ETV Bharat / state

ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ಬೆಂಗಳೂರಿಗೆ ಸೇರ್ಪಡೆ: ಡಿಸಿಎಂ ಡಿ. ಕೆ. ಶಿವಕುಮಾರ್​ - DCM D K Shivakumar

author img

By ETV Bharat Karnataka Team

Published : Jul 3, 2024, 6:00 PM IST

Updated : Jul 3, 2024, 8:02 PM IST

ಚನ್ನಪಟ್ಟಣ ತಾಲೂಕನ್ನು ರಾಮನಗರಕ್ಕೆ ಸೇರ್ಪಡೆಗೊಳಿಸುವುದರಿಂದ ಹೊಸ ನಗರ ನಿರ್ಮಾಣವಾಗಲಿದೆ. ಇಲ್ಲಿನ ಭೂಮಿಯ ಬೆಲೆಯೂ ಹೆಚ್ಚಾಗಲಿದೆ ಎಂದು ಡಿ.ಕೆ. ಶಿವಕುಮಾರ್​ ಹೇಳಿದರು.

DCM D K Shivakumar inaugurated Janaspandana Program
ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್​ (ETV Bharat)

ರಾಮನಗರ: ನನ್ನ ಮೇಲೆ ಚನ್ನಪಟ್ಟಣ ಜನ ನಂಬಿಕೆ ಇಡಿ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತರುವ ಪ್ರಯತ್ನ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ತಾಲ್ಲೂಕು ಬೆಂಗಳೂರಿಗೆ ಸೇರಲಿದೆ ಎಂದು ಮತ್ತೊಮ್ಮೆ ರಾಮನಗರ ಜಿಲ್ಲೆಯವರು ಬೆಂಗಳೂರಿಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್​ (ETV Bharat)

ಬೊಂಬೆನಗರಿ ಚನ್ನಪಟ್ಟಣ ತಾಲೂಕಿನಲ್ಲಿ ಇಂದು 9 ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, "ಬೇರೆ ಯಾರೂ ಕೂಡ ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಇಲ್ಲಿವರೆಗೂ ಇಲ್ಲಿ ಇದ್ದವರು ಯಾರೂ ಬಂದಿಲ್ಲ. ಕನಕಪುರದಲ್ಲಿ ಇದೇ ರೀತಿ ಮಾಡಿ ಮಾದರಿಯಾಗಿದ್ದೇವೆ. ನಿಮ್ಮ ಸೇವಕನಾಗಿ ನಾನು ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಬೆಂಗಳೂರಿಗೆ ಸೇರಿದಲ್ಲಿ ಭೂಮಿಯ ಬೆಲೆಯೂ ಹೆಚ್ಚಾಗಲಿದೆ‌. ನಾವೆಲ್ಲರೂ ಬೆಂಗಳೂರಿನ ಸಮೀಪವಿದ್ದೇವೆ" ಎಂದರು.

"ಇಂದು ತಾಲೂಕಿನಲ್ಲಿ 9 ಜನಸ್ಪಂದನಾ ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ. ಈಗಾಗಲೇ 10 ಸಾವಿರ ಅರ್ಜಿಗಳು ಬಂದಿವೆ. ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆಗೆ ಪರಿಹಾರ ನೀಡಲಾಗುತ್ತಿದೆ‌. ಎಲ್ಲಿ ಅನ್ಯಾಯ ಆಗಿದೆಯೋ ಅವುಗಳನ್ನು ಸರಿಪಡಿಸುವ ಕೆಲಸ ಮುಂದಿನ ದಿನಗಳಲ್ಲಿ ಆಗಲಿದೆ. ಸೈಟ್, ಮನೆ, ಖಾತೆ, ರಸ್ತೆ, ಚರಂಡಿ ಸೇರಿ ಸಾಕಷ್ಟು ಸಮಸ್ಯೆಗಳು ಗಮನಕ್ಕೆ ಬಂದಿವೆ. ಚನ್ನಪಟ್ಟಣ ಕತ್ತಲೆಯಲ್ಲಿದೆ, ಇದಕ್ಕೆ ಬೆಳಕು ಬೇಕು. ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ನಾವಿಲ್ಲಿ ಬಂದಿರೋದು" ಎಂದು ಡಿಕೆಶಿ ಹೇಳಿದರು.

"ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಈ ಮಾತನ್ನು ಹೇಳುತ್ತಿದ್ದೇನೆ. ಚನ್ನಪಟ್ಟಣ ಇತಿಹಾಸದಲ್ಲೇ ಇಂತಹ ಒಂದು ಕಾರ್ಯಕ್ರಮ ಆಗಿರಲಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ನೀವು ಕೊಟ್ಟಿರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುತ್ತೇವೆ. ಮುಂದಿನ ದಿನ ಈ ಬಗ್ಗೆ ಅಧಿಕಾರಗಳ ಸಭೆ ಮಾಡುತ್ತೇವೆ. ಚನ್ನಪಟ್ಟಣ ನಗರಕ್ಕೆ ಅನೇಕ ಕಾರ್ಯಕ್ರಮ ರೂಪಿಸಿ ಅಭಿವೃದ್ಧಿ ಮಾಡುತ್ತೇವೆ. ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ನಗರ ನಿರ್ಮಾಣವಾಗಲಿದೆ. ಎಲ್ಲಾ ಬಡವರಿಗೆ ಸೈಟ್ ಕೊಡುವ ಕೆಲಸ ಆಗುತ್ತದೆ. ಕನಕಪುರದಲ್ಲಿ ಈಗಾಗಲೇ 100 ಎಕರೆಯಲ್ಲಿ ಸೈಟ್ ನಿರ್ಮಿಸಿ ಬಡವರಿಗೆ ಕೊಟ್ಟಿದ್ದೇವೆ. ಜನಸಾಮಾನ್ಯರ ಎಲ್ಲಾ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇವೆ." ಎಂದು ಹೇಳಿದರು.

"ನಿಮ್ಮ ಜೊತೆ ಇನ್ನುಮುಂದೆ ಸಂಪರ್ಕದಲ್ಲಿರುತ್ತೇನೆ. ನನ್ನ ಕೈ ಬಲಪಡಿಸಿ, ನನಗೆ ಶಕ್ತಿ ತುಂಬಿ. ನಮ್ಮವರನ್ನು ಶಾಸಕರನ್ನಾಗಿ ಮಾಡಲು ಸಹಕಾರ ಕೊಡಿ. ನಿಮ್ಮ ಕೆಲಸಗಳನ್ನು ಇನ್ನೂ ಹೆಚ್ಚೆಚ್ಚು ಮಾಡುವ ಅವಕಾಶ ಕೊಡಿ. ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿ" ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್​ ಮನವಿ ಮಾಡಿದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ: ಡಿಸಿಎಂ ಡಿ ಕೆ ಶಿವಕುಮಾರ್ - DCM DK Shivakumar

ರಾಮನಗರ: ನನ್ನ ಮೇಲೆ ಚನ್ನಪಟ್ಟಣ ಜನ ನಂಬಿಕೆ ಇಡಿ. ಚನ್ನಪಟ್ಟಣಕ್ಕೆ ಹೊಸ ಚೈತನ್ಯ ತರುವ ಪ್ರಯತ್ನ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ನನ್ನ ನಾಯಕತ್ವದಲ್ಲಿ ಚನ್ನಪಟ್ಟಣ ತಾಲ್ಲೂಕು ಬೆಂಗಳೂರಿಗೆ ಸೇರಲಿದೆ ಎಂದು ಮತ್ತೊಮ್ಮೆ ರಾಮನಗರ ಜಿಲ್ಲೆಯವರು ಬೆಂಗಳೂರಿಗೆ ಸೇರಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್​ (ETV Bharat)

ಬೊಂಬೆನಗರಿ ಚನ್ನಪಟ್ಟಣ ತಾಲೂಕಿನಲ್ಲಿ ಇಂದು 9 ಜನಸ್ಪಂದನಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, "ಬೇರೆ ಯಾರೂ ಕೂಡ ನಿಮ್ಮ ಮನೆ ಬಾಗಿಲಿಗೆ ಬಂದಿರಲಿಲ್ಲ. ಇಲ್ಲಿವರೆಗೂ ಇಲ್ಲಿ ಇದ್ದವರು ಯಾರೂ ಬಂದಿಲ್ಲ. ಕನಕಪುರದಲ್ಲಿ ಇದೇ ರೀತಿ ಮಾಡಿ ಮಾದರಿಯಾಗಿದ್ದೇವೆ. ನಿಮ್ಮ ಸೇವಕನಾಗಿ ನಾನು ಕೆಲಸ ಮಾಡುತ್ತೇನೆ. ಚನ್ನಪಟ್ಟಣ ಬೆಂಗಳೂರಿಗೆ ಸೇರಿದಲ್ಲಿ ಭೂಮಿಯ ಬೆಲೆಯೂ ಹೆಚ್ಚಾಗಲಿದೆ‌. ನಾವೆಲ್ಲರೂ ಬೆಂಗಳೂರಿನ ಸಮೀಪವಿದ್ದೇವೆ" ಎಂದರು.

"ಇಂದು ತಾಲೂಕಿನಲ್ಲಿ 9 ಜನಸ್ಪಂದನಾ ಕಾರ್ಯಕ್ರಮಗಳನ್ನು ಮಾಡಲಾಗಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಎಲ್ಲಾ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ. ಈಗಾಗಲೇ 10 ಸಾವಿರ ಅರ್ಜಿಗಳು ಬಂದಿವೆ. ನಿಮ್ಮ ಮನೆ ಬಾಗಿಲಿಗೆ ಬಂದು ಸಮಸ್ಯೆಗೆ ಪರಿಹಾರ ನೀಡಲಾಗುತ್ತಿದೆ‌. ಎಲ್ಲಿ ಅನ್ಯಾಯ ಆಗಿದೆಯೋ ಅವುಗಳನ್ನು ಸರಿಪಡಿಸುವ ಕೆಲಸ ಮುಂದಿನ ದಿನಗಳಲ್ಲಿ ಆಗಲಿದೆ. ಸೈಟ್, ಮನೆ, ಖಾತೆ, ರಸ್ತೆ, ಚರಂಡಿ ಸೇರಿ ಸಾಕಷ್ಟು ಸಮಸ್ಯೆಗಳು ಗಮನಕ್ಕೆ ಬಂದಿವೆ. ಚನ್ನಪಟ್ಟಣ ಕತ್ತಲೆಯಲ್ಲಿದೆ, ಇದಕ್ಕೆ ಬೆಳಕು ಬೇಕು. ಈ ಕ್ಷೇತ್ರವನ್ನು ಅಭಿವೃದ್ಧಿ ಮಾಡಲು ನಾವಿಲ್ಲಿ ಬಂದಿರೋದು" ಎಂದು ಡಿಕೆಶಿ ಹೇಳಿದರು.

"ನಾನು ಜವಾಬ್ದಾರಿ ಸ್ಥಾನದಲ್ಲಿ ಇದ್ದು ಈ ಮಾತನ್ನು ಹೇಳುತ್ತಿದ್ದೇನೆ. ಚನ್ನಪಟ್ಟಣ ಇತಿಹಾಸದಲ್ಲೇ ಇಂತಹ ಒಂದು ಕಾರ್ಯಕ್ರಮ ಆಗಿರಲಿಲ್ಲ. ಎಲ್ಲರಿಗೂ ಗ್ಯಾರಂಟಿ ಯೋಜನೆಗಳು ತಲುಪುತ್ತಿವೆ. ಕೊಟ್ಟ ಮಾತನ್ನು ಉಳಿಸಿಕೊಳ್ಳುವ ಕೆಲಸ ಮಾಡುತ್ತಿದ್ದೇವೆ. ನೀವು ಕೊಟ್ಟಿರುವ ಎಲ್ಲಾ ಅರ್ಜಿಗಳನ್ನು ವಿಲೇವಾರಿ ಮಾಡುತ್ತೇವೆ. ಮುಂದಿನ ದಿನ ಈ ಬಗ್ಗೆ ಅಧಿಕಾರಗಳ ಸಭೆ ಮಾಡುತ್ತೇವೆ. ಚನ್ನಪಟ್ಟಣ ನಗರಕ್ಕೆ ಅನೇಕ ಕಾರ್ಯಕ್ರಮ ರೂಪಿಸಿ ಅಭಿವೃದ್ಧಿ ಮಾಡುತ್ತೇವೆ. ಚನ್ನಪಟ್ಟಣ ಸುತ್ತಮುತ್ತ ಸುಮಾರು 30 ಎಕರೆ ವ್ಯಾಪ್ತಿಯಲ್ಲಿ ಹೊಸ ನಗರ ನಿರ್ಮಾಣವಾಗಲಿದೆ. ಎಲ್ಲಾ ಬಡವರಿಗೆ ಸೈಟ್ ಕೊಡುವ ಕೆಲಸ ಆಗುತ್ತದೆ. ಕನಕಪುರದಲ್ಲಿ ಈಗಾಗಲೇ 100 ಎಕರೆಯಲ್ಲಿ ಸೈಟ್ ನಿರ್ಮಿಸಿ ಬಡವರಿಗೆ ಕೊಟ್ಟಿದ್ದೇವೆ. ಜನಸಾಮಾನ್ಯರ ಎಲ್ಲಾ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇವೆ." ಎಂದು ಹೇಳಿದರು.

"ನಿಮ್ಮ ಜೊತೆ ಇನ್ನುಮುಂದೆ ಸಂಪರ್ಕದಲ್ಲಿರುತ್ತೇನೆ. ನನ್ನ ಕೈ ಬಲಪಡಿಸಿ, ನನಗೆ ಶಕ್ತಿ ತುಂಬಿ. ನಮ್ಮವರನ್ನು ಶಾಸಕರನ್ನಾಗಿ ಮಾಡಲು ಸಹಕಾರ ಕೊಡಿ. ನಿಮ್ಮ ಕೆಲಸಗಳನ್ನು ಇನ್ನೂ ಹೆಚ್ಚೆಚ್ಚು ಮಾಡುವ ಅವಕಾಶ ಕೊಡಿ. ನನ್ನ ಮೇಲೆ ವಿಶ್ವಾಸ ಇಟ್ಟು ಆಶೀರ್ವಾದ ಮಾಡಿ" ಎಂದು ಇದೇ ವೇಳೆ ಡಿಸಿಎಂ ಡಿ ಕೆ ಶಿವಕುಮಾರ್​ ಮನವಿ ಮಾಡಿದರು.

ಇದನ್ನೂ ಓದಿ: ಚನ್ನಪಟ್ಟಣದಲ್ಲಿ ಶಾಸಕರು ಇದ್ದಿದ್ದರೆ ನಾನೇಕೆ ಬರುತ್ತಿದ್ದೆ: ಡಿಸಿಎಂ ಡಿ ಕೆ ಶಿವಕುಮಾರ್ - DCM DK Shivakumar

Last Updated : Jul 3, 2024, 8:02 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.