ETV Bharat / state

ಸಿಎಂ ಸಿದ್ದರಾಮಯ್ಯಗೆ ಮೊಣಕಾಲು ನೋವು: ಈ ಬಾರಿ ಕುಳಿತೇ ಬಜೆಟ್ ಮಂಡಿಸುವ ಸಾಧ್ಯತೆ - CM SIDDARAMAIAH KNEE PAIN

ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯನವರಿಗೆ ವೈದ್ಯರು ಆರು ವಾರ ವಿಶ್ರಾಂತಿ ಪಡೆಯಲು ಸಲಹೆ ನೀಡಿದ್ದಾರೆ. ಹೀಗಾಗಿ, ಅವರು ತಮ್ಮ 16ನೇ ಆಯವ್ಯಯವನ್ನು ಬಹುತೇಕ ಕುಳಿತುಕೊಂಡೇ ಮಂಡಿಸುವ ಸಾಧ್ಯತೆ ಇದೆ.

CM SIDDARAMAIAH KNEE PAIN
ವ್ಹೀಲ್ ಚೇರ್​ನಲ್ಲಿ ಸಿಎಂ ಸಿದ್ದರಾಮಯ್ಯ ಓಡಾಟ (ETV Bharat)
author img

By ETV Bharat Karnataka Team

Published : Feb 21, 2025, 4:49 PM IST

ಬೆಂಗಳೂರು: ಮೊಣಕಾಲು ನೋವಿನ ಕಾರಣ ಕಳೆದ 20 ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಅವರ ಮೊಣಕಾಲಿಗೆ ಬೆಲ್ಟ್ ಹಾಕಲಾಗಿದೆ. ವೈದ್ಯರ ಸಲಹೆಯಂತೆ ಓಡಾಟ ನಿಲ್ಲಿಸಿದ್ದಾರೆ. ಇನ್ನೂ ಆರು ವಾರ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದ್ದು, ಈ ಬಾರಿ ತಮ್ಮ 16ನೇ ಆಯವ್ಯಯವನ್ನು ಬಹುತೇಕ ಕುಳಿತುಕೊಂಡೇ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ಕಳೆದ ಮೂರು ವಾರದಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಫೆ.2ರಂದು ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿದ್ದರು. ಈ ವೇಳೆ ವೈದ್ಯರು ಎರಡು ದಿನಗಳ ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದರು. ಮೊಣಕಾಲಿನ ನೋವು ಗಂಭೀರ ಸ್ವರೂಪದ್ದಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಬಲ ಕಾಲಿಗೆ ಹೆಚ್ಚಿನ ಒತ್ತಡ ಬಿದ್ದಿದ್ದರಿಂದ ಮೊಣಕಾಲು ನೋವು ಉಂಟಾಗಿದೆ. ಬಲ‌ ಮೊಣಕಾಲಿನ ಮೂಳೆ ಕಟ್ಟುಗಳು ಹರಿದಿರುವುದರಿಂದ ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರು ಬಲ ಮೊಣಕಾಲಿಗೆ ಒತ್ತಡ ಹಾಕದಂತೆ ಸಲಹೆ ನೀಡಿದ್ದಾರೆ.

CM SIDDARAMAIAH KNEE PAIN
ಬಜೆಟ್‌ಪೂರ್ವ ಸಭೆ ನಡೆಸುತ್ತಿರುವ ಸಿಎಂ (ETV Bharat)

ಹೀಗಾಗಿ ನಡೆದಾಡದಂತೆ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ. ಸುಮಾರು ಆರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಿಎಂಗೆ ಸೂಚನೆ ನೀಡಲಾಗಿದೆ. ಅದರಂತೆ ಫೆ.2ರಿಂದ ಮಾ.15ರ ತನಕ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಬೇಕಾಗಿದೆ. ಈ ಆರು ವಾರಗಳ ಕಾಲ ಸಿದ್ದರಾಮಯ್ಯನವರು ಹೆಚ್ಚಿಗೆ ನಿಲ್ಲದಂತೆ, ನಡೆದಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ.

ಮೂರು ವಾರದಿಂದ ವ್ಹೀಲ್​ಚೇರ್​ನಲ್ಲೇ ಓಡಾಟ: ಕಳೆದ ಮೂರು ವಾರದಿಂದ ಸಿಎಂ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲೇ ಓಡಾಟ ನಡೆಸುತ್ತಿದ್ದಾರೆ. ವೈದ್ಯರು ಓಡಾಟ ಮಾಡಬಾರದು ಎಂದು ಸೂಚನೆ ನೀಡಿರುವುದರಿಂದ ಇದೀಗ ಬಜೆಟ್ ಪೂರ್ವಭಾವಿ ಸಭೆಗಳಿಗೆ ವ್ಹೀಲ್​ಚೇರ್ ಮೂಲಕನೇ ಓಡಾಡುತ್ತಿದ್ದಾರೆ. ಸಾರ್ವಜನಿಕ ಕಾರ್ಯಕ್ರಮ, ಸರ್ಕಾರಿ ಕಾರ್ಯಕ್ರಮ, ಅಧಿಕೃತ ಪ್ರವಾಸಗಳನ್ನೆಲ್ಲ ಮುಂದೂಡಿರುವ ಅವರು ತಮ್ಮ ಕಾವೇರಿ ನಿವಾಸ ಹಾಗೂ ವಿಧಾನಸೌಧದಲ್ಲಿನ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಳೆದ ಮೂರು ವಾರದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಹೊರತುಪಡಿಸಿ ಉಳಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿಲ್ಲ.

ಸಾಮಾನ್ಯವಾಗಿ ಬಜೆಟ್ ಪೂರ್ವಭಾವಿ ಸಭೆಗಳನ್ನು ಶಕ್ತಿ ಭವನದಲ್ಲಿ ನಡೆಸಲಾಗುತ್ತದೆ. ಆದರೆ ಈ ಬಾರಿ ಸಿಎಂ ಸಿದ್ದರಾಮಯ್ಯ ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಜೊತೆಗಿನ ಬಜೆಟ್ ಪೂರ್ವಭಾವಿ ಸಭೆಗಳನ್ನು ತಮ್ಮ ಕಾವೇರಿ ನಿವಾಸದಲ್ಲೇ ನೆರವೇರಿಸಿದ್ದಾರೆ. ಐದು ದಿನಗಳ ಕಾಲ ಕಾವೇರಿ ನಿವಾಸದಲ್ಲೇ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ವಿಶೇಷ ಕುರ್ಚಿಯಲ್ಲಿ ಕೂತೇ ಸಿಎಂ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸಿದ್ದರು. ಸರಣಿ ಸಭೆಗಳನ್ನು ಪೂರ್ಣವಾಗಿ ವಿಶೇಷ ಕುರ್ಚಿಯಲ್ಲೇ ಕೂತು ಚರ್ಚೆ ನಡೆಸಿದ್ದಾರೆ.

CM SIDDARAMAIAH KNEE PAIN
ಬಜೆಟ್‌ಪೂರ್ವ ಸಭೆ ನಡೆಸುತ್ತಿರುವ ಸಿಎಂ (ETV Bharat)

ವಿಧಾನಸೌಧದಲ್ಲಿ ವಿವಿಧ ಸಂಘ-ಸಂಸ್ಥೆಗಳು, ರೈತರು, ಒಕ್ಕೂಟ ಜೊತೆ ಬಜೆಟ್‌ಪೂರ್ವ ಸಭೆಗೂ ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್ ಮೂಲಕ ಆಗಮಿಸುತ್ತಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸರಣಿ ಬಜೆಟ್ ಪೂರ್ವ ಸಭೆ ನಡೆಸಲಾಗುತ್ತಿದೆ. ಸುಮಾರು ಅರ್ಧ ದಿನಕ್ಕೂ ಅಧಿಕ ಕಾಲ ಸಭೆಗಳಲ್ಲಿ ಸಿಎಂ ಕೂತು ಸಲಹೆ, ಸೂಚನೆ ನೀಡುತ್ತಿದ್ದಾರೆ. ಈ ವೇಳೆ ರ‍್ಯಾಂಪ್ ಮೂಲಕ ಗಾಲಿ ಕುರ್ಚಿಯಲ್ಲಿ ವಿಧಾನಸೌಧಕ್ಕೆ ಆಗಮಿಸುತ್ತಿದ್ದಾರೆ.

ಇತ್ತ ಏರೋ ಶೋ 2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮೊಣಕಾಲು ನೋವಿನ ಕಾರಣ ಹಾಜರಾಗಿರಲಿಲ್ಲ. ಫೆ.12ರಂದು ಬೆಂಗಳೂರು ಅರಮನೆಯಲ್ಲಿ ನಡೆದ GIM ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗಾಲಿ ಕುರ್ಚಿಯಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ, ರಾಷ್ಟ್ರ ಗೀತೆ, ದೀಪ ಹಚ್ಚುವ ವೇಳೆ ಹಾಗೂ ಏಕಗವಾಕ್ಷಿ ವ್ಯವಸ್ಥೆಗೆ ಚಾಲನೆ ನೀಡುವ ವೇಳೆ ಎದ್ದು ನಿಂತಿದ್ದರು. ಆದರೆ ಬಳಿಕ ವೈದ್ಯರು ಸಿಎಂ GIM ಕಾರ್ಯಕ್ರಮದಲ್ಲಿ ವ್ಹೀಲ್ ಚೇರ್ ನಿಂದ ಆಗಾಗ ಎದ್ದು ನಿಂತ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

CM SIDDARAMAIAH KNEE PAIN
ಜಾಗತಿಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಿಎಂ (ETV Bharat)

ಮಾ.7ಕ್ಕೆ ಬಜೆಟ್- ಈ ಬಾರಿ ಕೂತಲ್ಲೇ ಮಂಡನೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ ಮಾ.7ಕ್ಕೆ ತಮ್ಮ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಮೊಣಕಾಲು ವಿಶ್ರಾಂತಿಯ ನಿರ್ಬಂಧ ಹಿನ್ನೆಲೆಯಲ್ಲಿ ಸಿಎಂ ಅಂದು ಬಹುತೇಕ ಕೂತುಕೊಂಡೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ಬಜೆಟ್ ಮಂಡನೆ ವೇಳೆ ಸುಮಾರು 3 ತಾಸು ನಿಂತು ಭಾಷಣ ಮಾಡಬೇಕು. ಈಗಾಗಲೇ ಚೇತರಿಕೆ ಕಾಣಯತ್ತಿರುವ ಸಿಎಂ ಸಿದ್ದರಾಮಯ್ಯ ಅಷ್ಟು ಹೊತ್ತು ನಿಂತು ಬಜೆಟ್ ಮಂಡನೆ ಕಷ್ಟ ಸಾಧ್ಯ ಎಂದು ಆಪ್ತ ಮೂಲಗಳು ತಿಳಿಸಿವೆ. ಹೀಗಾಗಿ ಕೂತುಕೊಂಡೇ ಬಜೆಟ್ ಮಂಡನೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಈಗಾಗಲೇ ಮೊಣಕಾಲು ನೋವು ಕಡಿಮೆಯಾಗುತ್ತಿದೆ. ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ. ಆದರೆ ಇನ್ನೂ ಮೂರು ವಾರ ವಿಶ್ರಾಂತಿ ಪಡೆಯಬೇಕಾಗಲಿದ್ದು, ಬಜೆಟ್ ಮಂಡನೆ ನಿಂತುಕೊಂಡು ಮಾಡುವುದು ಅನುಮಾನವಾಗಿದೆ. ವೈದ್ಯರ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನಿಸಲಿದ್ದಾರೆ‌. ಇನ್ನೂ ಮೂರು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಸಿಎಂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡಿನೋವು ಎಫೆಕ್ಟ್ - ಹೊಸ ಕಾರಲ್ಲಿ CM ಓಡಾಟ: ಟೊಯೋಟಾ ವೆಲ್ಫೈರ್ ಖರೀದಿಗೆ ಮುಂದಾದ ಸಿದ್ದರಾಮಯ್ಯ

ಬೆಂಗಳೂರು: ಮೊಣಕಾಲು ನೋವಿನ ಕಾರಣ ಕಳೆದ 20 ದಿನಗಳಿಂದ ಸಿಎಂ ಸಿದ್ದರಾಮಯ್ಯ ಸಾರ್ವಜನಿಕ ಕಾರ್ಯಕ್ರಮಗಳಿಂದ ದೂರವೇ ಉಳಿದಿದ್ದಾರೆ. ಅವರ ಮೊಣಕಾಲಿಗೆ ಬೆಲ್ಟ್ ಹಾಕಲಾಗಿದೆ. ವೈದ್ಯರ ಸಲಹೆಯಂತೆ ಓಡಾಟ ನಿಲ್ಲಿಸಿದ್ದಾರೆ. ಇನ್ನೂ ಆರು ವಾರ ವಿಶ್ರಾಂತಿ ಪಡೆಯಲು ಸಲಹೆ ನೀಡಲಾಗಿದ್ದು, ಈ ಬಾರಿ ತಮ್ಮ 16ನೇ ಆಯವ್ಯಯವನ್ನು ಬಹುತೇಕ ಕುಳಿತುಕೊಂಡೇ ಮಂಡಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.

ಸಿಎಂ ಕಳೆದ ಮೂರು ವಾರದಿಂದ ಮೊಣಕಾಲಿನ ನೋವಿನಿಂದ ಬಳಲುತ್ತಿದ್ದಾರೆ. ಫೆ.2ರಂದು ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಮಣಿಪಾಲ್ ಆಸ್ಪತ್ರೆಗೆ ತೆರಳಿ ತಪಾಸಣೆ ಮಾಡಿಸಿದ್ದರು. ಈ ವೇಳೆ ವೈದ್ಯರು ಎರಡು ದಿನಗಳ ಸಂಪೂರ್ಣ ವಿಶ್ರಾಂತಿಗೆ ಸಲಹೆ ನೀಡಿದ್ದರು. ಮೊಣಕಾಲಿನ ನೋವು ಗಂಭೀರ ಸ್ವರೂಪದ್ದಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಬಲ ಕಾಲಿಗೆ ಹೆಚ್ಚಿನ ಒತ್ತಡ ಬಿದ್ದಿದ್ದರಿಂದ ಮೊಣಕಾಲು ನೋವು ಉಂಟಾಗಿದೆ. ಬಲ‌ ಮೊಣಕಾಲಿನ ಮೂಳೆ ಕಟ್ಟುಗಳು ಹರಿದಿರುವುದರಿಂದ ನೋವು ಕಾಣಿಸಿಕೊಂಡಿದೆ. ಹೀಗಾಗಿ ವೈದ್ಯರು ಬಲ ಮೊಣಕಾಲಿಗೆ ಒತ್ತಡ ಹಾಕದಂತೆ ಸಲಹೆ ನೀಡಿದ್ದಾರೆ.

CM SIDDARAMAIAH KNEE PAIN
ಬಜೆಟ್‌ಪೂರ್ವ ಸಭೆ ನಡೆಸುತ್ತಿರುವ ಸಿಎಂ (ETV Bharat)

ಹೀಗಾಗಿ ನಡೆದಾಡದಂತೆ ತಮ್ಮ ಎಲ್ಲಾ ಸಾರ್ವಜನಿಕ ಕಾರ್ಯಕ್ರಮಗಳನ್ನು ರದ್ದು ಮಾಡಿ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದಾರೆ. ಸುಮಾರು ಆರು ವಾರಗಳ ಕಾಲ ವಿಶ್ರಾಂತಿ ಪಡೆಯುವಂತೆ ಸಿಎಂಗೆ ಸೂಚನೆ ನೀಡಲಾಗಿದೆ. ಅದರಂತೆ ಫೆ.2ರಿಂದ ಮಾ.15ರ ತನಕ ಸಿಎಂ ಸಿದ್ದರಾಮಯ್ಯ ವಿಶ್ರಾಂತಿ ಪಡೆಯಬೇಕಾಗಿದೆ. ಈ ಆರು ವಾರಗಳ ಕಾಲ ಸಿದ್ದರಾಮಯ್ಯನವರು ಹೆಚ್ಚಿಗೆ ನಿಲ್ಲದಂತೆ, ನಡೆದಾಡದಂತೆ ವೈದ್ಯರು ಸಲಹೆ ನೀಡಿದ್ದಾರೆ.

ಮೂರು ವಾರದಿಂದ ವ್ಹೀಲ್​ಚೇರ್​ನಲ್ಲೇ ಓಡಾಟ: ಕಳೆದ ಮೂರು ವಾರದಿಂದ ಸಿಎಂ ಸಿದ್ದರಾಮಯ್ಯ ಗಾಲಿ ಕುರ್ಚಿಯಲ್ಲೇ ಓಡಾಟ ನಡೆಸುತ್ತಿದ್ದಾರೆ. ವೈದ್ಯರು ಓಡಾಟ ಮಾಡಬಾರದು ಎಂದು ಸೂಚನೆ ನೀಡಿರುವುದರಿಂದ ಇದೀಗ ಬಜೆಟ್ ಪೂರ್ವಭಾವಿ ಸಭೆಗಳಿಗೆ ವ್ಹೀಲ್​ಚೇರ್ ಮೂಲಕನೇ ಓಡಾಡುತ್ತಿದ್ದಾರೆ. ಸಾರ್ವಜನಿಕ ಕಾರ್ಯಕ್ರಮ, ಸರ್ಕಾರಿ ಕಾರ್ಯಕ್ರಮ, ಅಧಿಕೃತ ಪ್ರವಾಸಗಳನ್ನೆಲ್ಲ ಮುಂದೂಡಿರುವ ಅವರು ತಮ್ಮ ಕಾವೇರಿ ನಿವಾಸ ಹಾಗೂ ವಿಧಾನಸೌಧದಲ್ಲಿನ ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಕಳೆದ ಮೂರು ವಾರದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ಹೊರತುಪಡಿಸಿ ಉಳಿದಂತೆ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿಲ್ಲ.

ಸಾಮಾನ್ಯವಾಗಿ ಬಜೆಟ್ ಪೂರ್ವಭಾವಿ ಸಭೆಗಳನ್ನು ಶಕ್ತಿ ಭವನದಲ್ಲಿ ನಡೆಸಲಾಗುತ್ತದೆ. ಆದರೆ ಈ ಬಾರಿ ಸಿಎಂ ಸಿದ್ದರಾಮಯ್ಯ ಮೊಣಕಾಲು ನೋವಿನ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳ ಜೊತೆಗಿನ ಬಜೆಟ್ ಪೂರ್ವಭಾವಿ ಸಭೆಗಳನ್ನು ತಮ್ಮ ಕಾವೇರಿ ನಿವಾಸದಲ್ಲೇ ನೆರವೇರಿಸಿದ್ದಾರೆ. ಐದು ದಿನಗಳ ಕಾಲ ಕಾವೇರಿ ನಿವಾಸದಲ್ಲೇ ಇಲಾಖೆ ಸಚಿವರು, ಅಧಿಕಾರಿಗಳ ಜೊತೆ ವಿಶೇಷ ಕುರ್ಚಿಯಲ್ಲಿ ಕೂತೇ ಸಿಎಂ ಸಿದ್ದರಾಮಯ್ಯ ಸರಣಿ ಸಭೆಗಳನ್ನು ನಡೆಸಿದ್ದರು. ಸರಣಿ ಸಭೆಗಳನ್ನು ಪೂರ್ಣವಾಗಿ ವಿಶೇಷ ಕುರ್ಚಿಯಲ್ಲೇ ಕೂತು ಚರ್ಚೆ ನಡೆಸಿದ್ದಾರೆ.

CM SIDDARAMAIAH KNEE PAIN
ಬಜೆಟ್‌ಪೂರ್ವ ಸಭೆ ನಡೆಸುತ್ತಿರುವ ಸಿಎಂ (ETV Bharat)

ವಿಧಾನಸೌಧದಲ್ಲಿ ವಿವಿಧ ಸಂಘ-ಸಂಸ್ಥೆಗಳು, ರೈತರು, ಒಕ್ಕೂಟ ಜೊತೆ ಬಜೆಟ್‌ಪೂರ್ವ ಸಭೆಗೂ ಸಿಎಂ ಸಿದ್ದರಾಮಯ್ಯ ವ್ಹೀಲ್ ಚೇರ್ ಮೂಲಕ ಆಗಮಿಸುತ್ತಿದ್ದಾರೆ. ವಿಧಾನಸೌಧದ ಮೂರನೇ ಮಹಡಿಯ ಸಮ್ಮೇಳನ ಸಭಾಂಗಣದಲ್ಲಿ ಕಳೆದ ನಾಲ್ಕು ದಿನಗಳಿಂದ ಸರಣಿ ಬಜೆಟ್ ಪೂರ್ವ ಸಭೆ ನಡೆಸಲಾಗುತ್ತಿದೆ. ಸುಮಾರು ಅರ್ಧ ದಿನಕ್ಕೂ ಅಧಿಕ ಕಾಲ ಸಭೆಗಳಲ್ಲಿ ಸಿಎಂ ಕೂತು ಸಲಹೆ, ಸೂಚನೆ ನೀಡುತ್ತಿದ್ದಾರೆ. ಈ ವೇಳೆ ರ‍್ಯಾಂಪ್ ಮೂಲಕ ಗಾಲಿ ಕುರ್ಚಿಯಲ್ಲಿ ವಿಧಾನಸೌಧಕ್ಕೆ ಆಗಮಿಸುತ್ತಿದ್ದಾರೆ.

ಇತ್ತ ಏರೋ ಶೋ 2025 ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮೊಣಕಾಲು ನೋವಿನ ಕಾರಣ ಹಾಜರಾಗಿರಲಿಲ್ಲ. ಫೆ.12ರಂದು ಬೆಂಗಳೂರು ಅರಮನೆಯಲ್ಲಿ ನಡೆದ GIM ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಗಾಲಿ ಕುರ್ಚಿಯಲ್ಲಿ ಆಗಮಿಸಿದ ಸಿಎಂ ಸಿದ್ದರಾಮಯ್ಯ ಭಾಷಣದ ವೇಳೆ, ರಾಷ್ಟ್ರ ಗೀತೆ, ದೀಪ ಹಚ್ಚುವ ವೇಳೆ ಹಾಗೂ ಏಕಗವಾಕ್ಷಿ ವ್ಯವಸ್ಥೆಗೆ ಚಾಲನೆ ನೀಡುವ ವೇಳೆ ಎದ್ದು ನಿಂತಿದ್ದರು. ಆದರೆ ಬಳಿಕ ವೈದ್ಯರು ಸಿಎಂ GIM ಕಾರ್ಯಕ್ರಮದಲ್ಲಿ ವ್ಹೀಲ್ ಚೇರ್ ನಿಂದ ಆಗಾಗ ಎದ್ದು ನಿಂತ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು ಎನ್ನಲಾಗಿದೆ.

CM SIDDARAMAIAH KNEE PAIN
ಜಾಗತಿಕ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಸಿಎಂ (ETV Bharat)

ಮಾ.7ಕ್ಕೆ ಬಜೆಟ್- ಈ ಬಾರಿ ಕೂತಲ್ಲೇ ಮಂಡನೆ ಸಾಧ್ಯತೆ: ಸಿಎಂ ಸಿದ್ದರಾಮಯ್ಯ ಮಾ.7ಕ್ಕೆ ತಮ್ಮ 16ನೇ ಬಜೆಟ್ ಮಂಡನೆ ಮಾಡಲಿದ್ದಾರೆ. ಮೊಣಕಾಲು ವಿಶ್ರಾಂತಿಯ ನಿರ್ಬಂಧ ಹಿನ್ನೆಲೆಯಲ್ಲಿ ಸಿಎಂ ಅಂದು ಬಹುತೇಕ ಕೂತುಕೊಂಡೇ ಬಜೆಟ್ ಮಂಡನೆ ಮಾಡಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ಬಜೆಟ್ ಮಂಡನೆ ವೇಳೆ ಸುಮಾರು 3 ತಾಸು ನಿಂತು ಭಾಷಣ ಮಾಡಬೇಕು. ಈಗಾಗಲೇ ಚೇತರಿಕೆ ಕಾಣಯತ್ತಿರುವ ಸಿಎಂ ಸಿದ್ದರಾಮಯ್ಯ ಅಷ್ಟು ಹೊತ್ತು ನಿಂತು ಬಜೆಟ್ ಮಂಡನೆ ಕಷ್ಟ ಸಾಧ್ಯ ಎಂದು ಆಪ್ತ ಮೂಲಗಳು ತಿಳಿಸಿವೆ. ಹೀಗಾಗಿ ಕೂತುಕೊಂಡೇ ಬಜೆಟ್ ಮಂಡನೆ ಮಾಡುವುದು ಬಹುತೇಕ ಖಚಿತ ಎನ್ನಲಾಗುತ್ತಿದೆ.

ಸಿಎಂ ಸಿದ್ದರಾಮಯ್ಯ ಈಗಾಗಲೇ ಮೊಣಕಾಲು ನೋವು ಕಡಿಮೆಯಾಗುತ್ತಿದೆ. ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದಾರೆ. ಆದರೆ ಇನ್ನೂ ಮೂರು ವಾರ ವಿಶ್ರಾಂತಿ ಪಡೆಯಬೇಕಾಗಲಿದ್ದು, ಬಜೆಟ್ ಮಂಡನೆ ನಿಂತುಕೊಂಡು ಮಾಡುವುದು ಅನುಮಾನವಾಗಿದೆ. ವೈದ್ಯರ ಸಲಹೆ ಮೇರೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನಿಸಲಿದ್ದಾರೆ‌. ಇನ್ನೂ ಮೂರು ವಾರ ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಸಿಎಂ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಡಿನೋವು ಎಫೆಕ್ಟ್ - ಹೊಸ ಕಾರಲ್ಲಿ CM ಓಡಾಟ: ಟೊಯೋಟಾ ವೆಲ್ಫೈರ್ ಖರೀದಿಗೆ ಮುಂದಾದ ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.