ETV Bharat / state

ಕಾವೇರಿ ನಿವಾಸದಲ್ಲಿ ಸಿಎಂ ಬ್ರೇಕ್ ಫಾಸ್ಟ್ ಸಭೆ: ರಾಜ್ಯಪಾಲರ ನೋಟಿಸ್ ಬಗ್ಗೆ ಸಂಪುಟ ಸಚಿವರ ಜೊತೆ ಸಮಾಲೋಚನೆ - GOVERNOR NOTICE TO CM

author img

By ETV Bharat Karnataka Team

Published : Aug 1, 2024, 12:28 PM IST

Updated : Aug 1, 2024, 12:48 PM IST

ರಾಜ್ಯಪಾಲರ ನೋಟಿಸ್ ಬೆನ್ನಲ್ಲೇ ಸಿಎಂ ನಿವಾಸದಲ್ಲಿ ಇಂದು ನಡೆದ ಸಚಿವರ ಜೊತೆ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ಕುತೂಹಲ ಕೆರಳಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ (ETV Bharat)

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಂಪುಟ ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ, ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ರಾಜ್ಯಪಾಲರು ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಈ ಬ್ರೇಕ್​ಫಾಸ್ಟ್ ಮೀಟಿಂಗ್ ಕುತೂಹಲ ಕೆರಳಿಸಿದೆ.

ಸಿಎಂ ಕಾವೇರಿ ನಿವಾಸದಲ್ಲಿ ನಡೆದ ಸಭೆಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿ ಬಹುತೇಕ ಎಲ್ಲಾ ಸಚಿವರು ಹಾಜರಾಗಿದ್ದರು. ಬ್ರೇಕ್ ಫಾಸ್ಟ್ ಮೀಟಿಂಗ್​​ನಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿಯೂ ಭಾಗಿಯಾಗಿದ್ದರು. ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಪ್ರಕರಣ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಮುಡಾ ವಿರುದ್ಧ ಪ್ರತಿಪಕ್ಷಗಳ ಪಾದಯಾತ್ರೆ, ಪ್ರಾಸಿಕ್ಯೂಷನ್ ಸಂಭಾವ್ಯತೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದಿಂದ ಸರ್ಕಾರ, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇತ್ತ ವೈಯಕ್ತಿಕವಾಗಿ ಸಿಎಂ ವ್ಯಕ್ತಿತ್ವಕ್ಕೂ ಧಕ್ಕೆಯಾಗುತ್ತಿರುವ ಹಿನ್ನೆಲೆ ಸಂಪುಟ ಸಚಿವರ ಜೊತೆ ಸಭೆ ನಡೆಸಿದರು. ಮುಂದಿನ ನಡೆ, ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ವೇಳೆ ನಡೆದ ಚರ್ಚೆ, ಹೈಕಮಾಂಡ್ ಸಲಹೆ ಸೂಚನೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಮುಡಾ ಅಕ್ರಮ ಆರೋಪ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆಗೂ ಚರ್ಚಿಸಲಾಯಿತು. ಸರ್ಕಾರದ ಮುಂದಿನ ನಡೆ, ಕಾನೂನಾತ್ಮಕವಾಗಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ಸಮಾಲೋಚನೆ ಮಾಡಲಾಗಿದೆ ಎನ್ನಲಾಗಿದೆ. ಇದರ ಜೊತೆಗೆ ಮುಡಾ ಪ್ರಕರಣ ಸಂಬಂಧ ಇರುವ ಗೊಂದಲವನ್ನೂ ನಿವಾರಿಸುವ ಯತ್ನ ಮಾಡಲಾಯಿತು.

ಇದೇ ವೇಳೆ ಪ್ರತಿಪಕ್ಷಗಳ ಆರೋಪಕ್ಕೆ ಯಾವ ರೀತಿ ಪ್ರತಿತಂತ್ರ ರೂಪಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆದಿದೆ. ಬಿಜೆಪಿ ಅವಧಿಯ ಹಗರಣಗಳ ತನಿಖೆ, ಹಾಲಿ ನಡೆಯುತ್ತಿರುವ ಕೆಲವು ಪ್ರಕರಣಗಳ ತ‌ನಿಖೆಯನ್ನು ತೀವ್ರಗೊಳಿಸುವುದು, ಹೊಸದಾಗಿ ಕೆಲವು ಪ್ರಕರಣಗಳ ತನಿಖೆಗೆ ನೀಡುವ ಬಗ್ಗೆ ಸಚಿವರ ಅಭಿಪ್ರಾಯ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಮ ಮಾರ್ಗಕ್ಕೆ ಇಳಿದರೆ ರಾಜ್ಯದಲ್ಲಿ ರಕ್ತ ಕ್ರಾಂತಿಯಾಗುತ್ತದೆ: ಶಿವಲಿಂಗೇಗೌಡ - MLA Shivalingegowda

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಂಪುಟ ಸಚಿವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿ, ರಾಜಕೀಯ ವಿದ್ಯಮಾನಗಳ ಬಗ್ಗೆ ಚರ್ಚಿಸಿದರು. ರಾಜ್ಯಪಾಲರು ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿಗೆ ನೋಟಿಸ್ ನೀಡಿರುವ ಬೆನ್ನಲ್ಲೇ ಈ ಬ್ರೇಕ್​ಫಾಸ್ಟ್ ಮೀಟಿಂಗ್ ಕುತೂಹಲ ಕೆರಳಿಸಿದೆ.

ಸಿಎಂ ಕಾವೇರಿ ನಿವಾಸದಲ್ಲಿ ನಡೆದ ಸಭೆಗೆ ಡಿಸಿಎಂ ಡಿ. ಕೆ. ಶಿವಕುಮಾರ್ ಸೇರಿ ಬಹುತೇಕ ಎಲ್ಲಾ ಸಚಿವರು ಹಾಜರಾಗಿದ್ದರು. ಬ್ರೇಕ್ ಫಾಸ್ಟ್ ಮೀಟಿಂಗ್​​ನಲ್ಲಿ ಅಡ್ವೊಕೇಟ್ ಜನರಲ್ ಶಶಿ ಕಿರಣ್ ಶೆಟ್ಟಿಯೂ ಭಾಗಿಯಾಗಿದ್ದರು. ರಾಜ್ಯದ ಪ್ರಸಕ್ತ ರಾಜಕೀಯ ಬೆಳವಣಿಗೆ, ವಾಲ್ಮೀಕಿ ಅಭಿವೃದ್ಧಿ ನಿಗಮ ಹಾಗೂ ಮುಡಾ ಪ್ರಕರಣ ಕುರಿತು ಗಂಭೀರ ಚರ್ಚೆ ನಡೆಸಲಾಗಿದೆ. ಮುಡಾ ವಿರುದ್ಧ ಪ್ರತಿಪಕ್ಷಗಳ ಪಾದಯಾತ್ರೆ, ಪ್ರಾಸಿಕ್ಯೂಷನ್ ಸಂಭಾವ್ಯತೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಹಗರಣದಿಂದ ಸರ್ಕಾರ, ಪಕ್ಷದ ವರ್ಚಸ್ಸಿಗೆ ಧಕ್ಕೆಯಾಗಿದೆ. ಇತ್ತ ವೈಯಕ್ತಿಕವಾಗಿ ಸಿಎಂ ವ್ಯಕ್ತಿತ್ವಕ್ಕೂ ಧಕ್ಕೆಯಾಗುತ್ತಿರುವ ಹಿನ್ನೆಲೆ ಸಂಪುಟ ಸಚಿವರ ಜೊತೆ ಸಭೆ ನಡೆಸಿದರು. ಮುಂದಿನ ನಡೆ, ದೆಹಲಿಯಲ್ಲಿ ಹೈ ಕಮಾಂಡ್ ಭೇಟಿ ವೇಳೆ ನಡೆದ ಚರ್ಚೆ, ಹೈಕಮಾಂಡ್ ಸಲಹೆ ಸೂಚನೆಗಳ ಬಗ್ಗೆ ಸಚಿವರಿಗೆ ಮಾಹಿತಿ ನೀಡಿದರು.

ಮುಡಾ ಅಕ್ರಮ ಆರೋಪ ಸಂಬಂಧ ರಾಜ್ಯಪಾಲರು ನೀಡಿರುವ ನೋಟಿಸ್ ಬಗ್ಗೆಯೂ ಸಭೆಯಲ್ಲಿ ಸಮಾಲೋಚನೆ ನಡೆಸಲಾಗಿದೆ. ಈ ಸಂಬಂಧ ಅಡ್ವೊಕೇಟ್ ಜನರಲ್ ಜೊತೆಗೂ ಚರ್ಚಿಸಲಾಯಿತು. ಸರ್ಕಾರದ ಮುಂದಿನ ನಡೆ, ಕಾನೂನಾತ್ಮಕವಾಗಿ ಯಾವ ರೀತಿ ಮುನ್ನಡೆಯಬೇಕು ಎಂಬ ಬಗ್ಗೆ ಸಮಾಲೋಚನೆ ಮಾಡಲಾಗಿದೆ ಎನ್ನಲಾಗಿದೆ. ಇದರ ಜೊತೆಗೆ ಮುಡಾ ಪ್ರಕರಣ ಸಂಬಂಧ ಇರುವ ಗೊಂದಲವನ್ನೂ ನಿವಾರಿಸುವ ಯತ್ನ ಮಾಡಲಾಯಿತು.

ಇದೇ ವೇಳೆ ಪ್ರತಿಪಕ್ಷಗಳ ಆರೋಪಕ್ಕೆ ಯಾವ ರೀತಿ ಪ್ರತಿತಂತ್ರ ರೂಪಿಸಬೇಕು ಎಂಬ ಬಗ್ಗೆ ಸಮಾಲೋಚನೆ ನಡೆದಿದೆ. ಬಿಜೆಪಿ ಅವಧಿಯ ಹಗರಣಗಳ ತನಿಖೆ, ಹಾಲಿ ನಡೆಯುತ್ತಿರುವ ಕೆಲವು ಪ್ರಕರಣಗಳ ತ‌ನಿಖೆಯನ್ನು ತೀವ್ರಗೊಳಿಸುವುದು, ಹೊಸದಾಗಿ ಕೆಲವು ಪ್ರಕರಣಗಳ ತನಿಖೆಗೆ ನೀಡುವ ಬಗ್ಗೆ ಸಚಿವರ ಅಭಿಪ್ರಾಯ ಪಡೆದಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಮ ಮಾರ್ಗಕ್ಕೆ ಇಳಿದರೆ ರಾಜ್ಯದಲ್ಲಿ ರಕ್ತ ಕ್ರಾಂತಿಯಾಗುತ್ತದೆ: ಶಿವಲಿಂಗೇಗೌಡ - MLA Shivalingegowda

Last Updated : Aug 1, 2024, 12:48 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.