ETV Bharat / state

ಪ್ರಯಾಣಿಕರೇ ಗಮನಿಸಿ; ಕಾಮಗಾರಿ ಹಿನ್ನೆಲೆ ನೈರುತ್ಯ ರೈಲ್ವೆ ಸೇವೆಯಲ್ಲಿ ಬದಲಾವಣೆ - South Western Railway

author img

By ETV Bharat Karnataka Team

Published : Jul 13, 2024, 7:49 AM IST

ವಿವಿಧೆಡೆ ಕಾಮಗಾರಿ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆಯ ಸೇವೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಲಾಗಿದೆ.

south western railway
ರೈಲ್ವೆ ನಿಲ್ದಾಣ (ETV Bharat)

ಹುಬ್ಬಳ್ಳಿ: ನೈರುತ್ಯ ವಲಯದ ನಿಟ್ಟೂರು ಮತ್ತು ಸಂಪಿಗೆ ರೋಡ್​​ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ.

ಸಂಚಾರ ರದ್ದಾದ ರೈಲುಗಳು: ಜುಲೈ 18 ಹಾಗೂ 25ರಂದು ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ತುಮಕೂರು - ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ - ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್ಆರ್ ಬೆಂಗಳೂರು (06576), ಕೆಎಸ್ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳು ರದ್ದುಗೊಂಡಿವೆ.

ಭಾಗಶಃ ರದ್ದು: ಜುಲೈ 18 ಹಾಗೂ 25ರಂದು ಕೆಎಸ್ಆರ್ ಬೆಂಗಳೂರು - ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ರೈಲುಗಳನ್ನು ಹಿರೇಹಳ್ಳಿ - ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ತಾಳಗುಪ್ಪ-ಕೆಎಸ್ಆರ್ ಬೆಂಗಳೂರು (20652) ರೈಲು, ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು (12725/12726) ರೈಲುಗಳನ್ನು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.

ಮಾರ್ಗ ಬದಲಾವಣೆ: ಜುಲೈ 17 ಮತ್ತು 24ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಜುಲೈ18 ಮತ್ತು 25ರಂದು ಹೊರಡುವ ಮೈಸೂರು-ವಾರಣಾಸಿ (22687) ಹಾಗೂ ಯಶವಂತಪುರ-ಜೈಪುರ (82653) ರೈಲುಗಳು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ, ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಇಲ್ಲ. ಮೈಸೂರು - ಬೆಳಗಾವಿ (17326) ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸುವುದರಿಂದ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಮೈಸೂರು-ಉದಯಪುರ ಸಿಟಿ (19668) ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮೂಲಕ ಸಂಚರಿಸಲಿದೆ.

ರೈಲುಗಳ ನಿಯಂತ್ರಣ: ಜುಲೈ 16 ಮತ್ತು 23ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ಬಿಕಾನೇರ್-ಯಶವಂತಪುರ (16588) ರೈಲನ್ನು ಮಾರ್ಗದಲ್ಲಿ 150 ನಿಮಿಷ, ಜುಲೈ 18 ಹಾಗೂ 25ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ (12629) ರೈಲು 50 ನಿಮಿಷ, ಕೆಎಸ್ಆರ್ ಬೆಂಗಳೂರು-ತಾಳಗುಪ್ಪ (20651) ರೈಲು 10 ನಿಮಿಷ, ಬೆಳಗಾವಿ - ಮೈಸೂರು (17325) ರೈಲು 55 ನಿಮಿಷ ಹಾಗೂ ಚಾಮರಾಜನಗರ-ತುಮಕೂರು (07345) ರೈಲನ್ನು 120 ನಿಮಿಷಗಳ ಕಾಲ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಸಮಯ ಮರು ನಿಗದಿ: ಜುಲೈ 18 ಮತ್ತು 25ರಂದು ಯಶವಂತಪುರ-ವಾಸ್ಕೋಡಗಾಮಾ (17309) ರೈಲು ಯಶವಂತಪುರದಿಂದ 60 ನಿಮಿಷ, ಜುಲೈ 24ರಂದು ತುಮಕೂರು-ಶಿವಮೊಗ್ಗ ಟೌನ್ (06513) ರೈಲು ತುಮಕೂರಿನಿಂದ 85 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹುಬ್ಬಳ್ಳಿ: ನೈರುತ್ಯ ವಲಯದ ನಿಟ್ಟೂರು ಮತ್ತು ಸಂಪಿಗೆ ರೋಡ್​​ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ 62ರಲ್ಲಿ ಕಾಮಗಾರಿ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗುತ್ತಿದೆ. ಅವುಗಳ ಮಾಹಿತಿ ಈ ಕೆಳಗಿನಂತಿದೆ.

ಸಂಚಾರ ರದ್ದಾದ ರೈಲುಗಳು: ಜುಲೈ 18 ಹಾಗೂ 25ರಂದು ಕೆಲ ರೈಲುಗಳ ಸಂಚಾರ ರದ್ದು ಮಾಡಲಾಗಿದೆ. ತುಮಕೂರು - ಚಾಮರಾಜನಗರ (07346), ಚಾಮರಾಜನಗರ-ಮೈಸೂರು (07328), ಚಾಮರಾಜನಗರ - ಯಶವಂತಪುರ (16239), ಯಶವಂತಪುರ-ಚಾಮರಾಜನಗರ (16240), ತುಮಕೂರು-ಕೆಎಸ್ಆರ್ ಬೆಂಗಳೂರು (06576), ಕೆಎಸ್ಆರ್ ಬೆಂಗಳೂರು-ತುಮಕೂರು (06575), ಯಶವಂತಪುರ-ಶಿವಮೊಗ್ಗ ಟೌನ್ (16579) ಮತ್ತು ಶಿವಮೊಗ್ಗ ಟೌನ್-ಯಶವಂತಪುರ (16580) ರೈಲುಗಳು ರದ್ದುಗೊಂಡಿವೆ.

ಭಾಗಶಃ ರದ್ದು: ಜುಲೈ 18 ಹಾಗೂ 25ರಂದು ಕೆಎಸ್ಆರ್ ಬೆಂಗಳೂರು - ತುಮಕೂರು ನಿಲ್ದಾಣಗಳ ನಡುವೆ ಸಂಚರಿಸುವ (06571/06572) ರೈಲುಗಳನ್ನು ಹಿರೇಹಳ್ಳಿ - ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುತ್ತಿದೆ. ತಾಳಗುಪ್ಪ-ಕೆಎಸ್ಆರ್ ಬೆಂಗಳೂರು (20652) ರೈಲು, ಕೆಎಸ್ಆರ್ ಬೆಂಗಳೂರು-ಧಾರವಾಡ-ಕೆಎಸ್ಆರ್ ಬೆಂಗಳೂರು (12725/12726) ರೈಲುಗಳನ್ನು ಅರಸೀಕೆರೆ-ಕೆಎಸ್ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು ಮಾಡಲಾಗಿದೆ.

ಮಾರ್ಗ ಬದಲಾವಣೆ: ಜುಲೈ 17 ಮತ್ತು 24ರಂದು ವಾಸ್ಕೋ-ಡ-ಗಾಮಾದಿಂದ ಹೊರಡುವ ರೈಲು ಸಂಖ್ಯೆ 17310 ವಾಸ್ಕೋಡಗಾಮಾ-ಯಶವಂತಪುರ ರೈಲು ಅರಸೀಕೆರೆ, ಹಾಸನ, ನೆಲಮಂಗಲ, ಯಶವಂತಪುರ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ, ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಜುಲೈ18 ಮತ್ತು 25ರಂದು ಹೊರಡುವ ಮೈಸೂರು-ವಾರಣಾಸಿ (22687) ಹಾಗೂ ಯಶವಂತಪುರ-ಜೈಪುರ (82653) ರೈಲುಗಳು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸಲಿದೆ. ಹೀಗಾಗಿ, ತುಮಕೂರು ನಿಲ್ದಾಣದಲ್ಲಿ ನಿಲುಗಡೆ ಇಲ್ಲ. ಮೈಸೂರು - ಬೆಳಗಾವಿ (17326) ರೈಲು ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ ಮಾರ್ಗದ ಮೂಲಕ ಸಂಚರಿಸುವುದರಿಂದ ತಿಪಟೂರು ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.

ಮೈಸೂರು-ಉದಯಪುರ ಸಿಟಿ (19668) ರೈಲು ಕೆಎಸ್ಆರ್ ಬೆಂಗಳೂರು, ಯಶವಂತಪುರ, ನೆಲಮಂಗಲ, ಹಾಸನ, ಅರಸೀಕೆರೆ, ದಾವಣಗೆರೆ ಮೂಲಕ ಸಂಚರಿಸಲಿದೆ.

ರೈಲುಗಳ ನಿಯಂತ್ರಣ: ಜುಲೈ 16 ಮತ್ತು 23ರಂದು ಬಿಕಾನೇರ್ ನಿಲ್ದಾಣದಿಂದ ಹೊರಡುವ ಬಿಕಾನೇರ್-ಯಶವಂತಪುರ (16588) ರೈಲನ್ನು ಮಾರ್ಗದಲ್ಲಿ 150 ನಿಮಿಷ, ಜುಲೈ 18 ಹಾಗೂ 25ರಂದು ಯಶವಂತಪುರ-ಹಜರತ್ ನಿಜಾಮುದ್ದೀನ್ (12629) ರೈಲು 50 ನಿಮಿಷ, ಕೆಎಸ್ಆರ್ ಬೆಂಗಳೂರು-ತಾಳಗುಪ್ಪ (20651) ರೈಲು 10 ನಿಮಿಷ, ಬೆಳಗಾವಿ - ಮೈಸೂರು (17325) ರೈಲು 55 ನಿಮಿಷ ಹಾಗೂ ಚಾಮರಾಜನಗರ-ತುಮಕೂರು (07345) ರೈಲನ್ನು 120 ನಿಮಿಷಗಳ ಕಾಲ ಮಾರ್ಗದಲ್ಲಿ ನಿಯಂತ್ರಿಸಲಾಗುತ್ತದೆ.

ಸಮಯ ಮರು ನಿಗದಿ: ಜುಲೈ 18 ಮತ್ತು 25ರಂದು ಯಶವಂತಪುರ-ವಾಸ್ಕೋಡಗಾಮಾ (17309) ರೈಲು ಯಶವಂತಪುರದಿಂದ 60 ನಿಮಿಷ, ಜುಲೈ 24ರಂದು ತುಮಕೂರು-ಶಿವಮೊಗ್ಗ ಟೌನ್ (06513) ರೈಲು ತುಮಕೂರಿನಿಂದ 85 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.