ETV Bharat / state

ಅಂಜಲಿ ಕೊಲೆ ಪ್ರಕರಣ: ಆರೋಪಿ ಗಿರೀಶ್​ ಸಿಐಡಿ ವಶಕ್ಕೆ - Anjali Murder Case

ಅಂಜಲಿ ಅಂಬಿಗೇರ ಕೊಲೆ ಪ್ರಕರಣದ ಆರೋಪಿ ಗಿರೀಶ್​ನನ್ನು ಸಿಐಡಿ ತಂಡ ವಶಕ್ಕೆ ಪಡೆದುಕೊಂಡಿದೆ.

author img

By ETV Bharat Karnataka Team

Published : May 22, 2024, 2:14 PM IST

Updated : May 22, 2024, 5:56 PM IST

ಆರೋಪಿ ಗಿರೀಶ್​ ಸಿಐಡಿ ವಶಕ್ಕೆ
ಆರೋಪಿ ಗಿರೀಶ್​ ಸಿಐಡಿ ವಶಕ್ಕೆ (ETV Bharat)

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆರೋಪಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಇಂದು ಗಿರೀಶ್​ನನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗಿದೆ.

ಡಿಶ್ಚಾರ್ಜ್ ಪ್ರಕ್ರಿಯೆ‌ ಮುಗಿಯುತ್ತಿದಂತೆ ಸಿಐಡಿ ಎಸ್​ಪಿ ವೆಂಕಟೇಶ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕೋರ್ಟ್​ಗೆ ಹಾಜರು ಪಡಿಸುವ ಮುನ್ನ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು, ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ. ಗಾಯಗೊಂಡಿದ್ದ ಆರೋಪಿಯನ್ನು ನೇರವಾಗಿ ಕಿಮ್ಸ್​ಗೆ ದಾಖಲಿಸಿದ್ದರಿಂದ ಬಂಧನದ ಪ್ರಕ್ರಿಯೆ ಮುಗಿದಿರಲಿಲ್ಲ. ಹಾಗಾಗಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬೆಂಡಿಗೇರಿ ಠಾಣೆಗೆ ಕರೆತಂದು ನಂತರ ಕೋರ್ಟ್ ಹಾಜರುಪಡಿಸಲಿದ್ದಾರೆ.

ಇದರ ನಡುವೇ ಪೊಲೀಸ್ ಠಾಣೆಗೆ‌ ಆರೋಪಿ ಗಿರೀಶ್​ ತಾಯಿ‌ ಸವಿತಾ ಅವರನ್ನು ಕರೆಸಿ ಮಾಹಿತಿ ಪಡೆದುಕೊಂಡರು. ಆರೋಪಿ ಗಿರೀಶ್​ನನ್ನು ಇಂದು ಸಂಜೆಯೊಳಗೆ ಕೋರ್ಟ್​ಗೆ ಹಾಜರುಪಡಿಸಿ ಸಿಐಡಿ ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಇದೇ ತಂಡ ನಡೆಸುತ್ತಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡ ವಿಶ್ವನಾಥ ಅಲಿಯಾಸ್​ ಗಿರೀಶ್ ಎಂಬಾತ ಮೇ.15ರಂದು ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ.

ಇದನ್ನೂ ಓದಿ: ಅಂಜಲಿ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಬೀಡುಬಿಟ್ಟ ಸಿಐಡಿ, ತನಿಖೆ ಚುರುಕು - Anjali Murder Probe

ಹುಬ್ಬಳ್ಳಿ: ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ. ದಾವಣಗೆರೆಯಲ್ಲಿ ರೈಲಿನಿಂದ ಬಿದ್ದು ಗಾಯಗೊಂಡಿದ್ದ ಆರೋಪಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಹಿನ್ನೆಲೆ ಇಂದು ಗಿರೀಶ್​ನನ್ನು ಆಸ್ಪತ್ರೆಯಿಂದ ಡಿಶ್ಚಾರ್ಜ್ ಮಾಡಲಾಗಿದೆ.

ಡಿಶ್ಚಾರ್ಜ್ ಪ್ರಕ್ರಿಯೆ‌ ಮುಗಿಯುತ್ತಿದಂತೆ ಸಿಐಡಿ ಎಸ್​ಪಿ ವೆಂಕಟೇಶ ನೇತೃತ್ವದ ತಂಡ ವಶಕ್ಕೆ ಪಡೆದುಕೊಂಡಿದೆ. ಸಿಐಡಿ ಅಧಿಕಾರಿಗಳು ಆರೋಪಿಯನ್ನು ಕೋರ್ಟ್​ಗೆ ಹಾಜರು ಪಡಿಸುವ ಮುನ್ನ ಬೆಂಡಿಗೇರಿ ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು, ಕಾನೂನು ಪ್ರಕ್ರಿಯೆಗಳನ್ನು ಪೂರ್ಣಗೊಳಿಸಿದ್ದಾರೆ. ಗಾಯಗೊಂಡಿದ್ದ ಆರೋಪಿಯನ್ನು ನೇರವಾಗಿ ಕಿಮ್ಸ್​ಗೆ ದಾಖಲಿಸಿದ್ದರಿಂದ ಬಂಧನದ ಪ್ರಕ್ರಿಯೆ ಮುಗಿದಿರಲಿಲ್ಲ. ಹಾಗಾಗಿ ಸಿಐಡಿ ಅಧಿಕಾರಿಗಳು ಆರೋಪಿಯನ್ನು ಬೆಂಡಿಗೇರಿ ಠಾಣೆಗೆ ಕರೆತಂದು ನಂತರ ಕೋರ್ಟ್ ಹಾಜರುಪಡಿಸಲಿದ್ದಾರೆ.

ಇದರ ನಡುವೇ ಪೊಲೀಸ್ ಠಾಣೆಗೆ‌ ಆರೋಪಿ ಗಿರೀಶ್​ ತಾಯಿ‌ ಸವಿತಾ ಅವರನ್ನು ಕರೆಸಿ ಮಾಹಿತಿ ಪಡೆದುಕೊಂಡರು. ಆರೋಪಿ ಗಿರೀಶ್​ನನ್ನು ಇಂದು ಸಂಜೆಯೊಳಗೆ ಕೋರ್ಟ್​ಗೆ ಹಾಜರುಪಡಿಸಿ ಸಿಐಡಿ ತಂಡ ಸ್ಥಳ ಮಹಜರು ಮಾಡುವ ಸಾಧ್ಯತೆ ಇದೆ. ನೇಹಾ ಹಿರೇಮಠ ಕೊಲೆ ಪ್ರಕರಣದ ತನಿಖೆಯನ್ನು ಇದೇ ತಂಡ ನಡೆಸುತ್ತಿದೆ.

ಪ್ರೀತಿ ನಿರಾಕರಿಸಿದ ಕಾರಣಕ್ಕೆ ಕೋಪಗೊಂಡ ವಿಶ್ವನಾಥ ಅಲಿಯಾಸ್​ ಗಿರೀಶ್ ಎಂಬಾತ ಮೇ.15ರಂದು ಅಂಜಲಿ ಅಂಬಿಗೇರ ಎಂಬ ಯುವತಿಯ ಮನೆಗೆ ನುಗ್ಗಿ ಆಕೆಗೆ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾಗಿದ್ದ.

ಇದನ್ನೂ ಓದಿ: ಅಂಜಲಿ ಕೊಲೆ ಪ್ರಕರಣ: ಹುಬ್ಬಳ್ಳಿಯಲ್ಲಿ ಬೀಡುಬಿಟ್ಟ ಸಿಐಡಿ, ತನಿಖೆ ಚುರುಕು - Anjali Murder Probe

Last Updated : May 22, 2024, 5:56 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.