ETV Bharat / state

ಜಮ್ಮು ಕಾಶ್ಮೀರ ಸೇರಿ ವಿವಿಧ ರಾಜ್ಯಗಳ ಚುನಾವಣೆ ಬಳಿಕ ಕೇಂದ್ರ ಸರ್ಕಾರ ಪತನ: ಸಂತೋಷ್‌ ಲಾಡ್ - Santosh Lad

author img

By ETV Bharat Karnataka Team

Published : Sep 11, 2024, 11:40 AM IST

Updated : Sep 11, 2024, 2:19 PM IST

ಜಮ್ಮು ಕಾಶ್ಮೀರ ಸೇರಿದಂತೆ ವಿವಿಧ ರಾಜ್ಯಗಳ ವಿಧಾನಸಭಾ ಚುನಾವಣೆಯ ಬಳಿಕ ಕೇಂದ್ರ ಸರ್ಕಾರ ಪತನವಾಗಲಿದೆ ಎಂದು ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ.

CENTRAL GOVERNMENT WILL FALL  ELECTIONS IN VARIOUS STATES  MINISTER SANTOSH LAD  DHARWAD
ಸಚಿವ ಸಂತೋಷ್ ಲಾಡ್ (ETV Bharat)
ಸಚಿವ ಸಂತೋಷ್ ಲಾಡ್ ಹೇಳಿಕೆ (ETV Bharat)

ಧಾರವಾಡ: ಹರಿಯಾಣ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಬಳಿಕ ಕೇಂದ್ರದ ಮೋದಿ ಸರ್ಕಾರ ಅಲ್ಲಾಡಲಿದೆ. ಈಗಾಗಲೇ ಬಿಜೆಪಿಯವರ ನಂಬರ್ ಕಡಿಮೆ ಇದೆ. ಸದ್ಯದ ಸರ್ವೇ ರಿಪೋರ್ಟ್​​ಗಳು ಎಲ್ಲೆಡೆ ಬಿಜೆಪಿ ಸೋಲುತ್ತದೆ ಎಂದು ಹೇಳಿವೆ. ಹೀಗಾಗಿ ಅವರಿಗೆ ಭಯವಿದೆ. ಆದರೆ, ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಐದು ವರ್ಷ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಪತನವಾಗದು ಎಂದು ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ.

ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಎಲ್ಲ ಶಾಸಕರು, ಸಚಿವರು, ಸಂಸದರು, ನಾಯಕರು, ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿದ್ದೇವೆ. ನಾವು ಅವರ ಪರವಾಗಿ ಗಟ್ಟಿಯಾಗಿ ನಿಂತಿದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು.

ಇನ್ನು, ಬಿಜೆಪಿ ಹಗರಣಗಳ ತನಿಖೆಗೆ ಚುರುಕು ಮುಟ್ಟಿಸಲು ಸಮಿತಿ ರಚಿಸಿರುವ ಸಿಎಂ, ನಮಗೆ ಎರಡು ತಿಂಗಳ ಕಾಲಾವಕಾಶ ನೀಡಿದ್ದಾರೆ ಎಂದು ಸಚಿವ ಲಾಡ್ ಹೇಳಿದರು. ಹಗರಣ ಪ್ರಕರಣಗಳ ತನಿಖೆಯ ಸಮನ್ವಯ ಸಮಿತಿ ಸದಸ್ಯನನ್ನಾಗಿ ನನ್ನನ್ನು ಸಿಎಂ ನೇಮಿಸಿದ್ದಾರೆ. ಸಮಿತಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್​, ಎಚ್.ಕೆ.ಪಾಟೀಲ ಅವರಿದ್ದಾರೆ. ಸಭೆ ಕರೆದಾಗ ಹೋಗುತ್ತೇವೆ, ಆಗು-ಹೋಗುಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಹಾಗೂ ಡಿಕೆಶಿ ಅಮೆರಿಕದಲ್ಲಿ ಭೇಟಿಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಭೇಟಿಯಾಗಿದ್ದರಲ್ಲಿ ಕುತೂಹಲ ಏನಿಲ್ಲ. ಅವರು ನಮ್ಮ ನಾಯಕರು. ರಾಹುಲ್ ಅವರು ಅಲ್ಲಿದ್ದಾಗ ಭೇಟಿಯಾಗಿದ್ದಾರೆ. ಅಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಆಗಿಲ್ಲ. ನೀವು ಅದನ್ನು ಪದೇ ಪದೇ ಕೇಳಬೇಡಿ ಎಂದು ಗರಂ ಆದರು.

ಖಾನಾಪುರದ ಬಿಜೆಪಿ ಶಾಸಕ ವಿಠ್ಠಲ ಹಲಗೆಕರ, ಸತೀಶ್ ಜಾರಕಿಹೊಳಿ ಸಿಎಂ ಆಗಲೆಂದು ಹೇಳಿಕೆ ನೀಡಿದ ವಿಚಾರಕ್ಕೆ ಮಾತನಾಡಿ, ಅವರು ಆ ರೀತಿ ಹೇಳಿದ್ದಕ್ಕೆ ಬಿಜೆಪಿಯವರನ್ನೇ ಕೇಳಬೇಕು. ಅವರು ನನ್ನ ಕಂಟ್ರೋಲ್‌ನಲ್ಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ರೇಸ್​ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಸಿಎಂ: ಸಚಿವ ದಿನೇಶ್ ಗುಂಡೂರಾವ್ - Dinesh Gundurao

ಸಚಿವ ಸಂತೋಷ್ ಲಾಡ್ ಹೇಳಿಕೆ (ETV Bharat)

ಧಾರವಾಡ: ಹರಿಯಾಣ, ಮಹಾರಾಷ್ಟ್ರ, ಜಮ್ಮು ಮತ್ತು ಕಾಶ್ಮೀರ ಚುನಾವಣೆಯ ಬಳಿಕ ಕೇಂದ್ರದ ಮೋದಿ ಸರ್ಕಾರ ಅಲ್ಲಾಡಲಿದೆ. ಈಗಾಗಲೇ ಬಿಜೆಪಿಯವರ ನಂಬರ್ ಕಡಿಮೆ ಇದೆ. ಸದ್ಯದ ಸರ್ವೇ ರಿಪೋರ್ಟ್​​ಗಳು ಎಲ್ಲೆಡೆ ಬಿಜೆಪಿ ಸೋಲುತ್ತದೆ ಎಂದು ಹೇಳಿವೆ. ಹೀಗಾಗಿ ಅವರಿಗೆ ಭಯವಿದೆ. ಆದರೆ, ರಾಜ್ಯದಲ್ಲಿ ನಾವು 136 ಶಾಸಕರಿದ್ದೇವೆ. ಐದು ವರ್ಷ ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಪತನವಾಗದು ಎಂದು ಸಚಿವ ಸಂತೋಷ್ ಲಾಡ್ ಭವಿಷ್ಯ ನುಡಿದಿದ್ದಾರೆ.

ಸಿಎಂ ಬದಲಾವಣೆ ಕುರಿತ ಪ್ರಶ್ನೆಗೆ, ಎಲ್ಲ ಶಾಸಕರು, ಸಚಿವರು, ಸಂಸದರು, ನಾಯಕರು, ಕಾರ್ಯಕರ್ತರು ಸಿದ್ದರಾಮಯ್ಯ ಪರವಾಗಿದ್ದೇವೆ. ನಾವು ಅವರ ಪರವಾಗಿ ಗಟ್ಟಿಯಾಗಿ ನಿಂತಿದ್ದೇವೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಇಲ್ಲ ಎಂದರು.

ಇನ್ನು, ಬಿಜೆಪಿ ಹಗರಣಗಳ ತನಿಖೆಗೆ ಚುರುಕು ಮುಟ್ಟಿಸಲು ಸಮಿತಿ ರಚಿಸಿರುವ ಸಿಎಂ, ನಮಗೆ ಎರಡು ತಿಂಗಳ ಕಾಲಾವಕಾಶ ನೀಡಿದ್ದಾರೆ ಎಂದು ಸಚಿವ ಲಾಡ್ ಹೇಳಿದರು. ಹಗರಣ ಪ್ರಕರಣಗಳ ತನಿಖೆಯ ಸಮನ್ವಯ ಸಮಿತಿ ಸದಸ್ಯನನ್ನಾಗಿ ನನ್ನನ್ನು ಸಿಎಂ ನೇಮಿಸಿದ್ದಾರೆ. ಸಮಿತಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್​, ಎಚ್.ಕೆ.ಪಾಟೀಲ ಅವರಿದ್ದಾರೆ. ಸಭೆ ಕರೆದಾಗ ಹೋಗುತ್ತೇವೆ, ಆಗು-ಹೋಗುಗಳ ಬಗ್ಗೆ ಮಾಹಿತಿ ನೀಡುತ್ತೇವೆ ಎಂದು ತಿಳಿಸಿದರು.

ರಾಹುಲ್ ಗಾಂಧಿ ಹಾಗೂ ಡಿಕೆಶಿ ಅಮೆರಿಕದಲ್ಲಿ ಭೇಟಿಯಾಗಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅವರು ಭೇಟಿಯಾಗಿದ್ದರಲ್ಲಿ ಕುತೂಹಲ ಏನಿಲ್ಲ. ಅವರು ನಮ್ಮ ನಾಯಕರು. ರಾಹುಲ್ ಅವರು ಅಲ್ಲಿದ್ದಾಗ ಭೇಟಿಯಾಗಿದ್ದಾರೆ. ಅಲ್ಲಿ ರಾಜ್ಯ ರಾಜಕಾರಣದ ಬಗ್ಗೆ ಚರ್ಚೆ ಆಗಿಲ್ಲ. ನೀವು ಅದನ್ನು ಪದೇ ಪದೇ ಕೇಳಬೇಡಿ ಎಂದು ಗರಂ ಆದರು.

ಖಾನಾಪುರದ ಬಿಜೆಪಿ ಶಾಸಕ ವಿಠ್ಠಲ ಹಲಗೆಕರ, ಸತೀಶ್ ಜಾರಕಿಹೊಳಿ ಸಿಎಂ ಆಗಲೆಂದು ಹೇಳಿಕೆ ನೀಡಿದ ವಿಚಾರಕ್ಕೆ ಮಾತನಾಡಿ, ಅವರು ಆ ರೀತಿ ಹೇಳಿದ್ದಕ್ಕೆ ಬಿಜೆಪಿಯವರನ್ನೇ ಕೇಳಬೇಕು. ಅವರು ನನ್ನ ಕಂಟ್ರೋಲ್‌ನಲ್ಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಸಿಎಂ ರೇಸ್​ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಸಿಎಂ: ಸಚಿವ ದಿನೇಶ್ ಗುಂಡೂರಾವ್ - Dinesh Gundurao

Last Updated : Sep 11, 2024, 2:19 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.