ETV Bharat / state

ವಾಲ್ಮಿಕಿ ಅಭಿವೃದ್ಧಿ ನಿಗಮದ ಹಗರಣ: ಸಿಬಿಐನಿಂದ ಎಫ್ಐಆರ್ ದಾಖಲು - Valmiki Corporation case

author img

By ETV Bharat Karnataka Team

Published : Jun 5, 2024, 9:50 AM IST

ವಾಲ್ಮಿಕಿ ಅಭಿವೃದ್ಧಿ ನಿಗಮದ ಅಕ್ರಮ ಪ್ರಕರಣ ಸಂಬಂಧ ಬ್ಯಾಂಕ್ ಪ್ರತಿನಿಧಿಗಳ ದೂರಿನನ್ವಯ ಸಿಬಿಐ ಪ್ರಕರಣ ದಾಖಲು ಮಾಡಿಕೊಂಡಿದೆ.

cbi
ಸಿಬಿಐ ಕಚೇರಿ (Photo: IANS)

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಯೂನಿಯನ್ ಬ್ಯಾಂಕ್‌, ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಹೇಶ್ ಜೆ. ಎಂಬುವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಯೂನಿಯನ್ ಬ್ಯಾಂಕ್‌ ಶಾಖೆಯ ಹಿಂದಿನ ಮುಖ್ಯಸ್ಥರಾದ ಸುಚಿಸ್ಮಿತಾ ರೌಲ್, ದೀಪಾ ಡಿ., ಹಿಂದಿನ ಕ್ರೆಡಿಟ್ ಆಫೀಸರ್ ಕೆ.ವಿ. ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳು ಸೇರಿದಂತೆ ಐವರ ವಿರುದ್ಧ ಕೇಸ್​ ದಾಖಲಾಗಿದೆ. ಆರೋಪಿತರು ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ, ಮೊತ್ತವನ್ನು ಹಿಂತೆಗೆದುಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದಿಟ್ಟು ಮೇ 26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಪತ್ನಿಯ ದೂರಿನ ಅನ್ವಯ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲ್ಲದೇ, ನಿಗಮದಲ್ಲಿ ಅನುದಾನದ ಹಣವು ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ. ಪ್ರಕರಣದ ಸಮಗ್ರ ತನಿಖೆ‌‌ಗಾಗಿ ಕಳೆದ ಶುಕ್ರವಾರವಷ್ಟೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಮತ್ತೊಂದೆಡೆ, ಅಕ್ರಮದ ಕುರಿತು ತನಿಖೆ ನಡೆಸುವಂತೆ ಯೂನಿಯನ್ ಬ್ಯಾಂಕ್‌ನ ಎಂ.ಜಿ. ರಸ್ತೆ ಶಾಖೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಿಬಿಐಗೆ ದೂರು ನೀಡಿದ್ದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಆರೋಪ: ಎಂಡಿ ಜೆ.ಜೆ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಅಮಾನತು - Two officials suspended

ಬೆಂಗಳೂರು: ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ನಡೆದಿದೆ ಎನ್ನಲಾದ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ. ಯೂನಿಯನ್ ಬ್ಯಾಂಕ್‌, ಬೆಂಗಳೂರಿನ ಎಂ.ಜಿ.ರಸ್ತೆ ಶಾಖೆಯ ಡೆಪ್ಯುಟಿ ಜನರಲ್ ಮ್ಯಾನೇಜರ್ ಮಹೇಶ್ ಜೆ. ಎಂಬುವರು ನೀಡಿರುವ ದೂರಿನನ್ವಯ ಪ್ರಕರಣ ದಾಖಲಾಗಿದೆ.

ಯೂನಿಯನ್ ಬ್ಯಾಂಕ್‌ ಶಾಖೆಯ ಹಿಂದಿನ ಮುಖ್ಯಸ್ಥರಾದ ಸುಚಿಸ್ಮಿತಾ ರೌಲ್, ದೀಪಾ ಡಿ., ಹಿಂದಿನ ಕ್ರೆಡಿಟ್ ಆಫೀಸರ್ ಕೆ.ವಿ. ಕೃಷ್ಣಮೂರ್ತಿ ಹಾಗೂ ಇಬ್ಬರು ಖಾಸಗಿ ವ್ಯಕ್ತಿಗಳು ಸೇರಿದಂತೆ ಐವರ ವಿರುದ್ಧ ಕೇಸ್​ ದಾಖಲಾಗಿದೆ. ಆರೋಪಿತರು ವಾಲ್ಮಿಕಿ ಅಭಿವೃದ್ಧಿ ನಿಗಮ ನಿಯಮಿತದ ಖಾತೆಗಳಿಂದ ಅಕ್ರಮ ಹಣ ವರ್ಗಾವಣೆ, ಮೊತ್ತವನ್ನು ಹಿಂತೆಗೆದುಕೊಳ್ಳುವ ಮೂಲಕ ವಂಚಿಸಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ಅನುದಾನದ ಹಣ ದುರುಪಯೋಗವಾಗಿದೆ ಎಂದು ಆರೋಪಿಸಿದ್ದ ಅದರ ಅಧೀಕ್ಷಕ ಚಂದ್ರಶೇಖರನ್‌ ಡೆತ್‌ನೋಟ್‌ ಬರೆದಿಟ್ಟು ಮೇ 26 ರಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಚಂದ್ರಶೇಖರನ್ ಅವರ ಪತ್ನಿಯ ದೂರಿನ ಅನ್ವಯ ಶಿವಮೊಗ್ಗದ ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಲ್ಲದೇ, ನಿಗಮದಲ್ಲಿ ಅನುದಾನದ ಹಣವು ಬ್ಯಾಂಕ್ ಮೂಲಕ ದುರ್ಬಳಕೆ ಆಗಿರುವುದಾಗಿ ಅಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕೂಡ ಪ್ರಕರಣ ದಾಖಲಾಗಿದೆ. ಪ್ರಕರಣದ ಸಮಗ್ರ ತನಿಖೆ‌‌ಗಾಗಿ ಕಳೆದ ಶುಕ್ರವಾರವಷ್ಟೇ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿ ಆದೇಶ ಹೊರಡಿಸಿತ್ತು. ಮತ್ತೊಂದೆಡೆ, ಅಕ್ರಮದ ಕುರಿತು ತನಿಖೆ ನಡೆಸುವಂತೆ ಯೂನಿಯನ್ ಬ್ಯಾಂಕ್‌ನ ಎಂ.ಜಿ. ರಸ್ತೆ ಶಾಖೆಯ ಡೆಪ್ಯೂಟಿ ಜನರಲ್ ಮ್ಯಾನೇಜರ್ ಸಿಬಿಐಗೆ ದೂರು ನೀಡಿದ್ದರು.

ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮ ಅಕ್ರಮ ಆರೋಪ: ಎಂಡಿ ಜೆ.ಜೆ. ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಅಮಾನತು - Two officials suspended

ETV Bharat Logo

Copyright © 2024 Ushodaya Enterprises Pvt. Ltd., All Rights Reserved.