ETV Bharat / state

ದರ್ಶನ್ ಬೇರೆ ಜೈಲಿಗೆ ಶಿಫ್ಟ್ ಮಾಡುವ ಯೋಚನೆ ಇದೆ: ಸಿಎಂ ಸಿದ್ದರಾಮಯ್ಯ - Darshan Photo Viral

author img

By ETV Bharat Karnataka Team

Published : Aug 26, 2024, 1:05 PM IST

Updated : Aug 26, 2024, 2:32 PM IST

ಜೈಲಿನಲ್ಲಿ ನಟ ದರ್ಶನ್​​ಗೆ ರಾಜಾತಿಥ್ಯ ನೀಡಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮೌನ ಮುರಿದಿದ್ದಾರೆ. ದರ್ಶನ್ ಮತ್ತು ಇತರ ಆರೋಪಿಗಳನ್ನು ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ಸೂಚನೆ ನೀಡಿದ್ದಾರೆ.

CM INSTRUCTED TO SHIFT DARSHAN AND OTHER ACCUSED TO DIFFERENT JAILS
ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​​ಗೆ ರಾಜಾತಿಥ್ಯ ನೀಡಿದ್ದಾರೆ ಎನ್ನಲಾದ ಪ್ರಕರಣದ ಸಂಬಂಧ ಪ್ರತಿಕ್ರಿಯಿಸಿದ ಸಿಎಂ (ETV Bharat)
ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು/ಬೆಳಗಾವಿ: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ. ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಬೇರೆ ಜೈಲಿಗೆ ಶಿಫ್ಟ್ ಮಾಡಬೇಕೆಂಬ ಯೋಚನೆ ಇದೆ. ಯಾರ ಪರ ಅಂತಾ ಏನೂ ಇಲ್ಲ. ಸಂಬಂಧಿಸಿದ 7 ಜನ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಗೃಹ ಸಚಿವ ಪರಮೇಶ್ವರ್​ ಅವರಿಗೆ ಜೈಲಿಗೆ ಭೇಟಿ ನೀಡಿ, ಇದಕ್ಕೆಲ್ಲಾ ಯಾರು ಅವಕಾಶ ಮಾಡಿಕೊಟ್ಟಿದ್ದಾರೆ ಎಂಬುದನ್ನು ಪರಿಶೀಲಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಅಲ್ಲದೇ ಯಾರಾದ್ರೂ ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ, ಅವರ ವಿರುದ್ಧವೂ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ದುಡ್ಡಿದ್ದರೆ ಎಲ್ಲಾ ಸೌಲಭ್ಯ ಸಿಗುತ್ತದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ, ಜೋಶಿ ಯಾರ ಪರವಾಗಿದ್ದಾರೆ? ಬಡವರಿಗೆ ‌ಜೋಶಿಯವರ ಕೊಡುಗೆ ಏನು? ನಾವು ಐದು ಗ್ಯಾರಂಟಿ ಕೊಟ್ಟಿದ್ದು ಯಾರ ಪರ? ಟೀಕೆ ಮಾಡಬೇಕು ಅಂತ ಮಾಡ್ತಿದ್ದಾರೆ. ಅವರಿಗೆ ಏನೂ ನೈತಿಕತೆ ಇದೆ ಎಂದು ಇದೇ ವೇಳೆ ಕಿಡಿಕಾರಿದರು.

ಈಗಾಗಲೇ ಪ್ರಕರಣ ಸಂಬಂಧ ಏಳು ಜನ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಶರವಣ, ಶರಣಬಸವ, ಪ್ರಭು.ಎಸ್, ಎಲ್.ಎಸ್.ತಿಪ್ಪೇಸ್ವಾಮಿ, ಶ್ರೀಕಾಂತ್ ತಳವಾರ್, ಹೆಡ್ ವಾರ್ಡರ್ನ್ ವೆಂಕಪ್ಪ, ಸಂತೋಷ್ ಕುಮಾರ್, ನರಸಪ್ಪ ಎಂಬವರನ್ನು ಅಮಾನತು ಮಾಡಿದ್ದೇವೆ. ಘಟನೆ ಬಗ್ಗೆ ವರದಿ ಕೇಳಿರುವುದಾಗಿ ಗೃಹ ಸಚಿವ ಪರಮೇಶ್ವರ್ ಕೂಡ ತಿಳಿಸಿದ್ದಾರೆ.

ಡಿಜಿ ಅವರು ಪರಪ್ಪನ ಅಗ್ರಹಾರಕ್ಕೆ ಭೇಟಿ ಕೊಟ್ಟಿದ್ದಾರೆ. ಇಂತಹ ಘಟನೆ ನಡೆಯಬಾರದು. ಯಾರು ಅವಕಾಶ ಕೊಟ್ಟಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಹಿರಿಯ ಅಧಿಕಾರಿಗಳನ್ನು ಅಲ್ಲಿಂದ ಶಿಫ್ಟ್ ಮಾಡ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಸರ್ಕಾರಕ್ಕೆ ಮುಜುಗರ ತರುತ್ತಿದೆ: ಈ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ ಖರ್ಗೆ, ಜೈಲಲ್ಲಿ ಯಾರಿಗೂ ಸೌಲಭ್ಯ ಕೊಡಬೇಕು ಅಂತ ನಿಯಮ ಇಲ್ಲ. ಇದು‌ ಸರ್ಕಾರಕ್ಕೆ‌ ಮುಜುಗರ ತರುತ್ತಿದೆ. ಸುಮ್ಮನೆ ಊಹಾಪೋಹ ಬೇಡ. ಗೃಹ ಸಚಿವ ಪರಮೇಶ್ವರ್ ಇರಲಿ, ಯಾರೇ ಇರಲಿ, ಸಂವಿಧಾನ ಉಲ್ಲಂಘನೆ ಮಾಡಲ್ಲ. ಇಷ್ಟು ಹಂತಕ್ಕೆ ಬಂದಿದೆ ಎಂದರೆ ಸರ್ಕಾರದ ದೃಡ ನಿರ್ಧಾರ ಕಾರಣ. ಇದರ ಬಗ್ಗೆ ಆಂತರಿಕ ತನಿಖೆಗೆ ಕೊಟ್ಟಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ: 7 ಜೈಲು ಅಧಿಕಾರಿಗಳ ಅಮಾನತು - Actor Darshan Photo Viral

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು/ಬೆಳಗಾವಿ: ಪರಪ್ಪನ‌ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ತಪ್ಪಿತಸ್ಥ ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡುವಂತೆ ಸೂಚಿಸಿದ್ದಾರೆ.

ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ಸಿಎಂ ತಾಕೀತು ಮಾಡಿದ್ದಾರೆ. ಕಾರಾಗೃಹಕ್ಕೆ ಭೇಟಿ ನೀಡಿ ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಸಿಎಂ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚನೆ ನೀಡಿದ್ದಾರೆ.

ದರ್ಶನ್ ಅವರನ್ನು ಬೇರೆ ಜೈಲಿಗೆ ಶಿಫ್ಟ್ ಮಾಡುತ್ತೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯಿಸಿರುವ ಸಿಎಂ, ಬೇರೆ ಜೈಲಿಗೆ ಶಿಫ್ಟ್ ಮಾಡಬೇಕೆಂಬ ಯೋಚನೆ ಇದೆ. ಯಾರ ಪರ ಅಂತಾ ಏನೂ ಇಲ್ಲ. ಸಂಬಂಧಿಸಿದ 7 ಜನ ಅಧಿಕಾರಿಗಳನ್ನು ಈಗಾಗಲೇ ಅಮಾನತು ಮಾಡಲಾಗಿದೆ. ಗೃಹ ಸಚಿವ ಪರಮೇಶ್ವರ್​ ಅವರಿಗೆ ಜೈಲಿಗೆ ಭೇಟಿ ನೀಡಿ, ಇದಕ್ಕೆಲ್ಲಾ ಯಾರು ಅವಕಾಶ ಮಾಡಿಕೊಟ್ಟಿದ್ದಾರೆ ಎಂಬುದನ್ನು ಪರಿಶೀಲಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದೇನೆ. ಅಲ್ಲದೇ ಯಾರಾದ್ರೂ ಹಿರಿಯ ಅಧಿಕಾರಿಗಳು ತಪ್ಪು ಮಾಡಿದ್ದರೆ, ಅವರ ವಿರುದ್ಧವೂ ಕ್ರಮ ಆಗುತ್ತದೆ ಎಂದು ಸ್ಪಷ್ಟಪಡಿಸಿದರು.

ದುಡ್ಡಿದ್ದರೆ ಎಲ್ಲಾ ಸೌಲಭ್ಯ ಸಿಗುತ್ತದೆ ಎಂಬ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಕ್ಕೆ, ಜೋಶಿ ಯಾರ ಪರವಾಗಿದ್ದಾರೆ? ಬಡವರಿಗೆ ‌ಜೋಶಿಯವರ ಕೊಡುಗೆ ಏನು? ನಾವು ಐದು ಗ್ಯಾರಂಟಿ ಕೊಟ್ಟಿದ್ದು ಯಾರ ಪರ? ಟೀಕೆ ಮಾಡಬೇಕು ಅಂತ ಮಾಡ್ತಿದ್ದಾರೆ. ಅವರಿಗೆ ಏನೂ ನೈತಿಕತೆ ಇದೆ ಎಂದು ಇದೇ ವೇಳೆ ಕಿಡಿಕಾರಿದರು.

ಈಗಾಗಲೇ ಪ್ರಕರಣ ಸಂಬಂಧ ಏಳು ಜನ ಜೈಲು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಶರವಣ, ಶರಣಬಸವ, ಪ್ರಭು.ಎಸ್, ಎಲ್.ಎಸ್.ತಿಪ್ಪೇಸ್ವಾಮಿ, ಶ್ರೀಕಾಂತ್ ತಳವಾರ್, ಹೆಡ್ ವಾರ್ಡರ್ನ್ ವೆಂಕಪ್ಪ, ಸಂತೋಷ್ ಕುಮಾರ್, ನರಸಪ್ಪ ಎಂಬವರನ್ನು ಅಮಾನತು ಮಾಡಿದ್ದೇವೆ. ಘಟನೆ ಬಗ್ಗೆ ವರದಿ ಕೇಳಿರುವುದಾಗಿ ಗೃಹ ಸಚಿವ ಪರಮೇಶ್ವರ್ ಕೂಡ ತಿಳಿಸಿದ್ದಾರೆ.

ಡಿಜಿ ಅವರು ಪರಪ್ಪನ ಅಗ್ರಹಾರಕ್ಕೆ ಭೇಟಿ ಕೊಟ್ಟಿದ್ದಾರೆ. ಇಂತಹ ಘಟನೆ ನಡೆಯಬಾರದು. ಯಾರು ಅವಕಾಶ ಕೊಟ್ಟಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಂಡಿದ್ದೇವೆ. ಹಿರಿಯ ಅಧಿಕಾರಿಗಳನ್ನು ಅಲ್ಲಿಂದ ಶಿಫ್ಟ್ ಮಾಡ್ತೇವೆ ಎಂದು ಗೃಹ ಸಚಿವರು ತಿಳಿಸಿದ್ದಾರೆ.

ಸರ್ಕಾರಕ್ಕೆ ಮುಜುಗರ ತರುತ್ತಿದೆ: ಈ ಬಗ್ಗೆ ಮಾತನಾಡಿರುವ ಸಚಿವ ಪ್ರಿಯಾಂಕ ಖರ್ಗೆ, ಜೈಲಲ್ಲಿ ಯಾರಿಗೂ ಸೌಲಭ್ಯ ಕೊಡಬೇಕು ಅಂತ ನಿಯಮ ಇಲ್ಲ. ಇದು‌ ಸರ್ಕಾರಕ್ಕೆ‌ ಮುಜುಗರ ತರುತ್ತಿದೆ. ಸುಮ್ಮನೆ ಊಹಾಪೋಹ ಬೇಡ. ಗೃಹ ಸಚಿವ ಪರಮೇಶ್ವರ್ ಇರಲಿ, ಯಾರೇ ಇರಲಿ, ಸಂವಿಧಾನ ಉಲ್ಲಂಘನೆ ಮಾಡಲ್ಲ. ಇಷ್ಟು ಹಂತಕ್ಕೆ ಬಂದಿದೆ ಎಂದರೆ ಸರ್ಕಾರದ ದೃಡ ನಿರ್ಧಾರ ಕಾರಣ. ಇದರ ಬಗ್ಗೆ ಆಂತರಿಕ ತನಿಖೆಗೆ ಕೊಟ್ಟಿದ್ದೇವೆ ಎಂದಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರದಲ್ಲಿ ನಟ ದರ್ಶನ್​ಗೆ ರಾಜಾತಿಥ್ಯ: 7 ಜೈಲು ಅಧಿಕಾರಿಗಳ ಅಮಾನತು - Actor Darshan Photo Viral

Last Updated : Aug 26, 2024, 2:32 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.