ETV Bharat / state

ಸಿದ್ದರಾಮಯ್ಯರ ಪ್ರತಿಷ್ಠೆಯ ಕ್ಷೇತ್ರ: ಚಾಮರಾಜನಗರದಿಂದ ಯಾರಿಗೆ ಟಿಕೆಟ್? - Chamarajanagar Congress Ticket

ಕಾಂಗ್ರೆಸ್ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲೂ ಚಾಮರಾಜನಗರ ಕ್ಷೇತ್ರದ ಅಭ್ಯರ್ಥಿ ಅಂತಿಮಗೊಂಡಿಲ್ಲ.

author img

By ETV Bharat Karnataka Team

Published : Mar 22, 2024, 10:55 AM IST

MP TICKET OF CONGRESS
ಫೈನಲ್ ಆಗದ ಚಾಮರಾಜನಗರ ಎಂಪಿ ಟಿಕೆಟ್

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಪಡುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಮುಂದುವರಿದಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ.

ಸಚಿವ ಮಹಾದೇವಪ್ಪ ಅವರನ್ನು 'ಲೋಕ' ಅಖಾಡಕ್ಕಿಳಿಸಬೇಕು ಎನ್ನುವುದು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ಒಲವು. ಆದರೆ, ತನ್ನ ಬದಲು ಮಗ ಸುನೀಲ್ ಬೋಸ್​​ಗೆ ಟಿಕೆಟ್ ಕೊಡುವಂತೆ ಮಹಾದೇವಪ್ಪ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಳಂಬವಾಗುತ್ತಿದೆ. ಇದೇ ವೇಳೆ, ಅಂತಿಮವಾಗಿ ಶಾಸಕ ದರ್ಶನ್ ಧ್ರುವನಾರಾಯಣ ಕಣಕ್ಕಿಳಿದರೂ ಅಚ್ಚರಿಯಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

ಸಿಎಂ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿ ಬೀಗಿದೆ. ಕ್ಷೇತ್ರವನ್ನು ಮತ್ತೆ ಕೈವಶ ಮಾಡಿಕೊಳ್ಳಬೇಕಾದ ಅವಶ್ಯಕತೆಯೂ ಆ ಪಕ್ಷಕ್ಕಿದೆ. ಟಿಕೆಟ್ ರೇಸ್​ನಲ್ಲಿ ಸುನೀಲ್ ಬೋಸ್, ದರ್ಶನ್ ಧ್ರುವನಾರಾಯಣ, ಡಿ‌.ಎನ್.ನಟರಾಜು, ಜಿ.ಎನ್‌.ನಂಜುಂಡಸ್ವಾಮಿ ಇದ್ದು ಎಲ್ಲರೂ ಲಾಬಿ ನಡೆಸುತ್ತಿದ್ದಾರೆ.

ಅಂತಿಮವಾಗಿ ಸಿದ್ದರಾಮಯ್ಯ ಸೂಚಿಸಿದವರಿಗೆ ಎಂಪಿ ಟಿಕೆಟ್ ಸಿಗಲಿದ್ದು, ಯಾರಾಗುತ್ತಾರೆ ಹುರಿಯಾಳು? ಎಂಬುದೀಗ ಸಸ್ಪೆನ್ಸ್. ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಮಹಾದೇವಪ್ಪ ಅವರೇ ಚುನಾವಣೆಗೆ ನಿಲ್ಲುವರೋ ಇಲ್ಲವೇ ಮಗನಿಗೆ ಟಿಕೆಟ್ ಕೊಡಿಸುತ್ತಾರೋ?, ಅಥವಾ ಧ್ರುವನಾರಾಯಣ ಪುತ್ರ ದರ್ಶನ್ ಅಚ್ಚರಿ ಅಭ್ಯರ್ಥಿಯಾಗಿ ಹೊರಹೊಮ್ಮುವರೇ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ 3ನೇ ಪಟ್ಟಿ: ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಗುರುವಾರ ರಾತ್ರಿ ಪ್ರಕಟಿಸಿದೆ. ಕರ್ನಾಟಕದ 17 ಕ್ಷೇತ್ರಗಳು ಸೇರಿ ಇತರೆ ರಾಜ್ಯಗಳ ಒಟ್ಟು 57 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್​ ಆಗಿದ್ದಾರೆ. ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಬಾಕಿ ಉಳಿದ 21 ಕ್ಷೇತ್ರಗಳ ಪೈಕಿ ರಾಜ್ಯದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದು, 4 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್​ ಆಗಬೇಕಷ್ಟೇ.

ಇದನ್ನೂ ಓದಿ: 'ರಾಜ್ಯದಲ್ಲಿ ಬಿಜೆಪಿಯಿಂದ ಮರಾಠರಿಗೆ ಅನ್ಯಾಯ': 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ - Maratha Union

ಬಿಜೆಪಿ ಅಭ್ಯರ್ಥಿ ಪ್ರಚಾರ: ಒಂದೆಡೆ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿ ಉಳಿದಿದ್ದರೆ, ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ಬಾಲರಾಜು ಇಂದಿನಿಂದ ಅಧಿಕೃತವಾಗಿ ಪ್ರಚಾರಕ್ಕೆ ಧುಮುಕಲಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹನೂರು ಹಾಗೂ ಕೊಳ್ಳೇಗಾಲದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಿದ್ದಾರೆ.

ಇದನ್ನೂ ಓದಿ: ಮದುವೇ ಇಲ್ಲವೇ ಮಠ! ಮದುವೆ ಭಾಗ್ಯ ಕರುಣಿಸೆಂದು ದೇವರ ಮೊರೆ ಹೋದ ಯುವಕರು - Special Pooja For Marriagea

ಚಾಮರಾಜನಗರ: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣ ವಿಧಾನಸಭಾ ಕ್ಷೇತ್ರ ಒಳಪಡುವ ಚಾಮರಾಜನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಕಗ್ಗಂಟಾಗಿಯೇ ಮುಂದುವರಿದಿದೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಎರಡನೇ ಪಟ್ಟಿಯಲ್ಲೂ ಚಾಮರಾಜನಗರದ ಟಿಕೆಟ್ ಫೈನಲ್ ಆಗಿಲ್ಲ. ಸಿಎಂ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲ್ಲೇಬೇಕಾದ ಅನಿವಾರ್ಯತೆ ಇದ್ದು ಅಳೆದು-ತೂಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತಿದೆ.

ಸಚಿವ ಮಹಾದೇವಪ್ಪ ಅವರನ್ನು 'ಲೋಕ' ಅಖಾಡಕ್ಕಿಳಿಸಬೇಕು ಎನ್ನುವುದು ಹೈಕಮಾಂಡ್ ಮತ್ತು ಸಿದ್ದರಾಮಯ್ಯ ಅವರ ಒಲವು. ಆದರೆ, ತನ್ನ ಬದಲು ಮಗ ಸುನೀಲ್ ಬೋಸ್​​ಗೆ ಟಿಕೆಟ್ ಕೊಡುವಂತೆ ಮಹಾದೇವಪ್ಪ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಆಯ್ಕೆ ವಿಳಂಬವಾಗುತ್ತಿದೆ. ಇದೇ ವೇಳೆ, ಅಂತಿಮವಾಗಿ ಶಾಸಕ ದರ್ಶನ್ ಧ್ರುವನಾರಾಯಣ ಕಣಕ್ಕಿಳಿದರೂ ಅಚ್ಚರಿಯಿಲ್ಲ ಎನ್ನುತ್ತಿವೆ ಕಾಂಗ್ರೆಸ್ ಮೂಲಗಳು.

ಸಿಎಂ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಅರಳಿ ಬೀಗಿದೆ. ಕ್ಷೇತ್ರವನ್ನು ಮತ್ತೆ ಕೈವಶ ಮಾಡಿಕೊಳ್ಳಬೇಕಾದ ಅವಶ್ಯಕತೆಯೂ ಆ ಪಕ್ಷಕ್ಕಿದೆ. ಟಿಕೆಟ್ ರೇಸ್​ನಲ್ಲಿ ಸುನೀಲ್ ಬೋಸ್, ದರ್ಶನ್ ಧ್ರುವನಾರಾಯಣ, ಡಿ‌.ಎನ್.ನಟರಾಜು, ಜಿ.ಎನ್‌.ನಂಜುಂಡಸ್ವಾಮಿ ಇದ್ದು ಎಲ್ಲರೂ ಲಾಬಿ ನಡೆಸುತ್ತಿದ್ದಾರೆ.

ಅಂತಿಮವಾಗಿ ಸಿದ್ದರಾಮಯ್ಯ ಸೂಚಿಸಿದವರಿಗೆ ಎಂಪಿ ಟಿಕೆಟ್ ಸಿಗಲಿದ್ದು, ಯಾರಾಗುತ್ತಾರೆ ಹುರಿಯಾಳು? ಎಂಬುದೀಗ ಸಸ್ಪೆನ್ಸ್. ಕಾಂಗ್ರೆಸ್ ಹೈಕಮಾಂಡ್ ಮಾತಿಗೆ ಕಟ್ಟುಬಿದ್ದು ಮಹಾದೇವಪ್ಪ ಅವರೇ ಚುನಾವಣೆಗೆ ನಿಲ್ಲುವರೋ ಇಲ್ಲವೇ ಮಗನಿಗೆ ಟಿಕೆಟ್ ಕೊಡಿಸುತ್ತಾರೋ?, ಅಥವಾ ಧ್ರುವನಾರಾಯಣ ಪುತ್ರ ದರ್ಶನ್ ಅಚ್ಚರಿ ಅಭ್ಯರ್ಥಿಯಾಗಿ ಹೊರಹೊಮ್ಮುವರೇ ಎಂಬುದನ್ನು ಕಾದು ನೋಡಬೇಕಿದೆ.

ಕಾಂಗ್ರೆಸ್ 3ನೇ ಪಟ್ಟಿ: ಕಾಂಗ್ರೆಸ್​ ತನ್ನ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಗುರುವಾರ ರಾತ್ರಿ ಪ್ರಕಟಿಸಿದೆ. ಕರ್ನಾಟಕದ 17 ಕ್ಷೇತ್ರಗಳು ಸೇರಿ ಇತರೆ ರಾಜ್ಯಗಳ ಒಟ್ಟು 57 ಲೋಕಸಭಾ ಸ್ಥಾನಗಳಿಗೆ ಕಾಂಗ್ರೆಸ್ ಅಭ್ಯರ್ಥಿಗಳು ಫೈನಲ್​ ಆಗಿದ್ದಾರೆ. ಮೊದಲ ಪಟ್ಟಿಯಲ್ಲಿ ರಾಜ್ಯದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿತ್ತು. ಬಾಕಿ ಉಳಿದ 21 ಕ್ಷೇತ್ರಗಳ ಪೈಕಿ ರಾಜ್ಯದ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಹೆಸರಿಸಲಾಗಿದೆ. ಈ ಮೂಲಕ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಅಂತಿಮಗೊಂಡಿದ್ದು, 4 ಕ್ಷೇತ್ರಗಳಿಗೆ ಅಭ್ಯರ್ಥಿಗಳು ಫೈನಲ್​ ಆಗಬೇಕಷ್ಟೇ.

ಇದನ್ನೂ ಓದಿ: 'ರಾಜ್ಯದಲ್ಲಿ ಬಿಜೆಪಿಯಿಂದ ಮರಾಠರಿಗೆ ಅನ್ಯಾಯ': 10 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಕಣಕ್ಕೆ - Maratha Union

ಬಿಜೆಪಿ ಅಭ್ಯರ್ಥಿ ಪ್ರಚಾರ: ಒಂದೆಡೆ ಕಾಂಗ್ರೆಸ್ ಟಿಕೆಟ್ ಕಗ್ಗಂಟಾಗಿ ಉಳಿದಿದ್ದರೆ, ಮತ್ತೊಂದು ಕಡೆ ಬಿಜೆಪಿ ಅಭ್ಯರ್ಥಿ ಬಾಲರಾಜು ಇಂದಿನಿಂದ ಅಧಿಕೃತವಾಗಿ ಪ್ರಚಾರಕ್ಕೆ ಧುಮುಕಲಿದ್ದಾರೆ. ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ ಹನೂರು ಹಾಗೂ ಕೊಳ್ಳೇಗಾಲದಲ್ಲಿ ಕಾರ್ಯಕರ್ತರ ಸಮಾವೇಶ ನಡೆಸಲಿದ್ದಾರೆ.

ಇದನ್ನೂ ಓದಿ: ಮದುವೇ ಇಲ್ಲವೇ ಮಠ! ಮದುವೆ ಭಾಗ್ಯ ಕರುಣಿಸೆಂದು ದೇವರ ಮೊರೆ ಹೋದ ಯುವಕರು - Special Pooja For Marriagea

ETV Bharat Logo

Copyright © 2024 Ushodaya Enterprises Pvt. Ltd., All Rights Reserved.