ETV Bharat / state

ಕೆಲ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ವಿಚಾರ: ಬೆಳಗಾವಿಯಲ್ಲಿ ಶೋಭಾ ಕರಂದ್ಲಾಜೆ ಹೇಳಿದ್ದೇನು?

author img

By ETV Bharat Karnataka Team

Published : Mar 9, 2024, 11:51 AM IST

Updated : Mar 9, 2024, 12:17 PM IST

ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬುದು ನಮಗ್ಯಾರಿಗೂ ಗೊತ್ತಿಲ್ಲ. ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದರಲ್ಲಿ ತಪ್ಪಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿದ್ದಾರೆ.

shobha karandlaje
ಶೋಭಾ ಕರಂದ್ಲಾಜೆ
ಶೋಭಾ ಕರಂದ್ಲಾಜೆ

ಬೆಳಗಾವಿ: ''ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ, ಈ ಬಗ್ಗೆ ಪ್ರಧಾನಿಯೂ ಹೇಳಿಲ್ಲ, ಜೆ.ಪಿ. ನಡ್ಡಾ, ಅಮಿತ್ ಶಾ ಕೂಡ ಹೇಳಿಲ್ಲ. ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರಲಿದೆ'' ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ''ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭಗಳ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ'' ಎಂದರು.

ಟಿಕೆಟ್ ತಪ್ಪಿಸಲು ಪಿತೂರಿ ಬಗ್ಗೆ ಪ್ರತಿಕ್ರಿಯೆ: ತಮ್ಮ ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ಯಾವಾಗ ವಿರೋಧ ವ್ಯಕ್ತವಾಗುತ್ತೋ, ಆಗಲೇ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡುತ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಾರೆ ಎಂದರು.

''ಆದರೆ ಈಗ ಶೋಭಾಗೆ ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಪಡೆಯುತ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನು ಮಾಡಬಾರದು ಎಂಬುದು ಇಂತಹ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ‌. ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿ ಮುಂದಿಟ್ಟು ಮತಯಾಚನೆ: ''ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆದಂಹ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು ನಮ್ಮ ಶಕ್ತಿ. ನರೇಂದ್ರ ‌ಮೋದಿ ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ. ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಅವರಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಗೌರವದ ದೂರದೃಷ್ಟಿ ಮೇಲೆ ಮತ ಯಾಚಿಸುತ್ತೇವೆ'' ಎಂದರು.

''ಈರುಳ್ಳಿ, ಟೊಮೆಟೊ ಸಲುವಾಗಿ ಸರ್ಕಾರ ಬಿದ್ದ ಉದಾಹರಣೆ ಇವೆ. ಅದಕ್ಕೆ ಖಾದ್ಯತೈಲ ಕಾಳು ಬೆಳೆಯಲು ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಸಬ್ಸಿಡಿ ಆಧಾರದ ಮೇಲೆ ರೈತರಿಗೆ ಬೀಜ, ಟೆಕ್ನಾಲಜಿ ನೀಡುತ್ತಿದ್ದೇವೆ. ಯುಪಿಎ ಸಮಯದಲ್ಲಿನ ಲೋಪಗಳ ಗುಂಡಿ ಮುಚ್ಚಿ ಮೇಲೆದ್ದು ಬರಲು ನಮಗೆ ಸಮಯ ಬೇಕು. ಎಲ್ಲ ವಿಚಾರಗಳಲ್ಲಿ ಸ್ವಾವಲಂಬನೆ ಸಾಧಿಸಲು ಮೋದಿ ಕಾರ್ಯಪ್ರವೃತರಾಗುತ್ತಿದ್ದಾರೆ. ಈ ಮೊದಲು ನಾವು ಡಿಫೆನ್ಸ್‌ನಲ್ಲಿ ಸ್ವಾವಲಂಬಿ ಇರಲಿಲ್ಲ, ಮದ್ದುಗುಂಡು ಆಚೆಯಿಂದ ಬರುತ್ತಿತ್ತು. ಇವತ್ತು ಭಾರತ ಸ್ವಾವಲಂಬಿಯಾಗುವತ್ತ ದಾಪುಗಾಲು ಇಡುತ್ತಿದೆ, ನಾವು ಬೇರೆ ದೇಶಕ್ಕೆ ರಪ್ತು ಮಾಡಲು ಯೋಚನೆ ಮಾಡಿದ್ದೇವೆ'' ಎಂದು ತಿಳಿಸಿದರು.

ಚುನಾವಣೆ ‌ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ಮಾಡಿರುವ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ''ಬೆಲೆ ಇಳಿಕೆಗೇನು ಸಂಬಂಧವಿಲ್ಲ. ಗ್ಯಾಸ್, ಪೆಟ್ರೋಲ್‌ನಲ್ಲಿ ನಾವು ಸ್ವಾವಲಂಬಿ ಆಗಿಲ್ಲ. ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಯೋಜನೆ ರೂಪಿಸುತ್ತಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಖಾದ್ಯ ತೈಲದಲ್ಲಿಯೂ ನಾವು ಸ್ವಾವಲಂಬಿಯಾಗಿಲ್ಲ. ಎಲ್ಲವನ್ನೂ ನಾವು ವಿದೇಶದಿಂದ ಸರಬರಾಜು ಮಾಡಿಕೊಳ್ಳಬೇಕಾಗುತ್ತದೆ. ವಿದೇಶಿ ಮಾರುಕಟ್ಟೆ ಆಧಾರದ ಮೇಲೆ ಬೆಲೆ ನಿಗದಿ ಆಗುತ್ತದೆ'' ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ''ರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರ ಆಗಿದೆ'' ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ, ''ನಿಷೇಧಿತ ಸಂಘಟನೆ ಮುಖಂಡರೆಲ್ಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮನೆಯಲ್ಲೆ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಕೂಡ ಪೊಲೀಸ್ ಇಲಾಖೆಗೆ ಸವಾಲಾಗಿದೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಗಳೇ ಇದಕ್ಕೆಲ್ಲ ಸಾಕ್ಷಿ. ಆದ್ದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ರಕ್ಷಕ ಸರ್ಕಾರ'' ಎಂದು ಕೇಂದ್ರ ಸಚಿವರು ದೂರಿದರು.

ಇದನ್ನೂ ಓದಿ: ದೇಶದ ತೆರಿಗೆ ಬೆಳವಣಿಗೆಗೆ ಬಳಕೆ, ನನ್ನದು- ನಿನ್ನದು ಎನ್ನುವ ಪ್ರಶ್ನೆ ಇಲ್ಲ: ಅನುರಾಗ್ ಠಾಕೂರ್​

ಶೋಭಾ ಕರಂದ್ಲಾಜೆ

ಬೆಳಗಾವಿ: ''ಯಾರಿಗೆ ಟಿಕೆಟ್ ಸಿಗುತ್ತೆ, ಸಿಗಲ್ಲ ಎಂಬುದು ನನಗೆ ಗೊತ್ತಿಲ್ಲ. ಈಗ ಹಾಲಿ ಸಂಸದರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬ ಸಂಗತಿ ಮಾಧ್ಯಮಗಳಲ್ಲಿ ಬರುತ್ತಿದೆ. ಆದರೆ, ಈ ಬಗ್ಗೆ ಪ್ರಧಾನಿಯೂ ಹೇಳಿಲ್ಲ, ಜೆ.ಪಿ. ನಡ್ಡಾ, ಅಮಿತ್ ಶಾ ಕೂಡ ಹೇಳಿಲ್ಲ. ಈ ಎಲ್ಲ ಸುದ್ದಿಗಳು ಊಹಾಪೋಹ ಎನಿಸುತ್ತದೆ. ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ, ಆಗ ಸತ್ಯ ಹೊರಬರಲಿದೆ'' ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು.

ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯ ಬಹಳಷ್ಟು ಹಾಲಿ ಸಂಸದರಿಗೆ ಟಿಕೆಟ್ ಸಿಗುವುದಿಲ್ಲ ಎಂಬ ವಿಚಾರಕ್ಕೆ ಬೆಳಗಾವಿಯಲ್ಲಿ ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ''ಗೆಲ್ಲುವ ಪಕ್ಷಕ್ಕೆ ಬಹಳಷ್ಟು ಜನರು ಟಿಕೆಟ್ ಕೇಳುವುದು ಸಹಜ, ಅದು ತಪ್ಪಲ್ಲ. ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿದ ನಮ್ಮ ಕಾರ್ಯಕರ್ತರಿಗೆ ಟಿಕೆಟ್ ಕೇಳುವ ಹಕ್ಕಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ, ನಮ್ಮ ಕೇಂದ್ರ ಚುನಾವಣೆ ಮಂಡಳಿ ಇದೆ. ಯಾರಿಗೆ ಎಲ್ಲಿಂದ ಟಿಕೆಟ್ ಕೊಡಬೇಕು, ಏಕೆ ಕೊಡಬೇಕು, ಅದರಿಂದಾಗುವ ಲಾಭಗಳ ಆಧಾರದ ಮೇಲೆ ಖಂಡಿತವಾಗಿ ನಮ್ಮ ನಾಯಕರು ನಿರ್ಧಾರ ತೆಗೆದುಕೊಳ್ಳುತ್ತಾರೆ'' ಎಂದರು.

ಟಿಕೆಟ್ ತಪ್ಪಿಸಲು ಪಿತೂರಿ ಬಗ್ಗೆ ಪ್ರತಿಕ್ರಿಯೆ: ತಮ್ಮ ಟಿಕೆಟ್ ತಪ್ಪಿಸಲು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಪಿತೂರಿ ನಡೆಯುತ್ತಿದೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಸಚಿವರು, ''ಯಾವಾಗ ವಿರೋಧ ವ್ಯಕ್ತವಾಗುತ್ತೋ, ಆಗಲೇ ನಾಯಕರು ನಮ್ಮ ಬಗ್ಗೆ ಮಾಹಿತಿ ಕಲೆ ಹಾಕುತ್ತಾರೆ. ನಮ್ಮವರು ವಿರೋಧ ಮಾಡಿದ ಕಾರಣಕ್ಕೆ ನನಗೆ ಅನುಕೂಲ ಆಗಿದೆ. ಇಲ್ಲವಾದರೆ ಶೋಭಾ ಒಳ್ಳೆಯ ‌ಕೆಲಸ ಮಾಡುತ್ತಿದ್ದಾರೆ,‌ ಪಕ್ಷದ ಕೆಲಸ ಮಾಡುತ್ತಾರೆ ಎಂದಷ್ಟೇ ‌ಹೇಳುತ್ತಾರೆ ಎಂದರು.

''ಆದರೆ ಈಗ ಶೋಭಾಗೆ ಏಕೆ ವಿರೋಧ ಮಾಡುತ್ತಿದ್ದಾರೆ ಎಂದು ಪಕ್ಷದ ನಾಯಕರೂ ಮಾಹಿತಿ ಪಡೆಯುತ್ತಿದ್ದಾರೆ. ಆಗಲೇ ಸತ್ಯ ಗೊತ್ತಾಗೋದು, ನಮ್ಮ ವ್ಯಕ್ತಿತ್ವವೇನು? ನಮ್ಮ ಅಭಿವೃದ್ಧಿ ಕೆಲಸಗಳು ಗೊತ್ತಾಗುತ್ತವೆ. ನಾವೇನು ಮಾಡಿಲ್ಲ, ಏನು ಮಾಡಬಾರದು ಎಂಬುದು ಇಂತಹ ವರದಿ ಪಡೆಯುವುದರಿಂದ ಗೊತ್ತಾಗುತ್ತದೆ. ಚುನಾವಣೆ ಸಮಯ ಬಹಳಷ್ಟು ಸೂಕ್ಷ್ಮತೆಯಿಂದ ಕೂಡಿರುತ್ತದೆ. ಮಾಹಿತಿ ಸಂಗ್ರಹದಿಂದ ನನಗೆ ಅನುಕೂಲ ಆಗಲಿದೆಯೇ ಹೊರತು ಕೆಟ್ಟದಾಗಲ್ಲ‌. ನಮ್ಮ ಹೈಕಮಾಂಡ್‌ ಬಗ್ಗೆ ನನಗೆ ನಂಬಿಕೆಯಿದೆ, ಕೆಲಸದ ಆಧಾರದ ಮೇಲೆ ಟಿಕೆಟ್ ಸಿಗುತ್ತದೆ'' ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಅಭಿವೃದ್ಧಿ ಮುಂದಿಟ್ಟು ಮತಯಾಚನೆ: ''ಬಿಜೆಪಿಗೆ ಅಭಿವೃದ್ಧಿಯೇ ಮಾನದಂಡ, 10 ವರ್ಷಗಳ ಅಭಿವೃದ್ಧಿ ಆಧಾರದ ಮೇಲೆ ಮತ ಕೇಳುತ್ತೇವೆ. ದೇಶದಲ್ಲಿ ಆದಂಹ ಮೂಲಸೌಕರ್ಯ ಅಭಿವೃದ್ಧಿ, ಗ್ರಾಮೀಣ ಭಾಗಕ್ಕೆ ಸಿಕ್ಕ ನೆರವು ನಮ್ಮ ಶಕ್ತಿ. ನರೇಂದ್ರ ‌ಮೋದಿ ಕಾರ್ಯಕ್ರಮಗಳು, ದೇಶದ ಬಗ್ಗೆ ಅವರಿಗಿರುವ ಕಳಕಳಿ. ದೇಶದ ರಕ್ಷಣೆ ಮತ್ತು ಅಭಿವೃದ್ಧಿ ಬಗ್ಗೆ ಅವರಿಗಿರುವ ದೂರದೃಷ್ಟಿ, ವಿದೇಶದಲ್ಲಿರುವ ಭಾರತೀಯರಿಗೆ ಗೌರವದ ದೂರದೃಷ್ಟಿ ಮೇಲೆ ಮತ ಯಾಚಿಸುತ್ತೇವೆ'' ಎಂದರು.

''ಈರುಳ್ಳಿ, ಟೊಮೆಟೊ ಸಲುವಾಗಿ ಸರ್ಕಾರ ಬಿದ್ದ ಉದಾಹರಣೆ ಇವೆ. ಅದಕ್ಕೆ ಖಾದ್ಯತೈಲ ಕಾಳು ಬೆಳೆಯಲು ರೈತರಿಗೆ ಉತ್ತೇಜನ ನೀಡಲಾಗುತ್ತಿದೆ. ಸಬ್ಸಿಡಿ ಆಧಾರದ ಮೇಲೆ ರೈತರಿಗೆ ಬೀಜ, ಟೆಕ್ನಾಲಜಿ ನೀಡುತ್ತಿದ್ದೇವೆ. ಯುಪಿಎ ಸಮಯದಲ್ಲಿನ ಲೋಪಗಳ ಗುಂಡಿ ಮುಚ್ಚಿ ಮೇಲೆದ್ದು ಬರಲು ನಮಗೆ ಸಮಯ ಬೇಕು. ಎಲ್ಲ ವಿಚಾರಗಳಲ್ಲಿ ಸ್ವಾವಲಂಬನೆ ಸಾಧಿಸಲು ಮೋದಿ ಕಾರ್ಯಪ್ರವೃತರಾಗುತ್ತಿದ್ದಾರೆ. ಈ ಮೊದಲು ನಾವು ಡಿಫೆನ್ಸ್‌ನಲ್ಲಿ ಸ್ವಾವಲಂಬಿ ಇರಲಿಲ್ಲ, ಮದ್ದುಗುಂಡು ಆಚೆಯಿಂದ ಬರುತ್ತಿತ್ತು. ಇವತ್ತು ಭಾರತ ಸ್ವಾವಲಂಬಿಯಾಗುವತ್ತ ದಾಪುಗಾಲು ಇಡುತ್ತಿದೆ, ನಾವು ಬೇರೆ ದೇಶಕ್ಕೆ ರಪ್ತು ಮಾಡಲು ಯೋಚನೆ ಮಾಡಿದ್ದೇವೆ'' ಎಂದು ತಿಳಿಸಿದರು.

ಚುನಾವಣೆ ‌ಸಂದರ್ಭದಲ್ಲಿ ಸಿಲಿಂಡರ್, ಪೆಟ್ರೊಲ್ ಬೆಲೆ ಇಳಿಕೆ ಮಾಡಿರುವ ಬಗ್ಗೆ ಮಾತನಾಡಿದ ಶೋಭಾ ಕರಂದ್ಲಾಜೆ, ''ಬೆಲೆ ಇಳಿಕೆಗೇನು ಸಂಬಂಧವಿಲ್ಲ. ಗ್ಯಾಸ್, ಪೆಟ್ರೋಲ್‌ನಲ್ಲಿ ನಾವು ಸ್ವಾವಲಂಬಿ ಆಗಿಲ್ಲ. ಈ ವಿಚಾರದಲ್ಲೂ ಸ್ವಾವಲಂಬನೆ ಸಾಧಿಸಲು ಮೋದಿ ಯೋಜನೆ ರೂಪಿಸುತ್ತಿದ್ದಾರೆ. ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಖಾದ್ಯ ತೈಲದಲ್ಲಿಯೂ ನಾವು ಸ್ವಾವಲಂಬಿಯಾಗಿಲ್ಲ. ಎಲ್ಲವನ್ನೂ ನಾವು ವಿದೇಶದಿಂದ ಸರಬರಾಜು ಮಾಡಿಕೊಳ್ಳಬೇಕಾಗುತ್ತದೆ. ವಿದೇಶಿ ಮಾರುಕಟ್ಟೆ ಆಧಾರದ ಮೇಲೆ ಬೆಲೆ ನಿಗದಿ ಆಗುತ್ತದೆ'' ಎಂದು ಮಾಹಿತಿ ನೀಡಿದರು.

ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ: ''ರಾಜ್ಯ ಸರ್ಕಾರ ಭಯೋತ್ಪಾದನೆಗೆ ಕುಮ್ಮಕ್ಕು ಕೊಡುವ ಸರ್ಕಾರ ಆಗಿದೆ'' ಎಂದು ಆರೋಪಿಸಿದ ಶೋಭಾ ಕರಂದ್ಲಾಜೆ, ''ನಿಷೇಧಿತ ಸಂಘಟನೆ ಮುಖಂಡರೆಲ್ಲ ಮುಖ್ಯಮಂತ್ರಿ ಮತ್ತು ಗೃಹ ಸಚಿವರ ಮನೆಯಲ್ಲೆ ಇರುತ್ತಾರೆ. ಹಾಗಾಗಿ, ಅವರ ಮೇಲೆ ಕ್ರಮ ತೆಗೆದುಕೊಳ್ಳುವುದು ಕೂಡ ಪೊಲೀಸ್ ಇಲಾಖೆಗೆ ಸವಾಲಾಗಿದೆ. ವಿಧಾನಸೌಧದಲ್ಲೇ ಪಾಕಿಸ್ತಾನ ಜಿಂದಾಬಾದ್ ಘೋಷಣೆ, ಬೆಂಗಳೂರಿನ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಗಳೇ ಇದಕ್ಕೆಲ್ಲ ಸಾಕ್ಷಿ. ಆದ್ದರಿಂದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭಯೋತ್ಪಾದಕರ ರಕ್ಷಕ ಸರ್ಕಾರ'' ಎಂದು ಕೇಂದ್ರ ಸಚಿವರು ದೂರಿದರು.

ಇದನ್ನೂ ಓದಿ: ದೇಶದ ತೆರಿಗೆ ಬೆಳವಣಿಗೆಗೆ ಬಳಕೆ, ನನ್ನದು- ನಿನ್ನದು ಎನ್ನುವ ಪ್ರಶ್ನೆ ಇಲ್ಲ: ಅನುರಾಗ್ ಠಾಕೂರ್​

Last Updated : Mar 9, 2024, 12:17 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.