ETV Bharat / state

ಬಿಜೆಪಿಯವರು ಅಭಿವೃದ್ದಿ ವಿಚಾರದಲ್ಲಿ ಸುಳ್ಳು ಹೇಳ್ತಾರೆ: ಸಿಎಂ ಸಿದ್ದರಾಮಯ್ಯ - CM Siddaramaiah - CM SIDDARAMAIAH

ಬಿಜೆಪಿಯವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

cm-siddaramaiah
ಸಿಎಂ ಸಿದ್ದರಾಮಯ್ಯ (ETV Bharat)
author img

By ETV Bharat Karnataka Team

Published : May 21, 2024, 3:16 PM IST

ಸಿಎಂ ಸಿದ್ದರಾಮಯ್ಯ (ETV Bharat)

ಮಂಗಳೂರು (ದಕ್ಷಿಣ ಕನ್ನಡ) : ಬಿಜೆಪಿಯವರು ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಹೇಳ್ತಾರೆ. ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹಿಂದೆ ನೀರಾವರಿಗೆ 16000 ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ ಎಂದು ಹೇಳಿದರು.

ನಾವು ಗ್ಯಾರಂಟಿಯನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಬಲತೆ ಕೊಡುವುದು ಅಭಿವೃದ್ಧಿಯಲ್ಲವೇ?. ಈ ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕವಾಗಿ ಸಾಮಾಜಿಕವಾಗಿ ಸ್ವಾತಂತ್ರ್ಯ ಬಂದರೆ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತೆ ಎಂದು ಡಾ. ಬಿ. ಆರ್. ಅಂಬೇಡ್ಕರ್ ಹೇಳಿದ್ದರು ಎಂದರು.

ಇದನ್ನೂ ಓದಿ : ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ - CM SIDDARAMAIAH X POST

ಸಿಎಂ ಸಿದ್ದರಾಮಯ್ಯ (ETV Bharat)

ಮಂಗಳೂರು (ದಕ್ಷಿಣ ಕನ್ನಡ) : ಬಿಜೆಪಿಯವರು ಅಭಿವೃದ್ಧಿ ವಿಚಾರದಲ್ಲಿ ಸುಳ್ಳು ಹೇಳ್ತಾರೆ. ಬಜೆಟ್ ಓದುವುದಿಲ್ಲ. ಅವರಿಗೆ ಅರ್ಥಶಾಸ್ತ್ರ ಗೊತ್ತಾಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ, ಹಿಂದೆ ನೀರಾವರಿಗೆ 16000 ಕೋಟಿ ರೂ. ಇಡಲಾಗುತ್ತಿತ್ತು. ಈ ವರ್ಷ 18 ಸಾವಿರ ಕೋಟಿ ರೂ. ಇಟ್ಟಿದ್ದೇವೆ. ನಾವು ಏನು ಮಾಡಿಲ್ಲ ಎಂದು ಬಿಜೆಪಿಯವರು ಹೇಳುವುದೆಂದರೆ ಏನು? ಎಂದು ಪ್ರಶ್ನಿಸಿದರು. ಕಾಂಗ್ರೆಸ್ ಸರ್ಕಾರ ಬಂದು ಒಂದು ವರ್ಷವಾಗಿದೆ. ನಾವು ಏನೇನು ಮಾಡಿದ್ದೇವೆ ಎಂದು ಜನರಿಗೆ ತಿಳಿಸಿದ್ದೇವೆ. ಬಿಜೆಪಿಯವರು ಸುಳ್ಳು ಹೇಳುತ್ತಾರೆ ಎಂದು ಹೇಳಿದರು.

ನಾವು ಗ್ಯಾರಂಟಿಯನ್ನು ಸೇರಿಸಿ 1.20 ಲಕ್ಷ ಕೋಟಿ ಬಜೆಟ್ ಕೊಟ್ಟಿದ್ದೇವೆ. ಅಭಿವೃದ್ಧಿ ಶೂನ್ಯ ಅಭಿವೃದ್ಧಿ ಶೂನ್ಯ ಅಂತಾರೆ. ಬಡವರಿಗೆ ಆರ್ಥಿಕವಾಗಿ ಸಬಲತೆ ಕೊಡುವುದು ಅಭಿವೃದ್ಧಿಯಲ್ಲವೇ?. ಈ ದೇಶಕ್ಕೆ ಬರೀ ರಾಜಕೀಯ ಸ್ವಾತಂತ್ರ್ಯ ಬಂದರೆ ಸಾಲದು. ಆರ್ಥಿಕವಾಗಿ ಸಾಮಾಜಿಕವಾಗಿ ಸ್ವಾತಂತ್ರ್ಯ ಬಂದರೆ ಮಾತ್ರ ರಾಜಕೀಯ ಸ್ವಾತಂತ್ರ್ಯಕ್ಕೆ ಅರ್ಥ ಬರುತ್ತೆ ಎಂದು ಡಾ. ಬಿ. ಆರ್. ಅಂಬೇಡ್ಕರ್ ಹೇಳಿದ್ದರು ಎಂದರು.

ಇದನ್ನೂ ಓದಿ : ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನಡೆಯುತ್ತೇವೆ: ಸಿಎಂ ಸಿದ್ದರಾಮಯ್ಯ - CM SIDDARAMAIAH X POST

ETV Bharat Logo

Copyright © 2025 Ushodaya Enterprises Pvt. Ltd., All Rights Reserved.