ ಸಿ. ಟಿ ರವಿ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರಿಗೆ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಮರ್ಪಿತ ನಾಗರಿಕ ಮತ್ತು ಸಾರ್ವಜನಿಕ ಪ್ರತಿನಿಧಿಯಾಗಿ, ಸಮಾಜಕ್ಕೆ ಕೊಡುಗೆ ನೀಡುವುದು ನನ್ನ ಜವಾಬ್ದಾರಿ ಎಂದು ನಾನು ನಂಬುತ್ತೇನೆ. ಹಿಂದಿನ ಕಾಂಗ್ರೆಸ್ ಆಡಳಿತ ನಡೆಸಿದ್ದ 852 ಎಕರೆ "ರೀ-ಡು" ಅಥವಾ ಡಿನೋಟಿಫಿಕೇಶನ್‌ಗೆ ಸಂಬಂಧಿಸಿದ ಅರ್ಕಾವತಿ ಬಡಾವಣೆ ವಿವಾದದ ಬಗ್ಗೆ ನಿಮ್ಮ ಗಮನ ಸೆಳೆಯಲು ನಾನು ಬಯಸುತ್ತೇನೆ. ಇದರ ಮೌಲ್ಯ ಅಂದಾಜು 8,000 ಕೋಟಿ ರೂ. 2014ರಲ್ಲಿ ಹಾಗೂ ಪ್ರಸ್ತುತ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವ ಸಿದ್ದರಾಮಯ್ಯ ಅವರು 1952ರ ವಿಚಾರಣಾ ಆಯೋಗದ ಕಾಯ್ದೆಯ ಪ್ರಕಾರ "ನ್ಯಾಯಮೂರ್ತಿ ಕೆಂಪಣ್ಣ" ಅವರನ್ನು ವಿಚಾರಣಾ ಆಯೋಗದ ನೇತೃತ್ವ ವಹಿಸಲು ನೇಮಿಸಿದರು.

ನ್ಯಾಯಮೂರ್ತಿ ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ನ್ಯಾಯಾಂಗ ತನಿಖಾ ವರದಿಗಳನ್ನು ಸಾರ್ವಜನಿಕ ದಾಖಲೆಗಳೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಸಾರ್ವಜನಿಕರಿಗೆ ಲಭ್ಯವಾಗುವಂತೆ ನೋಡಿಕೊಳ್ಳುವುದು ಸರ್ಕಾರದ ಬಾಧ್ಯತೆಯಾಗಿದೆ. ವಿಷಾದನೀಯವೆಂದರೆ, ಮುಖ್ಯಮಂತ್ರಿಗಳ ಕಾರ್ಯಾಲಯವು ಈ ವರದಿಯನ್ನು ಸಾರ್ವಜನಿಕ ಪರಿಶೀಲನೆಗೆ ಲಭ್ಯವಾಗುವಂತೆ ಮಾಡಿಲ್ಲ ಎಂದು ಪತ್ರದಲ್ಲಿ ಸಿ. ಟಿ ರವಿ ಆರೋಪಿಸಿದ್ದಾರೆ‌.

ಕರ್ನಾಟಕದ ಜನತೆಯ ಪ್ರತಿನಿಧಿಯಾಗಿ ಈ ವರದಿಯ ಬಿಡುಗಡೆಯನ್ನು ಎದುರು ನೋಡುತ್ತಿದ್ದೇನೆ. ಆದಾಗ್ಯೂ, ನಡೆಯುತ್ತಿರುವ ಗೌಪ್ಯತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳಿವೆ. ಪಾರದರ್ಶಕತೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ. ಹಾಗಾಗಿ, ನ್ಯಾಯಮೂರ್ತಿ ಕೆಂಪಣ್ಣ ಅವರ ವರದಿಯನ್ನು ಸಾರ್ವಜನಿಕರಿಗೆ ಬಿಡುಗಡೆ ಮಾಡಲು ಕರ್ನಾಟಕದ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಬೇಕೆಂದು ನಾನು ಗೌರವದಿಂದ ವಿನಂತಿಸುತ್ತೇನೆ ಎಂದು ಸುದೀರ್ಘ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಸಿಎಂಗೂ ಪತ್ರ : ಭ್ರಷ್ಟಾಚಾರ ಆರೋಪ ಮತ್ತು ಅಕ್ರಮ ಡಿನೋಟಿಫಿಕೇಶನ್ ಕುರಿತು ನ್ಯಾಯಮೂರ್ತಿ ಕೆಂಪಣ್ಣ ಅವರ ನ್ಯಾಯಾಂಗ ತನಿಖಾ ವರದಿಯನ್ನು ಪ್ರಕಟಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೂ ಸಿ. ಟಿ ರವಿ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಮುಖ್ಯಮಂತ್ರಿಗಳೇ, ನೀವು 2014ರಲ್ಲಿ ಅಧಿಕಾರದಲ್ಲಿದ್ದಿರಿ ಮತ್ತು 1952ರ ತನಿಖಾ ಆಯೋಗದ ಕಾಯ್ದೆಯ ಪ್ರಕಾರ ನ್ಯಾಯಮೂರ್ತಿ ಕೆಂಪಣ್ಣ ಅವರನ್ನು ವಿಚಾರಣಾ ಆಯೋಗಕ್ಕೆ ನೇಮಿಸುವ ಜವಾಬ್ದಾರಿಯನ್ನು ಹೊಂದಿದ್ದೀರಿ. ನ್ಯಾಯಮೂರ್ತಿ ಕೆಂಪಣ್ಣ ಅವರು ತಮ್ಮ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೂ ವರದಿ ಇನ್ನೂ ಬಿಡುಗಡೆಯಾಗಿಲ್ಲ.

ನೀವು ನಿಮ್ಮ ಮಾತಿನ ಮೇಲೆ ನಿಲ್ಲುವ ಮನುಷ್ಯ ಎಂದು ಪ್ರತಿಪಾದಿಸುವಂತೆ, ನ್ಯಾಯ ಮತ್ತು ಸಮಗ್ರತೆಯನ್ನು ಪ್ರದರ್ಶಿಸಲು ನಾನು ನಿಮ್ಮನ್ನು ಒತ್ತಾಯಿಸುತ್ತೇನೆ. ದಯವಿಟ್ಟು ನಿಮ್ಮ ಭರವಸೆಯನ್ನು ಉಳಿಸಿಕೊಳ್ಳಿ ಮತ್ತು ನ್ಯಾಯಮೂರ್ತಿ ಕೆಂಪಣ್ಣ ಅವರ ವರದಿಯನ್ನು ಸಾರ್ವಜನಿಕರಿಗೆ ಬಹಿರಂಗಪಡಿಸಿ. ಆ ಮೂಲಕ ಭ್ರಷ್ಟಾಚಾರದ ವಿರುದ್ಧದ ಹೋರಾಟದಲ್ಲಿ ನಿಮ್ಮ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣ: ಕೆಂಪಣ್ಣ ವರದಿ ಬಹಿರಂಗಕ್ಕೆ ಸಿ.ಟಿ.ರವಿ ಒತ್ತಾಯ - c t ravi

ETV Bharat Logo

Copyright © 2024 Ushodaya Enterprises Pvt. Ltd., All Rights Reserved.