ETV Bharat / state

ನಾನು ಸಿಎಂ ಆಗಿರಬೇಕೆಂದರೆ ಸುನೀಲ್ ಬೋಸ್ ಗೆಲ್ಲಿಸಿ: ಸಿಎಂ ಸಿದ್ದರಾಮಯ್ಯ - CM Siddaramaiah

ಸಿಎಂ ಸಿದ್ದರಾಮಯ್ಯ ಇಂದು ಚಾಮರಾಜನಗರ ಲೋಕಸಭೆ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸುನೀಲ್ ಬೋಸ್ ಪರ ಪ್ರಚಾರ ನಡೆಸಿದರು.

author img

By ETV Bharat Karnataka Team

Published : Apr 1, 2024, 4:37 PM IST

Updated : Apr 1, 2024, 10:05 PM IST

give-sunil-bose-more-leads-than-me-and-win-says-cm-siddaramaiah
ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಮತಬೇಟೆ

ಮೈಸೂರು: ''ವಿಧಾನಸಭಾ ಚುನಾವಮೆಯಲ್ಲಿ ನನ್ನನ್ನು 48,000 ಸಾವಿರ ಮತಗಳ ಲೀಡ್​​ನಿಂದ ಗೆಲ್ಲಿಸಿದ್ದೀರಾ, ಈಗ ಅದಕ್ಕಿಂತಲೂ ಜಾಸ್ತಿ 60 ಸಾವಿರ ಲೀಡ್‌ನಲ್ಲಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಿ. ವರುಣಾ ಕ್ಷೇತ್ರದಿಂದ 60 ಸಾವಿರ ಲೀಡ್ ಬರಬೇಕು ಅಲ್ವಾ?. ನೀವೆಲ್ಲ 60 ಸಾವಿರ ಲೀಡ್ ಬರುವಂತೆ ಮಾಡಿದರೆ ನನಗೆ ಸಂತಸವಾಗುತ್ತದೆ, ಆಗ ನನ್ನನ್ನು ಯಾರೂ ಕೂಡ ಮುಟ್ಟೋಕೆ ಆಗಲ್ಲ. ನಾನು ಸಿಎಂ ಆಗಿ ಇರಬೇಕೋ, ಬೇಡ್ವೋ''? ಎಂದು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸುನೀಲ್ ಬೋಸ್ ಪರ ಸಿಎಂ ಸಿದ್ದರಾಮಯ್ಯ ಮತಬೇಟೆ ನಡೆಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಇಂದು ಆಯೋಜಿಸಿದ್ದ ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದ ಸಿಎಂ, "ಸುನೀಲ್ ಬೋಸ್ ಅವರನ್ನು ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ" ಎಂದು ಮತದಾರರಲ್ಲಿ ಮನವಿ ಮಾಡಿದರು.

"ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ಇಲ್ಲಿನ ಜನರಿಂದ ನಾನು ಎರಡು ಬಾರಿ ಮುಖ್ಯಮಂತ್ರಿಯಾದೆ. ಈಗಲೂ ನನಗೆ ಮತ ನೀಡುತ್ತಿರುವುದೆಂದು ಭಾವಿಸಿ ನಮ್ಮ ಅಭ್ಯರ್ಥಿಗೆ ಮತ ನೀಡಿ. ಮೈಸೂರು, ಚಾಮರಾಜನಗರ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ, ನನ್ನ ರಾಜಕೀಯ ಶಕ್ತಿಯೂ ಹೆಚ್ಚುತ್ತದೆ. ಇದಕ್ಕೆ ನೀವೆಲ್ಲರೂ ಬೆಂಬಲಿಸಬೇಕು" ಎಂದು ವಿನಂತಿಸಿದರು.

"ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರಾ?. ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೇ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ?. ಡೈಲಾಗ್‌ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ, ರಸಗೊಬ್ಬರ ಬೆಲೆ ಕಡಿಮೆ ಆಗುತ್ತಾ?. ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗುತ್ತದಾ" ಎಂದು ಪ್ರಶ್ನಿಸಿದರು.

Give Sunil Bose more leads than me and win says CM Siddaramaiah
ಸಿಎಂ ಸಿದ್ದರಾಮಯ್ಯ

"ಮುಂದಿನ ಜನ್ಮದಲ್ಲಿ ಮುಸ್ಲೀಮನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ" ಎಂದು ಟೀಕಿಸಿದರು.

"ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೆವು. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ" ಎಂದರು.

ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಅಮಿತ್ ಶಾಗೆ ಅವಮಾನಿಸುವ ಉದ್ದೇಶದಿಂದ ಯತೀಂದ್ರ ಹೇಳಿಕೆ ನೀಡಿಲ್ಲ: ಸಿದ್ದರಾಮಯ್ಯ ಸಮರ್ಥನೆ - SIDDARAMAIAH DEFNDS DR YATINDRA

ಸಿಎಂ ಸಿದ್ದರಾಮಯ್ಯ ಮತಬೇಟೆ

ಮೈಸೂರು: ''ವಿಧಾನಸಭಾ ಚುನಾವಮೆಯಲ್ಲಿ ನನ್ನನ್ನು 48,000 ಸಾವಿರ ಮತಗಳ ಲೀಡ್​​ನಿಂದ ಗೆಲ್ಲಿಸಿದ್ದೀರಾ, ಈಗ ಅದಕ್ಕಿಂತಲೂ ಜಾಸ್ತಿ 60 ಸಾವಿರ ಲೀಡ್‌ನಲ್ಲಿ ಸುನೀಲ್ ಬೋಸ್ ಅವರನ್ನು ಗೆಲ್ಲಿಸಿ. ವರುಣಾ ಕ್ಷೇತ್ರದಿಂದ 60 ಸಾವಿರ ಲೀಡ್ ಬರಬೇಕು ಅಲ್ವಾ?. ನೀವೆಲ್ಲ 60 ಸಾವಿರ ಲೀಡ್ ಬರುವಂತೆ ಮಾಡಿದರೆ ನನಗೆ ಸಂತಸವಾಗುತ್ತದೆ, ಆಗ ನನ್ನನ್ನು ಯಾರೂ ಕೂಡ ಮುಟ್ಟೋಕೆ ಆಗಲ್ಲ. ನಾನು ಸಿಎಂ ಆಗಿ ಇರಬೇಕೋ, ಬೇಡ್ವೋ''? ಎಂದು ಚಾಮರಾಜನಗರ ಕ್ಷೇತ್ರದ ಕಾಂಗ್ರೆಸ್​ ಅಭ್ಯರ್ಥಿ ಸುನೀಲ್ ಬೋಸ್ ಪರ ಸಿಎಂ ಸಿದ್ದರಾಮಯ್ಯ ಮತಬೇಟೆ ನಡೆಸಿದರು.

ವರುಣಾ ವಿಧಾನಸಭಾ ಕ್ಷೇತ್ರದ ಬಿಳಿಗೆರೆಯಲ್ಲಿ ಇಂದು ಆಯೋಜಿಸಿದ್ದ ಸಾರ್ವಜನಿಕ ಸಭೆ ಉದ್ಘಾಟಿಸಿ ಮಾತನಾಡಿದ ಸಿಎಂ, "ಸುನೀಲ್ ಬೋಸ್ ಅವರನ್ನು ಗೆಲ್ಲಿಸಿ, ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ" ಎಂದು ಮತದಾರರಲ್ಲಿ ಮನವಿ ಮಾಡಿದರು.

"ವರುಣಾ ನನ್ನ ಪಾಲಿಗೆ ಅದೃಷ್ಟದ ಕ್ಷೇತ್ರ. ಇಲ್ಲಿನ ಜನರಿಂದ ನಾನು ಎರಡು ಬಾರಿ ಮುಖ್ಯಮಂತ್ರಿಯಾದೆ. ಈಗಲೂ ನನಗೆ ಮತ ನೀಡುತ್ತಿರುವುದೆಂದು ಭಾವಿಸಿ ನಮ್ಮ ಅಭ್ಯರ್ಥಿಗೆ ಮತ ನೀಡಿ. ಮೈಸೂರು, ಚಾಮರಾಜನಗರ ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ, ನನ್ನ ರಾಜಕೀಯ ಶಕ್ತಿಯೂ ಹೆಚ್ಚುತ್ತದೆ. ಇದಕ್ಕೆ ನೀವೆಲ್ಲರೂ ಬೆಂಬಲಿಸಬೇಕು" ಎಂದು ವಿನಂತಿಸಿದರು.

"ನಮ್ಮ ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳಿಂದಾಗಿ ರಾಜ್ಯದಲ್ಲಿ ಹೆಣ್ಣುಮಕ್ಕಳ ಆರ್ಥಿಕ‌ ಸಾಮರ್ಥ್ಯ ಹೆಚ್ಚಿದೆ. ದುಡಿಯುವ ಅವಕಾಶವೂ ಹೆಚ್ಚಿದೆ. ಪುರುಷರ ಜೇಬಿಗೆ ಹಣ ಉಳಿತಾಯವಾಗಿದೆ. ಜನಸಾಮಾನ್ಯರ ಜೇಬಿಗೆ ಹಣ ಹಾಕಿ ನಮ್ಮ ಜನರ ಕೊಳ್ಳುವ ಶಕ್ತಿ ಹೆಚ್ಚಿಸಿದ್ದೇವೆ. ಇದನ್ನು ವಿರೋಧಿಸುವ ಬಿಜೆಪಿಯ ಕಾರ್ಯಕರ್ತರೂ, ಬೆಂಬಲಿಗರೂ ನಮ್ಮ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಾಗಿದ್ದಾರೆ. ನರೇಂದ್ರ ಮೋದಿ ನುಡಿದಂತೆ ನಡೆದಿದ್ದಾರಾ?. ದೇಶದ ಜನರಿಗಾಗಿ ಏನೂ ಕಾರ್ಯಕ್ರಮ ರೂಪಿಸದೆ ಕೇವಲ ಅಚ್ಛೇ ದಿನ್ ಆಯೆಗಾ ಎಂದು ಡೈಲಾಗ್ ಹೊಡೆದರೆ ಸಾಕಾ?. ಡೈಲಾಗ್‌ನಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್ ಬೆಲೆ, ರಸಗೊಬ್ಬರ ಬೆಲೆ ಕಡಿಮೆ ಆಗುತ್ತಾ?. ಬರೀ ಬಾಯಲ್ಲಿ ಡೈಲಾಗ್ ಹೊಡೆದರೆ ಜನರ ಬದುಕಿನ ಸಂಕಷ್ಟ ಕಡಿಮೆ ಆಗುತ್ತದಾ" ಎಂದು ಪ್ರಶ್ನಿಸಿದರು.

Give Sunil Bose more leads than me and win says CM Siddaramaiah
ಸಿಎಂ ಸಿದ್ದರಾಮಯ್ಯ

"ಮುಂದಿನ ಜನ್ಮದಲ್ಲಿ ಮುಸ್ಲೀಮನಾಗಿ ಹುಟ್ಟುತ್ತೇನೆ ಎಂದವರು ದೇವೇಗೌಡರು. ನರೇಂದ್ರ ಮೋದಿಯವರು ಮತ್ತೆ ಪ್ರಧಾನಿಯಾದರೆ ದೇಶಬಿಟ್ಟು ಹೋಗುತ್ತೇನೆ ಎಂದವರೂ ಇದೇ ದೇವೇಗೌಡರು. ಈಗ ತಮಗೂ ನರೇಂದ್ರ ಮೋದಿಯವರಿಗೂ ಅವಿನಾಭಾವ ಸಂಬಂಧ ಇದೆ ಎನ್ನುತ್ತಿದ್ದಾರೆ. ಯಾಕಿಷ್ಟು ನಾಟಕ ದೇವೇಗೌಡರೇ, ನೀವು ಹೇಳಿದ್ದನ್ನು ನೆನಪಿಸಿದರೆ ಅದು ಗರ್ವ ಹೇಗಾಗುತ್ತದೆ" ಎಂದು ಟೀಕಿಸಿದರು.

"ನಾನು ಮೊದಲ ಬಾರಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದೇ ಬಸವ ಜಯಂತಿ ದಿನ. ಎರಡನೇ ಬಾರಿ ಸಿಎಂ ಆಗಿ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದ್ದೆವು. ಬಸವಣ್ಣನವರು ಲಿಂಗಾಯತ ಧರ್ಮ‌ ಸ್ಥಾಪಿಸಿ ಮನುಷ್ಯ ಧರ್ಮದ ಏಳಿಗೆಗೆ ಮುಂದಾದರು. ಬಸವಾದಿ ಶರಣರು ಒಂದು ಜಾತಿ-ಧರ್ಮಕ್ಕೆ ಸೇರಿದವರಲ್ಲ. ನಾವು ಬಸವಾದಿ ಶರಣರ ಆಶಯದಂತೆ ಕಾಯಕ ಮತ್ತು ದಾಸೋಹ ಮೌಲ್ಯದಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದೇವೆ" ಎಂದರು.

ಕ್ಷೇತ್ರದ ಅಭ್ಯರ್ಥಿ ಸುನೀಲ್ ಬೋಸ್, ಸಮಾಜ ಕಲ್ಯಾಣ ಸಚಿವ ಹೆಚ್.ಸಿ‌.ಮಹದೇವಪ್ಪ, ಪಶು ಸಂಗೋಪನಾ ಸಚಿವ ಕೆ.ವೆಂಕಟೇಶ್, ಶಾಸಕರಾದ ಅನಿಲ್ ಚಿಕ್ಕಮಾದು, ದರ್ಶನ್ ಧ್ರುವನಾರಾಯಣ್ ಸೇರಿ ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಯ ಶಾಸಕರುಗಳು ಉಪಸ್ಥಿತರಿದ್ದರು.

ಇದನ್ನೂ ಓದಿ: ಅಮಿತ್ ಶಾಗೆ ಅವಮಾನಿಸುವ ಉದ್ದೇಶದಿಂದ ಯತೀಂದ್ರ ಹೇಳಿಕೆ ನೀಡಿಲ್ಲ: ಸಿದ್ದರಾಮಯ್ಯ ಸಮರ್ಥನೆ - SIDDARAMAIAH DEFNDS DR YATINDRA

Last Updated : Apr 1, 2024, 10:05 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.